ಮುಂಡಗೋಡ ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ನಡೆದಿದೆ. ಗ್ರಾಮ ಪಂಚಾಯತಿ ಪಕ್ಕದಲ್ಲೇ ಬಾಡಿಗೆ ರೂಂ ಹಿಂದಿನ ಕಿಡಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹುಬ್ಬಳ್ಳಿ ಮೂಲದ ಪ್ರಭಾಕರ್ (45)ಎಂಬ ವ್ಯಕ್ತಿಯೇ ನೇಣಿಗೆ ಶರಣಾದವನು ಎನ್ನಲಾಗಿದೆ. ಈತ ಕಳೆದ ಕೆಲ ತಿಂಗಳ ಹಿಂದಷ್ಟೇ ನಂದಿಗಟ್ಟಾ ಗ್ರಾಮದಲ್ಲಿ ಬಂದು ಅಂಗಡಿ ನಡೆಸುತ್ತಿದ್ದ. ಆದ್ರೆ ಅದೇನು ಕಾರಣವೋ ನಿನ್ನೆ ರಾತ್ರಿ ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಾರೆ....
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: Police news
ನಂದಿಗಟ್ಟಾದ ಗ್ರಾಮ ಪಂಚಾಯತಿ ಪಕ್ಕದಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ..!
ನಂದಿಗಟ್ಟಾದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಕೆರೆಯಲ್ಲಿ ಹೆಣವಾಗಿ ಪತ್ತೆ..!
ಮುಂಡಗೋಡ: ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ಗ್ರಾಮದ ಹೊರವಲಯದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ದುರ್ನಾತ ಬೀರುತ್ತಿದೆ. ಅಂದಹಾಗೆ, ಕಳೆದ ಎರಡು ದಿನಗಳಿಂದ ನಂದಿಗಟ್ಟಾ ಗ್ರಾಮದ ಮಾಬುಸಾಬ್ ಅತ್ತಿವೇರಿ (47) ಎಂಬುವ ವ್ಯಕ್ತಿ ನಾಪತ್ತೆಯಾಗಿದ್ದ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಬುಸಾಬ್ ಯಾವಾಗಲೂ ಮನೆಯಲ್ಲಿಯೇ ಇರುತ್ತಿದ್ದ, ಆದ್ರೆ ಅದ್ಯಾವ ಕಾರಣಕ್ಕೋ ಗೊತ್ತಿಲ್ಲ, ಏಕಾಏಕಿ ನಾಪತ್ತೆಯಾದವನು ಈಗ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಸದ್ಯ ಮುಂಡಗೋಡ ಪೊಲೀಸರಿಗೆ ಗ್ರಾಮಸ್ಥರು ಮಾಹಿತಿ ರವಾನಿಸಿದ್ದು ಶವ ಹೊರ ತೆಗೆಯುವ ಕಾರ್ಯ...
ಬೈಕ್ ಗೆ ಗುದ್ದಿದ ಕಾರ್ 10 ಅಡಿ ದೂರ ಹಾರಿ ಬಿದ್ದ ಮಹಿಳೆ, ಸಿಸಿಟಿವಿಯಲ್ಲಿ ಭಯಾನಕ ದೃಷ್ಯ
ಧಾರವಾಡ: ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ, ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ನಲವಡಿ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ದಾಟುವಾಗ ಭಯಾನಕ ದುರ್ಘಟನೆ ನಡೆದಿದೆ. ರಸ್ತೆ ದಾಟಿ ಹೋಗುತ್ತಿದ್ದ ಬೈಕ್ ಗೆ ಹುಬ್ಬಳ್ಳಿಗೆ ಆಗಮಿಸುತ್ತಿದ್ದ ಬ್ಲಾಕ್ ಕಲರ್ ಕಾರ್ ಗುದ್ದಿದೆ. ಗುದ್ದಿದ ರಭಸಕ್ಕೆ ಬೈಕ್ ಮೇಲಿದ್ದ ಮಹಿಳೆ 10 ಅಡಿ ಹಾರಿ ಹೋಗಿ ಬಿದ್ದಿದ್ದಾಳೆ. ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಉತ್ತರ ಕನ್ನಡ ಎಸ್ಪಿ ಸುಮನಾ ಪೆನ್ನೇಕರ್ ಎತ್ತಂಗಡಿ, ವರ್ಗಾವಣೆಗೊಳಿಸಿ ಸರ್ಕಾರ ಆದೇಶ..!
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ.ಸುಮನಾ ಪೆನ್ನೇಕರ್ ಎತ್ತಂಗಡಿಯಾಗಿದ್ದಾರೆ. ಒಂದೇ ಒಂದು ವರ್ಷದ ಅವದಿಯಲ್ಲೇ ಉತ್ತರ ಕನ್ನಡ ಜಿಲ್ಲೆಯಿಂದ ಎಸ್ಪಿ ಮೇಡಂ ವರ್ಗಾವಣೆ ಮಾಡಿದ್ದು ಜಿಲ್ಲೆಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅಂದಹಾಗೆ, ಪಬ್ಲಿಕ್ ಫಸ್ಟ್ ನ್ಯೂಸ್ ಕಳೆದ ಒಂದು ತಿಂಗಳ ಹಿಂದೆಯೇ ನುಡಿದಿದ್ದ ಭವಿಷ್ಯ ನಿಜವಾಗಿದ್ದು, ಉತ್ತರ ಕನ್ನಡಕ್ಕೆ ನೂತನ ಎಸ್ಪಿಯಾಗಿ ಎನ್. ವಿಷ್ಣುವರ್ಧನ್ ವರ್ಗಾವಣೆಗೊಂಡಿದ್ದಾರೆ. ಡಾ ಸುಮನಾ ಪೆನ್ನೇಕರ್ ಮೇಡಂ ಜಿಲ್ಲೆಗೆ ಎಂಟ್ರಿಯಾಗಿ ಬಂದಾಗಿನಿಂದ ಇಲ್ಲಿನ ಅಕ್ರಮಿಗಳು ಬಾಲ ಬಿಚ್ಚಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಅದೇಷ್ಟೋ...
ಕಾತೂರು ನಂದಿಪುರದ ಬಳಿ ಭೀಕರ ಅಪಘಾತ, ಎರಡು ಬೈಕಿಗೆ ಕಾರು ಡಿಕ್ಕಿ ಮೂವರಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ನಂದೀಪುರ ಬಳಿ ಭೀಕರ ಅಪಘಾತವಾಗಿದೆ. ರಾಂಗ್ ಸೈಡ್ ಬಂದ ಕಾರೊಂದು ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆಯೂ ಸೇರಿ ಮೂವರಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ಕಡೆಯಿಂದ ಶಿರಸಿ ಕಡೆಗೆ ಹೋಗುತ್ತಿದ್ದ ಕಾರು, ಶಿರಸಿ ಕಡೆಯಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಎರಡು ಬೈಕ್ ಗಳಿಗೆ ಡಿಕ್ಕಿಯಾಗಿದೆ. ಪರಿಣಾಮ ಬೈಕಿನಲ್ಲಿದ್ದ ಹಾವೇರಿ ಮೂಲದ ಓರ್ವ ಮಹಿಳೆ ಹಾಗೂ ಪುರುಷನಿಗೆ ಗಂಭೀರ ಗಾಯವಾಗಿದೆ. ಹಾಗೆಯೇ ಮತ್ತೊಂದು ಬೈಕಿನಲ್ಲಿದ್ದ ವ್ಯಕ್ತಿಗೂ ಗಾಯವಾಗಿದೆ. ಎಣ್ಣೆ ಏಟಲ್ಲಿ..?...
ಇಂದಿರಾನಗರದ ಬಳಿ ಬೈಕ್ ಅಪಘಾತ ಓರ್ವನಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ಇಂದಿರಾನಗರದ ಬಳಿ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಪರಿಣಾಮ ಬೈಕ್ ನಲ್ಲಿದ್ದ ಓರ್ವನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡಿನಿಂದ ಕಲಘಟಗಿ ಕಡೆಗೆ ಹೋಗುತ್ತಿರುವಾಗ, ಇಂದಿರಾ ನಗರ ಹತ್ತಿರ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಬೈಕ್ ನಲ್ಲಿದ್ದ ಕುಂದಗೋಳ ತಾಲೂಕಿನ ಸುರೇಶ ಶಿವಪ್ಪ ಗುಡಿಯಾಳ್(33) ಎಂಬುವವರಿಗೆ ತಲೆಗೆ ಹಾಗೂ ಮುಖಕ್ಕೆ ಗಾಯವಾಗಿದೆ. ಅದೃಷ್ಟವಶಾತ್ ಮತ್ತೊರ್ವನಿಗೆ ಯಾವುದೇ ಗಾಯವಾಗದೆ ಸುರಕ್ಷಿತವಾಗಿದ್ದಾನೆ. ಇನ್ನು ಅಪಘಾತ ನಡೆದ ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ಗಾಯಾಳುವನ್ನು ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನೀಡಿ...
ಕೊಪ್ಪ ಇಂದಿರಾನಗರದಲ್ಲಿ ಹಾಡಹಗಲೇ ಮನೆ ಕಳ್ಳತನ, ಅಪ್ರಾಪ್ತ ಬಾಲಕರ ಕೃತ್ಯವಾ..?
ಮುಂಡಗೋಡ ತಾಲೂಕಿನ ಕೊಪ್ಪ ಇಂದಿರಾನಗರದಲ್ಲಿ ಹಾಡಹಗಲೇ ಮನೆ ಕಳ್ಳತನವಾಗಿದೆ. ಮನೆಯ ಹೆಂಚು ತೆರೆದು ಮನೇಲಿದ್ದ ಹಣ ಎಗರಿಸಿಕೊಂಡು ಹೋಗಿದ್ದಾರೆ. ರೇಣುಕಾ ಬಸವರಾಜ್ ಕುಕ್ಕಾಟಿ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಅಂದಹಾಗೆ, ದೀಪಾವಳಿ ಹಬ್ಬದ ಸಂಭ್ರಮ ಮುಗಿಸಿಕೊಂಡು ಹೊಳೆಯಮ್ಮ ದೇವಿಯ ದರ್ಶನಕ್ಕಾಗಿ ಹೋಗಿದ್ದರು ರೇಣುಕಾ. ಹೀಗಾಗಿ, ಕಳೆದ ಎರಡು ದಿನದಿಂದಲೂ ಮನೆಲಿ ಯಾರೂ ಇಲ್ಲದ್ದನ್ನು ಗಮನಿಸಿ ಹೊಂಚು ಹಾಕಿ ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಇಂದು ಮದ್ಯಾಹ್ನವೇ ಹೆಂಚು ತೆಗೆದು ಮನೆಯೊಳಗೆ ಹೊಕ್ಕಿದ್ದಾರೆ. ನಂತರ ಮನೆಯೊಳಗೆ ಟ್ರೆಂಕ್ ನಲ್ಲಿ...
ವಿಷಕಾರಿ ಹಾವು ಕಚ್ಚಿ ಗರ್ಭಿಣಿ ಮಹಿಳೆ ದಾರುಣ ಸಾವು..!
ವಿಜಯಪುರ: ವಿಷಕಾರಿ ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಸಾವು ಕಂಡ ದಾರುಣ ಘಟನೆ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ನಡೆದಿದೆ. ನಾಲ್ಕು ತಿಂಗಳ ಗರ್ಭಿಣಿ ನಿರ್ಮಲಾ ಯಲ್ಲಪ್ಪ ಚಲವಾದಿ(25) ಹಾವು ಕಚ್ಚಿ ಸಾವು ಕಂಡಿದ್ದಾಳೆ. ಹಾವು ಕಚ್ಚಿದ ವೇಳೆಯಲ್ಲಿ ಹೆಚ್ಚಿನ ಚಿಕಿತ್ಸೆಗೆಂದು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಸಾವು ಕಂಡಿದ್ದಾಳೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡ ಪಿಎಸ್ಐ ಬಸಣ್ಣನ ಎತ್ತಂಗಡಿಗೆ ಪ್ಲ್ಯಾನ್ ರೆಡಿ, ಠಾಣೆಯ ಅಂಗಳದಲ್ಲಿ ಬ್ರೋಕರುಗಳ ಮಸಲತ್ತು ನಿಜಾನಾ..?
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರ ಎತ್ತಂಗಡಿಗೆ ಅದೊಂದು ಪಡೆ ಸನ್ನದ್ಧವಾಗಿದೆಯಂತೆ. ಅಂತಹದ್ದೊಂದು ರೂಮರ್ರು ತಾಲೂಕಿನ ತುಂಬ ಎದ್ದಿದೆ. ತಮ್ಮ ಮೂಗಿನ ನೇರಕ್ಕೆ ಕಾರ್ಯನಿರ್ವಹಿಸ್ತಿಲ್ಲ, ನಮಗೆ ಕಿಮ್ಮತ್ತು ಕೊಡ್ತಿಲ್ಲ ಅಂತಾ ಅದೊಂದು ಟೀಂ ಅದ್ಯಾರ್ಯಾರದ್ದೋ ಕಿವಿ ಕಚ್ಚಿ ಹೆಂಗಾದ್ರೂ ಸರಿ ಪಿಎಸ್ಐರನ್ನ ಇಲ್ಲಿಂದ ಎತ್ತಂಗಡಿ ಮಾಡಿಸಬೇಕು ಅನ್ನೋ ಪ್ಲ್ಯಾನ್ ಮಾಡಿಕೊಂಡಿದೆಯಂತೆ. ದಕ್ಷ ಯುವ ಪಡೆ..! ಅಂದಹಾಗೆ, ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಇವತ್ತಿಗೂ ದಕ್ಷ ಯುವ ಪಡೆ ಇದೆ. ಅದ್ಯಾವನೇ ನಾಗರಿಕ ತನ್ನ ಅಳಲು ತೋಡಿಕೊಳ್ಳಲು ಠಾಣೆಯ ಮೆಟ್ಟಿಲು ಹತ್ತಿದ್ರೆ...
ರಾತ್ರಿಯ ಭಯಂಕರ ಮಳೆಗೆ ಯುವತಿ ಬಲಿ, ಮನೆಯಲ್ಲಿದ್ದ ಯುವತಿಗೆ ಸಿಡಿಲು ಬಡಿದು ಸಾವು..!
ಕಲಘಟಗಿ: ತಾಲೂಕಿನ ಅಸ್ತಕಟ್ಟಿ ಗ್ರಾಮದಲ್ಲಿ ಸಿಡಿಲಿಗೆ ಓರ್ವ ಯುವತಿ ಬಲಿಯಾಗಿದ್ದಾಳೆ. ಕು.ಲಕ್ಷ್ಮೀ ವಿರೂಪಾಕ್ಷಪ್ಪ ಪಾಟೀಲ್(18) ಸಿಡಿಲಿಗೆ ಬಲಿಯಾದವಳಾಗಿದ್ದಾಳೆ. ನಿನ್ನೆ ರಾತ್ರಿ ಸುರಿದ ಗುಡುಗು, ಸಿಡಿಲು, ಮಿಂಚು ಸಹಿತ ಭಾರೀ ಮಳೆಗೆ ಯುವತಿ ಬಲಿಯಾಗಿದ್ದು ದುರಂತ ಸಾವು ಕಂಡಿದ್ದಾಳೆ. ಅಂದಹಾಗೆ, ಮೃತ ಲಕ್ಷ್ಮೀ ದ್ವಿತೀಯ ಪಿಯುಸಿ ಯಲ್ಲಿ ವ್ಯಾಸಂಗ ಮಾಡುತಿದ್ದಳು. ನಿನ್ನೆ ರಾತ್ರಿ 10 ಗಂಟೆಯ ಸುಮಾರಿಗೆ ಮನೆಯ ಒಳಗೆ ಇದ್ದಾಗ, ಏಕಾಏಕಿ ಲಕ್ಷ್ಮೀಯ ಎದೆಗೆ ಸಿಡಿಲು ಬಡಿದಿದೆ ಎನ್ನಲಾಗಿದೆ. ಹೀಗಾಗಿ, ಸ್ಥಳದಲ್ಲೇ ಯುವತಿ ಸಾವನ್ನಪ್ಪಿದ್ದಾಳೆ. ಕಳೆದ ಮೂರು...









