Home Police news

Tag: Police news

Post
ಆಲದಕಟ್ಟಿ ಕಬ್ಬಿನ ಗದ್ದೆಯಲ್ಲಿ ನೆಲ್ಲಿಹರವಿ ಮುದುಕಿಯ ಬರ್ಬರ ಹತ್ಯೆ, ಚಿನ್ನಾಭರಣದ ಆಸೆಗೆ ಕೊಲೆ ಮಾಡಿದ್ರಾ..?

ಆಲದಕಟ್ಟಿ ಕಬ್ಬಿನ ಗದ್ದೆಯಲ್ಲಿ ನೆಲ್ಲಿಹರವಿ ಮುದುಕಿಯ ಬರ್ಬರ ಹತ್ಯೆ, ಚಿನ್ನಾಭರಣದ ಆಸೆಗೆ ಕೊಲೆ ಮಾಡಿದ್ರಾ..?

ಕಲಘಟಗಿ: ಬಂಗಾರದ ಆಸೆಗಾಗಿ ವೃದ್ಧ ಮಹಿಳೆಯ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿದ್ದಾರೆ ಆಗಂತುಕರು. ಕಲಘಟಗಿ ತಾಲೂಕಿನ ಆಲದಕಟ್ಟಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ, ನೆಲ್ಲಿಹರವಿ ಗ್ರಾಮದ ಮುದುಕಿಯನ್ನು ಕೊಂದು ಹಾಕಿದ್ದಾರೆ. ಕಲಘಟಗಿ ತಾಲ್ಲೂಕಿನ ನೆಲ್ಲಿಹರವಿ ಗ್ರಾಮದ 82 ವರ್ಷದ ತಿಪ್ಪವ್ವ ತಂಬೂರ್ ಎಂಬ ವೃದ್ದೆಯನ್ನ ಆಲದಕಟ್ಟಿ ಗ್ರಾಮದ ದ್ಯಾಮಣ್ಣ ಎಂಬುವವರಿಗೆ ಸೇರಿದ ಕಬ್ಬು ಬೆಳೆದ ಜಮೀನಿನಲ್ಲಿ ಭೀಕರವಾಗಿ ಕೊಲೆ ಮಾಡಿ, ವೃದ್ದೆಯ ಕೊರಳಲಿದ್ದ ಚಿನ್ನಾಭರಣ ದೋಚಿಕೊಂಡು ಕೊಲೆಗಾರರರು ಪರಾರಿ ಆಗಿದ್ದಾರೆ. ನಿನ್ನೆ ತಡ ರಾತ್ರಿ ಆಲದಕಟ್ಟಿ ಗ್ರಾಮದ...

Post
ಮುಂಡಗೋಡ ಅಮ್ಮಾಜಿ ಕೆರೆ ಮೇಲೆ ಆಟೋಗೆ ಕಾರ್ ಡಿಕ್ಕಿ, ಹಲವರಿಗೆ ಗಾಯ..!

ಮುಂಡಗೋಡ ಅಮ್ಮಾಜಿ ಕೆರೆ ಮೇಲೆ ಆಟೋಗೆ ಕಾರ್ ಡಿಕ್ಕಿ, ಹಲವರಿಗೆ ಗಾಯ..!

ಮುಂಡಗೋಡ ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆ ಮೇಲೆ ಅಪಘಾತವಾಗಿದೆ.. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಆಟೋಗೆ ಕಾರ್ ಡಿಕ್ಕಿಯಾದ ಪರಿಣಾಮ ಹಲವರಿಗೆ ಗಾಯವಾಗಿದೆ. ಮುಂಡಗೋಡ ಕಡೆಯಿಂದ ಯಲ್ಲಾಪುರ ರಸ್ತೆ ಕಡೆ ಹೊರಟಿದ್ದ ಆಟೋಗೆ, ಮುಂಡಗೋಡ ಕಡೆಯಿಂದ ಕಲಘಟಗಿ ಕಡೆ ಹೊರಟಿದ್ದ ಕಾರ್, ಓವರ್ ಟೇಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ ಅಂತಾ ತಿಳಿದು ಬಂದಿದೆ. ಪರಿಣಾಮ ಆಟೋದಲ್ಲಿದ್ದ ಚಾಲಕ ಸೇರಿ ಕೆಲವರಿಗೆ ಗಾಯವಾಗಿದೆ. ಆಟೋ ಚಾಲಕ ಇಂದೂರಿನ ಮೆಹೆಬೂಬ್ ಇಂಗಳಗಿ ಗಾಯವಾಗಿದ್ದು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನು, ಕಾರು...

Post
ಧಾರವಾಡ ಡಬ್ಬಲ್ ಮರ್ಡರ್, ನಾಲ್ವರು ಆರೋಪಿಗಳು ಮುಂಡಗೋಡಿನಲ್ಲಿ ವಶಕ್ಕೆ..!

ಧಾರವಾಡ ಡಬ್ಬಲ್ ಮರ್ಡರ್, ನಾಲ್ವರು ಆರೋಪಿಗಳು ಮುಂಡಗೋಡಿನಲ್ಲಿ ವಶಕ್ಕೆ..!

ಧಾರವಾಡದ ಜನತೆಯನ್ನು ಬೆಚ್ಚಿಬಿಳಿಸಿದ್ದ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ಆರೋಪಿಗಳನ್ನು ಮುಂಡಗೋಡಿನಲ್ಲಿ ಪೊಲೀಸರು ವಶಕ್ಕೆ ಪಡೆದು ಧಾರವಾಡಕ್ಕೆ ಕರೆದೊಯ್ದಿರೋ ಮಾಹಿತಿ ಲಭ್ಯವಾಗಿದೆ. ಅರ್ಬಾಜ್ ಹಂಚಿನಾಳ, ನದೀಮ್ ಹಾಗೂ ರಹೀಂ ಸೇರಿ ನಾಲ್ವರನ್ನು ವಶಕ್ಕೆ ಪಡೆದಿರೋ ಧಾರವಾಡ ಪೊಲೀಸರು ಸದ್ಯ ಧಾರವಾಡ ಉಪನಗರ ಠಾಣೆಯಲ್ಲಿ ವಿಚಾರಣೆ ನಡಿಸ್ತಿದಾರೆ. ನಿನ್ನೆ ಅಂದ್ರೆ, ಮೇ.25ರ ತಡರಾತ್ರಿ ಧಾರವಾಡದ ಕಮಲಾಪುರದ ಹೊರವಲಯದಲ್ಲಿ ನಡೆದಿದ್ದ ಡಬಲ್ ಮರ್ಡರ್ ಕೇಸಿನಲ್ಲಿ, ಕಮಲಾಪುರ ನಿವಾಸಿ ಮಹಮ್ಮದ ಕುಡಚಿ ಎಂಬುವವರನ್ನು ಆತನ ನಿವಾಸದಲ್ಲೇ ಹತ್ಯೆ ಮಾಡಲಾಗಿತ್ತು. ಆರೋಪಿಗಳೊಂದಿಗೆ...

Post
ಧಾರವಾಡದಲ್ಲಿ ನಡೆದ ಭೀಕರ ಡಬಲ್‌ ಮರ್ಡರ್ ನಲ್ಲಿ ಮುಂಡಗೋಡ ಯುವಕನ  ಹತ್ಯೆ..! ವಿದೇಶಕ್ಕೆ ಹೋಗಬೇಕಾಗಿದ್ದ ಹುಡುಗ ಹೆಣವಾದ..!

ಧಾರವಾಡದಲ್ಲಿ ನಡೆದ ಭೀಕರ ಡಬಲ್‌ ಮರ್ಡರ್ ನಲ್ಲಿ ಮುಂಡಗೋಡ ಯುವಕನ ಹತ್ಯೆ..! ವಿದೇಶಕ್ಕೆ ಹೋಗಬೇಕಾಗಿದ್ದ ಹುಡುಗ ಹೆಣವಾದ..!

 ಧಾರವಾಡದಲ್ಲಿ ಡಬಲ್ ಮರ್ಡರ ಆಗಿದೆ. ಇಬ್ಬರು ವ್ಯಕ್ತಿಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಕೊಲೆ ಮಾಡಲಾಗಿದೆ‌. ಧಾರವಾಡದ ಕಮಲಾಪೂರದ ಹಾತರಕಿ ಪ್ಲಾಟ್ ಬಳಿ ಘಟನೆ ನಡೆದಿದ್ದು ಇದ್ರಲ್ಲಿ ಮುಂಡಗೋಡಿನ ಯುವಕನೂ ಬರ್ಬರವಾಗಿ ಕೊಲೆಯಾಗಿದ್ದಾನೆ. ಅಂದಹಾಗೆ, ಮುಂಡಗೋಡಿನ ದೇಶಪಾಂಡೆ ನಗರದ ಯುವಕ ಗಣೇಶ್ ಕಮ್ಮಾರ್ (ಸಾಳುಂಕೆ)(24) ಕೊಲೆಯಾಗಿದ್ದಾನೆ. ಮತ್ತೋರ್ವ ಮಹ್ಮದ್ ಖುಡಚಿ (45) ಭೀಕರವಾಗಿ ಹತ್ಯೆಯಾಗಿದ್ದಾನೆ. ಹೀಗಾಗಿ ಚುಮು ಚುಮು ಬೆಳಕಿನಲ್ಲಿ ನಡೆದಿರೋ ಭೀಕರ ಡಬಲ್ ಮರ್ಡರ್ ಗೆ ಧಾರವಾಡದ ಕಮಲಾಪುರ ಗ್ರಾಮ ಬೆಚ್ಚಿ ಬಿದ್ದಿದೆ. ರಿಯಲ್ ಎಸ್ಟೇಟ್...

Post
ವಡಗಟ್ಟಾ ನಾಕಾ ಬಳಿ ಬೈಕ್ ಸ್ಕಿಡ್, ಸವಾರನ ಕಾಲು ಮುರಿತ, ತಾಲೂಕಾಸ್ಪತ್ರೆಗೆ ರವಾನೆ..!

ವಡಗಟ್ಟಾ ನಾಕಾ ಬಳಿ ಬೈಕ್ ಸ್ಕಿಡ್, ಸವಾರನ ಕಾಲು ಮುರಿತ, ತಾಲೂಕಾಸ್ಪತ್ರೆಗೆ ರವಾನೆ..!

ಮುಂಡಗೋಡ ತಾಲೂಕಿನ ಹುಬ್ಬಳ್ಳಿ ರಸ್ತೆಯ ವಡಗಟ್ಟಾ ಚೆಕ್ ಪೋಸ್ಟ್ ಬಳಿ ಬೈಕ್ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರನಿಗೆ ಕಾಲು ಮುರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದಾನೆ. ಕುಷ್ಟಗಿಯಿಂದ ಮಣಿಪಾಲಕ್ಕೆ ಬೈಕ್ ಮುಖಾಂತರ ತೆರಳುತ್ತಿದ್ದ ನಿರಂಜನ್ ಅಮರೇಶ್ ಅಮ್ಮಿನಗಡ ಎನ್ನುವ ವ್ಯಕ್ತಿಯ ಬೈಕ್ ಅಪಘಾತವಾಗಿದ್ದು, ಸದ್ಯ 108 ಅಂಬ್ಯುಲೆನ್ಸ್ ಮೂಲಕ ಪ್ರಥಮ ಚಿಕಿತ್ಸೆ ನೀಡಿ ಮುಂಡಗೋಡಿನ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡು ನರಳುತ್ತಿದ್ದ ವ್ಯಕ್ತಿಯನ್ನು ಕಂಡ ಸ್ಥಳೀಯರು ತಕ್ಷಣವೇ ಅಂಬ್ಯುಲೆನ್ಸ್ ಗೆ ಕರೆ ಮಾಡಿ ಮಾನವೀಯತೆ ತೋರಿದ್ದಾರೆ....

Post
ವಿದ್ಯುತ್ ಕಂಬ ಏರಿದ್ದ ವ್ಯಕ್ತಿ ಆಯತಪ್ಪಿ ಬಿದ್ದು ದಾರುಣ ಸಾವು, ಲೈನ್ ಮೆನ್ ನಿರ್ಲಕ್ಷಕ್ಕೆ ಬಲಿಯಾದ್ನಾ ಬಡವ..?

ವಿದ್ಯುತ್ ಕಂಬ ಏರಿದ್ದ ವ್ಯಕ್ತಿ ಆಯತಪ್ಪಿ ಬಿದ್ದು ದಾರುಣ ಸಾವು, ಲೈನ್ ಮೆನ್ ನಿರ್ಲಕ್ಷಕ್ಕೆ ಬಲಿಯಾದ್ನಾ ಬಡವ..?

ಹಾನಗಲ್ ತಾಲೂಕಿನ ಹೆರೂರಿನಲ್ಲಿ ಭೀಕರ ಘಟನೆಯೊಂದು ನಡೆದಿದೆ. ವಿದ್ಯುತ್ ಲೈನ್ ದುರಸ್ಥಿ ಮಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ ವಿದ್ಯುತ್ ಕಂಬದಿಂದ ಬಿದ್ದು ದಾರುಣ ಸಾವು ಕಂಡಿದ್ದಾನೆ. ಲೈನ್ ಮೆನ್ ನ ನಿರ್ಲಕ್ಷ ಹಾಗೂ ಬೇಜವಾಬ್ದಾರಿ ಓರ್ವ ವ್ಯಕ್ತಿಯ ಪ್ರಾಣವನ್ನೇ ಕಿತ್ತುಕೊಂಡಿದೆ ಅಂತಾ ಜನರು ಆಕ್ರೋಶಗೊಂಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಫಕ್ಕೀರಪ್ಪ ಶಿವಾನಂದಪ್ಪ ಮಡಿವಾಳರ ಎಂಬುವ ವ್ಯಕ್ತಿಯೇ ದುರಂತ ಸಾವು ಕಂಡಿದ್ದು, ಹೆರೂರು ಭಾಗದಲ್ಲಿ ಲೈನ್ ಮೆನ್ ಆಗಿ ಕಾರ್ಯನಿರ್ವಹಿಸ್ತಿರೊ ತಿರುಪತಿ ತಹಶೀಲ್ದಾರ್ ಎಂಬುವವನ ನಿರ್ಲಕ್ಷವೇ ಕಾರಣ ಎನ್ನಲಾಗಿದೆ. ಘಟನೆ...

Post
ಕೊಪ್ಪ ಇಂದಿರಾನಗರ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಕೋಡಂಬಿಯ ವ್ಯಕ್ತಿಗೆ ಗಾಯ, ಆಸ್ಪತ್ರೆಗೆ ದಾಖಲು..!

ಕೊಪ್ಪ ಇಂದಿರಾನಗರ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಕೋಡಂಬಿಯ ವ್ಯಕ್ತಿಗೆ ಗಾಯ, ಆಸ್ಪತ್ರೆಗೆ ದಾಖಲು..!

ಮುಂಡಗೋಡ ತಾಲೂಕಿನ ಕೊಪ್ಪ ಇಂದಿರಾನಗರದ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರನಿಗೆ ಗಾಯವಾಗಿದೆ. ಸದ್ಯ ಗಾಯಾಳುವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡಿರೋ ಬೈಕ್ ಸವಾರ, ಕೋಡಂಬಿ ಗ್ರಾಮದ ರಾಘವೇಂದ್ರ ಬಾಬು ಅರ್ಕಸಾಲಿ ಅಂತಾ ಗುರುತಿಸಲಾಗಿದೆ. ಈತ ಸಂಜೆ ತನ್ನ ಬೈಕ್‌ಮೂಲಕ ಇಂದಿರಾನಗರದ ಬಳಿ ಹೊರಟಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದು ದುರ್ಘಟನೆ ನಡೆದಿದೆ. ನಂತರ ಮಾಹಿತಿ ತಿಳಿದು 108 ಅಂಬ್ಯುಲೆನ್ಸ್ ಸ್ಥಳಕ್ಕೆ ಧಾವಿಸಿ 108 ಅಂಬ್ಯಲೆನ್ಸ್ ಸಿಬ್ಬಂದಿಗಳು ಸವಾರನಿಗೆ ಪ್ರಥಮ ಚಿಕಿತ್ಸೆ ಕೊಟ್ಟು ಮುಂಡಗೋಡ...

Post
ಯಲ್ಲಾಪುರ ರಸ್ತೆಯ ಗುಂಜಾವತಿ ಬಳಿ ಕಾರು ಅಪಘಾತ, ಮದುವೆಗೆಂದು ಬಂದಿದ್ದ ಮಹಾರಾಷ್ಟ್ರದ ಕುಟುಂಬಕ್ಕೆ ಆಘಾತ..!

ಯಲ್ಲಾಪುರ ರಸ್ತೆಯ ಗುಂಜಾವತಿ ಬಳಿ ಕಾರು ಅಪಘಾತ, ಮದುವೆಗೆಂದು ಬಂದಿದ್ದ ಮಹಾರಾಷ್ಟ್ರದ ಕುಟುಂಬಕ್ಕೆ ಆಘಾತ..!

 ಮುಂಡಗೋಡ ತಾಲೂಕಿನ ಯಲ್ಲಾಪುರ ರಸ್ತೆಯ ಬಡ್ಡಿಗೇರಿ, ಗುಂಜಾವತಿ ನಡುವೆ ಕಾರು ಅಪಘಾತವಾಗಿದೆ. ಮದುವೆಗೆಂದು ಬಂದಿದ್ದ ಮಹಾರಾಷ್ಟ್ರ ಮೂಲದ ಕುಟುಂಬದ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಪರಿಣಾಮ ಕಾರಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯವಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯವಾಗಿಲ್ಲ. ಮಹಾರಾಷ್ಟ್ರ ಮೂಲದ ಕುಟುಂಬ ಇಂದು ಮುಂಡಗೋಡ ತಾಲೂಕಿನಲ್ಲಿ ಮದುವೆ ಇದ್ದ ಕಾರಣ, ಮದುವೆಗೆಂದು ಆಗಮಿಸಿತ್ತು. ಮದುವೆ ಮುಗಿಸಿಕೊಂಡು ಹೊರಡುವಾಗ ಬಡ್ಡಿಗೇರಿ ಸಮೀಪದ ರಸ್ತೆಯಲ್ಲಿ ನಿಯಂತ್ರಣ ತಪ್ಪಿದೆ. ಹೀಗಾಗಿ, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ. ಆದ್ರೂ ಅದೃಷ್ಟವಶಾತ್ ಕಾರಲ್ಲಿದ್ದವರಿಗೆ...

Post
ಮುಂಡಗೋಡ ಹೊರವಲಯದ APMC ಬಳಿಯ ಕಾಡಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!

ಮುಂಡಗೋಡ ಹೊರವಲಯದ APMC ಬಳಿಯ ಕಾಡಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!

ಮುಂಡಗೋಡ ಪಟ್ಟಣದ ಹೊರವಲಯದ APMC ಹತ್ತಿರದ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸುಮಾರು 45 ವರ್ಷ ವಯಸ್ಸಿನ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯಾವುದೋ ಕಾರಣಕ್ಕೆ ಕಾಡಿನಲ್ಲಿ ಬಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ. ಕೊಳೆತು ನಾರುವ ಸ್ಥಿತಿಯಲ್ಲಿರೋ ಶವ, ಕನಿಷ್ಟ ಸುಮಾರು ಹತ್ತು ದಿನಗಳ ಹಿಂದೆ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Post
ಮೈನಳ್ಳಿ ಯುವಕನಿಂದ ಲವ್, ಸೆಕ್ಸ್, ದೋಖಾ ಆರೋಪ, ಆತನ ಮನೆ ಎದುರೇ ಧರಣಿ ಕುಳಿತ ಯುವತಿ..! ಅಷ್ಟಕ್ಕೂ ಏನಿದು ಘಟನೆ..?

ಮೈನಳ್ಳಿ ಯುವಕನಿಂದ ಲವ್, ಸೆಕ್ಸ್, ದೋಖಾ ಆರೋಪ, ಆತನ ಮನೆ ಎದುರೇ ಧರಣಿ ಕುಳಿತ ಯುವತಿ..! ಅಷ್ಟಕ್ಕೂ ಏನಿದು ಘಟನೆ..?

 ಮುಂಡಗೋಡ ತಾಲೂಕಿನ ಮೈನಳ್ಳಿಯಲ್ಲಿ ಯುವತಿಯೋರ್ವಳು ತನಗೆ ಅನ್ಯಾಯವಾಗಿದೆ ಅಂತಾ ಯುವಕನ ಮನೆಯೆದುರು ನಿನ್ನೆ ಸೋಮವಾರದಿಂದಲೂ ಸತ್ಯಾಗ್ರಹ ನಡೆಸ್ತಿದಾಳೆ. ಇಲ್ಲಿನ ಯುವಕನೊಬ್ಬ ನಂಗೆ ಪುಸಲಾಯಿಸಿ, ಪ್ರೀತಿಯ ಬಲೆ ಹೆಣೆದು, ಬಳಸಿಕೊಂಡು ಇವಾಗ ಮದುವೆ ಅಂತಾ ಮಾತಾಡಿದ್ರೆ ಆಗಲ್ಲ ಅಂತಾ ದ್ರೋಹ ಮಾಡ್ತಿದಾನೆ ಎಂದು ಅಲವತ್ತುಕೊಂಡಿದ್ದಾಳೆ..  ಘಟನೆ ಏನು..? ಯುವತಿ ಹೇಳೋ ಪ್ರಕಾರ, ಮೈನಳ್ಳಿ ಗ್ರಾಮದ ಅದೊಬ್ಬ ಯುವಕ, ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಅದೇಂತದ್ದೋ ಟ್ರೇನಿಂಗ್ ಗೆ ಹೋದಾಗ, ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಕಾಂಡೇಬಾಗೂರ್ ಗ್ರಾಮದ...

error: Content is protected !!