ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ಯುವಕನ ಬರ್ಬರ ಕೊಲೆಯಾಗಿದೆ. ಕಣ್ಣಿಗೆ ಕಾರದ ಪುಡಿ ಎರಚಿ ಕತ್ತು ಹಿಸುಕಿ ಕೊಲೆಗೈದು ಹೋಗಿದ್ದಾರೆ ದುಷ್ಕರ್ಮಿಗಳು. ಇನ್ನೇನು ಜೂ. 7 ರಂದು ಹಸೆಮಣೆ ಏರಲು ರೆಡಿಯಾಗಿದ್ದ ಯುವಕ ಸದ್ಯ ಹೆಣವಾಗಿ ಬಿದ್ದಿದ್ದಾನೆ. ಅಂದಹಾಗೆ, ಜಿನ್ನೂರಿನ ನಿಂಗಪ್ಪ ನವಲೂರ (28) ಕೊಲೆಯಾಗಿರುವ ಯುವಕನಾಗಿದ್ದು, ತೋಟದ ಮನೆಯಲ್ಲಿ ಮಲಗಿದ್ದ ವೇಳೆ ಮದ್ಯರಾತ್ರಿ ಬರ್ಬರವಾಗಿ ಹತ್ಯೆ ಮಾಡಿ ಹೋಗಿದ್ದಾರೆ ದುಷ್ಟರು. ಅಸಲು, ಇದೇ ಜೂನ್ 7 ರಂದು ಯುವಕನಿಗೆ ಮದುವೆ ಫಿಕ್ಸ್ ಆಗಿತ್ತು. ಕಲಘಟಗಿ ತಾಲೂಕಿನ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: Police news
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಿದ್ದಾರೆ. ಈ ಮೂಲಕ ಮುಂಡಗೋಡಿನಲ್ಲಿ ನಡೆದಿದ್ದ ಬೈಕ್ ಕಳ್ಳತನ ಪ್ರಕರಣ ಬೇಧಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ತಡಸ ಗ್ರಾಮದ ರಮೇಶ ಗಂಗಪ್ಪಾ ಮುಗಳಕಟ್ಟಿ(26) ಮಂಜುನಾಥ ಸುಬಾಸ ಸೋಮನಕೊಪ್ಪ (32) ಎಂಬುವ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮುಂಡಗೋಡ ಪಟ್ಟಣದ ಕಲಾಲ್ ಓಣಿಯ ಪೀರಸಾಬ ಅಬ್ದುಲಖಾದರ ಬಂಗ್ಲೆವಾಲೆ ಎಂಬುವವರ ಎಲೆಕ್ಟ್ರಿಕಲ್ ಅಂಗಡಿ ಮುಂದೆ ನಿಲ್ಲಿಸಿದ್ದ, ಹೀರೋ ಸ್ಪ್ಲೆಂಡರ್ ಫ್ಲಸ್ ಬೈಕ್ ನ್ನು ದಿನಾಂಕ...
ಮುಂಡಗೋಡ ಬಂಕಾಪುರ ರಸ್ತೆಯಲ್ಲಿ ಬೈಕ್ ಸ್ಕಿಡ್, ಮದುವೆಗೆ ಹೋಗಿದ್ದ ಮೂವರು ಯುವಕರಿಗೆ ಗಂಭೀರ ಗಾಯ..!
ಮುಂಡಗೋಡ ತಾಲೂಕಿನ ಬಂಕಾಪುರ ರಸ್ತೆಯ ಈಶ್ವರ ದೇವಸ್ಥಾನದ ಬಳಿ ಬೈಕಗ ಅಪಘಾತವಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಮೂವರು ಯುವಕರಿಗೆ ಗಂಭೀರ ಗಾಯವಾಗಿದೆ. ಮದುವೆಗೆಂದು ಹೊರಟಿದ್ದವರಿಗೆ ಆಘಾತವಾಗಿದೆ. ಗಾಯಗೊಂಡವರನ್ನು ಮುಂಡಗೋಡ ಪಟ್ಟಣದ ಇಂದಿರಾನಗರದ ಇಜಾಜ್, ಜಿಲಾನಿ, ಹಾಗೂ ಮಲ್ಲಿಕ್ ಅಂತಾ ಗುರುತಿಸಲಾಗಿದೆ. ಮೂವರಿಗೂ ಗಂಭೀರ ಗಾಯವಾಗಿದ್ದು, ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಲಾರಿ- ಕಾರು ನಡುವೆ ಭೀಕರ ಅಪಘಾತ, ಎರಡು ಮಕ್ಕಳೂ ಸೇರಿ 6 ಜನ ಸ್ಥಳದಲ್ಲೇ ಸಾವು..!
ಕೊಪ್ಪಳದ ಕುಷ್ಟಗಿ ಬಳಿ ಭೀಕರ ಅಪಘಾತಾಗಿದೆ. ಪರಿಣಾಮ ಸ್ಥಳದಲ್ಲೇ 6 ಜನ ಸಾವು ಕಂಡಿದ್ದಾರೆ. ಕುಷ್ಟಗಿಯ ಕಲಕೇರಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಇಂಡಿಕಾ ಲಾರಿ ಮಧ್ಯೆ ಅಪಘಾತವಾಗಿದೆ. ಇಂಡಿಕಾ ಕಾರಿನಲ್ಲಿದ್ದ ಇಬ್ಬರು ಮಕ್ಕಳು, ಓರ್ವ ಮಹಿಳೆ ಸೇರಿ 6 ಜನ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಮೃತರಿಗೆ ತಲಾ 2 ಲಕ್ಷ ಪರಿಹಾರ..! ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಸಂಭವಿಸಿದ ಕಾರು-ಲಾರಿ ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರಿಗೆ...
ಆಲದಕಟ್ಟಿ ಕಬ್ಬಿನ ಗದ್ದೆಯಲ್ಲಿ ನೆಲ್ಲಿಹರವಿ ಮುದುಕಿಯ ಬರ್ಬರ ಹತ್ಯೆ, ಚಿನ್ನಾಭರಣದ ಆಸೆಗೆ ಕೊಲೆ ಮಾಡಿದ್ರಾ..?
ಕಲಘಟಗಿ: ಬಂಗಾರದ ಆಸೆಗಾಗಿ ವೃದ್ಧ ಮಹಿಳೆಯ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿದ್ದಾರೆ ಆಗಂತುಕರು. ಕಲಘಟಗಿ ತಾಲೂಕಿನ ಆಲದಕಟ್ಟಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ, ನೆಲ್ಲಿಹರವಿ ಗ್ರಾಮದ ಮುದುಕಿಯನ್ನು ಕೊಂದು ಹಾಕಿದ್ದಾರೆ. ಕಲಘಟಗಿ ತಾಲ್ಲೂಕಿನ ನೆಲ್ಲಿಹರವಿ ಗ್ರಾಮದ 82 ವರ್ಷದ ತಿಪ್ಪವ್ವ ತಂಬೂರ್ ಎಂಬ ವೃದ್ದೆಯನ್ನ ಆಲದಕಟ್ಟಿ ಗ್ರಾಮದ ದ್ಯಾಮಣ್ಣ ಎಂಬುವವರಿಗೆ ಸೇರಿದ ಕಬ್ಬು ಬೆಳೆದ ಜಮೀನಿನಲ್ಲಿ ಭೀಕರವಾಗಿ ಕೊಲೆ ಮಾಡಿ, ವೃದ್ದೆಯ ಕೊರಳಲಿದ್ದ ಚಿನ್ನಾಭರಣ ದೋಚಿಕೊಂಡು ಕೊಲೆಗಾರರರು ಪರಾರಿ ಆಗಿದ್ದಾರೆ. ನಿನ್ನೆ ತಡ ರಾತ್ರಿ ಆಲದಕಟ್ಟಿ ಗ್ರಾಮದ...
ಮುಂಡಗೋಡ ಅಮ್ಮಾಜಿ ಕೆರೆ ಮೇಲೆ ಆಟೋಗೆ ಕಾರ್ ಡಿಕ್ಕಿ, ಹಲವರಿಗೆ ಗಾಯ..!
ಮುಂಡಗೋಡ ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆ ಮೇಲೆ ಅಪಘಾತವಾಗಿದೆ.. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಆಟೋಗೆ ಕಾರ್ ಡಿಕ್ಕಿಯಾದ ಪರಿಣಾಮ ಹಲವರಿಗೆ ಗಾಯವಾಗಿದೆ. ಮುಂಡಗೋಡ ಕಡೆಯಿಂದ ಯಲ್ಲಾಪುರ ರಸ್ತೆ ಕಡೆ ಹೊರಟಿದ್ದ ಆಟೋಗೆ, ಮುಂಡಗೋಡ ಕಡೆಯಿಂದ ಕಲಘಟಗಿ ಕಡೆ ಹೊರಟಿದ್ದ ಕಾರ್, ಓವರ್ ಟೇಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ ಅಂತಾ ತಿಳಿದು ಬಂದಿದೆ. ಪರಿಣಾಮ ಆಟೋದಲ್ಲಿದ್ದ ಚಾಲಕ ಸೇರಿ ಕೆಲವರಿಗೆ ಗಾಯವಾಗಿದೆ. ಆಟೋ ಚಾಲಕ ಇಂದೂರಿನ ಮೆಹೆಬೂಬ್ ಇಂಗಳಗಿ ಗಾಯವಾಗಿದ್ದು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನು, ಕಾರು...
ಧಾರವಾಡ ಡಬ್ಬಲ್ ಮರ್ಡರ್, ನಾಲ್ವರು ಆರೋಪಿಗಳು ಮುಂಡಗೋಡಿನಲ್ಲಿ ವಶಕ್ಕೆ..!
ಧಾರವಾಡದ ಜನತೆಯನ್ನು ಬೆಚ್ಚಿಬಿಳಿಸಿದ್ದ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ಆರೋಪಿಗಳನ್ನು ಮುಂಡಗೋಡಿನಲ್ಲಿ ಪೊಲೀಸರು ವಶಕ್ಕೆ ಪಡೆದು ಧಾರವಾಡಕ್ಕೆ ಕರೆದೊಯ್ದಿರೋ ಮಾಹಿತಿ ಲಭ್ಯವಾಗಿದೆ. ಅರ್ಬಾಜ್ ಹಂಚಿನಾಳ, ನದೀಮ್ ಹಾಗೂ ರಹೀಂ ಸೇರಿ ನಾಲ್ವರನ್ನು ವಶಕ್ಕೆ ಪಡೆದಿರೋ ಧಾರವಾಡ ಪೊಲೀಸರು ಸದ್ಯ ಧಾರವಾಡ ಉಪನಗರ ಠಾಣೆಯಲ್ಲಿ ವಿಚಾರಣೆ ನಡಿಸ್ತಿದಾರೆ. ನಿನ್ನೆ ಅಂದ್ರೆ, ಮೇ.25ರ ತಡರಾತ್ರಿ ಧಾರವಾಡದ ಕಮಲಾಪುರದ ಹೊರವಲಯದಲ್ಲಿ ನಡೆದಿದ್ದ ಡಬಲ್ ಮರ್ಡರ್ ಕೇಸಿನಲ್ಲಿ, ಕಮಲಾಪುರ ನಿವಾಸಿ ಮಹಮ್ಮದ ಕುಡಚಿ ಎಂಬುವವರನ್ನು ಆತನ ನಿವಾಸದಲ್ಲೇ ಹತ್ಯೆ ಮಾಡಲಾಗಿತ್ತು. ಆರೋಪಿಗಳೊಂದಿಗೆ...
ಧಾರವಾಡದಲ್ಲಿ ನಡೆದ ಭೀಕರ ಡಬಲ್ ಮರ್ಡರ್ ನಲ್ಲಿ ಮುಂಡಗೋಡ ಯುವಕನ ಹತ್ಯೆ..! ವಿದೇಶಕ್ಕೆ ಹೋಗಬೇಕಾಗಿದ್ದ ಹುಡುಗ ಹೆಣವಾದ..!
ಧಾರವಾಡದಲ್ಲಿ ಡಬಲ್ ಮರ್ಡರ ಆಗಿದೆ. ಇಬ್ಬರು ವ್ಯಕ್ತಿಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಕೊಲೆ ಮಾಡಲಾಗಿದೆ. ಧಾರವಾಡದ ಕಮಲಾಪೂರದ ಹಾತರಕಿ ಪ್ಲಾಟ್ ಬಳಿ ಘಟನೆ ನಡೆದಿದ್ದು ಇದ್ರಲ್ಲಿ ಮುಂಡಗೋಡಿನ ಯುವಕನೂ ಬರ್ಬರವಾಗಿ ಕೊಲೆಯಾಗಿದ್ದಾನೆ. ಅಂದಹಾಗೆ, ಮುಂಡಗೋಡಿನ ದೇಶಪಾಂಡೆ ನಗರದ ಯುವಕ ಗಣೇಶ್ ಕಮ್ಮಾರ್ (ಸಾಳುಂಕೆ)(24) ಕೊಲೆಯಾಗಿದ್ದಾನೆ. ಮತ್ತೋರ್ವ ಮಹ್ಮದ್ ಖುಡಚಿ (45) ಭೀಕರವಾಗಿ ಹತ್ಯೆಯಾಗಿದ್ದಾನೆ. ಹೀಗಾಗಿ ಚುಮು ಚುಮು ಬೆಳಕಿನಲ್ಲಿ ನಡೆದಿರೋ ಭೀಕರ ಡಬಲ್ ಮರ್ಡರ್ ಗೆ ಧಾರವಾಡದ ಕಮಲಾಪುರ ಗ್ರಾಮ ಬೆಚ್ಚಿ ಬಿದ್ದಿದೆ. ರಿಯಲ್ ಎಸ್ಟೇಟ್...
ವಡಗಟ್ಟಾ ನಾಕಾ ಬಳಿ ಬೈಕ್ ಸ್ಕಿಡ್, ಸವಾರನ ಕಾಲು ಮುರಿತ, ತಾಲೂಕಾಸ್ಪತ್ರೆಗೆ ರವಾನೆ..!
ಮುಂಡಗೋಡ ತಾಲೂಕಿನ ಹುಬ್ಬಳ್ಳಿ ರಸ್ತೆಯ ವಡಗಟ್ಟಾ ಚೆಕ್ ಪೋಸ್ಟ್ ಬಳಿ ಬೈಕ್ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರನಿಗೆ ಕಾಲು ಮುರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದಾನೆ. ಕುಷ್ಟಗಿಯಿಂದ ಮಣಿಪಾಲಕ್ಕೆ ಬೈಕ್ ಮುಖಾಂತರ ತೆರಳುತ್ತಿದ್ದ ನಿರಂಜನ್ ಅಮರೇಶ್ ಅಮ್ಮಿನಗಡ ಎನ್ನುವ ವ್ಯಕ್ತಿಯ ಬೈಕ್ ಅಪಘಾತವಾಗಿದ್ದು, ಸದ್ಯ 108 ಅಂಬ್ಯುಲೆನ್ಸ್ ಮೂಲಕ ಪ್ರಥಮ ಚಿಕಿತ್ಸೆ ನೀಡಿ ಮುಂಡಗೋಡಿನ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡು ನರಳುತ್ತಿದ್ದ ವ್ಯಕ್ತಿಯನ್ನು ಕಂಡ ಸ್ಥಳೀಯರು ತಕ್ಷಣವೇ ಅಂಬ್ಯುಲೆನ್ಸ್ ಗೆ ಕರೆ ಮಾಡಿ ಮಾನವೀಯತೆ ತೋರಿದ್ದಾರೆ....
ವಿದ್ಯುತ್ ಕಂಬ ಏರಿದ್ದ ವ್ಯಕ್ತಿ ಆಯತಪ್ಪಿ ಬಿದ್ದು ದಾರುಣ ಸಾವು, ಲೈನ್ ಮೆನ್ ನಿರ್ಲಕ್ಷಕ್ಕೆ ಬಲಿಯಾದ್ನಾ ಬಡವ..?
ಹಾನಗಲ್ ತಾಲೂಕಿನ ಹೆರೂರಿನಲ್ಲಿ ಭೀಕರ ಘಟನೆಯೊಂದು ನಡೆದಿದೆ. ವಿದ್ಯುತ್ ಲೈನ್ ದುರಸ್ಥಿ ಮಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ ವಿದ್ಯುತ್ ಕಂಬದಿಂದ ಬಿದ್ದು ದಾರುಣ ಸಾವು ಕಂಡಿದ್ದಾನೆ. ಲೈನ್ ಮೆನ್ ನ ನಿರ್ಲಕ್ಷ ಹಾಗೂ ಬೇಜವಾಬ್ದಾರಿ ಓರ್ವ ವ್ಯಕ್ತಿಯ ಪ್ರಾಣವನ್ನೇ ಕಿತ್ತುಕೊಂಡಿದೆ ಅಂತಾ ಜನರು ಆಕ್ರೋಶಗೊಂಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಫಕ್ಕೀರಪ್ಪ ಶಿವಾನಂದಪ್ಪ ಮಡಿವಾಳರ ಎಂಬುವ ವ್ಯಕ್ತಿಯೇ ದುರಂತ ಸಾವು ಕಂಡಿದ್ದು, ಹೆರೂರು ಭಾಗದಲ್ಲಿ ಲೈನ್ ಮೆನ್ ಆಗಿ ಕಾರ್ಯನಿರ್ವಹಿಸ್ತಿರೊ ತಿರುಪತಿ ತಹಶೀಲ್ದಾರ್ ಎಂಬುವವನ ನಿರ್ಲಕ್ಷವೇ ಕಾರಣ ಎನ್ನಲಾಗಿದೆ. ಘಟನೆ...









