ಇದು ಮುಂಡಗೋಡ ತಾಲೂಕಿನ ಮಟ್ಟಿಗೆ ವಿಚಿತ್ರ, ಭಯ ಹುಟ್ಟಿಸುವ, ಆತಂಕಕಾರಿ ಘಟನೆ. ಸಿಸಿಟಿವಿ ದೃಷ್ಯಗಳನ್ನು ನೋಡಿದ್ರೆ ಎಂಥವರೂ ಒಂದು ಕ್ಷಣ ನಿಬ್ಬೆರಗಾಗೋ ವಿಚಿತ್ರ ಘಟನೆ. ಅಲ್ಲಿ ಗ್ಯಾರೇಜ್ ಎದುರು ನಿಲ್ಲಿಸಿದ್ದ ಬೈಕ್ ಕ್ಷಣಾರ್ಧದಲ್ಲಿ ಮಂಗಮಾಯವಾಗತ್ತೆ. ಅದಕ್ಕೂ ಮುಂಚೆ ಅದೇಂತದ್ದೋ ವಿಚಿತ್ರ ಚಲನ ವಲನ, ಅಷ್ಟಕ್ಕೂ ಇದೇಲ್ಲ ಕಳ್ಳರ ಕರಾಮತ್ತಿನ ಕಣ್ಣಾಮುಚ್ಚಾಲೆಯಾ..? ಅಥವಾ ಆತ್ಮಗಳ ಅಸಲೀ ಚೇಷ್ಟೆಯಾ..? ಅರ್ಥವೇ ಆಗುತ್ತಿಲ್ಲ. CCTV ದೃಷ್ಯ..! ಅಸಲು, ಇದು ನಡೆದದ್ದು ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ ಒಂದರ...
Top Stories
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Tag: Police news
ಲಾಡ್ಜ್ ನಲ್ಲಿ ನೇಣಿಗೆ ಶರಣಾದ ಪ್ರೇಮಿಗಳು, ಒಂದೇ ಕುಣಿಕೆಗೆ ಕೊರಳೊಡ್ಡಿದ ಯುವಕ, ಯುವತಿ
ಧಾರವಾಡ: ಲಾಡ್ಜ್ ನಲ್ಲಿ ಪ್ರೇಮಿಗಳು ನೇಣಿಗೆ ಶರಣಾಗಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದ ಬಸ್ ಸ್ಟಾಂಡ್ ಪಕ್ಕದ ಲಾಡ್ಜ್ ನಲ್ಲಿ ಘಟನೆ ನಡೆದಿದೆ. ಮಧ್ಯಾಹ್ನದ ವೇಳೆಗೆ ಯುವಕ ಯುವತಿ ಲಾಡ್ಜ್ ಗೆ ತೆರಳಿದ್ದರು ಎನ್ನಲಾಗಿದೆ. ಸಂಜೆ ಲಾಡ್ಜ್ ರೂಮಿನಿಂದ ಹೊರ ಬರದೇ ಇದ್ದಾಗ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿಗಳು ಬಾಗಿಲು ತೆರೆದು ನೋಡಿದ್ದಾರೆ. ಈ ವೇಳೆ ಪ್ರೇಮಿಗಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂದಿದೆ. ಇನ್ನು ಆತ್ಮಹತ್ಯೆ ಮಾಡಿಕೊಂಡಿರೋ ಪ್ರೇಮಿಗಳ ಹೆಸರು, ವಿಳಾಸದ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಆದ್ರೆ,...
ಬಾಚಣಕಿ ಡ್ಯಾಂನಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವ ಯಾರದ್ದು ಗೊತ್ತಾ..? ಸಾವಿನ ಸುತ್ತ ಮತ್ತದೇ ಅನುಮಾನದ ಹುತ್ತ..?
ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವದ ಗುರುತು ಪತ್ತೆಯಾಗಿದೆ. ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರ ಆಗ್ತಿದ್ದಂತೆ ಮುಂಡಗೋಡ ಪೊಲೀಸರಿಗೆ ಮಹಿಳೆಯ ಡೀಟೇಲ್ಸ್ ಲಭ್ಯವಾಗಿದೆ. ಅಂದಹಾಗೆ, ಮೃತ ಮಹಿಳೆಯ ಹೆಸ್ರು ಸುರೇಖಾ ದೇವೇಂದ್ರ ಕಲಾಲ್, ವಯಸ್ಸು ಅಜಮಾಸು 50 ವರ್ಷವಂತೆ, ಹುಬ್ಬಳ್ಳಿಯ ಆನಂದ ನಗರ ನಿವಾಸಿಯಂತೆ. ಇದು ಫಸ್ಟ್ ಇನ್ಫರ್ಮೇಶನ್ ರಿಪೋರ್ಟ್..! ಐದು ದಿನದ ಹಿಂದೆ..! ಅಸಲು, ಡಿಸೆಂಬರ್ 2 ನೇ ತಾರೀಖಿನ ದಿನವೇ ಈ ಮಹಿಳೆ ನಾಪತ್ತೆಯಾಗಿದ್ದಾಳೆ. ಹೀಗಾಗಿ, ಹುಬ್ಬಳ್ಳಿಯಲ್ಲಿ ಮಿಸ್ಸಿಂಗ್...
ಬಾಚಣಕಿ ಜಲಾಶಯದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ, ಅನಾರೋಗ್ಯದ ಆತ್ಮಹತ್ಯೆಯಾ..?
ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 40-45ವರ್ಷ ವಯಸ್ಸಿನ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಂದು ಶವ ತೇಲುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ದುರ್ನಾತ..! ಇನ್ನು, ಮಹಿಳೆ ಮೂರ್ನಾಲ್ಕು ದಿನದ ಹಿಂದೆಯೇ ಸಾವು ಕಂಡಿರೋ ಬಗ್ಗೆ ಅನುಮಾನ ವ್ಯಕ್ತವಾಗಿದ್ದು. ಸದ್ಯ ಶವ ಕೊಳೆತು ದುರ್ನಾತ ಬೀರುತ್ತಿದೆ. ಹೀಗಾಗಿ, ಸ್ಥಳಕ್ಕೆ ಬಂದ ಪೊಲೀಸರು ಶವ ಹೊರ ತೆಗೆಯಲು ಹರಸಾಹಸ ಪಡುವಂತಾಗಿದೆ. ಆತ್ಮಹತ್ಯೆಯಾ..? ಅಂದಹಾಗೆ, ಮಹಿಳೆಯ...
ಭೀಕರ ರಸ್ತೆ ಅಪಘಾತ ಸಿಪಿಐ ದಂಪತಿ ಸ್ಥಳದಲ್ಲೇ ಸಾವು..!
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನೇಲೋಗಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತವಾಗಿದೆ. ನಿಂತಿದ್ದ ಕಂಟೇನರ್ಗೆ ಮಾರುತಿ ಸ್ವೀಫ್ಟ್ ಡಿಸೈರ್ ಕಾರು ಡಿಕ್ಕಿಯಾಗಿ ವಿಜಯಪುರ ಜಿಲ್ಲೆ ಸಿಂದಗಿ ಸಿಪಿಐ ಹಾಗೂ ಪತ್ನಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ರವಿ ಉಕ್ಕುಂದ (43) ಹಾಗೂ ಪತ್ನಿ ಮಧು (40) ಸ್ಥಳದಲ್ಲೆ ದುರ್ಮರಣವಾಗಿದ್ದಾರೆ. ಸಿಂದಗಿಯಿಂದ ಕಲಬುರಗಿ ನಗರಕ್ಕೆ ಆಗಮಿಸುತ್ತಿದ್ದ ಸಿಪಿಐ ದಂಪತಿಯ ಕಾರು ಕಂಟೇನರ್ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ನೇಲೋಗಿ...
ಫೇಸ್ ಬುಕ್ ಡಿಪಿ ನೋಡಿ ಮರುಳಾದ ಆ ಹುಡುಗ, ಆಂಟಿಯ ಮೋಸದಾಟಕ್ಕೆ ಕಳೆದುಕೊಂಡಿದ್ದು ಬರೋಬ್ಬರಿ 40 ಲಕ್ಷ..!
ವಿಜಯಪುರ: ಇದು ಅಕ್ಷರಶಃ ಆನಲೈನ್ ನಲ್ಲೇ ಹುಟ್ಟಿ ಆನಲೈನ್ ನಲ್ಲೇ ಮುಗಿದು ಹೋದ ಮೋಸದ ಪ್ರೀತಿ. ಜೊತೆ ಉಂಡೂ ಹೋಗಿ ಕೊಂಡೂ ಹೋದ ಮಹಾಮೋಸದ ಸ್ಟೋರಿ. ಅಂದಹಾಗೆ ಇದು ನಡೆದದ್ದು ವಿಜಯಪುರ ಜಿಲ್ಲೆಯಲ್ಲಿ. ಅವಳು ಆತನಿಗೆ ಫೇಸ್ ಬುಕ್ ಮೂಲಕ ಪರಿಚಯವಾಗಿದ್ದ ಮಾಯಾಂಗನೆ..! ಮೋಸ ಮಾಡಲೇಂದೇ ಫೇಸ್ ಬುಕ್ ಆರಿಸಿಕೊಂಡಿದ್ದ ಐನಾತಿ ಮಹಿಳೆ. ಡಿಪಿ ಲುಕ್ಕು..! ಅಸಲು, ಅವಳ ಫೇಸ್ ಬುಕ್ ಪೊಟೋ ನೋಡಿದ್ರೆ ಎಂತವರಿಗೂ ಒಂದುಕ್ಷಣ ದಿಗಿಲಾಗತ್ತೆ. ಅಂತಹ ಮಾದಕತೆಯ ನೋಟ. ಹೀಗಾಗಿ, ಆ ಅಕೌಂಟಿನಿಂದ...
ಪಾಳಾದ ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಕೇಸ್, ಅಪರಾಧಿಗೆ 20 ವರ್ಷ ಜೈಲು, 1 ಲಕ್ಷ ದಂಡ, ಕೋರ್ಟ್ ತೀರ್ಪು
ಮುಂಡಗೋಡ ತಾಲೂಕಿನ ಪಾಳಾದಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾಗಿದೆ. ಜಿಲ್ಲಾ ಫೋಕ್ಸೋ ನ್ಯಾಯಾಲಯ ಅಪರಾಧಿಗೆ ಕಠಿಣ ಶಿಕ್ಷೆ ನೀಡಿದೆ. 20 ವರ್ಷ ಜೈಲಿನ ಜೊತೆಗೆ 1 ಲಕ್ಷ ರೂ. ದಂಡ ಹಾಗೂ ಸಂತ್ರಸ್ಥೆಗೆ 3 ಲಕ್ಷ ರೂ. ಪರಿಹಾರ ನೀಡಬೇಕು ಅಂತಾ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ. ಅಂದಹಾಗೆ, ಪಾಳಾ ಗ್ರಾಮದ ದೇವರಾಜ್ ಶಿವಪುರ ಎಂಬುವ ವ್ಯಕ್ತಿ ಕಳೆದ ವರ್ಷ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಕುರಿತು ಮುಂಡಗೋಡ...
ಯಲ್ಲಾಪುರದ ಅರಬೈಲು ಘಾಟಿನಲ್ಲಿ ನಡೆದಿದ್ದ ಭಯಾನಕ “ರಾಬರಿ” ಹಿಂದೆ ಕೇರಳದ ಕ್ರಿಮಿಗಳು, ಅಷ್ಟಕ್ಕೂ, ಸವಾಲಾಗಿದ್ದ ಕೇಸು ಬೇಧಿಸಿದ್ದು ಹೇಗೆ ಗೊತ್ತಾ..?
ಯಲ್ಲಾಪುರ ಪೊಲೀಸರು ಕಡೆಗೂ ತಮ್ಮ ಜಿದ್ದು ಸಾಧಿಸಿದ್ದಾರೆ. ಅರಬೈಲು ಘಟ್ಟದಲ್ಲಿ ಕೋಟಿ ಕೋಟಿ ಹಣ ರಾಬರಿ ಮಾಡಿದ್ದ ಖತರ್ನಾಕ ನಟೋರಿಯಸ್ ಗ್ಯಾಂಗ್ ಪತ್ತೆ ಹಚ್ಚಿದ್ದಾರೆ. ಇದಕ್ಕಾಗಿ ಬರೋಬ್ಬರಿ ಒಂದು ತಿಂಗಳು,ಇಪ್ಪತ್ತು ದಿನಗಳ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಥೇಟು ಸಿನಿಮಾ ಸ್ಟೈಲಿನಲ್ಲೇ ನಡೆದಿದ್ಧ ಭಯಾನಕ ರಾಬರಿಯನ್ನು ಅಂತದ್ದೇ ಸಿನಿಮಿಯ ರೀತಿಯಲ್ಲೇ ಟ್ರೇಸ್ ಮಾಡಿದ್ದಾರೆ ನಮ್ಮ ಪೊಲೀಸ್ರು.. ಅಂದಹಾಗೆ, ದರೋಡೆ ನಡೆದ ದಿನವೇ ಪಬ್ಲಿಕ್ ಫಸ್ಟ್ ನ್ಯೂಸ್ ಘಟನೆಯ ಸಂಪೂರ್ಣ ಹಕೀಕತ್ತು ತಮ್ಮಮುಂದೆ ಇಟ್ಟಿತ್ತು. ಅವತ್ತು ಅಕ್ಟೋಬರ್ 1… ನಿಮಗೆ...
ನಾಯಿ ದಾಳಿಗೆ ತುತ್ತಾಗಿದ್ದ ಸನವಳ್ಳಿ ಬಾಲಕನ ಬೇಟಿಯಾಗಿ, ದೈರ್ಯ ತುಂಬಿದ ಪಿಐ ಸಿದ್ದಪ್ಪ ಸಿಮಾನಿ
ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದಲ್ಲಿ ನಾಯಿ ದಾಳಿಗೆ ತುತ್ತಾದ ಬಾಲಕನನ್ನು ಪಿಐ ಸಿದ್ದಪ್ಪ ಸಿಮಾನಿ ಭೇಟಿ ಮಾಡಿ ದೈರ್ಯ ತುಂಬಿದ್ರು. ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕನಿಗೆ ಹಣ್ಣು ಹಂಪಲು ನೀಡಿ ಸಂತೈಸಿದರು. ಅಂದಹಾಗೆ, ಕಳೆದ ವರ್ಷವಷ್ಟೇ ತಾಯಿ ಕಳೆದುಕೊಂಡು ಅನಾಥರಾಗಿರೋ ಮೂವರು ಬಾಲಕರಿಗೆ, ತಂದೆಯ ನಿರ್ಲಕ್ಷವೂ ಇನ್ನಿಲ್ಲದಂತೆ ಕಾಡುತ್ತಿದೆ. ಅದ್ರ ಜೊತೆ ನಿನ್ನೆ ಸನವಳ್ಳಿ ಗ್ರಾಮದಲ್ಲಿ 7 ವರ್ಷದ ಬಾಲಕನಿಗೆ ನಾಯಿಗಳು ದಾಳಿ ಮಾಡಿ ಗಾಯಗೊಳಿಸಿದ್ದವು. ಈ ಕಾರಣಕ್ಕಾಗಿ, ನಾಯಿಗಳ ದಾಳಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲೂ...
ನೌಕರರ ವರ್ಗಾವಣೆಯಲ್ಲಿ ಪತಿ, ಪತ್ನಿಯರಿಗಷ್ಟೇ ಅಲ್ಲ ಪೊಲೀಸರಿಗೂ ವಿನಾಯಿತಿ ನೀಡಿ, 16A ತಿದ್ದುಪಡಿ ವಿರುದ್ಧ ಪೊಲೀಸ್ ಪೇದೆಗಳ ಮೂಕರೋಧನ..!
ಇದು ಸರ್ಕಾರಿ ನೌಕರರಿಗೆ ಬಹುದೊಡ್ಡ ಆಘಾತ ಅಂತಲೇ ಹೇಳಲಾಗ್ತಿದೆ. ಅದ್ರಲ್ಲೂ ನಮ್ಮ ರಕ್ಷಣೆಗಾಗಿ ಹಗಲಿರುಳು ರಜೆಯಿಲ್ಲದೇ ದುಡಿಯೋ ಪೊಲೀಸರಿಗೆ ಸರ್ಕಾರದ ಅದೊಂದು ಕಾನೂನು ಇಡಿ ಇಡಿಯಾಗಿ ನೋವು ಮತ್ತು ಆತಂಕಕ್ಕೆ ದೂಡಿದೆ ಅಂತಾ ಖುದ್ದು ಪೊಲೀಸ್ ಇಲಾಖೆಯ ಅಸಂಖ್ಯ ಪೇದೆಗಳು ಅಲವತ್ತುಕೊಂಡಿದ್ದಾರೆ. ರಾಜ್ಯ ಸರ್ಕಾರ ಸದ್ಯ 16 A ಕಾಲಂ ನ್ನು ತಿದ್ದುಪಡಿ ಮಾಡಿರೋದು ಸಾಕಷ್ಟು ಪೊಲೀಸರ ಆಕ್ರೋಶಕ್ಕೆ ಕಾರಣವಾಗಿದೆ. ಏನದು ತಿದ್ದುಪಡಿ..? ಈ ಹಿಂದೆ 16A ಕಾಲಂ ಅಡಿಯಲ್ಲಿ ಅಂತರ್ ಜಿಲ್ಲಾ ವರ್ಗಾವಣೆಗೆ ಬಲಿಷ್ಟ ಕಾನೂನು...









