ಮುಂಡಗೋಡ ತಾಲೂಕಿನ ಕಾತೂರ ಗ್ರಾಮದ ವೃದ್ದೆಯೋರ್ವರು ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಮುಂಡಗೋಡ ಪಟ್ಟಣಕ್ಕೆ ಬಂದವರು ನಾಪತ್ತೆಯಾಗಿದ್ದಾರೆ ಹುಡುಕಿಕೊಡಿ ಅಂತಾ ಆಕೆಯ ಪುತ್ರ ಮನವಿ ಮಾಡಿದ್ದಾರೆ. ಕಾತೂರಿನ ಶಿವಕ್ಕ ಫಕ್ಕೀರಪ್ಪ ತಳವಾರ(65) ಎಂಬ ವೃದ್ದೆಯೇ ನಾಪತ್ತೆಯಾದವರು. ನಿನ್ನೆ ಮುಂಜಾನೆ 10 ಘಂಟೆಗೆ ಕಾತೂರನಿಂದ ಮುಂಡಗೋಡಿಗೆ ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ಬಂದಿದ್ದರು. ಆದ್ರೆ, ಆಸ್ಪತ್ರೆಗೆ ಅಂತಾ ಬಂದವರು ವಾಪಸ್ ಮನೆಗೆ ಹೋಗದೆ ಎಲ್ಲಿಯೊ ನಾಪತ್ತೆಯಾಗಿದ್ದು, ಕುಟುಂಬಸ್ಥರು ಎಲ್ಲ ಕಡೆ ಹುಡುಕುತ್ತಿದ್ದಾರೆ. ಆದ್ರೆ ಇದುವರೆಗೂ ವೃದ್ದೆಯ ಪತ್ತೆಯಾಗಿಲ್ಲ. ಹೀಗಾಗಿ, ಯಾರಿಗಾದ್ರೂ...
Top Stories
ಜಿ.ಪಂ ಸಿಇಒ ದಿಲೀಷ್ ರಿಂದ ಮುಂಡಗೋಡ ಹಾಗೂ ಶಿರಸಿ ತಾಲೂಕಿನ ಜೆಜೆಎಮ್ ಕಾಮಗಾರಿ ಪರಿಶೀಲನೆ..!
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
Tag: Police news
ಅಯ್ಯಪ್ಪ ದೇವಸ್ಥಾನದ ಬಳಿ ನಡೆದಿದ್ದ ಭೀಕರ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ನ್ಯಾಸರ್ಗಿ ಯುವಕ ಚಿಕಿತ್ಸೆ ಫಲಿಸದೇ ಸಾವು..!
ಮುಂಡಗೋಡ ಪಟ್ಟಣದ ಹೊರವಲಯದ ಅಯ್ಯಪ್ಪ ದೇವಸ್ಥಾನದ ಬಳಿ ನಿನ್ನೆ ನಡೆದಿದ್ದ ಭೀಕರ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿರೋ ಮಾಹಿತಿ ಲಭ್ಯವಾಗಿದೆ. ನ್ಯಾಸರ್ಗಿ ಗ್ರಾಮದ ಕಿರಣ್ ಫಕ್ಕೀರಪ್ಪ ಮೇದಾರ್ (25) ಮೃತ ಬೈಕ್ ಸವಾನಾಗಿದ್ದಾನೆ. ನಿನ್ನೆ ರವಿವಾರ ರಾತ್ರಿ ನಡೆದಿದ್ದ ಬೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಿರಣ್ ಗೆ ಸೂಕ್ತ ಚಿಕಿತ್ಸೆಗಾಗಿ 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಿಸದೇ ಕಿಮ್ಸ್ ನಲ್ಲಿ...
ಇಂದೂರಿನ 8 ನಂ. ಕ್ಯಾಂಪ್ ಕ್ರಾಸ್ ಬಳಿ ಪಾದಾಚಾರಿಗೆ ಅಪರಿಚಿತ ಬೈಕ್ ಡಿಕ್ಕಿ, ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ಇಂದೂರ ಬಳಿಯ 8 ನಂಬರ್ ಟಿಬೇಟಿಯನ್ ಕ್ಯಾಂಪ್ ಕ್ರಾಸ್ ಬಳಿ ಪಾದಾಚಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಪರಿಣಾಮ ಪಾದಾಚಾರಿ ಯುವಕನೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಸಂಜು ಸುರಕೋಡ (35) ಗಂಭೀರ ಗಾಯಗೊಂಡಿರೋ ವ್ಯಕ್ತಿಯಾಗಿದ್ದಾನೆ. ರಾತ್ರಿ ವೇಳೆ ವೇಗವಾಗಿ ಬಂದಿರೋ ಅಪರಿಚಿತ ಬೈಕ್ ಪಾದಾಚಾರಿ ವ್ಯಕ್ತಿಗೆ ಡಿಕ್ಕಿಯಾಗಿದೆ ಅನ್ನೊ ಮಾಹಿತಿ ಬಂದಿದೆ. ಅಫಘಾತವಾದ ತಕ್ಷಣವೇ ಸ್ಥಳೀಯರು 108 ಅಂಬ್ಯುಲೆನ್ಸ್ ಮೂಲಕ ಪ್ರಥಮ ಚಿಕಿತ್ಸೆ ನೀಡಿ ತಾಲೂಕಾಸ್ಪತ್ರೆಗೆ ದಾಖಲಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಧಾರವಾಡದ ಕೋಟೂರಿನಲ್ಲಿ ಬಿಜೆಪಿ ಯುವ ಮುಖಂಡನ ಬರ್ಬರ ಹತ್ಯೆ, ಯುವಕರ ನಡುವಿನ ಸಣ್ಣ ಜಗಳ, ಕೊಲೆಯಲ್ಲಿ ಅಂತ್ಯ..!
ಧಾರವಾಡ: ಬಿಜೆಪಿ ಧಾರವಾಡ ಜಿಲ್ಲಾ ಯವಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಎಂಬುವವರನ್ನು ನಿನ್ನೆ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಪ್ರವೀಣ ಕಮ್ಮಾರ ಎಂಬುವವರೇ ಹತ್ಯೆಗೀಡಾದವರು. ನಿನ್ನೆ ರಾತ್ರಿ ವೈಯಕ್ತಿಕ ಕಾರಣಕ್ಕಾಗಿ ಯುವಕರ ಮಧ್ಯೆ ಜಗಳ ಸಂಭವಿಸಿದ್ದು, ಈ ಜಗಳ ಪ್ರವೀಣ ಅವರ ಕೊಲೆಯಲ್ಲಿ ಅಂತ್ಯವಾಗಿದೆ. ಜಗಳದಲ್ಲಿ ದುಷ್ಕರ್ಮಿಗಳು ಪ್ರವೀಣ ಅವರ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಚಿಕಿತ್ಸೆಗಾಗಿ ಪ್ರವೀಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಪ್ರವೀಣ ಅಸುನೀಗಿದ್ದಾರೆ....
ಘಟಪ್ರಭಾ ನದಿಯಲ್ಲಿ ಮುಂಡಗೋಡಿನ ನಾಲ್ವರು ಯುವಕರ ಸಾವು ಕೇಸ್, ಚಿಕಿತ್ಸೆ ಫಲಿಸದೇ ಮತ್ತೋರ್ವ ಯುವಕ ಸಾವು..!
ಮುಂಡಗೋಡ: ತಾಲೂಕಿನ ಶಿರಗೇರಿ ಗ್ರಾಮದ ಯುವಕರು, ಬೆಳಗಾವಿ ಜಿಲ್ಲೆಯ ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ಮೃತಪಟ್ಟವರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ. ನೀರಲ್ಲಿ ಮುಳುಗಿ ತೀವ್ರ ಅಸ್ವಸ್ಥ ಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ತಾಲೂಕಿನ ಶಿರಗೇರಿ ಗ್ರಾಮದ ರಾಮಚಂದ್ರ ಜೋರೆ ಎಂಬುವನೆ ಸಾವನ್ನಪ್ಪಿದ ಮತ್ತೋರ್ವ ಯುವಕನಾಗಿದ್ದು, ನಿನ್ನೆ ಶುಕ್ರವಾರ ದುಪದಾಳ ಗ್ರಾಮದ ಸನಿಹ ಘಟಪ್ರಭಾ ನದಿಯಲ್ಲಿ 6ಜನ ಸ್ನೇಹಿತರು ಈಜಲು ಇಳಿದಿದ್ದರು ಈ ವೇಳೆ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದು ಮತ್ತಿಬ್ಬರು...
ಘಟಪ್ರಭಾ ನದಿಯಲ್ಲಿ ಭೀಕರ ದುರಂತ, ಮುಂಡಗೋಡಿನ ನಾಲ್ವರು ಯುವಕರು ನದಿಯಲ್ಲಿ ಮುಳುಗಿ ಸಾವು..!
ಬೆಳಗಾವಿ ಜಿಲ್ಲೆಯ ಘಟಪ್ರಭಾದಲ್ಲಿ ಭಾರೀ ಅನಾಹುತ ಸಂಭವಿಸಿದೆ.. ಘಟಪ್ರಭಾ ನದಿಯಲ್ಲಿ ಮುಳುಗಿ ಮುಂಡಗೋಡ ತಾಲೂಕಿನ ನಾಲ್ವರು ಯುವಕರು ದಾರುಣ ಸಾವು ಕಂಡಿದ್ದಾರೆ. ಇಬ್ಬರು ಗಂಭೀರವಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಮುಂಡಗೋಡ ತಾಲೂಕಿನ ಸಿರಿಗೇರಿ ಗ್ರಾಮದ ಸಂತೋಷ ಬಾಬು ಎಡಗೆ(19), ಅಜಯ್ ಬಾಬು ಜೋರೆ (19), ಕೃಷ್ಣ ಬಾಬು ಜೋರೆ (19), ಆನಂದ್ ವಿಷ್ಣು ಕೋಕರೆ (20) ನೀರಲ್ಲಿ ಮುಳುಗಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇನ್ನು ಘಟನೆಯಲ್ಲಿ ರಾಮಚಂದ್ರ ವಿಷ್ಣು ಕೋಕರೆ, ವಿಠ್ಠಲ್ ಜಾನು ಕೋಕರೆ ನೀರಲ್ಲಿ ಮುಳುಗಿ...
ಅಯ್ಯೋ ವಿಧಿಯೇ..! ಆಟೋ ಡಿಕ್ಕಿಯಾಗಿ ನಾಲ್ಕು ತಿಂಗಳ ಗರ್ಭಿಣಿ ದಾರುಣ ಸಾವು..!
ಅಂಕೋಲಾ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಗರ್ಭಿಣಿ ಮಹಿಳೆಯೋರ್ವಳಿಗೆ ರಿಕ್ಷಾ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾವಿಕೇರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಶೋಭಾ ಗೋಪಾಲ ನಾಯಕ (28) ಎಂಬಾಕೆಯೆ ಮೃತಪಟ್ಟ ದುರ್ದೈವಿಯಾಗಿದ್ದಾಳೆ, ಮೃತ ಮಹಿಳೆ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಳು ಎನ್ನಲಾಗಿದೆ. ಈಕೆ ಪತಿಯ ಜೊತೆಯಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಟೋ ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ಆಟೋ ಚಲಾಯಿಸಿಕೊಂಡು ಬಂದು ರಸ್ತೆಯ ತೀರಾ ಬದಿಗೆ ಬಂದು ಅಪಘಾತ ಪಡಿಸಿದ್ದಾನೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ...
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಟಿಬೇಟಿಯನ್ ಕ್ಯಾಂಪ್ ಬಳಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಅಂದರ್..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಎಳೆದು ತಂದಿದ್ದಾರೆ. ಟಿಬೇಟಿಯನ್ ಕ್ಯಾಂಪ್ ನಂಬರ್ 2 ರ ಕುಸೂರು ಕ್ರಾಸ್ ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಸೇರಿದಂತೆ 410 ಗ್ರಾಂ ಗಾಂಜಾ ಹಾಗೂ ಸ್ಕೂಟಿ ವಶ ಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಆಧಾರದಲ್ಲಿ ದಾಳಿ ಮಾಡಿರೋ ಮುಂಡಗೋಡ ಪೊಲೀಸರು, ಮುಂಡಗೋಡ ಯಲ್ಲಾಪುರ ರಸ್ತೆಯ ಬ್ಲ್ಯೂ ಹಿಲ್ ಹೊಟೇಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ, ಉತ್ತರ ಪ್ರದೇಶ ಮೂಲದ ಆರ್ಯನ್ ಅಲಿಯಾಸ್...
ಅಮ್ಮಾಜಿ ಕೆರೆ ಹತ್ತಿರ ಅಂಬ್ಯುಲೆನ್ಸ್, ಬೈಕ್ ನಡುವೆ ಡಿಕ್ಕಿ, ಯುವಕನಿಗೆ ಗಾಯ..!
ಮುಂಡಗೋಡ ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆ ಹತ್ತಿರ ಅಪಘಾತವಾಗಿದೆ. ಅಂಬ್ಯುಲೆನ್ಸ್ ಹಾಗೂ ಬೈಕ್ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ. ಮುಂಡಗೋಡಿನ ತೇಜಸ್ (26) ಎಂಬುವ ಯುವಕನೇ ಗಾಯಗೊಂಡಿದ್ದು, ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡ ಅಗಡಿ ಚೆಕ್ ಪೊಸ್ಟ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ವಶಕ್ಕೆ..! ಸಿಕ್ಕ ಮೊತ್ತ ಎಷ್ಟು ಗೊತ್ತಾ..?
ಮುಂಡಗೋಡ ತಾಲೂಕಿನ ಅಗಡಿ ಚೆಕ್ ಪೊಸ್ಟ್ ಬಳಿ ದಾಖಲೆ ಇಲ್ಲದೇ ಸ್ಕೂಟಿಯಲ್ಲಿ ಸಾಗಿಸುತ್ತಿದ್ದ 3.40 ಲಕ್ಷ ರೂ. ವಶ ಪಡಿಸಿಕೊಳ್ಳಲಾಗಿದೆ. ಪೊಲೀಸರು ಹಾಗೂ ಕಂದಾಯ ಅಧಿಕಾರಿಗಳು ದಾಳಿ ನಡೆಸಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಹಣ ವಶಕ್ಕೆ ಪಡೆದಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಚಿಸಲಾಗಿರೋ ಚೆಕ್ ಪೊಸ್ಟ್ ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ದಾಖಲೆ ಇಲ್ಲದ ಹಣ ಪತ್ತೆಯಾಗಿದೆ. ಮುಂಡಗೋಡ ನೆಹರು ನಗರದ ನಿವಾಸಿ ಹಸನ ಸಾಬ್ ಮೋದಿನ್ ಸಾಬ್ ಫರೀದ್ ಎಂಬುವವರು ತಮ್ಮ ಸ್ಕೂಟಿಯಲ್ಲಿ ಹಣವನ್ನು ಕೊಂಡೊಯ್ಯುತ್ತಿದ್ದರು ಎನ್ನಲಾಗಿದೆ. ಹೀಗಾಗಿ,...