Home uttara kannada news

Tag: uttara kannada news

Post
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಗೋಮಾಂಸ ಸಾಗಿಸುತ್ತಿದ್ದ ವಾಹನ ಸಮೇತ, ಓರ್ವ ವಶಕ್ಕೆ..!

ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಗೋಮಾಂಸ ಸಾಗಿಸುತ್ತಿದ್ದ ವಾಹನ ಸಮೇತ, ಓರ್ವ ವಶಕ್ಕೆ..!

ಮುಂಡಗೋಡ:ಪಿಎಸ್ಐ ಬಸವರಾಜ್ ಮಬನೂರು ಮತ್ತವರ ತಂಡ ಬೆಳ್ಳಂ ಬೆಳಿಗ್ಗೆ ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದೆ. ಅಕ್ರಮವಾಗಿ ಬಂಕಾಪುರದಿಂದ ಗೋಮಾಂಸ ಸಾಗಾಟ ಮಾಡುತ್ತಿದ್ದ ಓಮಿನಿ ವಾಹನ ಸಮೇತ ಓರ್ವ ಆರೋಪಿಯ ಹೆಡೆಮುರಿ ಕಟ್ಟಲಾಗಿದೆ. ಟಿಬೇಟಿಯನ್ ಕಾಲೋನಿಗೆ..? ಇಂದು ಬೆಳಿಗ್ಗೆ, ಹಾವೇರಿ ಜಿಲ್ಲೆಯ ಬಂಕಾಪುರದಿಂದ ಓಮಿನಿ ವಾಹನದಲ್ಲಿ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಆಧಾರದಲ್ಲಿ ಬಂಕಾಪುರ ರಸ್ತೆಯಲ್ಲಿ ದಾಳಿ ಮಾಡಿರೋ ಪೊಲೀಸರು, ಬರೋಬ್ಬರಿ 2 ಕ್ವಿಂಟಾಲ್ ಗೋಮಾಂಸ ವಶಕ್ಕೆ ಪಡೆಸಿಕೊಂಡಿದ್ದಾರೆ. ಜೊತೆಗೆ ಅಕ್ರಮ ದಂಧೆ ನಡೆಸುತ್ತಿದ್ದ ಆರೋಪಿ ಸಮೇತ...

Post
ನಾಪತ್ತೆಯಾಗಿದ್ದ ಮುಂಡಗೋಡಿನ ಆನಂದ್ ಕಡಗಿ ಶವ ಕುಂದರ್ಗಿ ಕ್ರಾಸ್ ಬಳಿ ಪತ್ತೆ, ಅಷ್ಟಕ್ಕೂ ಸಾವು ಹೇಗಾಯ್ತು..?

ನಾಪತ್ತೆಯಾಗಿದ್ದ ಮುಂಡಗೋಡಿನ ಆನಂದ್ ಕಡಗಿ ಶವ ಕುಂದರ್ಗಿ ಕ್ರಾಸ್ ಬಳಿ ಪತ್ತೆ, ಅಷ್ಟಕ್ಕೂ ಸಾವು ಹೇಗಾಯ್ತು..?

ಮುಂಡಗೋಡ: ನಾಪತ್ತೆಯಾಗಿದ್ದ ಪಟ್ಟಣದ ಖಾಸಗಿ ಶಾಲೆಯ ಶಿಕ್ಷಕ ಆನಂದ ಕಡಗಿ ಶವ, ಬರೋಬ್ಬರಿ 21 ದಿನಗಳ ಬಳಿಕ ಪತ್ತೆಯಾಗಿದೆ. ಮುಂಡಗೋಡ ತಾಲೂಕಿನ ಕುಂದರ್ಗಿ ಕ್ರಾಸ್ ಬಳಿ ಶವ ಪತ್ತೆಯಾಗಿದೆ‌. ಈ ಮೂಲಕ ಉಟ್ಟುಡುಗೆಯಲ್ಲೇ ಮನೆಬಿಟ್ಟು ನಡೆದಿದ್ದ ಆನಂದ್ ಕಡಗಿಯ ಶವ ಕಂಡು ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ. ಸ್ನೇಹಿತರಲ್ಲಿ ದುಃಖ ಮಡುಗಟ್ಟಿದೆ. ಬರಿಗಾಲಲ್ಲೇ ನಡೆದಿದ್ದ ಶಿಕ್ಷಕ..! ಅವತ್ತು, ಮೇ 29 ರ ರವಿವಾರ, ಬೆಳಿಗ್ಗೆ 11 ಗಂಟೆಯಷ್ಟೊತ್ತಿಗೆ ಬರಿಗಾಲಲ್ಲೇ ಮನೆ ಬಿಟ್ಟು ಹೋಗಿದ್ದ ಆನಂದ್, ಹಸಿರು ಬಣ್ಣದ...

Post
25 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತಿ, ಇಂದೂರ ಸೊಸೈಟಿಯ ಸಿಬ್ಬಂದಿ ವಸಂತ್ ವರೂರ್ ಗೆ ಬೀಳ್ಕೊಡುಗೆ..!

25 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತಿ, ಇಂದೂರ ಸೊಸೈಟಿಯ ಸಿಬ್ಬಂದಿ ವಸಂತ್ ವರೂರ್ ಗೆ ಬೀಳ್ಕೊಡುಗೆ..!

ಮುಂಡಗೋಡ: ತಾಲೂಕಿನ ಇಂದೂರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸಿ, ನಿವೃತ್ತಿಯಾಗಿರೋ ಸಿಬ್ಬಂದಿ ವಸಂತ ವರೂರವರಿಗೆ ಇ‌ಂದು ಬ್ಯಾಂಕಿನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳು ಬೀಳ್ಕೊಡುವ ಕಾರ್ಯಕ್ರಮ ಹಮ್ಮಿಕೊಂಡಿದ್ರು. ವಸಂತ ವರೂರ ದಂಪತಿಗೆ ಶಾಲು ಹೊದಿಸಿ, ಹಾರ ಹಾಕಿ ಫಲ ಪುಷ್ಪ ನೀಡಿ ಸನ್ಮಾನಿಸಿದ ಆಡಳಿತ ಮಂಡಳಿ ಸದಸ್ಯರು, ನೆನಪಿನ ಕಾಣಿಕೆ ನೀಡಿ ವಸಂತ್ ವರೂರರವರ ಸೇವೆಯನ್ನು ಶ್ಲಾಘಿಸಿದ್ರು. ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದ್ರು.

Post
ಪಂಪಸೆಟ್ ಕೇಬಲ್ ಕಳ್ಳತನ: ಇಬ್ಬರು ಆರೋಪಿಗಳ ಬಂಧನ..!

ಪಂಪಸೆಟ್ ಕೇಬಲ್ ಕಳ್ಳತನ: ಇಬ್ಬರು ಆರೋಪಿಗಳ ಬಂಧನ..!

ಬನವಾಸಿ: ಪಂಪಸೆಟ್ ಗೆ ಅಳವಡಿಸಿದ್ದ ವಿದ್ಯುತ್ ಕೇಬಲ್ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬನವಾಸಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಮತ್ತಿಹಳ್ಳಿಯ ಸೋಮಪ್ಪ ನೀಲಪ್ಪ ಒಡೆಯನಪುರ(28), ಬೆಟಕೆರೂರು ಗ್ರಾಮದ ಶಿವರಾಜ್ ಗುತ್ಯಪ್ಪ ಮಂತಿಕೊಪ್ಪ(22) ಎಂಬುವ ಆರೋಪಿಗಳನ್ನು ಬಂಧಿಸಲಾಗಿದೆ. ದಿನಾಂಕ: 16-06-2022 ರಂದು ಶಿರಸಿ ತಾಲೂಕ ಮೊಗವಳ್ಳಿ ಗ್ರಾಮದ ಸದಾನಂದ ಮಾದೇವ ಹಳ್ಳಕೊಪ್ಪ ಎಂಬುವವರ ಜಮೀನಿನ ಪಕ್ಕದಲ್ಲಿರುವ ವರದಾ ನದಿಯಿಂದ ಮೋಟಾರ ಮಶೀನ್ ಮೂಲಕ ನೀರನ್ನು ಉಪಯೋಗಿಸಿಕೊಳ್ಳಲು ಸುಮಾರು 250 ಅಡಿ ಉದ್ದದ ಮೋಟಾರ...

Post
ಮಳಗಿಯಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮ..!

ಮಳಗಿಯಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮ..!

 ಮುಂಡಗೋಡ: ತಾಲೂಕಿನ ಮಳಗಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಉದ್ಘಾಟನೆಗೊಂಡಿದೆ. ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳಿಂದ ಗಿಡ ನೆಡುವ ಕಾರ್ಯಕ್ರಮದ ಮೂಲಕ ಕಾರ್ಯಕ್ರಮ ಪ್ರಾರಂಭವಾಗಿದೆ. ತಹಶೀಲ್ದಾರರಿಂದ ಕಂದಾಯ ಅದಾಲತ, ಪಿಂಚಣಿ ಅದಾಲತ ಹಾಗೂ ಹಲವು ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ. ನಂತರ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ಇದೆ. ಮಳಗಿ ಭಾಗದ ನೂರಾರು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ತಮ್ಮ ಅಹವಾಲುಗಳೊಂದಿಗೆ ವೃದ್ಧರು, ರೈತರು, ಯುವಕರು ಪಾಲ್ಗೊಂಡಿದ್ದಾರೆ.

Post
ನಾಳೆ, ನಾಡಿದ್ದು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ, ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ..!

ನಾಳೆ, ನಾಡಿದ್ದು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ, ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ರವಿವಾರ ದಿನಾಂಕ 19ರ ಬೆಳಿಗ್ಗೆ, 8.30 ಗಂಟೆಯಿಂದ, ಜೂನ್ 20 ರ ಸೋಮವಾರ ಬೆಳಿಗ್ಗೆ 8.30 ಗಂಟೆಯವರೆಗೆ ಹವಾಮಾನ ಇಲಾಖೆ, ಭಾರೀ ಮಳೆ ಬೀಳುವ ಮುನ್ಸೂಚನೆ ನೀಡಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ, ಜಿಲ್ಲೆಯಲ್ಲಿ ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಿಗೆ, ಪ್ರವಾಸಿಗರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ಇನ್ನು ಮಳೆ ಗಾಳಿ ಬೀಸುವ ಸಂದರ್ಭದಲ್ಲಿ ಮಕ್ಕಳು, ಸಾರ್ವಜನಿಕರು ವಿದ್ಯುತ್ ಕಂಬಗಳು, ಹಳೆಯ ಕಟ್ಟಡಗಳು, ಮರಗಳ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ...

Post
ಟಿಬೇಟಿಯನ್ ಕಾಲೋನಿಯಲ್ಲಿ ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನ ಉದ್ಘಾಟನೆ..!

ಟಿಬೇಟಿಯನ್ ಕಾಲೋನಿಯಲ್ಲಿ ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನ ಉದ್ಘಾಟನೆ..!

 ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 1 ರ ಗಾಂದೇನ್ ಬೌದ್ಧ ಮಠದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನವನ್ನು ಆಯೋಜಿಸಲಾಗಿದೆ. ಹೀಗಾಗಿ ಇಂದು ಸಮ್ಮೇಲನ ಕಾರ್ಯಕ್ರಮ ಉದ್ಘಾಟನೆಗೊಂಡಿದೆ. ಸೈಕಾಲಜಿ ಮತ್ತು ಚಿಂತನಶೀಲ ಅಭ್ಯಾಸಗಳ ಕುರಿತು ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಸಮ್ಮೇಳನದಲ್ಲಿ ಅನೇಕ ಗಣ್ಯ ಭಾಷಣಕಾರರು ಮತ್ತು ವಿದ್ವಾಂಸರು ಭಾಗಿಯಾಗಲಿದ್ದಾರೆ. ಭಾರತದ 15 ರಾಜ್ಯಗಳಿಂದ ಬಂದಿರೋ ಬೌದ್ಧ ಬಿಕ್ಕುಗಳು, ಮಠಾಧೀಶರು, ಧಾರ್ಮಿಕ ಮುಖಂಡರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ....

Post
ಕಾರವಾರದಲ್ಲಿ ಬೆಳ್ಳಂ ಬೆಳಿಗ್ಗೆ ಎಸಿಬಿ ದಾಳಿ, ಇಬ್ಬರು ಅಧಿಕಾರಿಗಳ ಮನೆ ತಲಾಶ್..!

ಕಾರವಾರದಲ್ಲಿ ಬೆಳ್ಳಂ ಬೆಳಿಗ್ಗೆ ಎಸಿಬಿ ದಾಳಿ, ಇಬ್ಬರು ಅಧಿಕಾರಿಗಳ ಮನೆ ತಲಾಶ್..!

ಕಾರವಾರದಲ್ಲಿ ಬೆಳ್ಳಂ ಬೆಳಗ್ಗೆ ಅಧಿಕಾರಿಗಳ ಮನೆಯ ಮೇಲೆ ಎಸಿಬಿ ದಾಳಿ ನಡೆಸಿ ಶಾಕ್ ನೀಡಿದೆ. ಕಾರವಾರದ ಎಸಿಬಿ ಡಿವೈ ಎಸ್ ಪಿ ಪ್ರಕಾಶ್ ನೇತ್ರತ್ವದ ತಂಡ ಹಾಗೂ ಹುಬ್ಬಳ್ಳಿಯ ಎಸಿಬಿ ಅಧಿಕಾರಿಗಳು ಪ್ರತ್ಯೇಕವಾಗಿ ಎರಡು ತಂಡಗಳ ಮೂಲಕ ದಾಳಿ ನಡೆಸಿದೆ. ಕುಮಟಾ ಮೂಲದ ಪಿ.ಡಬ್ಲು ಡಿ ಇಂಜಿನಿಯರ್ ರಾಜೀವ್ ನಾಯ್ಕ ಹಾಗೂ ಜಿಲ್ಲಾ ನೋಂದಣಾಧಿಕಾರಿ ಶ್ರೀಧರ್ ಎಸಿಬಿ ದಾಳಿಗೆ ಒಳಗಾದ ಅಧಿಕಾರಿಗಳಾಗಿದ್ದಾರೆ. ಕಾರವಾರ ನಗರದ ಎಂ.ಜಿ ರಸ್ತೆಯಲ್ಲಿರುವ ಬೃಂದಾವನ ಅಪಾರ್ಟ ಮೆಂಟ್, ಹಬ್ಬುವಾಡದ ಮನೆಯ ಮೇಲೆ ಎರಡು...

Post
ಮೈನಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್, ಕೆಂದಲಗೇರಿಯ ವ್ಯಕ್ತಿಗೆ ಗಂಭೀರ ಗಾಯ..!

ಮೈನಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್, ಕೆಂದಲಗೇರಿಯ ವ್ಯಕ್ತಿಗೆ ಗಂಭೀರ ಗಾಯ..!

ಮುಂಡಗೋಡ: ತಾಲೂಕಿನ ಮೈನಳ್ಳಿ ಸಮೀಪದಲ್ಲಿ ಬೈಕ್ ಅಪಘಾತವಾಗಿದೆ. ಬೈಕ್ ಸವಾರನೊಬ್ಬ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ. ಕೆಂದಲೆಗೇರಿ ಗ್ರಾಮದ ನೂರ್ ಅಹ್ಮದ್ (30) ಎಂಬುವವನೇ ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಈತ ಕೆಂದಲಗೇರಿ ಗ್ರಾಮದಿಂದ ಯಲ್ಲಾಪುರ ರಸ್ತೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ, ಈ ವೇಳೆ ಬೈಕ್ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವೂ ಮುರಿದಿದೆ. ಸದ್ಯ ಬೈಕ್ ಸವಾರನ...

Post
ಹೆದರಿಕೊಂಡಿದ್ದ ಹುಲಿಹೊಂಡದ ಹುಡುಗಿಗೆ ಹುರುಪು ತುಂಬಿದ ಪೊಲೀಸ್ ಇನ್ಸಪೆಕ್ಟರ್..! ಸುಖಾಂತ್ಯಗೊಂಡ ಕೇಸ್..!

ಹೆದರಿಕೊಂಡಿದ್ದ ಹುಲಿಹೊಂಡದ ಹುಡುಗಿಗೆ ಹುರುಪು ತುಂಬಿದ ಪೊಲೀಸ್ ಇನ್ಸಪೆಕ್ಟರ್..! ಸುಖಾಂತ್ಯಗೊಂಡ ಕೇಸ್..!

ಮುಂಡಗೋಡ ಪಿಐ ಗದರಿಸಿದ್ರು ಅಂತಾ ಶಾಲೆ ಬಿಟ್ಟು ಮನೆಯಲ್ಲೇ ಕುಳಿತ ಹುಲಿಹೊಂಡದ ವಿದ್ಯಾರ್ಥಿನಿಯ ಮನೆಗೆ, ಖುದ್ದು ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ಭೇಟಿ ನೀಡಿ ಬಾಲಕಿಗೆ ದೈರ್ಯ ತುಂಬಿದ್ದಾರೆ. ಈ ಮೂಲಕ ಅದೇನೋ ಕೆಲಸದ ಟೆನ್ಶೆನ್ ನಲ್ಲಿ ಆಗಿ ಹೋಗಿದ್ದ ಘಟನೆಗೆ ಮಮ್ಮಲ ಮರುಗಿದ್ದಾರೆ. ಸದ್ಯ ಬಾಲಕಿ ಚೇತರಿಸಿಕೊಂಡು ಶಾಲೆಗೆ ಹೋಗಲು ರೆಡಿಯಾಗಿದ್ದಾಳೆ. ಹಾಗಂತ ಬಾಲಕಿಯ ಕುಟುಂಬಸ್ಥರು ತಿಳಿಸಿದ್ದಾರೆ.  ಈ ಕುರಿತು ಪಬ್ಲಿಕ್ ಫಸ್ಟ್ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ಹೀಗಾಗಿ, ವರದಿ ಪ್ರಸಾರವಾದ ಬೆನ್ನಲ್ಲೇ...

error: Content is protected !!