ಮುಂಡಗೋಡ: ಪಟ್ಟಣದ ಹುಬ್ಬಳ್ಳಿ ರಸ್ತೆಯ ಪಟ್ಟಣ ಪಂಚಾಯತ ಎದುರಿನಲ್ಲಿ ಇಂಡಿಕಾ ಕಾರ್ ಡಿಕ್ಕಿಯಾದ ಪರಿಣಾಮ ಆಕಳ ಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹುಬ್ಬಳ್ಳಿ ರಸ್ತೆ ಕಡೆಗೆ ಹೊರಟಿದ್ದ ಇಂಡಿಕಾ ಕಾರು, ರಸ್ತೆಯಲ್ಲಿದ್ದ ಕರುವಿನ ಮುಖಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಕರು ರಕ್ತದ ಮಡುವಿನಲ್ಲಿ ಬಿದ್ದಿದೆ. ಹೀಗಾಗಿ, ಸ್ಥಳೀಯರು ತಕ್ಷಣವೇ ಪಶುವೈದ್ಯ ಅವಿನಾಶ್ ಪೂಜಾರ್ ಗೆ ಕರೆ ಮಾಡಿದ್ದಾರೆ. ಆದ್ರೆ, ಪಶುವೈದ್ಯರು ಚಿಕಿತ್ಸೆ ನೀಡುವಷ್ಟರಲ್ಲೇ ಕರು ಸಾವನ್ನಪ್ಪಿದೆ ಅಂತಾ ಮಾಹಿತಿ ಲಭ್ಯವಾಗಿದೆ. ಸದ್ಯ ರಕ್ತದ ಮಡುವಿನಲ್ಲಿ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: Police news
ಮುಂಡಗೋಡ ಗಾಂಧಿನಗರದಲ್ಲಿ ನೇಣಿಗೆ ಶರಣಾದ ಯುವಕ..!
ಮುಂಡಗೋಡ: ಪಟ್ಟಣದ ಗಾಂಧಿನಗರದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ನಡೆದಿದೆ. ಗಾಂಧಿನಗರದ ದೇವಪುತ್ರ ಗೋರ್ನಾಳ (35) ಎಂಬ ಯುವಕನೇ ನೇಣಿಗೆ ಶರಣಾಗಿದ್ದು, ಮನೆಯ ಜಂತಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಂದಿಪುರ ಬಳಿ ಬೊಲೆರೋ ವಾಹನ ತಪ್ಪಿಸಲು ಹೋಗಿ ರಸ್ತೆ ಬದಿಗೆ ಜಾರಿದ KSRTC ಬಸ್..!
ಮುಂಡಗೋಡ: ತಾಲೂಕಿನ ನಂದಿಪುರ ಸಮೀಪ KSRTC ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದಿದೆ. ಪರಿಣಾಮ ಮೂರ್ನಾಲು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಎದುರಿಗೆ ಬಂದ ಬುಲೆರೋ ತಪ್ಪಿಸಲು ಹೋಗಿ ಬಸ್ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಗೆ ತಾಗಿ ನಿಂತಿದೆ. ರಸ್ತೆ ಬದಿಯಲ್ಲಿದ್ದ ಮರಕ್ಕೆ ತಾಗಿ ನಿಂತ ಪರಿಣಾಮ ಬಸ್ ಮುಂಬದಿಯ ಗ್ಲಾಸ್ ಜಖಂ ಗೊಂಡಿದೆ. ಇನ್ನು ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಎಮರ್ಜೆನ್ಸಿ ಬಾಗಿಲು ತೆರೆದು ಹೊರ ಬಂದಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಮುಂಡಗೋಡ-ಯಲ್ಲಾಪುರ ಗಡಿಯ ಕಾಡಲ್ಲಿದೆ ನಟೋರಿಯಸ್ ಗ್ಯಾಂಗ್..! ಎಚ್ಚರ ತಪ್ಪಿದ್ರೆ ನಿಮಗೂ ಹಾಕ್ತಾರೆ ಗಾಳ..!
ಯಲ್ಲಾಪುರ ಪೊಲೀಸರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಇಡೀ ಯಲ್ಲಾಪುರ ತಾಲೂಕಿನ ಜನರ ನಿದ್ದೆಗೆಡಿಸಿದ್ದ ಅದೊಂದು ನಟೋರಿಯಸ್ ದರೋಡೆಕೋರರ ಭಯಾನಕ ಕೃತ್ಯ ಈಗಷ್ಟೇ ಅರ್ಧ ಬಯಲಾದಂತಾಗಿದೆ. ಬರೋಬ್ಬರಿ ಒಂದೂವರೇ ತಿಂಗಳು, ಹಗಲು ರಾತ್ರಿ ಕಾರ್ಯಾಚರಣೆ ನಡೆಸಿ, ಅರ್ದದಷ್ಟು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ ಯಲ್ಲಾಪುರ ಪೊಲೀಸರು. ಅಸಲು, ಯಲ್ಲಾಪುರದ ದಕ್ಷ ಪಿಐ ಸುರೇಶ್ ಯಳ್ಳೂರು ಹಾಗು ಮತ್ತವರ ಪಡೆಗೆ ಅಕ್ಷರಶಃ ನಿದ್ದೆ ಕಸಿದುಕೊಂಡಿದ್ದ ಕೇಸ್ ಇದು. ಅದು ಭಯಾನಕ ಗ್ರಾಮ..! ಇಲ್ಲಿ ಈ ಸ್ಟೋರಿ ಹೇಳೋಕಿಂತ ಮುಂಚೆ ಈ ಗ್ರಾಮದ...
ನಂದಿಕಟ್ಟಾ ಗ್ರಾಮದಲ್ಲಿ ಬಾಲಕನಿಗೆ ಕಚ್ಚಿದ ಉರಿಮಂಡಲ ಹಾವು, ಕಿಮ್ಸ್ ಗೆ ದಾಖಲು..!
ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ 16 ವರ್ಷದ ಬಾಲಕನಿಗೆ ಉರಿಮಂಡಲ ಹಾವು ಕಚ್ಚಿದೆ. ಪರಿಣಾಮ ಗಾಯಗೊಂಡ ಬಾಲಕನಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂದಿಕಟ್ಟಾ ಗ್ರಾಮದಲ್ಲಿ ಸಂಜೆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದಾಗ, ಕಟ್ಟಿಗೆ ಮೇಲೆ ಕಾಲಿಟ್ಟ ಬಾಲಕ ನಂದನ್ ರವಿ ತೇರಗಾಂವ್(16) ಎಂಬುವವನಿಗೆ ಕಟ್ಟಿಗೆಯಡಿ ಇದ್ದ ಹಾವು ಕಾಲಿಗೆ ಕಚ್ಚಿದೆ. ತಕ್ಷಣವೇ ಬಾಲಕನನ್ನು ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಅಲ್ಲಿಂದ ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಬಾಲಕನ ಆರೋಗ್ಯ ಸ್ಥಿರವಾಗಿದೆ ಅಂತಾ ಕುಟುಂಬದ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ....
ಕೊಪ್ಪದಲ್ಲಿ ವಿಷಕಾರಿ ಹಾವು ಕಚ್ಚಿ ರೈತ ಸಾವು..? ಭತ್ತಕ್ಕೆ ಔಷಧಿ ಸಿಂಪಡಿಸುವಾಗ ಘಟನೆ..!
ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದಲ್ಲಿ ವಿಷಕಾರಿ ಹಾವು ಕಚ್ಚಿ ರೈತನೋರ್ವ ಮೃತಪಟ್ಟಿರೋ ಶಂಕೆ ವ್ಯಕ್ತವಾಗಿದೆ. ಭತ್ತದ ಗದ್ದೆಯಲ್ಲಿ ಔಷಧಿ ಸಿಂಪಡಿಸುವ ವೇಳೆ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದ್ದು, ಅಸಲು ಹಾವು ಕಚ್ಚಿಯೇ ಮೃತಪಟ್ಟಿದ್ದಾನಾ ಅಥವಾ ಬೇರೆ ಯಾವುದೋ ಕಾರಣಕ್ಕೆ ಮೃತಪಟ್ಟಿದ್ದಾನಾ..? ಮಾಹಿತಿ ಲಭ್ಯವಾಗಬೇಕಿದೆ. ಕೊಪ್ಪ ಗ್ರಾಮದ ಚಂದ್ರು ಗಾಂಜಿ(56) ಎಂಬುವವನೇ ಮೃತಪಟ್ಟ ರೈತನಾಗಿದ್ದಾನೆ. ಇಂದು ಮುಂಜಾನೆ ತನ್ನ ಭತ್ತದ ಗದ್ದೆಯಲ್ಲಿ ಔಷಧಿ ಸಿಂಪಡಿಸಲು ಗದ್ದೆಗೆ ತೆರಳಿದ್ದ ಚಂದ್ರು ಮದ್ಯಾನದವರೆಗೂ ಭತ್ತಕ್ಕೆ ಔಷಧಿ ಸಿಂಪಡಿಸಿದ್ದಾನೆ. ಆದ್ರೆ ಅದ್ಯಾವಾಗ ಹಾವು...
ಸನವಳ್ಳಿ ಮಾರಿಕಾಂಬೆಯ ಆಭರಣ ಕದ್ದಿದ್ದ ಚಾಲಾಕಿ ಅರೆಸ್ಟ್, ಅಷ್ಟಕ್ಕೂ ಕಳ್ಳತನದ ಆರೋಪಿ ಯಾರು ಗೊತ್ತಾ..?
ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದ ಶ್ರೀಮಾರಿಕಾಂಬಾದೇವಿ ದೇವಸ್ಥಾನದಲ್ಲಿ ನಡೆದಿದ್ದ ಕಳ್ಳತನ ಕೇಸ್ ಕೂಡ ಬಟಾ ಬಯಲಾಗಿದೆ. ಮುಂಡಗೋಡ ಪೊಲೀಸರ ಖಡಕ್ ತನಿಖೆಯಲ್ಲಿ ಆ ಗ್ರಾಮದಲ್ಲೇ ಅಡಗಿ ಕುಳಿತಿದ್ದ ಆರೋಪಿ ಸಿಕ್ಕಿಬಿದ್ದಿದ್ದಾನೆ. ಈ ಮೂಲಕ ಪಿಐ ಸಿದ್ದಪ್ಪ ಸಿಮಾನಿ ಹಾಗೂ ಪಿಎಸ್ ಐ ಬಸವರಾಜ್ ಮಬನೂರು ಕಳ್ಳತನದ ಕೇಸ್ ಬಯಲು ಮಾಡಿದ್ದಾರೆ. ಮಳ್ಳನಂತಿದ್ದ ಕಳ್ಳ..! ಅಸಲಿಗೆ, ಊರ ದೇವಿಯ ಆಭರಣವನ್ನೇ ಎಗರಿಸಿ ಮಳ್ಳನಂತೆ ಕುಳಿತಿದ್ದ, ಸನವಳ್ಳಿ ಗ್ರಾಮದ ಮಹಾಂತೇಶ್ ಅರ್ಜುನ್ ಆರೆಗೊಪ್ಪ ಎಂಬುವ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ....
ಅಡಿಕೆ ಕಳ್ಳತನ ಕೇಸ್ ಬೇಧಿಸಿದ ಮುಂಡಗೋಡ ಪೊಲೀಸರು, ಕೊಪ್ಪ ಗ್ರಾಮದವನೇ ಅಡಿಕೆ ಕದ್ದವನಂತೆ..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಡಿಕೆ ಕಳ್ಳತನ ಮಾಡಿದ್ದ ಆರೋಪಿಯನ್ನು ರಾತ್ರೋ ರಾತ್ರಿ ಎಳೆದು ತಂದಿದ್ದಾರೆ. ಈ ಮೂಲಕ ಪಿಐ ಸಿದ್ದಪ್ಪ ಸಿಮಾನಿ ಮತ್ತವರ ತಂಡ ಅಡಿಕೆ ಕಳ್ಳತನದ ಕೇಸ್ ಸಾರಾಸಗಟಾಗಿ ಬೇಧಿಸಿದೆ. ಕೊಪ್ಪ (ಇಂದೂರು) ಗ್ರಾಮದ ಫಕ್ಕಿರೇಶ ಮಲ್ಲಪ್ಪ ದೊಡ್ಮನಿ ಎಂಬುವವನೇ ಅಡಿಕೆ ಕಳ್ಳತನದ ಆರೋಪಿಯಾಗಿದ್ದು, ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ. ಈತನನ್ನು ಖಚಿತ ಸುಳಿವಿನ ಮೇರೆಗೆ ಪಿಐ ಸಿದ್ದಪ್ಪ ಸಿಮಾನಿ, ಪಿಎಸ್ ಐ ಬಸವರಾಜ್ ಮಬನೂರು ಸೇರಿದಂತೆ ಮತ್ತವರ ತಂಡ ದಾಳಿ ಮಾಡಿ...
ಇಂದೂರು ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಕಾರ್, ನಾಲ್ವರಿಗೆ ಗಾಯ, ಆಸ್ಪತ್ರೆಗೆ ದಾಖಲು..!
ಮುಂಡಗೋಡ: ಇಂದೂರು ಕೊಪ್ಪ ಸಮೀಪದ ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮಹಳೆಯರೂ ಸೇರಿ ನಾಲ್ವರಿಗೆ ಗಾಯವಾಗಿದೆ. ಇಂದೂರಿನಿಂದ ಮುಂಡಗೋಡ ಕಡೆಗೆ ಹೊರಟಿದ್ದ ಕಾರ್ ನಂ. KA-31-N-5760 ನಂಬರಿನ ಕಾರ್ ವೇಗವಾಗಿ ಬಂದಿದೆ. ಅತಿವೇಗದಿಂದ ಚಾಲನೆ ಮಾಡುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ, ಎದುರಿಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆಯುತ್ತಿತ್ತು. ಅದ್ರೆ ಅದೃಷ್ಟವಶಾತ್ ಬೈಕ್ ಗೆ ಡಿಕ್ಕಿ ಹೊಡೆದಿಲ್ಲ. ಬದಲಾಗಿ ವೇಗವಾಗಿ ಬಂದು ಬೃಹತ್ ಆಲದ ಮರಕ್ಕೆ...
ಗೊಬ್ಬರ ಸಿಂಪಡಿಸುವಾಗ ಕಚ್ಚಿದ ವಿಷಕಾರಿ ಸರ್ಪ, ಚಿಗಳ್ಳಿಯಲ್ಲಿ ಅನ್ನದಾತನ ದುರಂತ ಸಾವು..!
ಮುಂಡಗೋಡ: ತಾಲೂಕಿನ ಚಿಗಳ್ಳಿಯಲ್ಲಿ ವಿಷಕಾರಿ ಹಾವು ಕಚ್ಚಿ ರೈತ ಸಾವನ್ನಪ್ಪಿದ್ದಾನೆ. ಪಾಂಡುರಂಗ ಚೆನ್ನಾಪುರ(48) ಹಾವು ಕಚ್ಚಿ ಮೃತಪಟ್ಟ ರೈತನಾಗಿದ್ದಾನೆ. ಇಂದು ಬೆಳಿಗ್ಗೆ ತನ್ನ ಗೋವಿನಜೋಳದ ಗದ್ದೆಯಲ್ಲಿ ಗೊಬ್ಬರ ಸಿಂಪಡಿಸುವ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿದೆ. ಹೀಗಾಗಿ, ತೀವ್ರ ಅಸ್ವಸ್ಥಗೊಂಡಿದ್ದ ರೈತನನ್ನು ಚಿಕಿತ್ಸೆಗಾಗಿ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ತೆ ಚಿಕಿತ್ಸೆ ಫಲಕಾರಿಯಾಗದೆ ರೈತ ಮೃತಪಟ್ಟಿದ್ದಾನೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.









