Home uttara kannada news

Tag: uttara kannada news

Post
ಉಕ್ಕಿ ಹರಿದ ಅಘನಾಶಿನಿ ಕುಮಟಾ ತಾಲೂಕಿನಲ್ಲಿ ಪ್ರವಾಹ, 70 ಕುಟುಂಬಗಳ ಸ್ಥಳಾಂತರ..!

ಉಕ್ಕಿ ಹರಿದ ಅಘನಾಶಿನಿ ಕುಮಟಾ ತಾಲೂಕಿನಲ್ಲಿ ಪ್ರವಾಹ, 70 ಕುಟುಂಬಗಳ ಸ್ಥಳಾಂತರ..!

 ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಅಬ್ಬರದ ಮಳೆಗೆ ಕುಮಟಾ ತಾಲೂಕಿನ ಅಘನಾಶಿನಿ ನದಿ ತುಂಬಿ ಹರಿಯುತ್ತಿರುವುದರಿಂದ ಕೋನಳ್ಳಿ, ಗುಡ್ನಕಟ್ಟಾ ಮತ್ತು ಮೂರೂರಿನಲ್ಲಿ ನೆರೆ ಸೃಷ್ಟಿಯಾಗಿದೆ. ಈ ಭಾಗದ 70 ಕುಟುಂಬಗಳನ್ನು ಸ್ಥಳಾಂತರಿಸಲಾಗಿದ್ದು, ನದಿ ಇಕ್ಕೆಲಗಳಲ್ಲಿರುವ ಇನ್ನಷ್ಟು ಗ್ರಾಮಗಳಿಗೆ ನೆರೆ ಭೀತಿ ಎದುರಾಗಿದೆ. ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾದ್ದರಿಂದ ಕುಮಟಾ ತಾಲೂಕಿನ ಅಘನಾಶಿನಿ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದು, ಅಪಾಯದ ಮಟ್ಟದಲ್ಲೇ ಹರಿಯಲಾರಂಭಿಸಿದೆ. ಇನ್ನು ಹೊನ್ನಾವರ ತಾಲೂಕಿನ ಗುಂಡಬಾಳ , ಹಡಿನಬಾಳ , ಸಾಲಕೋಡು ಭಾಗದಲ್ಲಿ...

Post
ಕೊಪ್ಪದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕ್ಷೌರಿಕ..!

ಕೊಪ್ಪದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕ್ಷೌರಿಕ..!

ಮುಂಡಗೋಡ:ತಾಲೂಕಿನ ಕೊಪ್ಪ ಗ್ರಾಮದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿದ್ದಾನೆ. ಶ್ರೀನಿವಾಸ್ ನರಸಿಂಹ ಬಾರಬಾರ್ (45) ಎಂಬುವವನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಮದ್ಯಾನ ಕೊಪ್ಪ ಗ್ರಾಮದ ತನ್ನ ಹಳೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪ ಗ್ರಾಮದಲ್ಲೇ ಹೇರ್ ಕಟ್ಟಿಂಗ್ ಸಲೂನ್ ನಡೆಸುತ್ತಿದ್ದ ಶ್ರೀನಿವಾಸ್, ಇಂದು ಮದ್ಯಾಹ್ನ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌.

Post
ಹುನಗುಂದ ಸೊಸೈಟಿ ಅಧ್ಯಕ್ಷರಾಗಿ ಶಂಕ್ರಪ್ಪ ಲಮಾಣಿ, ಉಪಾಧ್ಯಕ್ಷರಾಗಿ ಈರಪ್ಪ ಯಲಿವಾಳ ಅವಿರೋಧ ಆಯ್ಕೆ..!

ಹುನಗುಂದ ಸೊಸೈಟಿ ಅಧ್ಯಕ್ಷರಾಗಿ ಶಂಕ್ರಪ್ಪ ಲಮಾಣಿ, ಉಪಾಧ್ಯಕ್ಷರಾಗಿ ಈರಪ್ಪ ಯಲಿವಾಳ ಅವಿರೋಧ ಆಯ್ಕೆ..!

ಮುಂಡಗೋಡ: ತಾಲೂಕಿನ ಹುನಗುಂದ ವೀರೇಶ್ವರ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಶಂಕ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅದ್ರಂತೆ ಉಪಾಧ್ಯಕ್ಷರಾಗಿ ಈರಪ್ಪ ಯಲಿವಾಳ ಆಯ್ಕೆಯಾಗಿದ್ದಾರೆ. ಇಂದು ಸಹಕಾರಿ ಸಂಘದ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷರು ಉಪಾಧ್ಯಕ್ಷರ ಅವಿರೋಧ ಆಯ್ಕೆ‌ ನಡೆಯಿತು. ಅಂದಹಾಗೆ, ಈ ಹಿಂದೆ ಅಧ್ಯಕ್ಷರಾಗಿದ್ದ ಅಬ್ದುಲ್ ರೆಹಮಾನ್ ಹಕೀಂ ಹಾಗೂ ಉಪಾಧ್ಯಕ್ಷರಾಗಿದ್ದ ಪರಶುರಾಮ್ ತಳವಾರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಆಯ್ಕೆ ನಡೆಯಿತು. ಈ ವೇಳೆ ಕಾಂಗ್ರೆಸ್ ಮುಖಂಡ ಎಚ್.ಎಂ.ನಾಯ್ಕ್, ಮಾಜಿ ಅಧ್ಯಕ್ಷ ಸಿದ್ದಪ್ಪ ಹಡಪದ್ ಸೇರಿದಂತೆ...

Post
ಇಂದೂರು ಗ್ರಾಪಂ ಅಧ್ಯಕ್ಷೆ ಅನ್ನಪೂರ್ಣ ಬೆಣ್ಣಿ ರಾಜೀನಾಮೆ, ಕೊನೆಗೂ ಬಗೆಹರಿದ ಗೊಂದಲ..!

ಇಂದೂರು ಗ್ರಾಪಂ ಅಧ್ಯಕ್ಷೆ ಅನ್ನಪೂರ್ಣ ಬೆಣ್ಣಿ ರಾಜೀನಾಮೆ, ಕೊನೆಗೂ ಬಗೆಹರಿದ ಗೊಂದಲ..!

ಮುಂಡಗೋಡ: ತಾಲೂಕಿನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರ ರಾಜೀನಾಮೆ ವಿಚಾರ ಕೊನೆಗೂ ಬಗೆ ಹರಿದಂತಾಗಿದೆ. ಕೊಟ್ಟ ಮಾತಿನಂತೆ ಇಂದು ಅಧ್ಯಕ್ಷ ಸ್ಥಾನಕ್ಕೆ ಅನ್ನಪೂರ್ಣ ಬೆಣ್ಣಿ ರಾಜೀನಾಮೆ ನೀಡಿದ್ದಾರೆ. ಅದ್ರಂತೆ ಉಪಾಧ್ಯಕ್ಷ ಸಿಖಂದರ್ ಬಂಕಾಪುರ ಕೂಡ ರಾಜೀನಾಮೆ ಸಲ್ಲಿಸಿದ್ದಾರೆ. ಶಿರಸಿ ಉಪವಿಭಾಗಾಧಿಕಾರಿಗೆ ರಾಜೀನಾಮೆ ಪತ್ರ ಸಲ್ಲಿಸಿರೋ ಅಧ್ಯಕ್ಷ, ಉಪಾಧ್ಯಕ್ಷರು ಪಕ್ಷದ ತೀರ್ಮಾನದಂತೆ ರಾಜೀನಾಮೆ ನೀಡಿದ್ದಾರೆ. ಅಂದಹಾಗೆ, ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರ ರಾಜೀನಾಮೆ ಕುರಿತು ಸಾಕಷ್ಟು ಚರ್ಚೆಗಳಾಗಿದ್ದವು. ಸಾಕಷ್ಟು ಬಾರಿ ಸಭೆಗಳು ನಡೆದಿದ್ದವು. ಒಪ್ಪಂದದಂತೆ...

Post
ಉತ್ತರ ಕನ್ನಡದ ಮಳೆಹಾನಿ ವೀಕ್ಷಣೆ ಪ್ರವಾಸ ರದ್ದುಗೊಳಿಸಿದ್ರಾ ಸಿಎಂ..? ಉಡುಪಿಯಿಂದಲೇ ಇಂದು ವಾಪಸ್..?

ಉತ್ತರ ಕನ್ನಡದ ಮಳೆಹಾನಿ ವೀಕ್ಷಣೆ ಪ್ರವಾಸ ರದ್ದುಗೊಳಿಸಿದ್ರಾ ಸಿಎಂ..? ಉಡುಪಿಯಿಂದಲೇ ಇಂದು ವಾಪಸ್..?

ಕಾರವಾರ: ಮಳೆಹಾನಿ ಪರಿಶೀಲನೆಗಾಗಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ ಬಸವರಾಜ್ ಬೊಮ್ಮಾಯಿ ಸದ್ಯ ಉಡುಪಿ ಜಿಲ್ಲೆಯಲ್ಲಿದ್ದು, ಈ ಮಧ್ಯೆ ಭಟ್ಕಳ ಪ್ರವಾಸ ರದ್ದುಗೊಳಿಸಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಆದ್ರೆ, ಕಾರಣಾಂತರಗಳಿಂದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪ್ರವಾಸವನ್ನು ರದ್ದುಗೊಳಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಭಾರೀ ಮಳೆಯ ಕಾರಣಕ್ಕೆ ರಸ್ತೆ ಮಾರ್ಗವಾಗಿ ಓಡಾಡುವುದು ಕಷ್ಟ ಒಂದು ಸ್ಥಳಕ್ಕಾಗಿ ಅಷ್ಟು ದೂರ ಪ್ರವಾಸ ಬೇಡ, ಅಲ್ಲಿನ ಮಳೆಹಾನಿ ಕುರಿತಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲು ಸಿಎಂ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇಂದು ಇಡೀ...

Post
ಇಂದೂರಿನ ಈ ಬಡ ಕುಟುಂಬದ ಕೂಗು ಯಾರಿಗೂ ಕೇಳುತ್ತಿಲ್ಲವಾ..? ಗ್ರಾಪಂ ನಿರ್ಲಕ್ಷಕ್ಕೆ ಬಡವರ ಬದುಕೇ ತತ್ತರ..!

ಇಂದೂರಿನ ಈ ಬಡ ಕುಟುಂಬದ ಕೂಗು ಯಾರಿಗೂ ಕೇಳುತ್ತಿಲ್ಲವಾ..? ಗ್ರಾಪಂ ನಿರ್ಲಕ್ಷಕ್ಕೆ ಬಡವರ ಬದುಕೇ ತತ್ತರ..!

 ಇಂದೂರು ಗ್ರಾಮ ಪಂಚಾಯತಿಯ ನಿರ್ಲಕ್ಷಕ್ಕೆ ಇಂದೂರಿನ ಅದೊಂದು ಬಡ ಕುಟುಂಬ ಬೀದಿಗೆ ಬಿದ್ದಂತಾಗಿದೆ. ಕಳೆದ‌ ಮೂರು ವರ್ಷಗಳಿಂದ ಜೀವ ಅಂಗೈಯಲ್ಲಿ ಹಿಡಿದು ಬದುಕುತ್ತಿದೆ. ಆಗಲೋ ಈಗಲೋ ಬೀಳುವ ಮನೆಯಲ್ಲಿ ಬದುಕು ನಡೆಸುತ್ತಿದೆ. ನಿನ್ನೆ ರಾತ್ರಿಯೂ ಮಳೆಯಿಂದ ಅರ್ಧಕ್ಕರ್ದ ಗೋಡೆ ಕುಸಿದು ಬಿದ್ದಿದ್ದು ಮತ್ತಷ್ಟು ಆತಂಕದಲ್ಲಿ ಬಾಳುವಂತಾಗಿದೆ. ಹೌದು, ಇಂದೂರಿನ ಪ್ಲಾಟ್ ಏರಿಯಾದಲ್ಲಿ ಕಳೆದ ಮೂರು ವರ್ಷಗಳಿಂದ ಮನೆಯಿಲ್ಲದೇ ಮುರುಕು ಮನೆಯಲ್ಲಿ ವಾಸಿಸುತ್ತಿರೋ ಈ ಕುಟುಂಬ, ಈಗ ಅಕ್ಷರಶಃ ಆತಂಕದಲ್ಲಿದೆ. ಕಲ್ಪನಾ ಕಲಿವೀರ್ ಕಟ್ಟಿಮನಿ ಎಂಬುವ ಬಡ...

Post
ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ರದ್ದುಗೊಳಿಸಿದ ಸಿಎಂ, ಆದ್ರೆ, ವಿ.ಎಸ್.ಪಾಟೀಲರ “ಅಧ್ಯಕ್ಷಗಿರಿ” ಸೇಫ್..!

ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ರದ್ದುಗೊಳಿಸಿದ ಸಿಎಂ, ಆದ್ರೆ, ವಿ.ಎಸ್.ಪಾಟೀಲರ “ಅಧ್ಯಕ್ಷಗಿರಿ” ಸೇಫ್..!

ಬೆಂಗಳೂರು: ರಾಜ್ಯದಲ್ಲಿನ ಬಹುತೇಕ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ರದ್ದುಗೊಂಡಿದೆ. ನೇಮಕಾತಿ ರದ್ದುಗೊಳಿಸಿ ಸಿಎಂ ಬಸವರಾಜ್ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ಆದ್ರೆ, ಅಚ್ಚರಿಯೆಂಬಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ್ ಸೇಫ್ ಆಗಿದ್ದಾರೆ. 3 ವರ್ಷದಿಂದ..! ಕಳೆದ ಮೂರು ವರ್ಷಗಳಿಂದ ಅಂದ್ರೆ, ಬಿ.ಎಸ್.ಯಡಿಯೂರಪ್ಪನವರು ಸಿಎಂ ಆಗಿದ್ದಾಗಲೇ ಅಧ್ಯಕ್ಷರಾಗಿ ನೇಮಕಗೊಂಡಿದ್ದ, ವಿ.ಎಸ್. ಪಾಟೀಲ್ ರಿಗೆ ಈ ಬಾರಿ ಕೋಕ್ ನೀಡಲಾಗತ್ತೆ ಅನ್ನೊ ಮಾತುಗಳಿದ್ದವು. ಆದ್ರೆ, ಸಿಎಂ ಬಸವರಾಜ್ ಬೊಮ್ಮಾಯಿ ರದ್ದುಗೊಳಿಸಿರೋ ಪಟ್ಟಿಯಲ್ಲಿ ವಿ.ಎಸ್.ಪಾಟೀಲರ ಹೆಸರು ಇಲ್ಲ....

Post
ಮಳೆಯಿಂದ ಗೋಡೆ ಕುಸಿದು ತಾಯಿ ಮಗಳು ಸ್ಥಳದಲ್ಲೇ ಸಾವು, ಹಳಿಯಾಳದ ಮುರ್ಕವಾಡದಲ್ಲಿ ಮನಕಲಕುವ ಘಟನೆ..!

ಮಳೆಯಿಂದ ಗೋಡೆ ಕುಸಿದು ತಾಯಿ ಮಗಳು ಸ್ಥಳದಲ್ಲೇ ಸಾವು, ಹಳಿಯಾಳದ ಮುರ್ಕವಾಡದಲ್ಲಿ ಮನಕಲಕುವ ಘಟನೆ..!

ಹಳಿಯಾಳ: ತಾಲೂಕಿನಲ್ಲಿ ಮಳೆಯಿಂದ ಭಾರೀ ಅನಾಹುತವಾಗಿದೆ. ನಿರಂತರ ಮಳೆಯ ಪರಿಣಾಮ ಮಣ್ಣಿನ ಗೋಡೆ ಕುಸಿದು ತಾಯಿ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುರ್ಕವಾಡ ಗ್ರಾಮದಲ್ಲಿ ಘಟನೆ ನಡೆದಿದೆ. ರುಕ್ಮಿಣಿ ವಿಠ್ಠಲ್ ಮಾಚಕ (37), ಶ್ರೀದೇವಿ ವಿಠ್ಠಲ್ ಮಾಚಕ (13) ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ. ಇಂದು ಬೆಳಗಿನ ಜಾವ ಮನೆ ಗೋಡೆ ಕುಸಿದು, ಮನೆ ಗೋಡೆ ಪಕ್ಕದಲ್ಲಿ ಮಲಗಿದ್ದ ತಾಯಿ ಮಗಳ ದುರಂತ ಸಾವು ಕಂಡಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಿರಂತರ ಮಳೆ ನೀರಿಗೆ ಗೋಡೆ ನೆನದು ಕುಸಿತವಾಗಿದರ. ಘಟನಾ...

Post
ಸನವಳ್ಳಿ ಪ್ಲಾಟ್ ಬಳಿ ಅಪಘಾತ, ಬಸನಕಟ್ಟಿಯ ದಂಪತಿಗೆ ಗಾಯ..!

ಸನವಳ್ಳಿ ಪ್ಲಾಟ್ ಬಳಿ ಅಪಘಾತ, ಬಸನಕಟ್ಟಿಯ ದಂಪತಿಗೆ ಗಾಯ..!

 ಮುಂಡಗೋಡ: ತಾಲೂಕಿನ ಸನವಳ್ಳಿ ಬಳಿ ರಸ್ತೆ ಅಪಘಾತವಾಗಿದೆ. ಬೈಕ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಬೈಕ್ ಮೇಲಿದ್ದ ದಂಪತಿಗೆ ಗಂಭೀರ ಗಾಯವಾಗಿದೆ. ಶಿಗ್ಗಾವಿ ತಾಲೂಕಿನ ಬಸನಕಟ್ಟಿ ಗ್ರಾಮದ ನಾಗರಾಜ್ ಲಕ್ಷ್ಮಣ ಅಂಬಿಗೇರ(42) ಹಾಗೂ ಅವ ನ ಪತ್ನಿಗೆ ಗಂಭೀರ ಗಾಯವಾಗಿದ್ದು, ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ಗಾಯಾಳುವನ್ನು ತರಲಾಗಿತ್ತು, ಆದ್ರೆ, ಗಂಭೀರ ಗಾಯಗೊಂಡಿರೋ ಕಾರಣಕ್ಕೆ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಇನ್ನು, ಮುಂಡಗೋಡಿನಿಂದ ಸಂತೆ ಮುಗಿಸಿಕೊಂಡು ಬಸನಕಟ್ಟಿಗೆ ಬೈಕ್ ಮೂಲಕ ತೆರಳುತ್ತಿದ್ದಾಗ, ಬಂಕಾಪುರ...

Post
ಇಂದೂರು ಕೊಪ್ಪದ ಈ ರಸ್ತೆಯಲ್ಲಿ ಸಂಚರಿಸಲು “ಗುಂಡಿ”ಗೆ ಗಟ್ಟಿ ಇರಬೇಕು..! ಅಧಿಕಾರಿಗಳೇ ಏನಿದು ಅವ್ಯವಸ್ಥೆ..?

ಇಂದೂರು ಕೊಪ್ಪದ ಈ ರಸ್ತೆಯಲ್ಲಿ ಸಂಚರಿಸಲು “ಗುಂಡಿ”ಗೆ ಗಟ್ಟಿ ಇರಬೇಕು..! ಅಧಿಕಾರಿಗಳೇ ಏನಿದು ಅವ್ಯವಸ್ಥೆ..?

 ಮುಂಡಗೋಡ: ತಾಲೂಕಿನ ಇಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಪ್ಪ ಗ್ರಾಮದ ಅದೊಂದು ರಸ್ತೆ ಹದಗೆಟ್ಟು ಹಳ್ಳ ಹಿಡಿದಿದೆ. ಹಾಗಂತ, ಸ್ಥಳೀಯರು ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕ್ತಿದಾರೆ. ಕೊಪ್ಪ ಗ್ರಾಮದಿಂದ ಟಿಬೇಟಿಯನ್ ಕ್ಯಾಂಪ್ ನಂಬರ್ 3 ಕ್ಕೆ ಮಾರ್ಗ ಕಲ್ಪಿಸುವ ರಸ್ತೆ ನಡೆದಾಡಲೂ ಆಗದ ಸ್ಥಿತಿಗೆ ತಲುಪಿದೆ. ಅಧಿಕಾರಿಗಳ ನಿರ್ಲಕ್ಷ ಅನ್ನೋದು ಜನರ ಜೀವ ಹಿಂಡುತ್ತಿದೆ. ದಶಕಗಳ ಸಮಸ್ಯೆ..! ಸುಮಾರು 2 ಕೀಮಿ ಇರೋ ರಸ್ತೆ ದಶಕಗಳಿಂದಲೂ ಯಥಾಸ್ಥಿತಿಯಲ್ಲಿದೆ. ನಿತ್ಯವೂ ಇಲ್ಲಿ ಸಂಚರಿಸುವ ಜನ ಅಧಿಕಾರಿಗಳು, ಜನಪ್ರತಿನಿಧಿಗಳ...

error: Content is protected !!