Home Publicfirstnewz

Tag: Publicfirstnewz

Post
ಪಂಚಮಸಾಲಿ 2ಎ ಮೀಸಲಾತಿ ವಿಚಾರ: ಸೆ.20 ರಂದು ಶಿಗ್ಗಾವಿ ಸಿಎಂ ನಿವಾಸದ ಎದುರು ಹಕ್ಕೊತ್ತಾಯ- ಮೃತ್ಯುಂಜಯ ಶ್ರೀ ಘೋಷಣೆ..!

ಪಂಚಮಸಾಲಿ 2ಎ ಮೀಸಲಾತಿ ವಿಚಾರ: ಸೆ.20 ರಂದು ಶಿಗ್ಗಾವಿ ಸಿಎಂ ನಿವಾಸದ ಎದುರು ಹಕ್ಕೊತ್ತಾಯ- ಮೃತ್ಯುಂಜಯ ಶ್ರೀ ಘೋಷಣೆ..!

 ಹಾವೇರಿ: ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ನೀಡುವ ಹಕ್ಕೊತ್ತಾಯ ಹಿನ್ನಲೆಯಲ್ಲಿ, ಹಾವೇರಿಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಭಟನೆಗೆ ಕರೆ ನೀಡಿದ್ದಾರೆ‌‌. ಇದೆ ಸೆಪ್ಟೆಂಬರ್ 20 ರಂದು ಶಿಗ್ಗಾವಿಯ ಸಿಎಂ ನಿವಾಸದ ಎದುರು ಹಕ್ಕೊತ್ತಾಯ ಪ್ರತಿಭಟನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.   ಶಿಗ್ಗಾವಿಯ ಚನ್ನಮ್ಮ ವೃತ್ತದಲ್ಲಿ ಮಾಲಾರ್ಪಾಣೆ ಮಾಡುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿ, ಚನ್ನಮ್ಮ ವೃತ್ತದಿಂದ ಸಿಎಂ ನಿವಾಸದ ವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯುತ್ತದೆ. ಪ್ರತಿಭಟನೆಯಲ್ಲಿ 1 ಲಕ್ಷಕ್ಕೂ ಅಧಿಕ ಸಮಾಜದ ಬಂಧುಗಳು ಭಾಗಿಯಾಗಲಿದ್ದಾರೆ. ಸದನದ...

Post
ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ, ಇಬ್ಬರ ಮೇಲೆ ಚಾಕುವಿನಿಂದ ಹಲ್ಲೆ..!

ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ, ಇಬ್ಬರ ಮೇಲೆ ಚಾಕುವಿನಿಂದ ಹಲ್ಲೆ..!

ಧಾರವಾಡ: ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಇಬ್ಬರ ಮೇಲೆ ಹಲ್ಲೆ ನಡೆದಿದೆ. ನಮ್ಮ ಹುಡುಗಿಗೆ ಕಾಡಿಸುತ್ತೀರಾ, ಲೈಂಗಿಕ ದೌರ್ಜನ್ಯ ಎಸಗಿದ್ದಿರಾ ಅಂತಾ ಧಿಡೀರ್ ಜಗಳ ತೆಗೆದ ಮೂವರು ಆರೋಪಿಗಳು ಮನೋಜ್ ಕರ್ಜಗಿ ಹಾಗೂ ಅಯಾನ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಮನೋಜ್ ಗುಡದೂರ್, ಆನಂದ ತಳವಾರ್, ಹಾಗೂ ಉದಯ್ ಕೆಲಗೇರಿ ಎನ್ನುವ ಯುವಕರು ಹಲ್ಲೆ ಮಾಡಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ. ಚಾಕುವಿನಿಂದ ಅಯಾನ್ ಮೇಲೆ ಹಲ್ಲೆ ಮಾಡಿದ್ದಾರೆ....

Post
ರಾಜ್ಯದಲ್ಲಿ ಮಹಿಳೆಯರ ಮಾರಾಟ ಜಾಲ ಸಕ್ರೀಯವಾಗಿದೆ, ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಕಳವಳ..!

ರಾಜ್ಯದಲ್ಲಿ ಮಹಿಳೆಯರ ಮಾರಾಟ ಜಾಲ ಸಕ್ರೀಯವಾಗಿದೆ, ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಕಳವಳ..!

 ಮುಂಡಗೋಡ: ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಮಾರಾಟ ಜಾಲ ಸಕ್ರೀಯವಾಗಿದೆ. ನಾವು ಈ ಜಾಲವನ್ನು ಬೇಧಿಸಲು ಸಂಪೂರ್ಣ ಸನ್ನದ್ಧಗೊಳ್ಳುತ್ತೇವೆ ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತೇವೆ ಅಂತಾ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ತಿಳಿಸಿದ್ರು. ಮುಂಡಗೋಡಿನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಪ್ರಮೀಳಾ ನಾಯ್ಡು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಹಿಳೆಯರನ್ನು‌ ಮದುವೆ ನೆಪದಲ್ಲಿ ದೂರದ ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಿಗೆ ಮಾರಾಟ ಮಾಡುವ ಗ್ಯಾಂಗ್ ಆ್ಯಕ್ಟಿವ್ ಆಗಿದೆ. ಹೀಗಾಗಿ, ರಾಜ್ಯ ಮಹಿಳಾ ಆಯೋಗ ಈ...

Post
ಅತ್ತಿವೇರಿಯ ವ್ಯಕ್ತಿ ಲಕ್ಣ್ಮೇಶ್ವರದಲ್ಲಿ ನೇಣು ಬಿಗಿದು ಆತ್ಮಹತ್ಯೆ..!

ಅತ್ತಿವೇರಿಯ ವ್ಯಕ್ತಿ ಲಕ್ಣ್ಮೇಶ್ವರದಲ್ಲಿ ನೇಣು ಬಿಗಿದು ಆತ್ಮಹತ್ಯೆ..!

ಮುಂಡಗೋಡ: ತಾಲೂಕಿನ ಅತ್ತಿವೇರಿಯ ವ್ಯಕ್ತಿಯೊಬ್ಬ ಗದಗ ಜಿಲ್ಲೆ ಲಕ್ಷ್ಮೇಶ್ವರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ. ಅತ್ತಿವೇರಿ ಗ್ರಾಮದ ನಬೀಸಾಬ್ ಮತ್ತಿಗಟ್ಟಿ(32) ಎಂಬುವ ವ್ಯಕ್ತಿಯೇ ಆತ್ಮಹತ್ಯೆ ಮಾಡಿಕೊಂಡವನಾಗಿದ್ದಾನೆ. ತನ್ನ ಪತ್ನಿಯ ತವರು ಮನೆಯಲ್ಲೇ ವಾಸವಾಗಿದ್ದ ನಬೀಸಾಬ್ ಹೀಗೆ ದಿಢಿರನೇ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಅನ್ನೋ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಲಕ್ಷ್ಮೇಶ್ವರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Post
ಮುಂಡಗೋಡಿನಲ್ಲಿ ಮಾನಸಿಕ ಅಸ್ವಸ್ಥೆಯ ಮೇಲೆ ಅಮಾನುಷ ಹಲ್ಲೆ, ರಸ್ತೆಯಲ್ಲೇ ಚಪ್ಪಲಿಯಿಂದ ಹೊಡೆದ “ಲೇಡಿ” ಯಾರು..?

ಮುಂಡಗೋಡಿನಲ್ಲಿ ಮಾನಸಿಕ ಅಸ್ವಸ್ಥೆಯ ಮೇಲೆ ಅಮಾನುಷ ಹಲ್ಲೆ, ರಸ್ತೆಯಲ್ಲೇ ಚಪ್ಪಲಿಯಿಂದ ಹೊಡೆದ “ಲೇಡಿ” ಯಾರು..?

 ಮುಂಡಗೋಡ ಪಟ್ಟಣದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮಾನಸಿಕ ಅಸ್ವಸ್ಥಳೊಬ್ಬಳನ್ನು ಮಹಿಳೆಯೋರ್ವಳು ಮನಬಂದಂತೆ ಥಳಿಸಿದ್ದಾಳೆ. ಮನಸೋ ಇಚ್ಚೆ ಚಪ್ಪಲಿಯಿಂದ ನಡುರಸ್ತೆಯಲ್ಲೇ ಥಳಿಸಿರೋದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ‌. ಅಸ್ವಸ್ಥೆಯ ನರಳಾಟ..! ನಿಜ ಅಂದ್ರೆ, ಇದು ನಡೆದದ್ದು ಮುಂಡಗೋಡ ಪಟ್ಟಣದ ಪಟ್ಟಣ ಪಂಚಾಯತಿ ಎದುರಗಡೆ. ಮಾನಸಿಕ ಅಸ್ವಸ್ಥೆಯನ್ನು ಅಟ್ಟಾಡಿಸಿ ಹೊಡೆದಿರೋ ಮಹಿಳೆ ಥೇಟು ರೌಡಿಯಂತೆ ನಡೆದುಕೊಂಡಿದ್ದಾಳೆ. ರಸ್ತೆಯಲ್ಲಿ ಹೊಡೆತ ತಾಳಲಾರದೇ ಮಾನಸಿಕ ಅಸ್ವಸ್ಥೆ ಚೀರಾಟ ಮಾಡುತ್ತಿದ್ದರೂ ಕರುಣೆ ಬಾರದೇ ಆ ಮಹಿಳೆ ಚಪ್ಪಲಿಯಿಂದ ಥಳಿಸಿದ್ದಾಳೆ. ಇನ್ನು ಘಟನೆ ಕಂಡ ದಾರಿಹೋಕನೊಬ್ಬ...

Post
ಹುಬ್ಬಳ್ಳಿಯ ವರೂರು ಬಳಿ ಭೀಕರ ಕಾರು ಅಪಘಾತ ಮೂವರು ಸಾವು, ಓರ್ವ ಗಂಭೀರ..!

ಹುಬ್ಬಳ್ಳಿಯ ವರೂರು ಬಳಿ ಭೀಕರ ಕಾರು ಅಪಘಾತ ಮೂವರು ಸಾವು, ಓರ್ವ ಗಂಭೀರ..!

ಹುಬ್ಬಳ್ಳಿ: ವರೂರು ಬಳಿ ಭೀಕರ ರಸ್ತೆ ಅಪಘಾತವಾಗಿದೆ. ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ‌. ಹುಬ್ಬಳ್ಳಿ ತಾಲೂಕಿನ ವರೂರು ಗ್ರಾಮದ ಗಣೇಶ ಹೋಟೆಲ್ ಬಳಿ ಘಟನೆ ನಡೆದಿದೆ. ವೇಗವಾಗಿ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರು ಪಲ್ಟಿಯಾದ ಪರಿಣಾಮ ಚಾಲಕ, ಮಹಿಳೆ ಸೇರಿ ಮೂವರು ಸಾವನ್ನಪ್ಪಿದ್ದಾರೆ. ದಾವಣಗೆರೆ ಮೂಲದ ಚಾಲಕ ಶಾರೂಖ್ (27), ಸೊಹೇಲ್ (26), ಚಿಕ್ಕಮಗಳೂರು ಜಿಲ್ಲೆ ಆಲದೂರಿನ ಎಚ್.ಕೆ. ಸುಶೀಲಾ (35) ಮೃತಪಟ್ಟವರು. ಘಟನೆಯಲ್ಲಿ...

Post
ಮುಂಡಗೋಡ-ಯಲ್ಲಾಪುರ ರಸ್ತೆಯಲ್ಲಿ ಕ್ರೂಸರ್ ವಾಹನ ಪಲ್ಟಿ, ಜಾನಪದ ಕಲಾವಿದರಿಗೆ ಗಾಯ..!

ಮುಂಡಗೋಡ-ಯಲ್ಲಾಪುರ ರಸ್ತೆಯಲ್ಲಿ ಕ್ರೂಸರ್ ವಾಹನ ಪಲ್ಟಿ, ಜಾನಪದ ಕಲಾವಿದರಿಗೆ ಗಾಯ..!

 ಮುಂಡಗೋಡ ಯಲ್ಲಾಪುರ ಗಡಿಭಾಗದ ಹುಣಶೆಟ್ಟಿಕೊಪ್ಪದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಪಲ್ಟಿಯಾಗಿದೆ‌. ಪರಿಣಾಮ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಇನ್ನು, ಯಲ್ಲಾಪುರ ಕಡೆಯಿಂದ ಮುಂಡಗೋಡ ಕಡೆಗೆ ಬರುತಿದ್ದ ಕ್ರೂಸರ್ ವಾಹನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ‌‌. ಚಿಗಳ್ಳಿಯಲ್ಲಿ ನಡೆಯುತ್ತಿರೋ ಕಾರ್ಯಕ್ರಮಕ್ಕೆ ಯಲ್ಲಾಪುರದಿಂದ ಜಾನಪದ ಕಲಾವಿದರನ್ನು ಕರೆತರುತ್ತಿದ್ದ ವಾಹನ ಅಪಘಾತಕ್ಕೆ ಈಡಾಗಿದೆ. 7-8 ಜನ ಜಾನಪದ ಕಲಾವಿದರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ಹುಣಶೆಟ್ಟಿಕೊಪ್ಪದ ಆಸ್ಪತ್ರೆಗೆ ಕರೆದೋಯ್ಯಲಾಗಿದೆ. ರಸ್ತೆ ಮೇಲೆ ಅಡ್ಡಲಾಗಿ ಬಿದ್ದಿದ್ದ ಕ್ರೂಸರ್ ಅನ್ನು...

Post
ಪಾಳಾ ಕಲಕೊಪ್ಪದಲ್ಲಿ ನಾಯಿ ದಾಳಿಗೆ ಬಲಿಯಾಗುತ್ತಿದ್ದ ಜಿಂಕೆ ರಕ್ಷಣೆ, ಮಾನವೀಯತೆ ತೋರಿದ ಗ್ರಾಮಸ್ಥರು..!

ಪಾಳಾ ಕಲಕೊಪ್ಪದಲ್ಲಿ ನಾಯಿ ದಾಳಿಗೆ ಬಲಿಯಾಗುತ್ತಿದ್ದ ಜಿಂಕೆ ರಕ್ಷಣೆ, ಮಾನವೀಯತೆ ತೋರಿದ ಗ್ರಾಮಸ್ಥರು..!

 ಮುಂಡಗೋಡ: ತಾಲೂಕಿನ ಪಾಳಾ ಗ್ರಾಮದ ಕಲಕೊಪ್ಪದ ಪೆಟ್ರೋಲ್ ಬಂಕ್ ಸಮೀಪ ನಾಯಿಗಳ ದಾಳಿಯಿಂದ ಜಿಂಕೆಯನ್ನ ರಕ್ಷಣೆ ಮಾಡಲಾಗಿದೆ. ಈ ಮೂಲಕ ಗ್ರಾಮಸ್ಥರು ಮಾನವೀಯತೆ ತೋರಿದ್ದಾರೆ. ಕಾಡಿನಿಂದ ಆಹಾರ ಅರಸಿ ನಾಡಿಗೆ ಬಂದಿದ್ದ ಜಿಂಕೆಯನ್ನು, ಗ್ರಾಮದ ನಾಯಿಗಳು ಅಟ್ಟಿಸಿಕೊಂಡು ಹೋಗುತಿದ್ದವು, ಅದನ್ನು ಕಂಡ ಗ್ರಾಮಸ್ಥರು ನಾಯಿಗಳಿಂದ ಜಿಂಕೆಯನ್ನು ಬಚಾವ್ ಮಾಡಿದ್ದಾರೆ. ನಂತರ ಅರಣ್ಯ ರಕ್ಷಕ ನಾರಾಯಣ ಒಣಿಕೇರಿ, ಯಲ್ಲಪ್ಪ ಬಳ್ಳಾರಿ ಹಾಗೂ ಸಿಬ್ಬಂದಿಗಳು ಮತ್ತು ಗ್ರಾಮದ ಕುಮಾರ್, ಜಗದೀಶ್, ಅಶೋಕ್ ಮುಂತಾದವರು ಸೇರಿ ಜಿಂಕೆಯನ್ನು ರಕ್ಷಿಸಿ ನಾಯಿಗಳ...

Post
ಮಜ್ಜಿಗೇರಿ ಕ್ರಾಸ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಜೇನುಮುರಿಯ ಬೈಕ್ ಸವಾರ ಸಾವು..!

ಮಜ್ಜಿಗೇರಿ ಕ್ರಾಸ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಜೇನುಮುರಿಯ ಬೈಕ್ ಸವಾರ ಸಾವು..!

ಮುಂಡಗೋಡ ತಾಲೂಕಿನ ಬಾಚಣಕಿ ಡ್ಯಾಂ ಬಳಿಯ ಮಜ್ಜಿಗೇರಿ ಕ್ರಾಸ್ ಹತ್ತಿರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಅಂತಾ ತಿಳಿದು ಬಂದಿದೆ. ಕಾರು ಹಾಗೂ ಬೈಕ್ ನಡುವೆ ಮುಖಾ ಮುಕಿ ಡಿಕ್ಕಿಯಾದ ಪರಿಣಾಮ, ಜೇನಮುರಿ ಗ್ರಾಮದ ಬಸವರಾಜ್ ಯಲ್ಲಪ್ಪ ಶ್ಯಾಡಂಬಿ(36) ಎಂಬುವವ ಗಂಭೀರ ಗಾಯಗೊಂಡಿದ್ದ. ಗಾಯಾಳುವನ್ನು 108 ಅಂಬ್ಯಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ, ಹುಬ್ಬಳ್ಳಿಯ ಕಿಮ್ಸ್...

Post
ಬಾಚಣಕಿಯ ಮಜ್ಜಿಗೇರಿ ಕ್ರಾಸ್ ಬಳಿ ಕಾರು ಬೈಕ್ ನಡುವೆ ಅಪಘಾತ, ಬೈಕ್ ಸವಾರ ಗಂಭೀರ..!

ಬಾಚಣಕಿಯ ಮಜ್ಜಿಗೇರಿ ಕ್ರಾಸ್ ಬಳಿ ಕಾರು ಬೈಕ್ ನಡುವೆ ಅಪಘಾತ, ಬೈಕ್ ಸವಾರ ಗಂಭೀರ..!

ಮುಂಡಗೋಡ ತಾಲೂಕಿನ ಬಾಚಣಕಿ ಡ್ಯಾಂ ಬಳಿಯ ಮಜ್ಜಿಗೇರಿ ಕ್ರಾಸ್ ಹತ್ತಿರ ಅಪಘಾತವಾಗಿದೆ. ಕಾರು ಹಾಗೂ ಬೈಕ್ ನಡುವೆ ಮುಖಾ ಮುಕಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಜೇನಮುರಿ ಗ್ರಾಮದ ಬಸವರಾಜ್ ಯಲ್ಲಪ್ಪ ಶ್ಯಾಡಂಬಿ(36) ಎಂಬುವವನಿಗೆ ಗಂಭೀರ ಗಾಯವಾಗಿದೆ. ಸದ್ಯ ಗಾಯಾಳುವನ್ನು 108 ಅಂಬ್ಯುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನಂತರ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಇನ್ನು ಗಾಯಾಳುವಿನ ಬಳಿಯಿದ್ದ 1450 ರೂ. ಹಾಗೂ ಮೊಬೈಲ್ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. 108 ಅಂಬ್ಯಲೆನ್ಸ್...

error: Content is protected !!