ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬೈಕ್ ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಕಳ್ಳನನ್ನು ಹೆಡೆಮುರಿ ಕಟ್ಟಿದ್ದಾರೆ. ತಾಲೂಕಿನ ಕಾತೂರ ಗ್ರಾಮದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಬಂಧಿಸಲಾಗಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹುಲಗಿನಕೊಪ್ಪದ ಅನಿಲ್ ಶಿವಪ್ಪ ಬಂಡಿವಡ್ಡರ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಜೂನ್ 6.. ಅಂದಹಾಗೆ, ಜೂನ್ 6 ರಂದು ಕಾತೂರಿನ ಸಿರಾಜ್ ಬಾಷಾಸಾಬ್ ಬೊಮ್ಮನಳ್ಳಿ ಎಂಬುವವರ ಮನೆ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: uttara kannada news
ಇಂದೂರು ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಕಾರ್, ನಾಲ್ವರಿಗೆ ಗಾಯ, ಆಸ್ಪತ್ರೆಗೆ ದಾಖಲು..!
ಮುಂಡಗೋಡ: ಇಂದೂರು ಕೊಪ್ಪ ಸಮೀಪದ ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮಹಳೆಯರೂ ಸೇರಿ ನಾಲ್ವರಿಗೆ ಗಾಯವಾಗಿದೆ. ಇಂದೂರಿನಿಂದ ಮುಂಡಗೋಡ ಕಡೆಗೆ ಹೊರಟಿದ್ದ ಕಾರ್ ನಂ. KA-31-N-5760 ನಂಬರಿನ ಕಾರ್ ವೇಗವಾಗಿ ಬಂದಿದೆ. ಅತಿವೇಗದಿಂದ ಚಾಲನೆ ಮಾಡುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ, ಎದುರಿಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆಯುತ್ತಿತ್ತು. ಅದ್ರೆ ಅದೃಷ್ಟವಶಾತ್ ಬೈಕ್ ಗೆ ಡಿಕ್ಕಿ ಹೊಡೆದಿಲ್ಲ. ಬದಲಾಗಿ ವೇಗವಾಗಿ ಬಂದು ಬೃಹತ್ ಆಲದ ಮರಕ್ಕೆ...
ಚೌಡಳ್ಳಿ ಗ್ರಾಪಂ “ಅವಿಶ್ವಾಸ” ಸಭೆ ರದ್ದು, ಅಧ್ಯಕ್ಷರ ರಾಜೀನಾಮೆ ಹಿನ್ನೆಲೆ ರದ್ದುಪಡಿಸಿದ ಎಸಿ..!
ಮುಂಡಗೋಡ: ತಾಲೂಕಿನ ಚೌಡಳ್ಳಿ ಗ್ರಾಮ ಪಂಚಾಯತಿಯಲ್ಲಿ ಇಂದು ನಡೆಯಬೇಕಿದ್ದ, ಅವಿಶ್ವಾಸ ಗೊತ್ತುವಳಿ ಮಂಡನಾ ಸಭೆ ರದ್ದಾಗಿದೆ. ಅಧ್ಯಕ್ಷೆ ನೇತ್ರಾವತಿ ಬಿಸವಣ್ಣವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಇವತ್ತಿಗೆ ಹತ್ತು ದಿನವಾದ ಹಿನ್ನೆಲೆ ರಾಜೀನಾಮೆ ಅಂಗೀಕಾರವಾಗಿದೆ. ಈ ಹಿನ್ನೆಲೆಯಲ್ಲಿ ಶಿರಸಿ ಉಪ ವಿಭಾಗಾಧಿಕಾರಿ ದೇವರಾಜು, ಚೌಡಳ್ಳಿ ಗ್ರಾಪಂ ಸದಸ್ಯರಿಗೆ ತಿಳುವಳಿಕೆ ಪತ್ರ ನೀಡಿದ್ದಾರೆ. ಅಧ್ಯಕ್ಷರು ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ಈಗಾಗಲೇ ರಾಜೀನಾಮೆ ಅಂಗೀಕಾರವಾಗಿದ್ದು, ಈ ಹಿನ್ನೆಲೆಯಲ್ಲಿ ಅವಿಶ್ವಾಸ ನಿರ್ಣಯದ ಸಭೆ ನಡೆಸುವ ಅವಶ್ಯಕತೆ ಇಲ್ಲ. ಹೀಗಾಗಿ, ಸಭೆಯನ್ನು ರದ್ದುಗೊಳಿಸಲಾಗಿದೆ...
ಇಂದೂರು ಬಳಿ ಕ್ರೂಸರ್ ಹಾಗೂ ಬೈಕ್ ನಡುವೆ ಡಿಕ್ಕಿ, ಬೈಕ್ ಸವಾರನಿಗೆ ಗಾಯ..!
ಮುಂಡಗೋಡ: ತಾಲೂಕಿನ ಇಂದೂರು ಹೊರವಲಯದ ಶರೀಪ ಗೋವಿಂದ ದೇವಸ್ಥಾನದ ಹತ್ತಿರ, ಬೈಕ್ ಹಾಗೂ ಕ್ರೂಸರ್ ನಡುವೆ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಇಂದೂರು ಗ್ರಾಮದ ಬೈಕ್ ಸವಾರ ಮಲ್ಲೇಶ್ ದೊಡ್ಡಮನಿ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಇಂದೂರಿನಿಂದ ಮುಂಡಗೋಡ ಕಡೆಗೆ ಹೊರಟಿದ್ದ ಬೈಕ್ ಸವಾರನಿಗೆ, ಮುಂಡಗೋಡ ಕಡೆಯಿಂದ ಇಂದೂರು ಕಡೆಗೆ ಬರುತ್ತಿದ್ದ ಕ್ರೂಸರ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡಿದ್ದಾನೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಿರಂತರ ಮಳೆಗೆ ಬಾಚಣಕಿ ಜಲಾಶಯ ಭರ್ತಿ, ರೈತರಲ್ಲಿ ಸಂತಸ..!
ಮುಂಡಗೋಡ: ತಾಲೂಕಿನ ಬಾಚಣಕಿ ಜಲಾಶಯ ಭರ್ತಿಯಾಗಿದೆ. ನಿರಂತರವಾಗಿ ಕಳೆದ ಹಲವು ದಿನಗಳಿಂದ ಸುರಿದ ಮಳೆಗೆ ಬಾಚಣಕಿ ಜಲಾಶಯ ಭರ್ತಿಯಾಗಿದ್ದು, ಉಬ್ಬು ಬಿದ್ದಿದೆ. ಹೀಗಾಗಿ, ರೈತರ ಸಂತಸಕ್ಕೆ ಕಾರಣವಾಗಿದೆ. ಇನ್ನು ಬಾಚಣಕಿ ಜಲಾಶಯ ಬಾಚಣಕಿ, ಮಜ್ಜಿಗೇರಿ, ಇಂದೂರು, ಕೊಪ್ಪ, ಇಂದಿರಾನಗರ ಸೇರಿದಂತೆ ಹಲವು ಗ್ರಾಮಗಳ ರೈತರಿಗೆ ಜೀವನಾಡಿಯಾಗಿದೆ. ಹೀಗಾಗಿ, ಸದ್ಯ ಜಲಾಶಯ ಭರ್ತಿಯಾಗಿದ್ದು ರೈತರ ಸಂತಸಕ್ಕೆ ಕಾರಣವಾಗಿದೆ. ಇನ್ನು, ಜಲಾಶಯ ಭರ್ತಿ ಹಿನ್ನೆಲೆ ನಿತ್ಯವೂ ಪ್ರವಾಸಿಗರು ಬರುತ್ತಿದ್ದಾರೆ. ಅದ್ರಲ್ಲೂ ಟಿಬೇಟಿಗರು ಈ ಜಲಾಶಯದಲ್ಲಿ ಬಂದು ಮೋಜು ಮಸ್ತಿಮಾಡುತ್ತಿದ್ದಾರೆ.
ಉಕ್ಕಿ ಹರಿದ ಅಘನಾಶಿನಿ ಕುಮಟಾ ತಾಲೂಕಿನಲ್ಲಿ ಪ್ರವಾಹ, 70 ಕುಟುಂಬಗಳ ಸ್ಥಳಾಂತರ..!
ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಅಬ್ಬರದ ಮಳೆಗೆ ಕುಮಟಾ ತಾಲೂಕಿನ ಅಘನಾಶಿನಿ ನದಿ ತುಂಬಿ ಹರಿಯುತ್ತಿರುವುದರಿಂದ ಕೋನಳ್ಳಿ, ಗುಡ್ನಕಟ್ಟಾ ಮತ್ತು ಮೂರೂರಿನಲ್ಲಿ ನೆರೆ ಸೃಷ್ಟಿಯಾಗಿದೆ. ಈ ಭಾಗದ 70 ಕುಟುಂಬಗಳನ್ನು ಸ್ಥಳಾಂತರಿಸಲಾಗಿದ್ದು, ನದಿ ಇಕ್ಕೆಲಗಳಲ್ಲಿರುವ ಇನ್ನಷ್ಟು ಗ್ರಾಮಗಳಿಗೆ ನೆರೆ ಭೀತಿ ಎದುರಾಗಿದೆ. ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾದ್ದರಿಂದ ಕುಮಟಾ ತಾಲೂಕಿನ ಅಘನಾಶಿನಿ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದು, ಅಪಾಯದ ಮಟ್ಟದಲ್ಲೇ ಹರಿಯಲಾರಂಭಿಸಿದೆ. ಇನ್ನು ಹೊನ್ನಾವರ ತಾಲೂಕಿನ ಗುಂಡಬಾಳ , ಹಡಿನಬಾಳ , ಸಾಲಕೋಡು ಭಾಗದಲ್ಲಿ...
ಕೊಪ್ಪದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕ್ಷೌರಿಕ..!
ಮುಂಡಗೋಡ:ತಾಲೂಕಿನ ಕೊಪ್ಪ ಗ್ರಾಮದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿದ್ದಾನೆ. ಶ್ರೀನಿವಾಸ್ ನರಸಿಂಹ ಬಾರಬಾರ್ (45) ಎಂಬುವವನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಮದ್ಯಾನ ಕೊಪ್ಪ ಗ್ರಾಮದ ತನ್ನ ಹಳೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪ ಗ್ರಾಮದಲ್ಲೇ ಹೇರ್ ಕಟ್ಟಿಂಗ್ ಸಲೂನ್ ನಡೆಸುತ್ತಿದ್ದ ಶ್ರೀನಿವಾಸ್, ಇಂದು ಮದ್ಯಾಹ್ನ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹುನಗುಂದ ಸೊಸೈಟಿ ಅಧ್ಯಕ್ಷರಾಗಿ ಶಂಕ್ರಪ್ಪ ಲಮಾಣಿ, ಉಪಾಧ್ಯಕ್ಷರಾಗಿ ಈರಪ್ಪ ಯಲಿವಾಳ ಅವಿರೋಧ ಆಯ್ಕೆ..!
ಮುಂಡಗೋಡ: ತಾಲೂಕಿನ ಹುನಗುಂದ ವೀರೇಶ್ವರ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಶಂಕ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅದ್ರಂತೆ ಉಪಾಧ್ಯಕ್ಷರಾಗಿ ಈರಪ್ಪ ಯಲಿವಾಳ ಆಯ್ಕೆಯಾಗಿದ್ದಾರೆ. ಇಂದು ಸಹಕಾರಿ ಸಂಘದ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷರು ಉಪಾಧ್ಯಕ್ಷರ ಅವಿರೋಧ ಆಯ್ಕೆ ನಡೆಯಿತು. ಅಂದಹಾಗೆ, ಈ ಹಿಂದೆ ಅಧ್ಯಕ್ಷರಾಗಿದ್ದ ಅಬ್ದುಲ್ ರೆಹಮಾನ್ ಹಕೀಂ ಹಾಗೂ ಉಪಾಧ್ಯಕ್ಷರಾಗಿದ್ದ ಪರಶುರಾಮ್ ತಳವಾರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಆಯ್ಕೆ ನಡೆಯಿತು. ಈ ವೇಳೆ ಕಾಂಗ್ರೆಸ್ ಮುಖಂಡ ಎಚ್.ಎಂ.ನಾಯ್ಕ್, ಮಾಜಿ ಅಧ್ಯಕ್ಷ ಸಿದ್ದಪ್ಪ ಹಡಪದ್ ಸೇರಿದಂತೆ...
ಇಂದೂರು ಗ್ರಾಪಂ ಅಧ್ಯಕ್ಷೆ ಅನ್ನಪೂರ್ಣ ಬೆಣ್ಣಿ ರಾಜೀನಾಮೆ, ಕೊನೆಗೂ ಬಗೆಹರಿದ ಗೊಂದಲ..!
ಮುಂಡಗೋಡ: ತಾಲೂಕಿನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರ ರಾಜೀನಾಮೆ ವಿಚಾರ ಕೊನೆಗೂ ಬಗೆ ಹರಿದಂತಾಗಿದೆ. ಕೊಟ್ಟ ಮಾತಿನಂತೆ ಇಂದು ಅಧ್ಯಕ್ಷ ಸ್ಥಾನಕ್ಕೆ ಅನ್ನಪೂರ್ಣ ಬೆಣ್ಣಿ ರಾಜೀನಾಮೆ ನೀಡಿದ್ದಾರೆ. ಅದ್ರಂತೆ ಉಪಾಧ್ಯಕ್ಷ ಸಿಖಂದರ್ ಬಂಕಾಪುರ ಕೂಡ ರಾಜೀನಾಮೆ ಸಲ್ಲಿಸಿದ್ದಾರೆ. ಶಿರಸಿ ಉಪವಿಭಾಗಾಧಿಕಾರಿಗೆ ರಾಜೀನಾಮೆ ಪತ್ರ ಸಲ್ಲಿಸಿರೋ ಅಧ್ಯಕ್ಷ, ಉಪಾಧ್ಯಕ್ಷರು ಪಕ್ಷದ ತೀರ್ಮಾನದಂತೆ ರಾಜೀನಾಮೆ ನೀಡಿದ್ದಾರೆ. ಅಂದಹಾಗೆ, ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರ ರಾಜೀನಾಮೆ ಕುರಿತು ಸಾಕಷ್ಟು ಚರ್ಚೆಗಳಾಗಿದ್ದವು. ಸಾಕಷ್ಟು ಬಾರಿ ಸಭೆಗಳು ನಡೆದಿದ್ದವು. ಒಪ್ಪಂದದಂತೆ...
ಉತ್ತರ ಕನ್ನಡದ ಮಳೆಹಾನಿ ವೀಕ್ಷಣೆ ಪ್ರವಾಸ ರದ್ದುಗೊಳಿಸಿದ್ರಾ ಸಿಎಂ..? ಉಡುಪಿಯಿಂದಲೇ ಇಂದು ವಾಪಸ್..?
ಕಾರವಾರ: ಮಳೆಹಾನಿ ಪರಿಶೀಲನೆಗಾಗಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ ಬಸವರಾಜ್ ಬೊಮ್ಮಾಯಿ ಸದ್ಯ ಉಡುಪಿ ಜಿಲ್ಲೆಯಲ್ಲಿದ್ದು, ಈ ಮಧ್ಯೆ ಭಟ್ಕಳ ಪ್ರವಾಸ ರದ್ದುಗೊಳಿಸಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಆದ್ರೆ, ಕಾರಣಾಂತರಗಳಿಂದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪ್ರವಾಸವನ್ನು ರದ್ದುಗೊಳಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಭಾರೀ ಮಳೆಯ ಕಾರಣಕ್ಕೆ ರಸ್ತೆ ಮಾರ್ಗವಾಗಿ ಓಡಾಡುವುದು ಕಷ್ಟ ಒಂದು ಸ್ಥಳಕ್ಕಾಗಿ ಅಷ್ಟು ದೂರ ಪ್ರವಾಸ ಬೇಡ, ಅಲ್ಲಿನ ಮಳೆಹಾನಿ ಕುರಿತಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲು ಸಿಎಂ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇಂದು ಇಡೀ...









