ಶಿಗ್ಗಾವಿ: ಶಿಗ್ಗಾವಿ ಸವಣೂರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಮುಖ ಮುಖಂಡ ಶಿವಾನಂದ ರಾಮಗೇರಿ , ಎಮ್ ಎನ್ ಹೊನಕೇರಿ, ಶಿವು ಅಂಗಡಿ, ಕಾಳಪ್ಪ ಬಂಡಿ, ಶಿವಯೋಗಿ ಮುಕ್ಕಣ್ಣವರ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾಸೀರಖಾನ್ ಪಠಾಣ, ಕೆಪಿಸಿಸಿ ಸದಸ್ಯರಾದ ಸೋಮಣ್ಣ ಬೇವಿನಮರದ ಹಾಗೂ ಯುವ ನಾಯಕರಾದ ರಾಜು ಕುನ್ನೂರ ಅವರ ನೇತೃತ್ವದಲ್ಲಿ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಸವಣೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಮ್ ಜೆ ಮುಲ್ಲಾ, ಸವಣೂರ ತಾಲೂಕ ಕುರುಬ ಸಮಾಜದ...
Top Stories
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Tag: Publicfirstnewz
ಯಲ್ಲಾಪುರ ಕ್ಷೇತ್ರದಲ್ಲಿ ಗಾಂಧಿಗಿರಿ ಹಾಗೂ ದಾದಾಗಿರಿ ನಡುವೆ ಚುನಾವಣೆ: ನಿಮಗೆ ಗಾಂಧಿಗಿರಿ ಬೇಕಾ..? ಗುಂಡಾಗಿರಿ ಬೇಕಾ..? ಸಂತೋಷ ಲಾಡ್ ಪ್ರಶ್ನೆ
ಮುಂಡಗೋಡ: ಯಲ್ಲಾಪುರ ಕ್ಷೇತ್ರದಲ್ಲಿ ನಿಮಗೆ ಗಾಂಧಿಗಿರಿ ಬೇಕಾ..? ದಾದಾಗಿರಿ ಬೇಕಾ..? ಅಂತಾ ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಸಂತೋಷ ಲಾಡ್ ಪ್ರಶ್ನಿಸಿದ್ರು, ಈ ಕ್ಷೇತ್ರದಲ್ಲಿ ಒಂದು ಕಡೆ ದುಡ್ಡು, ಮತ್ತೊಂದು ಕಡೆ ಧರ್ಮದ ಚುನಾವಣೆ ನಡೆಯುತ್ತಿದೆ ಪ್ರತಿಯೊಬ್ಬರೂ ಆ ದುಡ್ಡನ್ನು ಸೋಲಿಸಲು ಸಾಲ ಮಾಡಿಯಾದರೂ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ ಅವರನ್ನು ಗೆಲ್ಲಿಸಬೇಕು ಅಂತಾ ಸಂತೋಷ ಲಾಡ್ ಕರೆ ನೀಡಿದರು. ತಾಲೂಕಿನ ಕಲಕೇರಿ ಗ್ರಾಮದಲ್ಲಿ ಅವರು ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಗಾಂಧಿಗಿರಿ ಬೇಕಾದರೆ...
ಮೇ 4 ಕ್ಕೆ ಮುಂಡಗೋಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪರವಾಗಿ ಪ್ರಚಾರಕ್ಕೆ “ಟಗರು” ಎಂಟ್ರಿ..!
ಮೇ 4 ರಂದು ಮುಂಡಗೋಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಪರವಾಗಿ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ ಅಂತಾ ಕಾಂಗ್ರೆಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಅಂದಹಾಗೆ, ಮೇ ನಾಲ್ಕರಂದು ಮದ್ಯಾನ 2.30 ಗೆ ಹೆಲಿಕಾಪ್ಟರ್ ಮೂಲಕ ಮುಂಡಗೋಡಿಗೆ ಆಗಮಿಸಲಿರೋ ಮಾಜಿ ಸಿಎಂ ಸಿದ್ದರಾಮಯ್ಯ, ಇಲ್ಲಿನ ತಾಲೂಕಾ ಕ್ರೀಡಾಂಗಣದಲ್ಲಿ ಏರ್ಪಡಿಸುವ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಯಲ್ಲಾಪುರ ಕ್ಷೇತ್ರ ಸದ್ಯ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದು, ಸಚಿವ ಶಿವರಾಮ್ ಹೆಬ್ಬಾರ್ ರವರಿಗೆ ತೊಡೆತಟ್ಟಿರೋ ವಿ.ಎಸ್.ಪಾಟೀಲ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಖಾಡದಲ್ಲಿದ್ದಾರೆ....
ಧಾರವಾಡದ ಕೋಟೂರಿನಲ್ಲಿ ಬಿಜೆಪಿ ಯುವ ಮುಖಂಡನ ಬರ್ಬರ ಹತ್ಯೆ, ಯುವಕರ ನಡುವಿನ ಸಣ್ಣ ಜಗಳ, ಕೊಲೆಯಲ್ಲಿ ಅಂತ್ಯ..!
ಧಾರವಾಡ: ಬಿಜೆಪಿ ಧಾರವಾಡ ಜಿಲ್ಲಾ ಯವಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಎಂಬುವವರನ್ನು ನಿನ್ನೆ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಪ್ರವೀಣ ಕಮ್ಮಾರ ಎಂಬುವವರೇ ಹತ್ಯೆಗೀಡಾದವರು. ನಿನ್ನೆ ರಾತ್ರಿ ವೈಯಕ್ತಿಕ ಕಾರಣಕ್ಕಾಗಿ ಯುವಕರ ಮಧ್ಯೆ ಜಗಳ ಸಂಭವಿಸಿದ್ದು, ಈ ಜಗಳ ಪ್ರವೀಣ ಅವರ ಕೊಲೆಯಲ್ಲಿ ಅಂತ್ಯವಾಗಿದೆ. ಜಗಳದಲ್ಲಿ ದುಷ್ಕರ್ಮಿಗಳು ಪ್ರವೀಣ ಅವರ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಚಿಕಿತ್ಸೆಗಾಗಿ ಪ್ರವೀಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಪ್ರವೀಣ ಅಸುನೀಗಿದ್ದಾರೆ....
ರೈತರ ಜಮೀನಿಗೆ ತೆರಳುವ ರಸ್ತೆ ಅತಿಕ್ರಮಣ, ತೆರವುಗೊಳಿಸದೇ ಇದ್ರೆ ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ ಅನ್ನದಾತರು..!
ಶಿಗ್ಗಾವಿಯಲ್ಲಿ ರಾಜಕೀಯ ಪ್ರಭಾವಿಗಳ ಕಾರಸ್ಥಾನದಿಂದ ರೈತರು ಕಂಗಾಲಾಗಿದ್ದಾರೆ. ನೂರಾರು ವರ್ಷಗಳಿಂದಲೂ ಇದ್ದ ಸಾರ್ವಜನಿಕ ರಸ್ತೆಯನ್ನು ಒತ್ತು ವರಿ ಮಾಡಿಕೊಂಡಿರೋ ಪ್ರಭಾವಿಗಳು ರೈತರಿಗೆ ಜೀವ ಹಿಂಡ್ತಿದಾರೆ ಅಂತಾ ರೈತರು ಆಕ್ರೋಶ ಹೊರಹಾಕಿದ್ದಾರೆ. ಈ ಕಾರಣಕ್ಕಾಗೇ ಚುನಾವಣೆ ಬಹಿಷ್ಕಾರ ಮಾಡುವ ತೀರ್ಮಾನ ಕೈಗೊಂಡಿದ್ದಾರೆ. ಈ ಕುರಿತು ಈಗಾಗಲೇ ಸರ್ಕಾರಕ್ಕೆ ಎಚ್ಚರಿಕೆಯ ಮನವಿ ಅರ್ಪಿಸಿದ್ದಾರೆ. ಮನವಿಯಲ್ಲೇನಿದೆ..? ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ಚಾಕಾಪೂರ-ಕುರ್ಷಾಪುರ ಗ್ರಾಮದ ಪೈಕಿ, ಬಿಸನಳ್ಳಿ ಹೊಟ್ಟಾರ ಕಲ್ಯಾಣ ಗ್ರಾಮಗಳಿಂದ ಹೋಗಿ ಬರಲು 1834 ನೇ ರಿಂದಲೂ ಸಾರ್ವಜನಿಕ...
ಪತಿ ಮೃತಪಟ್ಟ ತಿಂಗಳೊಳಗೇ ದಿ. ಧ್ರುವ ನಾರಾಯಣ್ ಪತ್ನಿಯೂ ವಿಧಿವಶ..! ಎಂಥಾ ಆಘಾತ..!!
ಮೈಸೂರು:ಪತಿ ಸಾವಿನ ಬೆನ್ನಲ್ಲೇ ದಿವಂಗತ ಆರ್.ಧ್ರುವ ನಾರಾಯಣ್ ಪತ್ನಿ ವೀಣಾ(58) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೀಣಾ ಧ್ರುವನಾರಾಯಣ್ ಇಂದು ವಿಧಿವಶರಾಗಿದ್ದಾರೆ. ಪತಿ ಧ್ರುವನಾರಾಯಣ್ ಸಾವಿನಿಂದ ಕುಗ್ಗಿದ್ದ ವೀಣಾ, ಪತಿ ಮೃತಪಟ್ಟು ತಿಂಗಳಿಗೂ ಮುನ್ನವೇ ನಿಧನರಾಗಿದ್ದಾರೆ. ಕಳೆದ ಮಾರ್ಚ್ 11ರಂದು ಹೃದಯಾಘಾತದಿಂದ ಧ್ರುವನಾರಾಯಣ್ ನಿಧನರಾಗಿದ್ದರು. ಇನ್ನು, ಪುತ್ರ ದರ್ಶನ್ ಧ್ರುವಗೆ ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಹೀಗಾಗಿ, ಚುನಾವಣಾ ಚಟುವಟಿಕೆಗಳಲ್ಲಿ ನಿರತರಾಗಿದ್ದ ದರ್ಶನ್ ರಿಗೆ ತಾಯಿ ಸಾವಿನಿಂದ ಆಘಾತವಾಗಿದೆ.
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಟಿಬೇಟಿಯನ್ ಕ್ಯಾಂಪ್ ಬಳಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಅಂದರ್..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಎಳೆದು ತಂದಿದ್ದಾರೆ. ಟಿಬೇಟಿಯನ್ ಕ್ಯಾಂಪ್ ನಂಬರ್ 2 ರ ಕುಸೂರು ಕ್ರಾಸ್ ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಸೇರಿದಂತೆ 410 ಗ್ರಾಂ ಗಾಂಜಾ ಹಾಗೂ ಸ್ಕೂಟಿ ವಶ ಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಆಧಾರದಲ್ಲಿ ದಾಳಿ ಮಾಡಿರೋ ಮುಂಡಗೋಡ ಪೊಲೀಸರು, ಮುಂಡಗೋಡ ಯಲ್ಲಾಪುರ ರಸ್ತೆಯ ಬ್ಲ್ಯೂ ಹಿಲ್ ಹೊಟೇಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ, ಉತ್ತರ ಪ್ರದೇಶ ಮೂಲದ ಆರ್ಯನ್ ಅಲಿಯಾಸ್...
ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ..? ನಿಜವಾಗತ್ತಾ ಮಣ್ಣಿನ ಗೊಂಬೆ ಭವಿಷ್ಯ..?
ಧಾರವಾಡ; ಎಲೆಕ್ಷನ್ ಹೊತ್ತಲ್ಲಿ ಇದೇನಪ್ಪ ಇಂತಹ ಭವಿಷ್ಯ ಅಂತೀರಾ..? ನಂಬೊಕೆ ಆಗದೇ ಇದ್ರೂ ಈ ಭವಿಷ್ಯ ಮಾತ್ರ ಸುಳ್ಳಾಗೇ ಇಲ್ವಂತೆ, ಹೀಗಾಗಿ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿಯಲ್ಲಿ ಮಣ್ಣಿನ ಗೊಂಬೆಗಳ ಭವಿಷ್ಯ ಅಚ್ಚರಿ ಮೂಡಿಸುತ್ತಿದೆ. ಬಹುಶಃ ಪ್ರಸಕ್ತ ಯುಗಾದಿಗೆ ನುಡಿದಿರೋ ಭವಿಷ್ಯ ಬರುವ ಚುನಾವಣೆಯ ಮುನ್ಸೂಚನೆಯಾ..? ನಾಯಕತ್ವ ಬದಲಾವಣೆ ಅಂತೆ..! ರಾಜ್ಯ ರಾಜಕಾರಣದಲ್ಲಿ ನಾಯಕತ್ವದ ಬದಲಾವಣೆಯಾಗಲಿದೆ ಎಂಬ ಭವಿಷ್ಯವನ್ನು ಮಣ್ಣಿನ ಬೊಂಬೆ ತೋರಿಸಿಕೊಟ್ಟಿದೆ. ಈ ಗ್ರಾಮದಲ್ಲಿ ಮಣ್ಣಿನ ಗೊಂಬೆಗಳು ಇಂತಹದ್ದೊಂದು ಭವಿಷ್ಯ ನುಡಿದಿವೆ. ಧಾರವಾಡ ತಾಲೂಕಿನ...
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಮಳಗಿಯಲ್ಲಿ ಗಾಂಜಾ ಸಾಗಿಸುತ್ತಿದ್ದವ ಅಂದರ್..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಎಳೆದು ತಂದಿದ್ದಾರೆ. ಮಳಗಿ ಸಮೀಪದ ದಾಸನಕೊಪ್ಪ ರಸ್ತೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿ ಸೇರಿದಂತೆ ಅರ್ಧ ಕೇಜಿಯಷ್ಟು ಗಾಂಜಾ ವಶ ಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಆಧಾರದಲ್ಲಿ ದಾಳಿ ಮಾಡಿರೋ ಮುಂಡಗೋಡ ಪೊಲೀಸರು, ಶಿವಮೊಗ್ಗ ಜಿಲ್ಲೆ ಸಾಗರದ ಮಹಮದ್ ಫಾರುಕ್ ತಂದೆ ನಜೀರ್ ಅಹಮ್ಮದ್ ಅರಮನಿಕೆರಿ ಎಂಬಾತನನ್ನು ಬಂಧಿಸಿದ್ದಾರೆ. ಈತನಿಂದ ಅರ್ದ ಕೇಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ...
ಪಾಳಾ ಸಮೀಪ ಕಾರು ದುರಂತ ಕೇಸ್: ಕೊನೆಗೂ ಫಲಿಸಲಿಲ್ಲ ಚಿಕಿತ್ಸೆ.. ಗಾಯಗೊಂಡಿದ್ದ ಶಂಕರಯ್ಯಾ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!
ಮುಂಡಗೋಡ ತಾಲೂಕಿನ ಪಾಳಾ ಸಮೀಪ ಬುಧವಾರ ರಾತ್ರಿ ನಡೆದಿದ್ದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯುವಕ ಈಗಷ್ಟೇ ಮೃತಪಟ್ಟಿದ್ದಾನೆ. ಈ ಮೂಲಕ ಅಪಘಾತದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿದಂತಾಗಿದೆ. ಮತ್ತಿಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಶಂಕರಯ್ಯ ಮಲ್ಲಯ್ಯ ಹಿರೇಮಠ್, ಮೃತಪಟ್ಟ ಮತ್ತೋರ್ವ ಯುವಕನಾಗಿದ್ದು, ನಿನ್ನೆ ರಾತ್ರಿ ಪಾಳಾ ಜಾತ್ರೆ ಮುಗಿಸಿ ಮುಂಡಗೋಡಿಗೆ ವಾಪಸ್ ಬರುತ್ತಿದ್ದಾಗ ಅಪಘಾತ ಸಂಭವಿಸಿತ್ತು. ಐ20 ಕಾರು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮುಂಡಗೋಡಿನ ಇಬ್ಬರು ಸಹೋದರರು ಮೃತಪಟ್ಟಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಂಕರ್ ಹಿರೇಮಠನನ್ನು ಹುಬ್ಬಳ್ಳಿಯ ಕಿಮ್ಸ್...