ಮುಂಡಗೋಡ: ಶಿರಸಿಗೆ ವರ್ಗಾವಣೆಗೊಂಡಿರೋ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಮುಂಡಗೋಡದಿಂದ ಬಿಡುಗಡೆಗೊಂಡಿದ್ದಾರೆ. ಬಿಡುಗಡೆಗೊಳಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲಿನ್ ಆದೇಶ ಹೊರಡಿಸಿದ್ದಾರೆ. ಇವತ್ತೇ ಮುಂಡಗೋಡದಿಂದ ಶಿರಸಿಗೆ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಬಿಡುಗಡೆಗೊಂಡಿದ್ದು, ಮುಂದಿನ ತಹಶೀಲ್ದಾರ್ ಹುದ್ದೆ ಭರ್ತಿ ಆಗುವವರೆಗೂ ಮುಂಡಗೋಡಿಗೆ ಹೆಚ್ಚುವರಿ ಪ್ರಭಾರಿಯಾಗಿ ಶ್ರೀಧರ್ ಮುಂದಲಮನಿಯವರೇ ಕಾರ್ಯ ನಿರ್ವಹಿಸಲಿದ್ದಾರೆ ಅಂತಾ ಜಿಲ್ಲಾಧಿಕಾರಿಗಳು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: uttara kannada news
ಮುಂಡಗೋಡ ತಾಲೂಕಿನ ಗಲ್ಲಿಗಳಲ್ಲಿ ಅಕ್ರಮ ಮದ್ಯಮಾರಾಟ, ಅಬಕಾರಿಗಳ ನೆರಳಲ್ಲೇ ನಡಿತಿದೆಯಾ ದಂಧೆ..?
ಮುಂಡಗೋಡ: ತಾಲೂಕಿನಲ್ಲಿ ಈಗ ಎಲ್ಲೆಂದರಲ್ಲಿ ಸರಾಯಿ ಮಾರಾಟದ ಅಕ್ರಮ ಅಡ್ಡೆಗಳು ತಲೆ ಎತ್ತಿವೆ. ಅಧಿಕೃತ ಮದ್ಯದಂಗಡಿಗಳು ಮುಂಡಗೋಡಿಗಷ್ಟೇ ಸೀಮಿತವಾಗಿವೆ. ಆದ್ರೆ ಅದ್ಯಾರ ಕೃಪಾಕಟಾಕ್ಷವೋ ಗೊತ್ತಿಲ್ಲ, ಇಡೀ ತಾಲೂಕಿನ ಗಲ್ಲಿ ಗಲ್ಲಿಗಳಲ್ಲಿ ಅಕ್ರಮ ದಂಧೆಕೋರರನ್ನು ಹುಟ್ಟು ಹಾಕಲಾಗಿದೆ. ಹೀಗಾಗಿ, ತಾಲೂಕಿನ ಮಹಿಳೆಯರು, ಪ್ರಜ್ಞಾವಂತರು ಸಂಬಂಧಪಟ್ಟವರಿಗೆ ಹಿಡಿಶಾಪ ಹಾಕ್ತಿದಾರೆ. ಅದ್ರಲ್ಲೂ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಮಹಾಮಂಗಳಾರತಿ ಮಾಡ್ತಿದಾರೆ. ಅಬಕಾರಿಗಳದ್ದೇ ಆಟ..? ನಿಜ ಅಂದ್ರೆ ಮುಂಡಗೋಡ ತಾಲೂಕಿನಲ್ಲಿ ಈಗ ಕೆಲವು ಕಿರಾಣಿ ಅಂಗಡಿಗಳಲ್ಲೂ ಮದ್ಯ ಹೇರಳವಾಗಿ ಸಿಗುತ್ತಿದೆ. ಇನ್ನು ತಾಲೂಕಿನ ಟಿಬೇಟಿಯನ್...
ಕೆಂದಲಗೇರಿಯಲ್ಲಿ ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ, ಮೂವರು ವಶಕ್ಕೆ..!
ಮುಂಡಗೋಡ: ತಾಲೂಕಿನ ಕೆಂದಲಗೇರಿಯಲ್ಲಿ ಇಸ್ಪೀಟು ಆಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಇಸ್ಪೀಟು ಆಡುತ್ತಿದ್ದ ಮೂವರನ್ನು ವಶಕ್ಕೆ ಪಡೆದು, ಐವರ ಮೇಲೆ ಕೇಸು ದಾಖಲಿಸಲಾಗಿದೆ. ನಾಗರಾಜ ಹನುಮಂತ ಚವ್ಹಾಣ(45), ಆಶೋಕ ನಿಂಗಪ್ಪ ಮಂಜಣ್ಣನವರ್(28), ಫಕ್ಕೀರಾ ಸಾಕಪ್ಪ ಕಟ್ಟಿಮನಿ(30), ರುದ್ರಪ್ಪ ತಂದೆ ಗುಳುವಪ್ಪ ಸುಣಗಾರ(38) ಹಾಗೂ ಅಲಿ ಹುಸನ್ ಸಾಬ ಮುಜಾವರ್(35) ಎಂಬುವವರ ಮೇಲೆ ಕೇಸು ದಾಖಲಿಸಲಾಗಿದೆ. ಇದ್ರಲ್ಲಿ ಮೂವರು ಆರೋಪಿಗಳು ಪೊಲೀಸರ ದಾಳಿ ವೇಳೆ ಸಿಕ್ಕಿಬಿದ್ದಿದ್ದಾರೆ, ಇನ್ನುಳಿದವರು ಪರಾರಿಯಾಗಿದ್ದಾರೆ.
ನ್ಯಾಸರ್ಗಿಯಲ್ಲಿ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ ಓಸಿ ಅಡ್ಡೆಯ ಮೇಲೆ ಪೊಲೀಸರ ದಾಳಿ, ಓರ್ವ ವಶಕ್ಕೆ..!
ಮುಂಡಗೋಡ: ತಾಲೂಕಿನ ನ್ಯಾಸರ್ಗಿಯಲ್ಲಿ ಮಟ್ಕಾ ಅಡ್ಡೆಯ ಮೇಲೆ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದ ತಂಡ ದಾಳಿ ಮಾಡಿದೆ. ಮಟ್ಕಾ ದಂಧೆ ನಡೆಸುತ್ತಿದ್ದ ಓರ್ವನನ್ನು ವಶಕ್ಕೆ ಪಡೆದು ಕೇಸು ದಾಖಲಿಸಿದ್ದಾರೆ ಪೊಲೀಸ್ರು. ನ್ಯಾಸರ್ಗಿಯ ಪ್ರಕಾಶ ಉದಯ ಹರಿಜನ(32) ಎಂಬುವವನ ಮೇಲೆ ಕೇಸು ದಾಖಲಿಸಲಾಗಿದೆ. ಈತ ನ್ಯಾಸರ್ಗಿ ಗ್ರಾಮದ ಕಲಿಯಮ್ಮಾ ದೇವಸ್ಥಾನದ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಓಸಿ ಬರೆಯುತ್ತಿದ್ದ, ಅದೇ ವೇಳೆ ದಾಳಿ ಮಾಡಿರೋ ಪಿಐ ಸಿದ್ದಪ್ಪ ಸಿಮಾನಿ ಮತ್ತವರ ತಂಡ, ಮಟ್ಕಾ ನಡೆಸುತ್ತಿದ್ದವರ ಛಳಿ ಬಿಡಿಸಿದೆ. ದಾಳಿ ವೇಳೆ...
ಪತಿಯ ಕಿರುಕುಳ ಆರೋಪ, ಬಾಚಣಕಿಯಲ್ಲಿ 6 ತಿಂಗಳ ಗರ್ಭಿಣಿ ನೇಣಿಗೆ ಶರಣು..!
ಮುಂಡಗೋಡ: ತಾಲೂಕಿನ ಬಾಚಣಕಿಯಲ್ಲಿ ಆರು ತಿಂಗಳ ಗರ್ಭಿಣಿ ನೇಣಿಗೆ ಶರಣಾಗಿರೋ ಘಟನೆ ನಡೆದಿದೆ. ಚೇತನಾ ಗುತ್ತೆಪ್ಪ ಸಣ್ಣಮನಿ(32) ನೇಣಿಗೆ ಶರಣಾದ ಗರ್ಭಿಣಿಯಾಗಿದ್ದು ಪತಿಯ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿರೋ ಆರೋಪ ಕೇಳಿ ಬಂದಿದೆ. ಪತಿ ಗುತ್ತೆಪ್ಪ ಸಣ್ಣಮನಿ ಎಂಬುವವನ ವಿರುದ್ಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2 ಮಕ್ಕಳ ತಾಯಿಯಾಗಿದ್ದ ಚೇತನಾ, ಈಗ ಮತ್ತೆ 6 ತಿಂಗಳ ಗರ್ಭಿಣಿಯಾಗಿದ್ದಾಳೆ. ಆದ್ರೆ ಪತಿ ಗುತ್ತೆಪ್ಪ ಮಾನಸಿಕ ಹಾಗೂ ದೈಹಿಕ ಕಿರುಕುಳನೀಡುತ್ತಿದ್ದ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತಾ ಆರೋಪಿಸಲಾಗಿದ್ದು,...
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಗೋಮಾಂಸ ಸಾಗಿಸುತ್ತಿದ್ದ ವಾಹನ ಸಮೇತ, ಓರ್ವ ವಶಕ್ಕೆ..!
ಮುಂಡಗೋಡ:ಪಿಎಸ್ಐ ಬಸವರಾಜ್ ಮಬನೂರು ಮತ್ತವರ ತಂಡ ಬೆಳ್ಳಂ ಬೆಳಿಗ್ಗೆ ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದೆ. ಅಕ್ರಮವಾಗಿ ಬಂಕಾಪುರದಿಂದ ಗೋಮಾಂಸ ಸಾಗಾಟ ಮಾಡುತ್ತಿದ್ದ ಓಮಿನಿ ವಾಹನ ಸಮೇತ ಓರ್ವ ಆರೋಪಿಯ ಹೆಡೆಮುರಿ ಕಟ್ಟಲಾಗಿದೆ. ಟಿಬೇಟಿಯನ್ ಕಾಲೋನಿಗೆ..? ಇಂದು ಬೆಳಿಗ್ಗೆ, ಹಾವೇರಿ ಜಿಲ್ಲೆಯ ಬಂಕಾಪುರದಿಂದ ಓಮಿನಿ ವಾಹನದಲ್ಲಿ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಆಧಾರದಲ್ಲಿ ಬಂಕಾಪುರ ರಸ್ತೆಯಲ್ಲಿ ದಾಳಿ ಮಾಡಿರೋ ಪೊಲೀಸರು, ಬರೋಬ್ಬರಿ 2 ಕ್ವಿಂಟಾಲ್ ಗೋಮಾಂಸ ವಶಕ್ಕೆ ಪಡೆಸಿಕೊಂಡಿದ್ದಾರೆ. ಜೊತೆಗೆ ಅಕ್ರಮ ದಂಧೆ ನಡೆಸುತ್ತಿದ್ದ ಆರೋಪಿ ಸಮೇತ...
ನಾಪತ್ತೆಯಾಗಿದ್ದ ಮುಂಡಗೋಡಿನ ಆನಂದ್ ಕಡಗಿ ಶವ ಕುಂದರ್ಗಿ ಕ್ರಾಸ್ ಬಳಿ ಪತ್ತೆ, ಅಷ್ಟಕ್ಕೂ ಸಾವು ಹೇಗಾಯ್ತು..?
ಮುಂಡಗೋಡ: ನಾಪತ್ತೆಯಾಗಿದ್ದ ಪಟ್ಟಣದ ಖಾಸಗಿ ಶಾಲೆಯ ಶಿಕ್ಷಕ ಆನಂದ ಕಡಗಿ ಶವ, ಬರೋಬ್ಬರಿ 21 ದಿನಗಳ ಬಳಿಕ ಪತ್ತೆಯಾಗಿದೆ. ಮುಂಡಗೋಡ ತಾಲೂಕಿನ ಕುಂದರ್ಗಿ ಕ್ರಾಸ್ ಬಳಿ ಶವ ಪತ್ತೆಯಾಗಿದೆ. ಈ ಮೂಲಕ ಉಟ್ಟುಡುಗೆಯಲ್ಲೇ ಮನೆಬಿಟ್ಟು ನಡೆದಿದ್ದ ಆನಂದ್ ಕಡಗಿಯ ಶವ ಕಂಡು ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ. ಸ್ನೇಹಿತರಲ್ಲಿ ದುಃಖ ಮಡುಗಟ್ಟಿದೆ. ಬರಿಗಾಲಲ್ಲೇ ನಡೆದಿದ್ದ ಶಿಕ್ಷಕ..! ಅವತ್ತು, ಮೇ 29 ರ ರವಿವಾರ, ಬೆಳಿಗ್ಗೆ 11 ಗಂಟೆಯಷ್ಟೊತ್ತಿಗೆ ಬರಿಗಾಲಲ್ಲೇ ಮನೆ ಬಿಟ್ಟು ಹೋಗಿದ್ದ ಆನಂದ್, ಹಸಿರು ಬಣ್ಣದ...
25 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತಿ, ಇಂದೂರ ಸೊಸೈಟಿಯ ಸಿಬ್ಬಂದಿ ವಸಂತ್ ವರೂರ್ ಗೆ ಬೀಳ್ಕೊಡುಗೆ..!
ಮುಂಡಗೋಡ: ತಾಲೂಕಿನ ಇಂದೂರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸಿ, ನಿವೃತ್ತಿಯಾಗಿರೋ ಸಿಬ್ಬಂದಿ ವಸಂತ ವರೂರವರಿಗೆ ಇಂದು ಬ್ಯಾಂಕಿನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳು ಬೀಳ್ಕೊಡುವ ಕಾರ್ಯಕ್ರಮ ಹಮ್ಮಿಕೊಂಡಿದ್ರು. ವಸಂತ ವರೂರ ದಂಪತಿಗೆ ಶಾಲು ಹೊದಿಸಿ, ಹಾರ ಹಾಕಿ ಫಲ ಪುಷ್ಪ ನೀಡಿ ಸನ್ಮಾನಿಸಿದ ಆಡಳಿತ ಮಂಡಳಿ ಸದಸ್ಯರು, ನೆನಪಿನ ಕಾಣಿಕೆ ನೀಡಿ ವಸಂತ್ ವರೂರರವರ ಸೇವೆಯನ್ನು ಶ್ಲಾಘಿಸಿದ್ರು. ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದ್ರು.
ಪಂಪಸೆಟ್ ಕೇಬಲ್ ಕಳ್ಳತನ: ಇಬ್ಬರು ಆರೋಪಿಗಳ ಬಂಧನ..!
ಬನವಾಸಿ: ಪಂಪಸೆಟ್ ಗೆ ಅಳವಡಿಸಿದ್ದ ವಿದ್ಯುತ್ ಕೇಬಲ್ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬನವಾಸಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಮತ್ತಿಹಳ್ಳಿಯ ಸೋಮಪ್ಪ ನೀಲಪ್ಪ ಒಡೆಯನಪುರ(28), ಬೆಟಕೆರೂರು ಗ್ರಾಮದ ಶಿವರಾಜ್ ಗುತ್ಯಪ್ಪ ಮಂತಿಕೊಪ್ಪ(22) ಎಂಬುವ ಆರೋಪಿಗಳನ್ನು ಬಂಧಿಸಲಾಗಿದೆ. ದಿನಾಂಕ: 16-06-2022 ರಂದು ಶಿರಸಿ ತಾಲೂಕ ಮೊಗವಳ್ಳಿ ಗ್ರಾಮದ ಸದಾನಂದ ಮಾದೇವ ಹಳ್ಳಕೊಪ್ಪ ಎಂಬುವವರ ಜಮೀನಿನ ಪಕ್ಕದಲ್ಲಿರುವ ವರದಾ ನದಿಯಿಂದ ಮೋಟಾರ ಮಶೀನ್ ಮೂಲಕ ನೀರನ್ನು ಉಪಯೋಗಿಸಿಕೊಳ್ಳಲು ಸುಮಾರು 250 ಅಡಿ ಉದ್ದದ ಮೋಟಾರ...
ಮಳಗಿಯಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮ..!
ಮುಂಡಗೋಡ: ತಾಲೂಕಿನ ಮಳಗಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಉದ್ಘಾಟನೆಗೊಂಡಿದೆ. ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳಿಂದ ಗಿಡ ನೆಡುವ ಕಾರ್ಯಕ್ರಮದ ಮೂಲಕ ಕಾರ್ಯಕ್ರಮ ಪ್ರಾರಂಭವಾಗಿದೆ. ತಹಶೀಲ್ದಾರರಿಂದ ಕಂದಾಯ ಅದಾಲತ, ಪಿಂಚಣಿ ಅದಾಲತ ಹಾಗೂ ಹಲವು ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ. ನಂತರ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ಇದೆ. ಮಳಗಿ ಭಾಗದ ನೂರಾರು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ತಮ್ಮ ಅಹವಾಲುಗಳೊಂದಿಗೆ ವೃದ್ಧರು, ರೈತರು, ಯುವಕರು ಪಾಲ್ಗೊಂಡಿದ್ದಾರೆ.









