ಮುಂಡಗೋಡ ತಾಲೂಕಿನ ಪಾಳಾ ಸಮೀಪ ಭೀಕರ ಅಪಘಾತವಾಗಿದೆ. ಐ20 ಕಾರ್ ಪಲ್ಟಿಯಾದ ಪರಿಣಾಮ ಇಬ್ಬರು ಮುಂಡಗೋಡಿನ ಯುವಕರು ಸ್ಥಳದಲ್ಲೇ ದಾರುಣ ಸಾವು ಕಂಡಿದ್ದಾರೆ. ಮತ್ತಿಬ್ಬರಿಗೆ ಗಾಯವಾಗಿದೆ. ಮುಂಡಗೋಡಿನ ಗಣೇಶ್ ಗಾಣಿಗೇರ್, ಮಹೇಶ ಗಾಣಿಗೇರ ಮೃತ ದುರ್ದೈವಿಗಳು. ಪಾಳಾದಿಂದ ಮುಂಡಗೋಡಿಗೆ ಬರುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: Publicfirstnewz
ಮುಂಡಗೋಡ ಕಾರ್ಮಿಕ ಇಲಾಖೆ ಕಚೇರಿಯಲ್ಲಿ ಕಾರ್ಮಿಕರಿಂದ ಅಧಿಕಾರಿಗಳ ತರಾಟೆ, ಕಿಟ್ ಗಾಗಿ ಎಡತಾಕಿಸೋದು ಸರಿನಾ..?
ಮುಂಡಗೋಡ: ಪಟ್ಟಣದಲ್ಲಿ ಇರೋ ಕಾರ್ಮಿಕ ಇಲಾಖೆಯ ಕಛೇರಿಯಲ್ಲಿನ ಅಧಿಕಾರಿಗಳ ಮೇಲೆ ನೂರಾರು ಕಾರ್ಮಿಕರು ಆಕ್ರೋಶಗೊಂಡಿದ್ದಾರೆ. ಕಾರ್ಪೆಂಟರ್ ಕೆಲಸದವರು, ಗಾರೆ ಕೆಲಸದವರು ಸೇರಿದಂತೆ ಹಲವರು ಕಾರ್ಮಿಕ ಇಲಾಖೆಯ ತಾಲೂಕಾ ಕಚೇರಿಯ ಅಧಿಕಾರಿಗಳಿಗೆ ಹಿಗ್ಗಾ ಮುಗ್ಗಾ ಜಾಡಿಸಿದ್ರು. ಅಸಮರ್ಪಕ ಕಿಟ್ ಹಂಚಿಕೆ..! ಇನ್ನು, ಕಾರ್ಮಿಕರ ಆರೋಪದಂತೆ, ಈ ತಾಲುಕಾ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಕಿಟ್ ನೀಡುವಲ್ಲಿ ಬೇಜವಾಬ್ದಾರಿ ತೋರುತ್ತಿದ್ದಾರಂತೆ. ಅರ್ಹರಿಗೆ ಸಿಗಬೇಕಾದ ಕಾರ್ಪೆಂಟರ್ ಕಿಟ್, ಗಾರೆ ಕೆಲಸದ ಕಿಟ್ ಗಳನ್ನು ಸಮರ್ಪಕವಾಗಿ ಹಂಚಿಕೆ ಮಾಡುತ್ತಿಲ್ಲವಂತೆ. ತಿಂಗಳುಟ್ಟಲೇ ಅಲೆದಾಡಿಸಿ ಕಾರ್ಮಿಕರ...
ಶಿಗ್ಗಾವಿ ಕುಸ್ತಿ ಹಬ್ಬದಲ್ಲಿ 800 ಪೈಲ್ವಾನರ, 5 ದಿನಗಳ ಕಾದಾಟಕ್ಕೆ ವಿದ್ಯುಕ್ತ ತೆರೆ..!
ಶಿಗ್ಗಾವಿ: ಅದೊಂದು ಅಪ್ಪಟ ದೇಸೀ ಗ್ರಾಮೀಣ ಕ್ರೀಡೆ.. ಅಲ್ಲಿನ ಅಖಾಡದಲ್ಲಿ ಧೂಳೆಬ್ಬಿಸುವ ಕುಸ್ತಿ ಕಲಿಗಳು ತೊಡೆ ತಟ್ಟಿ ನಿಂತಿದ್ರು. ನೀನಾ..? ನಾನಾ..? ಅಂತಾ ಕಣದಲ್ಲಿ ಕೇಕೆ ಹಾಕಿದ್ರು. ಇದು, ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ಕಳೆದ ಐದು ದಿನಗಳಿಂದ ನಡೆದ ಕುಸ್ತಿ ಹಬ್ಬದ ರಣರೋಚಕ ದೃಷ್ಯಗಳು. ಹಾವೇರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ವತಿಯಿಂದ ಶಿಗ್ಗಾವಿಯಲ್ಲಿ ಏರ್ಪಡಿಸಿದ್ದ ಕರ್ನಾಟಕ ಕುಸ್ತಿ ಹಬ್ಬ 2022-23 ಸಮಾರೋಪ ಸಮಾರಂಭ ರವಿವಾರ ನಡೆಯಿತು. ವಿವಿಧ ರಾಜ್ಯಗಳ...
ಟಿಬೇಟಿಯನ್ ಕಾಲೋನಿಯಲ್ಲಿ ಜೇನು ನೋಣಗಳ ದಾಳಿ, 100 ಕ್ಕೂ ಹೆಚ್ಚು ಜನರಿಗೆ ಕಚ್ಚಿದ ಜೇನು ನೋಣಗಳು..!
ಮುಂಡಗೋಡ ಟಿಬೇಟಿಯನ್ ಕ್ಯಾಂಪ್ ನಂ.1 ರಲ್ಲಿ ಜೇನು ದಾಳಿಯಾಗಿದೆ. ದಲಿತ ಸಂಘರ್ಷ ಸಮಿತಿಯ ಕಾರ್ಯಕ್ರಮಕ್ಕೆ ಬಂದಿದ್ದವರ ಮೇಲೆ ಜೇನುನೋಣಗಳ ದಾಳಿಯಾಗಿದೆ. ಪರಿಣಾಮ ಸುಮಾರು 100 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ ಅನ್ನೊ ಮಾಹಿತಿ ಲಭ್ಯವಾಗಿದೆ. ಅದಹಾಗೆ, ಇಂದು ತಾಲೂಕಿನ ಟಿಬೇಟಿಯನ್ ಕಾಲೋನಿ ನಂಬರ್ 1 ರಲ್ಲಿ ದಲಿತ ಸಂಘಟನೆಗಳ ನೇತೃತ್ವದಲ್ಲಿ ಅಹಿಂದ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸುಮಾರು 300 ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಿದ್ರು. ಈ ವೇಳೆ ಅದು ಹೇಗೋ ಗೊತ್ತಿಲ್ಲ, ಜೇನು ನೋಣಗಳು ದಾಳಿಮಾಡಿವೆ...
ಶಿಗ್ಗಾವಿ: SCP, TSP ಯೋಜನೆ ಫಲಾನುಭವಿಗಳ ಆಯ್ಕೆಯಲ್ಲಿ ಅಧಿಕಾರಿಗಳ ಪಕ್ಷಪಾತ, ರೈತರ ಆಕ್ರೋಶ..!
ಶಿಗ್ಗಾವಿ ತಾಲೂಕಿನಲ್ಲಿ ಪಶು ಇಲಾಖೆ ಅಧಿಕಾರಿಗಳಿಂದ ತಾರತಮ್ಯವಾಯ್ತಾ..? SCP ಹಾಗೂ TSP ಯೋಜನೆಯಡಿ ಹಸುಗಳನ್ನು ನೀಡುವಾಗ ಫಲಾನುಭವಿಗಳ ಆಯ್ಕೆಯಲ್ಲಿ ಯಪರಾತಪರಾ ಮಾಡಿದ್ದಾರಾ..? ಹಾಗಂತ ಶಿಗ್ಗಾವಿಯ ಅನ್ನದಾತರು ಆರೋಪಿಸಿದ್ದಾರೆ. ಶಿಗ್ಗಾವಿ ತಾಲೂಕಿನಲ್ಲಿ 2022-23 ನೇ ಸಾಲಿನ SCP ಹಾಗೂ TSP ಯೋಜನೆ ಅಡಿಯಲ್ಲಿ ಫಲಾನುಭವಿಗಳ ಆಯ್ಕೆ ಸರಿಯಾಗಿಲ್ಲ. ಕೆಲ ಅಧಿಕಾರಿಗಳು ತಮಗೆ ಬೇಕಾದವರಿಗಷ್ಟೆ ಮಾನ್ಯತೆ ನೀಡಿ ಹಸುಗಳನ್ನ ಮಂಜೂರಿಸಲು ಆಯ್ಕೆಮಾಡಿದ್ದಾರೆ. ಹಸುಗಳನ್ನು ನಿಡುವಲ್ಲಿ ಪಕ್ಷಪಾತ ಮಾಡಿದ್ದಾರೆ ಎಂದು ರೈತರು ತಾಲೂಕಾ ಪಶು ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ ಅರ್ಪಿಸಿದ್ರು. ಅರ್ಹರಿಗೆ...
ಶಿಗ್ಗಾವಿಯ ಕುಸ್ತಿ ಹಬ್ಬದಲ್ಲಿ ಜಗಜಟ್ಟಿಗಳ ರೋಮಾಂಚಕ ಕುಸ್ತಿ, ಪಂದ್ಯಾವಳಿಗೆ ಇಂದು ಚಾಲನೆ..!
ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಇಂದು ಎಲ್ಲಿ ನೋಡಿದರು ಪೈಲ್ವಾನ್ ರುಗಳ ಜಬರ್ಧಸ್ತ್ ಸಂಚಾರ. ಕಣದಲ್ಲಿ ಧೂಳೆಬ್ಬಿಸಿ ತೊಡೆತಟ್ಟಿ ನಿಂತ ಕುಸ್ತಿ ಕಲಿಗಳ ರೋಮಾಂಚಕ ಪಟ್ಟು. ಜಿಲ್ಲೆವಹೊರ ಜಿಲ್ಲೆಯಿಂದ ಹಾಗೂ ಹೊರ ರಾಜ್ಯದಿಂದ ಬಂದಿದ್ದ ನೂರಾರು ಜಗಜಟ್ಟಿಗಳ ಕಾದಾಟ.. ಅಭಿಮಾನಿಗಳ ಕೇಕೆ ಶಿಳ್ಳೆಗಳ ಝೇಂಕಾರ..! ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ಐದು ದಿನಗಳ ಕಾಲ ನಡೆಯುವ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯವನ್ನ ಇದೆ ಮೊದಲ ಬಾರಿಗೆ ಆಯೋಜನೆ ಮಾಡಲಾಗಿತ್ತು. ಇಂದು ಈ ಕುಸ್ತಿ ಪಂದ್ಯಕ್ಕೆ ಸಾಂಕೇತಿಕವಾಗಿ...
ಹುನಗುಂದದ ಬಳಿ ಬೈಕ್ ಅಪಘಾತ, ಬೈಕ್ ಸವಾರನಿಗೆ ಗಾಯ, ಆಸ್ಪತ್ರೆಗೆ ರವಾನೆ..!
ಮುಂಡಗೋಡ ತಾಲೂಕಿನ ಹುನಗುಂದ ಅಗಡಿ ರಸ್ತೆಯ, ಸರ್ಕಾರಿ ಪ್ರೌಢಶಾಲೆಯ ಬಳಿ ಅಪಘಾತವಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಹುನಗುಂದ ಗ್ರಾಮದ ರಾಚಯ್ಯ ಬಸಯ್ಯ ಬೆಂಡಿಗೇರಿ(45), ಎಂಬುವವನೇ ಗಾಯಗೊಂಡ ವ್ಯಕ್ತಿಯಾಗಿದ್ದು, ತಲೆಗೆ ಪೆಟ್ಟಾಗಿದೆ. ತಕ್ಷಣವೇ ಅಂಬ್ಯುಲೆನ್ಸ್ ಗೆ ಕರೆ ಮಾಡಿದ ಸ್ಥಳೀಯರು ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ಗಾಯಾಳುವನ್ನು ಸಾಗಿಸಿದ್ದಾರೆ. 108 ಅಂಬ್ಯುಲೆನ್ಸ್ ನಲ್ಲಿ ತಂತ್ರಜ್ಞ ಧನರಾಜ್ ಬೆಳೂರು ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾಮಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಕುಂದರ್ಗಿ ಕ್ರಾಸ್ ಬಳಿ ಬೈಕ್ ಅಪಘಾತ, ಓರ್ವ ಯುವಕನಿಗೆ ಗಂಭೀರ ಗಾಯ, ಮಾನವೀಯತೆ ತೋರಿದ ಸನವಳ್ಳಿಯ ಯುವಕರು..!
ಮುಂಡಗೋಡ ತಾಲೂಕಿನ ಕುಂದರಗಿ ಕ್ರಾಸ್ ಬಳಿ ಭೀಕರ ಅಫಘಾತವಾಗಿದೆ. ರಸ್ತೆ ತಿರುವಿನಲ್ಲಿ ಸ್ಕಿಡ್ ಆಗಿ ಬಿದ್ದು ರಸ್ತೆ ಪಕ್ಕದ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಂಭೀರವಾಗಿ ಗಾಯಗೊಂಡಿರೋ ಯುವಕನನ್ನು ಹಾವೇರಿ ಜಿಲ್ಲೆಯ ಕರ್ಜಗಿ ಸಮೀಪದ ಕಳ್ಳಿಹಾಳ ಗ್ರಾಮದವನು ಅನ್ನೋ ಮಾಹಿತಿ ಲಭ್ಯವಾಗಿದೆ. ಆದ್ರೆ ಯುವಕನ ಹೆಸರು ಇನ್ನೂ ತಿಳಿದು ಬಂದಿಲ್ಲ. ಅಪಘಾತಗೊಂಡು ಗಂಭೀರವಾಗಿ ಗಾಯಗೊಂಡು ರಸ್ತೆ ಮೇಲೆ ಬಿದ್ದಿದ್ದಾಗ, ಸನವಳ್ಳಿ ಗ್ರಾಮದ ಕೃಷ್ಟ ನಾಗಪ್ಪ ಭೋವಿ, ಹಾಗೂ ಗೌರಿಶ್ ಎನ್ನುವ ಯುವಕರು ಮಾನವೀಯತೆ...
ಕೋಣನಕೇರಿ ಕಬ್ಬಿನ ಫ್ಯಾಕ್ಟರಿಯಲ್ಲಿ ದಾರುಣ ಘಟನೆ, ಮಶಿನ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನ ಭಯಾನಕ ಸಾವು..!
ಶಿಗ್ಗಾವಿ: ತಾಲೂಕಿನ ಕೋಣನಕೇರಿಯ ವಿಐಎನ್ ಪಿ ಡಿಸ್ಟಿಲರೀಸ್ ಆಂಡ್ ಶುಗರ್ಸ್ ಪ್ರೈವೇಟ್ ಲಿಮಿಟೆಡ್ ನ ಸಕ್ಕರೆ ಕಾರ್ಖಾನೆಯಲ್ಲಿ ದಾರುಣ ಘಟನೆ ನಡೆದಿದೆ. ಕಬ್ಬಿನ ಪುಡಿ ತುಂಬುತ್ತಿದ್ದ 19 ವರ್ಷದ ಕಾರ್ಮಿಕನೊಬ್ಬ ದಾರುಣ ಸಾವು ಕಂಡಿದ್ದಾನೆ. ಹೀಗಾಗಿ, ಸಕ್ಕರೆ ಕಾರ್ಖಾನೆ ಮಾಲೀಕ ಸೇರಿ ಆರು ಜನರ ವಿರುದ್ಧ ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ಶನಿವಾರ ಸಂಜೆ..! ಅಂದಹಾಗೆ, ನಿನ್ನೆ ಶನಿವಾರ ಅಂದ್ರೆ ದಿ. 25 ರ ಸಂಜೆ 6.20 ರ ಸುಮಾರಿನಲ್ಲಿ ಹಾವೇರಿ ಜಿಲ್ಲೆ ಶಿಗ್ಗಾವಿ...
ಭಟ್ಕಳ ಹಾಡುವಳ್ಳಿಯ ನಾಲ್ವರ ಮರ್ಡರ್ ಕೇಸ್: ಹತ್ಯೆ ಮಾಡಿದ್ದ ಆರೋಪಿ ಯಾರು ಗೊತ್ತಾ..?
ಭಟ್ಕಳ: ತಾಲೂಕಿನ ಹಾಡುವಳ್ಳಿಯ ಓಣಿಬಾಗಿಲು ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಭೀಕರ ಹತ್ಯೆಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಗಿಳಿದ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರಿಗೆ ಬಹುಮುಖ್ಯ ಸುಳಿವು ಲಭ್ಯವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಆಗಂತುಕ ಕೊಲೆಯಾದವರ ಸಂಬಂಧಿಯೇ ಆಗಿದ್ದಾನೆ ಅಂತಿದೆ ಪೊಲೀಸ್ ಮೂಲಗಳು. ಹೌದು, ಭಟ್ಕಳ ತಾಲೂಕಿನ ಹಾಡುವಳ್ಳಿ ಒಣಿಬಾಗಿಲು ನಿವಾಸಿ ಶಂಭು ಭಟ್ (70), ಅವರ ಪತ್ನಿ ಮಾದೇವಿ ಭಟ್(60), ಅವರ ಮಗ ರಾಘು (ರಾಜು ಭಟ್) (40)...









