ಮುಂಡಗೋಡ:ಪಿಎಸ್ಐ ಬಸವರಾಜ್ ಮಬನೂರು ಮತ್ತವರ ತಂಡ ಬೆಳ್ಳಂ ಬೆಳಿಗ್ಗೆ ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದೆ. ಅಕ್ರಮವಾಗಿ ಬಂಕಾಪುರದಿಂದ ಗೋಮಾಂಸ ಸಾಗಾಟ ಮಾಡುತ್ತಿದ್ದ ಓಮಿನಿ ವಾಹನ ಸಮೇತ ಓರ್ವ ಆರೋಪಿಯ ಹೆಡೆಮುರಿ ಕಟ್ಟಲಾಗಿದೆ. ಟಿಬೇಟಿಯನ್ ಕಾಲೋನಿಗೆ..? ಇಂದು ಬೆಳಿಗ್ಗೆ, ಹಾವೇರಿ ಜಿಲ್ಲೆಯ ಬಂಕಾಪುರದಿಂದ ಓಮಿನಿ ವಾಹನದಲ್ಲಿ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಆಧಾರದಲ್ಲಿ ಬಂಕಾಪುರ ರಸ್ತೆಯಲ್ಲಿ ದಾಳಿ ಮಾಡಿರೋ ಪೊಲೀಸರು, ಬರೋಬ್ಬರಿ 2 ಕ್ವಿಂಟಾಲ್ ಗೋಮಾಂಸ ವಶಕ್ಕೆ ಪಡೆಸಿಕೊಂಡಿದ್ದಾರೆ. ಜೊತೆಗೆ ಅಕ್ರಮ ದಂಧೆ ನಡೆಸುತ್ತಿದ್ದ ಆರೋಪಿ ಸಮೇತ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: Police news
ನಾಪತ್ತೆಯಾಗಿದ್ದ ಮುಂಡಗೋಡಿನ ಆನಂದ್ ಕಡಗಿ ಶವ ಕುಂದರ್ಗಿ ಕ್ರಾಸ್ ಬಳಿ ಪತ್ತೆ, ಅಷ್ಟಕ್ಕೂ ಸಾವು ಹೇಗಾಯ್ತು..?
ಮುಂಡಗೋಡ: ನಾಪತ್ತೆಯಾಗಿದ್ದ ಪಟ್ಟಣದ ಖಾಸಗಿ ಶಾಲೆಯ ಶಿಕ್ಷಕ ಆನಂದ ಕಡಗಿ ಶವ, ಬರೋಬ್ಬರಿ 21 ದಿನಗಳ ಬಳಿಕ ಪತ್ತೆಯಾಗಿದೆ. ಮುಂಡಗೋಡ ತಾಲೂಕಿನ ಕುಂದರ್ಗಿ ಕ್ರಾಸ್ ಬಳಿ ಶವ ಪತ್ತೆಯಾಗಿದೆ. ಈ ಮೂಲಕ ಉಟ್ಟುಡುಗೆಯಲ್ಲೇ ಮನೆಬಿಟ್ಟು ನಡೆದಿದ್ದ ಆನಂದ್ ಕಡಗಿಯ ಶವ ಕಂಡು ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ. ಸ್ನೇಹಿತರಲ್ಲಿ ದುಃಖ ಮಡುಗಟ್ಟಿದೆ. ಬರಿಗಾಲಲ್ಲೇ ನಡೆದಿದ್ದ ಶಿಕ್ಷಕ..! ಅವತ್ತು, ಮೇ 29 ರ ರವಿವಾರ, ಬೆಳಿಗ್ಗೆ 11 ಗಂಟೆಯಷ್ಟೊತ್ತಿಗೆ ಬರಿಗಾಲಲ್ಲೇ ಮನೆ ಬಿಟ್ಟು ಹೋಗಿದ್ದ ಆನಂದ್, ಹಸಿರು ಬಣ್ಣದ...
40 ದಿನದ ಕಂದಮ್ಮನನ್ನೇ ಕೊಲೆ ಮಾಡಲು ಯತ್ನಿಸಿದ್ಲಾ ತಾಯಿ, ಆಸ್ಪತ್ರೆ ಕಿಟಕಿಯಿಂದ ಎಸೆದ ಮಗು ಏನಾಯ್ತು..?
ಹುಬ್ಬಳ್ಳಿಯ ಕಿಮ್ಸ್ನಲ್ಲಿ ಮಗು ಕಳ್ಳತನ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ಅಪಹರಣವಾಗಿದೆ ಅಂತಾ ಸುಳ್ಳು ಕತೆ ಕಟ್ಟಿದ್ದ ಚಾಲಾಕಿ ಹೃದಯಹೀನ ತಾಯಿಯನ್ನು ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಕಳ್ಳತನದ ಡ್ರಾಮಾ..? ಕಳೆದ ಸೋಮವಾರ ಕಿಮ್ಸ್ ನಲ್ಲಿ ಮಗುವಿನ ಕಳ್ಳತನವಾಗಿದೆ, ಯಾರೋ ಮಗುವನ್ನು ನನ್ನ ಕೈಯಿಂದ ಕಿತ್ತುಕೊಂಡು ಎಸ್ಕೇಪ್ ಆಗಿದ್ದಾರೆ ಅಂತಾ ದೂರು ನೀಡಿದ್ದಳು ಮಗುವಿನ ತಾಯಿ. ಹೀಗಾಗಿ, ಪ್ರಕರಣ ಭಾರೀ ಸದ್ದು ಮಾಡಿತ್ತು. ದೂರು ದಾಖಲಿಸಿಕೊಂಡು ತನಿಖೆಗೆ ಇಳಿದಿದ್ದ ವಿದ್ಯಾನಗರ ಠಾಣೆಯ ಪೊಲೀಸರಿಗೆ, ಮಗು ಕಾಣೆಯಾದ ಮರುದಿನವೇ...
ಪಂಪಸೆಟ್ ಕೇಬಲ್ ಕಳ್ಳತನ: ಇಬ್ಬರು ಆರೋಪಿಗಳ ಬಂಧನ..!
ಬನವಾಸಿ: ಪಂಪಸೆಟ್ ಗೆ ಅಳವಡಿಸಿದ್ದ ವಿದ್ಯುತ್ ಕೇಬಲ್ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬನವಾಸಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಮತ್ತಿಹಳ್ಳಿಯ ಸೋಮಪ್ಪ ನೀಲಪ್ಪ ಒಡೆಯನಪುರ(28), ಬೆಟಕೆರೂರು ಗ್ರಾಮದ ಶಿವರಾಜ್ ಗುತ್ಯಪ್ಪ ಮಂತಿಕೊಪ್ಪ(22) ಎಂಬುವ ಆರೋಪಿಗಳನ್ನು ಬಂಧಿಸಲಾಗಿದೆ. ದಿನಾಂಕ: 16-06-2022 ರಂದು ಶಿರಸಿ ತಾಲೂಕ ಮೊಗವಳ್ಳಿ ಗ್ರಾಮದ ಸದಾನಂದ ಮಾದೇವ ಹಳ್ಳಕೊಪ್ಪ ಎಂಬುವವರ ಜಮೀನಿನ ಪಕ್ಕದಲ್ಲಿರುವ ವರದಾ ನದಿಯಿಂದ ಮೋಟಾರ ಮಶೀನ್ ಮೂಲಕ ನೀರನ್ನು ಉಪಯೋಗಿಸಿಕೊಳ್ಳಲು ಸುಮಾರು 250 ಅಡಿ ಉದ್ದದ ಮೋಟಾರ...
ಮೈನಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್, ಕೆಂದಲಗೇರಿಯ ವ್ಯಕ್ತಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ಮೈನಳ್ಳಿ ಸಮೀಪದಲ್ಲಿ ಬೈಕ್ ಅಪಘಾತವಾಗಿದೆ. ಬೈಕ್ ಸವಾರನೊಬ್ಬ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ. ಕೆಂದಲೆಗೇರಿ ಗ್ರಾಮದ ನೂರ್ ಅಹ್ಮದ್ (30) ಎಂಬುವವನೇ ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಈತ ಕೆಂದಲಗೇರಿ ಗ್ರಾಮದಿಂದ ಯಲ್ಲಾಪುರ ರಸ್ತೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ, ಈ ವೇಳೆ ಬೈಕ್ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವೂ ಮುರಿದಿದೆ. ಸದ್ಯ ಬೈಕ್ ಸವಾರನ...
ಹುನಗುಂದದಲ್ಲಿ ಅಪರಿಚಿತ, ಅರೆನಗ್ನ ವ್ಯಕ್ತಿಯ ತಿರುಗಾಟದ ಆತಂಕ, ಪೊಲೀಸರ ವಶಕ್ಕೆ ಒಪ್ಪಿಸಿದ ಗ್ರಾಮಸ್ಥರು..!
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ ಇಂದು ಸಂಜೆ ಕೆಲಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಪರಿಚಿತ ವ್ಯಕ್ತಿಯೊಬ್ಬ ಅರೆನಗ್ನ ಸ್ಥಿತಿಯಲ್ಲಿ ಏಕಾಏಕಿ ಮನೆಗಳಿಗೆ ನುಗ್ಗಿ ಅವಾಚ್ಯವಾಗಿ ನಿಂದಿಸುತ್ತಿದ್ದ. ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದ ವ್ಯಕ್ತಿಯನ್ನು ಕಂಡ ಜನ ಅಕ್ಷರಶಃ ಆತಂಕಕ್ಕೀಡಾಗಿದ್ದರು. ಆತ ಬಿಹಾರಿ..! ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದ ವ್ಯಕ್ತಿ ಮಾನಸಿಕ ಅಸ್ವಸ್ಥನಂತೆ ಕಂಡುಬಂದ. ಆದ್ರೆ ಜನ ಮಾತ್ರ ಆತ ನಡೆದುಕೊಂಡ ರೀತಿ ನೋಡಿ ಭಯಭೀತಗೊಂಡು ಆತನನ್ನು ಕಳ್ಳ ಇರಬಹುದು ಅಂತ ಭಾವಿಸಿದ್ರು. ಹೀಗಾಗಿ, ತಕ್ಷಣವೇ 112 ಪೊಲೀಸರಿಗೆ ಕರೆ...
ನ್ಯಾಸರ್ಗಿಯಲ್ಲಿ ವಿಷಕಾರಿ ಹಾವು ಕಚ್ಚಿ ಯುವಕ ದಾರುಣ ಸಾವು..!
ಮುಂಡಗೋಡ: ನ್ಯಾಸರ್ಗಿಯಲ್ಲಿ ಮೊಬೈಲ್ ನಲ್ಲಿ ಮಾತಾನಾಡುತ್ತ ಹಾವು ತುಳಿದ ಕಾರಣ ವಿಷಕಾರಿ ಹಾವು ಕಚ್ಚಿ ಯುವಕನೊರ್ವ ಮೃತಪಟ್ಟ ಘಟನೆ ನಡೆದಿದೆ. ಚಂದ್ರು ಗೂಳಪ್ಪ ಜಮಾತಿ(30) ಎಂಬ ಯುವಕನೇ ವಿಷಕಾರಿ ಹಾವಿಗೆ ಬಲಿಯಾಗಿದ್ದಾನೆ. ನಿನ್ನೆ ಬೆಳಿಗ್ಗೆ ತನ್ನ ಹಿತ್ತಲಿನಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಚಂದ್ರು, ವಿಷಕಾರಿ ಹಾವಿನ ಮೇಲೆ ಹೆಜ್ಜೆಯಿಟ್ಟಿದ್ದಾನೆ. ಹೀಗಾಗಿ, ಹಾವು ರೋಷದಿಂದ ಕಚ್ಚಿದೆ. ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದೆ. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಅಂತಾ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ...
“ಚರ್ಮ ಸುಲಿದು ಬಿಡ್ತಿನಿ” ಅಂದ್ರಂತೆ ಮುಂಡಗೋಡ ಪಿಐ ಸಾಹೇಬ್ರು, ಅಷ್ಟಕ್ಕೇ, ಶಾಲೆ ಬಿಟ್ಟು ಮನೆಯಲ್ಲೇ ಕುಳಿತ್ಲು ಹುಲಿಹೊಂಡದ ಬಾಲಕಿ..!
ಮುಂಡಗೋಡ: ಪೊಲೀಸರೆಂದ್ರೆ ಯಾರಿಗೆ ತಾನೆ ಭಯ ಇಲ್ಲ ಹೇಳಿ..? ಪುಟ್ಟ ಹುಡುಗರಿಗೆ “ಹೇ ಪೊಲೀಸು ಮಾಮಾ ಬಂದ” ಅಂತಾ ಒಂದು ಮಾತು ಹೇಳಿದ್ರೆ ಸಾಕು ಮಕ್ಕಳು ಗಡ ಗಡ ನಡುಗಿ ಅಡಗಿಕೊಳ್ತವೆ. ಅಂತಹದ್ದೊಂದು ಭಯ ಖಾಕಿಗಳನ್ನ ಕಂಡ್ರೆ ಬಹುತೇಕ ಮಕ್ಕಳಿಗೆ ಇದ್ದೇ ಇರತ್ತೆ. ಹೀಗಿದ್ದಾಗ, ಖುದ್ದು ಪೊಲೀಸ್ರೇ ಪುಟ್ಟ ಬಾಲಕಿಯೋರ್ವಳಿಗೆ ಧಮ್ಕಿ ಹಾಕಿದ್ರೆ ಹೇಗಾಗಬೇಡ..? ಇಂತದ್ದೇ ಒಂದು ಘಟನೆ ಮುಂಡಗೋಡ ತಾಲೂಕಿನ ಹುಲಿಹೊಂಡ ಗ್ರಾಮದಲ್ಲಿ ನಡೆದಿದೆ. ಆಕೆ 13 ರ ಬಾಲಕಿ..! ಹೌದು, ಆಕೆಯ ವಯಸ್ಸು...
ಕೌಟುಂಬಿಕ ಕಲಹ ಹಿನ್ನೆಲೆ, ಕಲ್ಲಿನಿಂದ ಜಜ್ಜಿ ಅಣ್ಣ ತಂಗಿಯ ಬರ್ಬರ ಹತ್ಯೆ..!
ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ, ಕಲ್ಲಿನಿಂದ ಜಜ್ಜಿ ಅಣ್ಣ ಹಾಗೂ ತಂಗಿಯ ಬರ್ಭರ ಹತ್ಯೆ ಮಾಡಿರೊ ಘಟನೆ, ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ. ರಾಜಶ್ರೀ ಶಂಕರಗೌಡ ಬಿರಾದಾರ್ (40), ನಾನಾಗೌಡ ಯರಗಲ್ (45) ಕೊಲೆಗೀಡಾದ ಅಣ್ಣ ಹಾಗೂ ತಂಗಿಯಾಗಿದ್ದಾರೆ. ರಾಜಶ್ರೀ ಪತಿ ಶಂಕರಗೌಡ ಹಾಗೂ ಇತರರು ಕೊಲೆ ಮಾಡಿರೋ ಆರೋಪ ಕೇಳಿಬಂದಿದೆ. ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದ ಹೊರ ಭಾಗದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುಂಡಗೋಡ ಪೊಲೀಸರ ಕಾರ್ಯಾಚರಣೆ: ಮಳಗಿಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅಂದರ್..!
ಮುಂಡಗೋಡ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ತಾಲೂಕಿನ ಮಳಗಿಯ ಪಂಚವಟಿಯಲ್ಲಿ ಮೇ. 20 ರಂದು ನಡೆದಿದ್ದ ಅಂಗಡಿ ಕಳ್ಳತನ ಪ್ರಕರಣ ಬೇಧಿಸಿ, ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಇದ್ರೊಂದಿಗೆ ನಿಟ್ಟುಸಿರು ಬಿಟ್ಟಿದ್ದಾರೆ ಖಾಕಿಗಳು. ಶಿರಸಿಯ ನಿವಾಸಿಗಳಾದ ಸಲೀಂ(25) ಅಬ್ದುಲ್ ಸತ್ತಾರ ಅಬ್ದುಲ್ ಗಫಾರ್ ಮುಲ್ಲಾ(28) ಹಾಗೂ ಇರ್ಫಾನ್ ಮಕಬೂಲ್ ಶೇಖ್ (21) ಎಂಬುವ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅಂದಹಾಗೆ, ಮೇ 20 ರ ರಾತ್ರಿ ಮಳಗಿ ಸಮೀಪದ ಪಂಚವಟಿಯಲ್ಲಿರುವ ಹಜರತ ಅಲಿ ಯಲಿವಾಳ್ ಎಂಬುವವರ ಅಂಗಡಿಯ ಮೇಲ್ಚಾವಣಿ ತೆಗೆದು...









