Home Police news

Tag: Police news

Post
ಆ ಹುಡುಗ ಭಗವಾಧ್ವಜ ಹಾಕಿದ್ದೇ ತಪ್ಪಾಯ್ತಾ..? ಅಷ್ಟಕ್ಕೂ ಆ ಪೊಲೀಸಪ್ಪನಿಗೆ ಅಷ್ಟೇಲ್ಲ ಅಧಿಕಾರ ಕೊಟ್ಟವರು ಯಾರು..?

ಆ ಹುಡುಗ ಭಗವಾಧ್ವಜ ಹಾಕಿದ್ದೇ ತಪ್ಪಾಯ್ತಾ..? ಅಷ್ಟಕ್ಕೂ ಆ ಪೊಲೀಸಪ್ಪನಿಗೆ ಅಷ್ಟೇಲ್ಲ ಅಧಿಕಾರ ಕೊಟ್ಟವರು ಯಾರು..?

ಮುಂಡಗೋಡ: ತಾಲೂಕಿನ ಮಳಗಿ ಪೊಲೀಸ್ ಠಾಣೆಯ ಪೊಲೀಸಪ್ಪ ಮಾಡಿರೋ ಅದೊಂದು ರಗಳೆ ,ರಾದ್ದಾಂತ ಇಡೀ ತಾಲೂಕಿನಲ್ಲಿ ಕಿಚ್ಚು ಹೊತ್ತಿಸುತ್ತಿದೆ. ತಾನೇ ಪೊಲೀಸ್ ವರಿಷ್ಠಾಧಿಕಾರಿ ಅಂತಾ ಪೋಸು ಕೊಡುವ ಹುಂಬತನಕ್ಕೆ ಈಗ ಅದೇ ಇಲಾಖೆಯ ಹಿರಿಯರು ತಲೆ ತಗ್ಗಿಸುವ ಮಟ್ಟಿಗೆ ಬಂದು ನಿಂತಿದೆ. ಆಗಿದ್ದೇ‌ನು..? ಅದು ಪಾಳಾ ಗ್ರಾಮ, ಮುಂಡಗೋಡ ತಾಲೂಕಿನ ಮಟ್ಟಿಗೆ ಒಂದಿಷ್ಟು ಸೂಕ್ಷ್ಮ ಪ್ರದೇಶ. ಇಲ್ಲಿ ದಶಕಗಳ ಹಿ‌ಂದಿನಿಂದಲೂ ಕೋಮು ದಳ್ಳುರಿ ಒಳಗೊಳಗೆ ಹೊಗೆಯಾಡಿ, ಕೆಲವು ಬಾರಿ ಹೊತ್ತಿಕೊಂಡೂ ಉರಿದ ಘಟನೆಗಳಾಗಿತ್ತು. ಆದ್ರೆ ಇತ್ತೀಚೆಗೆ ಇಲ್ಲಿ...

Post
ಮುಂಡಗೋಡಿನಲ್ಲಿ ರಾತ್ರೋ ರಾತ್ರಿ IPL ಬೆಟ್ಟಿಂಗ್ ಅಡ್ಡೆ ಮೇಲೆ ಎಸ್ಪಿ ಟೀಂ ದಾಳಿ, ನಾಲ್ವರು ಅರೆಸ್ಟ್..!

ಮುಂಡಗೋಡಿನಲ್ಲಿ ರಾತ್ರೋ ರಾತ್ರಿ IPL ಬೆಟ್ಟಿಂಗ್ ಅಡ್ಡೆ ಮೇಲೆ ಎಸ್ಪಿ ಟೀಂ ದಾಳಿ, ನಾಲ್ವರು ಅರೆಸ್ಟ್..!

ಇದು ಮುಂಡಗೋಡ ಮಟ್ಟಿಗೆ ಬಹುದೊಡ್ಡ ಬ್ರೇಕಿಂಗ್ ನ್ಯೂಸ್. ಯಸ್, ಉತ್ತರ ಕನ್ನಡದ ಖಡಕ್ ಎಸ್ಪಿ ಸುಮನಾ ಫನ್ನೇಕರ್ ಮೇಡಂ ಈಗಷ್ಟೇ ತಮ್ಮ ಅಸಲೀ ಆಟಗಳನ್ನು ಶುರು ಮಾಡಿ ಆಯ್ತು. ಇನ್ನೇನಿದ್ರು ಜಿಲ್ಲೆಯಲ್ಲಿ ಅಕ್ರಮಗಳಿಗೆ ಜಾಗವಿಲ್ಲ ಅನ್ನೋದು ಪಕ್ಕಾ. ಅದ್ರ ಭಾಗವಾಗೇ ನಿನ್ನೆ ತಡರಾತ್ರಿ ಮುಂಡಗೋಡಿನಲ್ಲಿ ಅದೊಂದು ಸ್ಪೇಷಲ್ ಟೀಂ ಬೃಹತ್ ಕಾರ್ಯಾಚರಣೆ ಮಾಡಿ ನಾಲ್ವರನ್ನ ಅನಾಮತ್ತಾಗಿ ವಶಕ್ಕೆ ಪಡೆದುಕೊಂಡು ಹೋಗಿದೆ. ಅಸಲು, ಈ ಕಾರ್ಯಚರಣೆ ಖುದ್ದು ಮುಂಡಗೋಡ ಪೊಲೀಸರಿಗೂ ಬೆವರು ಇಳಿಸಿದೆ. ಯಾಕಂದ್ರೆ ಅಲ್ಲೇನಾಗ್ತಿದೆ ಅನ್ನೋ ಸಣ್ಣದೊಂದು...

Post
“ಟಿಕ್ ಟಾಕ್” ನಲ್ಲೇ ರೀಲು ಬಿಟ್ಟ ನಂದಿಕಟ್ಟಾ ಹುಡುಗ, ಬೆಂಗಳೂರಿನಿಂದ್ಲೇ “ಲವ್ ಯೂ” ಅಂದ್ಲು ಹುಡುಗಿ..! ಮುಂದೆ ಆಗಿದ್ದೇನು..?

“ಟಿಕ್ ಟಾಕ್” ನಲ್ಲೇ ರೀಲು ಬಿಟ್ಟ ನಂದಿಕಟ್ಟಾ ಹುಡುಗ, ಬೆಂಗಳೂರಿನಿಂದ್ಲೇ “ಲವ್ ಯೂ” ಅಂದ್ಲು ಹುಡುಗಿ..! ಮುಂದೆ ಆಗಿದ್ದೇನು..?

ಅದು ಅಪ್ಪಟ ಒಂದೂವರೇ ವರ್ಷದ ಪ್ರೇಮ್ ಕಹಾನಿ. ಆಕೆ ದೂರದ ಬೆಂಗಳೂರಿನವಳು, ಈತ ಮುಂಡಗೋಡ ತಾಲೂಕಿನ ನಂದಿಕಟ್ಟಾದವನು. ಟಿಕ್ ಟಾಕ್ ನಲ್ಲೇ ಶುರುವಾದ ಪ್ರೇಮ ಎರಡು ಮಕ್ಕಳ ತಾಯಿಯೊಂದಿಗೆ ಪ್ರೀತಿ, ಪ್ರೇಮದ ಹೆಸರಲ್ಲಿ ಕೊನೆಗೆ ಮದುವೆಯ ಮೂರು ಗಂಟು ಬೀಳುವಂತೆ ಮಾಡಿತ್ತು. ಆದ್ರೀಗ ಆ ಸಂಬಂಧ ಅಕ್ಷರಶಃ ಮೂರಾಬಟ್ಟೆಯಾಗಿದೆ. ಹಾಗಂತ, ಆ ಮಹಿಳೆ ಬೆಂಗಳೂರಿನ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ತನ್ನ ನೂತನ ಪತಿಯ ವಿರುದ್ಧ ಕೇಸು ದಾಖಲಿಸಿದ್ದಾಳೆ. ಅದ್ರ ಜೊತೆ ನಂಗೆ ನನ್ನ ಪತಿಯನ್ನ ಹುಡುಕಿ ಕೊಡಿ...

Post
ಅಮ್ಮಾಜಿ ಕೆರೆಯಲ್ಲಿ ಪಲ್ಟಿಯಾಗಿ ಬಿದ್ದಿದ್ದ ಲಾರಿ, ಕ್ರೇನ್ ಮೂಲಕ ಹೊರತೆಗೆದ ಸಿಬ್ಬಂದಿಗಳು..!

ಅಮ್ಮಾಜಿ ಕೆರೆಯಲ್ಲಿ ಪಲ್ಟಿಯಾಗಿ ಬಿದ್ದಿದ್ದ ಲಾರಿ, ಕ್ರೇನ್ ಮೂಲಕ ಹೊರತೆಗೆದ ಸಿಬ್ಬಂದಿಗಳು..!

ಮುಂಡಗೋಡ: ಪಟ್ಟಣದ ಅಮ್ಮಾಜಿ ಕೆರೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಿದ್ದಿದ್ದ ಲಾರಿಯನ್ನು ಕ್ರೇನ್ ಮೂಲಕ ಹೊರತೆಗೆಯಲಾಗಿದೆ. ಇಂದು ಬೆಳಿಗ್ಗೆ ಯಲ್ಲಾಪುರದಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಮ್ಮಾಜಿ ಕೆರೆಯಲ್ಲಿ ಧುಮುಕಿತ್ತು. ಹೀಗಾಗಿ, ಲಾರಿಯಲ್ಲಿದ್ದವರನ್ನು ಸಾರ್ವಜನಿಕರು ರಕ್ಷಣೆ‌ ಮಾಡಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿರಲಿಲ್ಲ. ಸದ್ಯ ಕೆರೆಯಲ್ಲಿ ಪಲ್ಟಿಯಾಗಿ ಅರ್ದಮರ್ದ ಮುಳುಗಿದ್ದ ಲಾರಿಯನ್ನು ಕ್ರೇನ್ ಮೂಲಕ ಹೊರತೆಗೆಯಲಾಗಿದೆ. ಈ ವೇಳೆ ಯಲ್ಲಾಪುರ ಮುಂಡಗೋಡ ರಸ್ತೆಯಲ್ಲಿ ಕೆಲಹೊತ್ತು ರಸ್ತೆ ಸಂಚಾರ ಸ್ಥಗಿತವಾಗಿತ್ತು.

Post
ಮುಂಡಗೋಡಿನ ಅಮ್ಮಾಜಿ ಕೆರೆಯಲ್ಲಿ ಪಲ್ಟಿಯಾಗಿ ಬಿದ್ದ ಲಾರಿ, ತಪ್ಪಿದ ಭಾರೀ ದುರಂತ..!

ಮುಂಡಗೋಡಿನ ಅಮ್ಮಾಜಿ ಕೆರೆಯಲ್ಲಿ ಪಲ್ಟಿಯಾಗಿ ಬಿದ್ದ ಲಾರಿ, ತಪ್ಪಿದ ಭಾರೀ ದುರಂತ..!

ಮುಂಡಗೋಡ: ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆಯಲ್ಲಿ ಮತ್ತೊಂದು ದುರಂತ ನಡೆದಿದೆ. ನಿಯಂತ್ರಣ ತಪ್ಪಿದ ಲಾರಿಯೊಂದು ಕೆರೆಯಲ್ಲೇ ಪಲ್ಟಿಯಾಗಿ ಬಿದ್ದಿದೆ. ಅದೃಷ್ಟವಶಾತ್ ಲಾರಿಯಲ್ಲಿದ್ದ ಜನರನ್ನ ಬಚಾವ್ ಮಾಡಲಾಗಿದೆ. ಯಲ್ಲಾಪುರ ಕಡೆಯಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಲಾರಿ, ಅಮ್ಮಾಜಿ ಕೆರೆ ಮೇಲೆ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಕೆರೆಯಲ್ಲೇ ಧುಮುಕಿದೆ. ಲಾರಿಯಲ್ಲಿದ್ದವರು ಜೀವ ಉಳಿಸಿಕೊಳ್ಳಲು ಪರದಾಡಿದ್ದಾರೆ. ತಕ್ಷಣವೇ ಸಹಾಯಕ್ಕೆ ಬಂದ ಸಾರ್ವಜನಿಕರು ಲಾರಿಯಲ್ಲಿದ್ದವರನ್ನು ರಕ್ಷಿಸಿ ಹೊರ ತಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಈ ಅಮ್ಮಾಜಿ ಕೆರೆಯಲ್ಲಿ ಇತ್ತಿಚೇಗಷ್ಟೇ ಕಾರು ಮುಳುಗಿ...

Post
ಮುಡಸಾಲಿ ಬಳಿ ಎತ್ತಿನ ಚಕ್ಕಡಿಗೆ ಹಿಂದಿನಿಂದ ಗುದ್ದಿದ KSRTC ಬಸ್, ಇಬ್ಬರಿಗೆ ಗಾಯ..! ತಪ್ಪಿದ ಭಾರೀ ಅನಾಹುತ

ಮುಡಸಾಲಿ ಬಳಿ ಎತ್ತಿನ ಚಕ್ಕಡಿಗೆ ಹಿಂದಿನಿಂದ ಗುದ್ದಿದ KSRTC ಬಸ್, ಇಬ್ಬರಿಗೆ ಗಾಯ..! ತಪ್ಪಿದ ಭಾರೀ ಅನಾಹುತ

ಮುಂಡಗೋಡ: ತಾಲೂಕಿನ ಮೂಡಸಾಲಿ ಕ್ರಾಸ್ ಬಳಿ ಬಾರೀ ಅನಾಹುತವೊಂದು ಅದೃಷ್ಟವಶಾತ್ ತಪ್ಪಿದಂತಾಗಿದೆ. ಎತ್ತಿನ ಚಕ್ಕಡಿಗೆ KSRTC ಬಸ್ ಹಿಂದಿನಿಂದ ಡಿಕ್ಕಿಯಾದ ಪರಿಣಾಮ ಇಬ್ಬರಿಗೆ ಗಾಯವಾಗಿದೆ. ಕಾತೂರು ಕಡೆ ಹೊರಟಿದ್ದ ಚಕ್ಕಡಿಗೆ ಹುಬ್ಬಳ್ಳಿ ಕಡೆಯಿಂದ ಹೊರಟಿದ್ದ ಸಾರಿಗೆ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರಿಗೆ ಗಾಯವಾಗಿದೆ. ಕಾತೂರು ಗ್ರಾಮದ ಸಂತೋಷ ತಿಪ್ಪಣ್ಣ ಹರಿಜನ (30), ಮಂಜುನಾಥ್ ಬಸಪ್ಪ ಡೊಳ್ಳೇಶ್ವರ್ (38) ಎಂಬುವರಿಗೆ ಗಾಯವಾಗಿದೆ. KSRTC ಚಾಲಕನ ಸಮಯ ಪ್ರಜ್ಞೆಯಿಂದ ಆಗಬಹುದಾಗಿದ್ದ ಭಾರೀ ಅವಘಡ ತಪ್ಪಿದಂತಾಗಿದೆ. ತಡರಾತ್ರಿಯಲ್ಲಿ ಘಟನೆ...

Post
ಬಡ್ಡಿಗೇರಿ ಅಪಘಾತ ಪ್ರಕರಣ: ಚಾಲಕನ ವಿರುದ್ಧ ಕೇಸ್, ಟಾಟಾ ಎಸ್ ನಲ್ಲಿ ಜನರನ್ನ ಸಾಗಿಸುವಂತಿಲ್ಲ, ಪೊಲೀಸರ ಖಡಕ್ ಕ್ರಮ..!

ಬಡ್ಡಿಗೇರಿ ಅಪಘಾತ ಪ್ರಕರಣ: ಚಾಲಕನ ವಿರುದ್ಧ ಕೇಸ್, ಟಾಟಾ ಎಸ್ ನಲ್ಲಿ ಜನರನ್ನ ಸಾಗಿಸುವಂತಿಲ್ಲ, ಪೊಲೀಸರ ಖಡಕ್ ಕ್ರಮ..!

ಮುಂಡಗೊಡ: ತಾಲೂಕಿನ ಬಡ್ಡಿಗೇರಿ ಕ್ರಾಸ್ ಬಳಿ  ನಡೆದಿದ್ದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಟಾ ಎಸ್ ವಾಹನ ಚಾಲಕನ ವಿರುದ್ಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟಾಟಾ ಏಸ್ ವಾಹನ ನಂ-ಕೆಎ-25/ಸಿ-5779 ನೇದರ ಚಾಲಕ ಮುಂಡಗೋಡ ವಡ್ಡರ ಓಣಿಯ ಮಂಜುನಾಥ ಈರಪ್ಪ ಬೋವಿ ಎಂಬುವನ ಮೇಲೆ ಪ್ರಕರಣ ದಾಖಲಾಗಿದ್ದು, ಈತನು ತನ್ನ ಟಾಟಾ ಏಸ್ ವಾಹನವನ್ನು ಅತೀವೇಗ ಹಾಗೂ ಅಜಾಗರುಕತೆಯಿಂದ ಚಲಾಯಿಸಿ, ಓರ್ವ ವ್ಯಕ್ತಿಯ ಸಾವಿಗೆ ಕಾರಣವಾಗಿದ್ದು, ಅಲ್ಲದೆ ಒಟ್ಟೂ 21 ಜನರಿಗೆ ಭಾರಿ ಗಾಯ ಪಡಿಸಿರುತ್ತಾನೆ...

Post
ಬಡ್ಡಿಗೇರಿ ಕ್ರಾಸ್ ಬಳಿ ಟಾಟಾ ಎಸ್ ಭೀಕರ ಅಪಘಾತ, ಓರ್ವ ಸ್ಥಳದಲ್ಲೇ ಸಾವು,15 ಜನರಿಗೆ ಗಾಯ, ಹಲವರ ಸ್ಥಿತಿ ಗಂಭೀರ..!

ಬಡ್ಡಿಗೇರಿ ಕ್ರಾಸ್ ಬಳಿ ಟಾಟಾ ಎಸ್ ಭೀಕರ ಅಪಘಾತ, ಓರ್ವ ಸ್ಥಳದಲ್ಲೇ ಸಾವು,15 ಜನರಿಗೆ ಗಾಯ, ಹಲವರ ಸ್ಥಿತಿ ಗಂಭೀರ..!

ಮುಂಡಗೋಡ: ತಾಲೂಕಿನ ಯಲ್ಲಾಪುರ ರಸ್ತೆಯ ಬಡ್ಡಿಗೇರಿ ಕ್ರಾಸ್ ಬಳಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಎಸ್ ವಾಹನ ಸ್ಟೆರಿಂಗ್ ಕಟ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಸುಮಾರು 15 ಕ್ಕೂ ಹೆಚ್ಚು ಜನರಿಗೆ ಗಾಯವಾದ ದಾರುಣ ಘಟನೆ ನಡೆದಿದೆ‌. ಮಾಂಬು ಗಾವಡೆ (24) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಗಾಯಾಳುಗಳನ್ನು ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಅದ್ರಲ್ಲಿ 6 ಜನರ ಸ್ಥಿತಿ ಗಂಭೀರವಾಗಿದ್ದು, ಅವ್ರನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಅಂದಹಾಗೆ, ಬಡ್ಡಿಗೇರಿಯಿಂದ...

Post
ಮಳಗಿ ಡ್ಯಾಂನಲ್ಲಿ ಕೊಲೆಯಾದ್ನಾ ಭಟ್ಕಳದ ವಿನಾಯಕ..? ಆ ಸಾವಿನ ಸುತ್ತ ಕುಟುಂಬಸ್ಥರ ಅನುಮಾನಗಳೇನು..?

ಮಳಗಿ ಡ್ಯಾಂನಲ್ಲಿ ಕೊಲೆಯಾದ್ನಾ ಭಟ್ಕಳದ ವಿನಾಯಕ..? ಆ ಸಾವಿನ ಸುತ್ತ ಕುಟುಂಬಸ್ಥರ ಅನುಮಾನಗಳೇನು..?

ಮುಂಡಗೋಡ: ಮಳಗಿ ಧರ್ಮಾ ಜಲಾಶಯದ ಒಡಲಿನಲ್ಲಿ ಕ್ರೌರ್ಯಗಳೂ ನಡಿತಿವೆಯಾ..? ನಿಜಕ್ಕೂ ಆ ಒಂದು ಸಾವು, ಸಾವಿನಾಚೆಗಿನ ಬಿಡಿಸಲಾಗದ ಸತ್ಯಗಳು ಎಂತವರನ್ನೂ ಒಂದುಕ್ಷಣ ತಲ್ಲಣಗೊಳಿಸ್ತಿವೆ. ಭಟ್ಕಳದಿಂದ ಶಿರಸಿ ಮಾರಿ ಜಾತ್ರೆಗೆ ಬಂದಿದ್ದ ಯುವಕ ನೀರುಪಾಲಾಗಿದ್ದರ ಹಿಂದೆ, ಬರೀ ಅನುಮಾನಗಳೇ ಹಾಸು ಹೊಕ್ಕಾಗಿವೆ. ಮಗನನ್ನ ಕಳೆದುಕೊಂಡ ಕುಟುಂಬವೀಗ ಅಕ್ಷರಶಃ ಅನಾಥವಾಗಿದೆ. ಅವತ್ತು ಮಾ.22 ಭಟ್ಕಳದ ಶಿರಾಲಿ ಮೂಲದ ವಿನಾಯಕ ಜನ್ನು ಎನ್ನುವ ಯುವಕ ಮಾರ್ಚ್ 22ರಂದು ಇದೇ ಮಳಗಿಯ ಧರ್ಮಾ ಜಲಾಶಯದಲ್ಲಿ ಹೆಣವಾಗಿ ಸಿಕ್ಕಿದ್ದ. ತನ್ನ ಗೆಳೆಯರೊಂದಿಗೆ ಶಿರಸಿ ಜಾತ್ರೆಗೆ...

Post
ಅಗಡಿಯಲ್ಲಿ ವಿದ್ಯುತ್ ತಂತಿ ತುಳಿದು ಬಾಲಕ ದಾರುಣ ಸಾವು, ಅದೃಷ್ಟವಶಾತ್ ಬಚಾವಾದ ಮತ್ತೋರ್ವ ಬಾಲಕ..!

ಅಗಡಿಯಲ್ಲಿ ವಿದ್ಯುತ್ ತಂತಿ ತುಳಿದು ಬಾಲಕ ದಾರುಣ ಸಾವು, ಅದೃಷ್ಟವಶಾತ್ ಬಚಾವಾದ ಮತ್ತೋರ್ವ ಬಾಲಕ..!

ಮುಂಡಗೋಡ: ತಾಲೂಕಿನ ಅಗಡಿಯಲ್ಲಿ ಭಾರೀ ಮನಕಲುಕುವ ಘಟನೆ ನಡೆದಿದೆ. ಹರಿದು ಬಿದ್ದಿದ್ದ ವಿದ್ಯುತ್ ತಂತಿ ಹಿಡಿದ ಪರಿಣಾಮ 13 ವರ್ಷದ ಬಾಲಕನೋರ್ವ ಸ್ಥಳದಲ್ಲೇ‌ ಮೃತಪಟ್ಟಿದ್ದಾನೆ. ಮತ್ತೊರ್ವ ಸಹೋದರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಷ್ಪಕ್ ಮೊಹ್ಮದ್ ಷರೀಪ್ ಚಪಾತಿ (13) ಎಂಬ ಬಾಲಕನೇ ಸಾವನ್ನಪ್ಪಿದ ದುರ್ದೈವಿಯಾಗಿದ್ದಾ‌ನೆ. ಬೇಲಿಯ ಮೇಲೆ ವಿದ್ಯುತ್ ಲೈನ್ ಹರಿದು ಬಿದ್ದಿದೆ. ಇದೇ ವೇಳೆ ಅಷ್ಪಕ್ ಹಾಗೂ ಆತನ ಮತ್ತೊರ್ವ ಸಹೋದರ ಮಹ್ಮದ್ ಜಾಫರ್ ಚಪಾತಿ ಎನ್ನುವ ಬಾಲಕ ಅದೇ‌ ಮಾರ್ಗವಾಗಿ ಮನೆಗೆ ತೆರಳುತ್ತಿದ್ದಾಗ ಬಾಲಕ...