ಮುಂಡಗೋಡ ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ನಡೆದಿದೆ. ಗ್ರಾಮ ಪಂಚಾಯತಿ ಪಕ್ಕದಲ್ಲೇ ಬಾಡಿಗೆ ರೂಂ ಹಿಂದಿನ ಕಿಡಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹುಬ್ಬಳ್ಳಿ ಮೂಲದ ಪ್ರಭಾಕರ್ (45)ಎಂಬ ವ್ಯಕ್ತಿಯೇ ನೇಣಿಗೆ ಶರಣಾದವನು ಎನ್ನಲಾಗಿದೆ. ಈತ ಕಳೆದ ಕೆಲ ತಿಂಗಳ ಹಿಂದಷ್ಟೇ ನಂದಿಗಟ್ಟಾ ಗ್ರಾಮದಲ್ಲಿ ಬಂದು ಅಂಗಡಿ ನಡೆಸುತ್ತಿದ್ದ. ಆದ್ರೆ ಅದೇನು ಕಾರಣವೋ ನಿನ್ನೆ ರಾತ್ರಿ ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಾರೆ....
Top Stories
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Tag: uttara kannada news
ನಂದಿಗಟ್ಟಾದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಕೆರೆಯಲ್ಲಿ ಹೆಣವಾಗಿ ಪತ್ತೆ..!
ಮುಂಡಗೋಡ: ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ಗ್ರಾಮದ ಹೊರವಲಯದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ದುರ್ನಾತ ಬೀರುತ್ತಿದೆ. ಅಂದಹಾಗೆ, ಕಳೆದ ಎರಡು ದಿನಗಳಿಂದ ನಂದಿಗಟ್ಟಾ ಗ್ರಾಮದ ಮಾಬುಸಾಬ್ ಅತ್ತಿವೇರಿ (47) ಎಂಬುವ ವ್ಯಕ್ತಿ ನಾಪತ್ತೆಯಾಗಿದ್ದ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಬುಸಾಬ್ ಯಾವಾಗಲೂ ಮನೆಯಲ್ಲಿಯೇ ಇರುತ್ತಿದ್ದ, ಆದ್ರೆ ಅದ್ಯಾವ ಕಾರಣಕ್ಕೋ ಗೊತ್ತಿಲ್ಲ, ಏಕಾಏಕಿ ನಾಪತ್ತೆಯಾದವನು ಈಗ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಸದ್ಯ ಮುಂಡಗೋಡ ಪೊಲೀಸರಿಗೆ ಗ್ರಾಮಸ್ಥರು ಮಾಹಿತಿ ರವಾನಿಸಿದ್ದು ಶವ ಹೊರ ತೆಗೆಯುವ ಕಾರ್ಯ...
ಮಾರ್ಕೆಟಿಂಗ್ ಸೊಸೈಟಿ ಅಧ್ಯಕ್ಷ ರವಿಗೌಡರ ಖುರ್ಚಿಗೆ ಕುತ್ತು, ನಾಮಿನೇಟ್ ಮಾಡಿದ್ದೇ ಕಾನೂನು ಬಾಹಿರವಂತೆ, ಹೈಕೋರ್ಟ್ ಮಹತ್ವದ ಆದೇಶ..!
ಇದು ಮುಂಡಗೋಡ ತಾಲೂಕಿನ ಪಾಲಿಗೆ ಅಚ್ಚರಿಯ ಸಂಗತಿ. ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರ ಖುರ್ಚಿಗೆ ಕುತ್ತು ಬಂದಿದೆಯಾ..? ಮಾರ್ಕೆಟಿಂಗ್ ಸೊಸೈಟಿಗೆ ರವಿಗೌಡ ಪಾಟೀಲರ ನಾಮನಿರ್ದೇಶನವೇ ಕಾನೂನು ಬಾಹಿರಾಗಿದೆ ಅಂತಾ ಹೈಕೋರ್ಟ್ ಧಾರವಾಡ ವಿಭಾಗೀಯ ಪೀಠ ಆದೇಶ ನೀಡಿದೆ. 03.11.2020 ರಂದು ರವಿಗೌಡ ಪಾಟೀಲರನ್ನು ಸರ್ಕಾರದಿಂದಲೇ ನಾಮ ನಿರ್ದೇಶನಗೊಳಿಸಿದ್ದು ಕಾನೂನು ಬಾಹಿರ ಅಂತಾ ಸರ್ಕಾರದ ಆದೇಶವನ್ನು ಮಾನ್ಯ ಹೈಕೋರ್ಟ್ ವಿಭಾಗೀಯ ಪೀಠ ಕಿತ್ತು ಹಾಕಿದೆ. ಹೀಗಾಗಿ, ಸಚಿವ ಶಿವರಾಮ್ ಹೆಬ್ಬಾರ್ ರವರ ಪರಮಾಪ್ತ, ಬಿಜೆಪಿಯ ಪ್ರಭಾವಿ ಮುಖಂಡ...
ಉತ್ತರ ಕನ್ನಡ ಎಸ್ಪಿ ಸುಮನಾ ಪೆನ್ನೇಕರ್ ಎತ್ತಂಗಡಿ, ವರ್ಗಾವಣೆಗೊಳಿಸಿ ಸರ್ಕಾರ ಆದೇಶ..!
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ.ಸುಮನಾ ಪೆನ್ನೇಕರ್ ಎತ್ತಂಗಡಿಯಾಗಿದ್ದಾರೆ. ಒಂದೇ ಒಂದು ವರ್ಷದ ಅವದಿಯಲ್ಲೇ ಉತ್ತರ ಕನ್ನಡ ಜಿಲ್ಲೆಯಿಂದ ಎಸ್ಪಿ ಮೇಡಂ ವರ್ಗಾವಣೆ ಮಾಡಿದ್ದು ಜಿಲ್ಲೆಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅಂದಹಾಗೆ, ಪಬ್ಲಿಕ್ ಫಸ್ಟ್ ನ್ಯೂಸ್ ಕಳೆದ ಒಂದು ತಿಂಗಳ ಹಿಂದೆಯೇ ನುಡಿದಿದ್ದ ಭವಿಷ್ಯ ನಿಜವಾಗಿದ್ದು, ಉತ್ತರ ಕನ್ನಡಕ್ಕೆ ನೂತನ ಎಸ್ಪಿಯಾಗಿ ಎನ್. ವಿಷ್ಣುವರ್ಧನ್ ವರ್ಗಾವಣೆಗೊಂಡಿದ್ದಾರೆ. ಡಾ ಸುಮನಾ ಪೆನ್ನೇಕರ್ ಮೇಡಂ ಜಿಲ್ಲೆಗೆ ಎಂಟ್ರಿಯಾಗಿ ಬಂದಾಗಿನಿಂದ ಇಲ್ಲಿನ ಅಕ್ರಮಿಗಳು ಬಾಲ ಬಿಚ್ಚಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಅದೇಷ್ಟೋ...
ಕಾತೂರು ನಂದಿಪುರದ ಬಳಿ ಭೀಕರ ಅಪಘಾತ, ಎರಡು ಬೈಕಿಗೆ ಕಾರು ಡಿಕ್ಕಿ ಮೂವರಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ನಂದೀಪುರ ಬಳಿ ಭೀಕರ ಅಪಘಾತವಾಗಿದೆ. ರಾಂಗ್ ಸೈಡ್ ಬಂದ ಕಾರೊಂದು ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆಯೂ ಸೇರಿ ಮೂವರಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ಕಡೆಯಿಂದ ಶಿರಸಿ ಕಡೆಗೆ ಹೋಗುತ್ತಿದ್ದ ಕಾರು, ಶಿರಸಿ ಕಡೆಯಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಎರಡು ಬೈಕ್ ಗಳಿಗೆ ಡಿಕ್ಕಿಯಾಗಿದೆ. ಪರಿಣಾಮ ಬೈಕಿನಲ್ಲಿದ್ದ ಹಾವೇರಿ ಮೂಲದ ಓರ್ವ ಮಹಿಳೆ ಹಾಗೂ ಪುರುಷನಿಗೆ ಗಂಭೀರ ಗಾಯವಾಗಿದೆ. ಹಾಗೆಯೇ ಮತ್ತೊಂದು ಬೈಕಿನಲ್ಲಿದ್ದ ವ್ಯಕ್ತಿಗೂ ಗಾಯವಾಗಿದೆ. ಎಣ್ಣೆ ಏಟಲ್ಲಿ..?...
ವಿ.ಎಸ್.ಪಾಟೀಲ್ “ಕಮಲ” ತೊರೆದು “ಕೈ” ಹಿಡಿಯೊ ಮುಹೂರ್ತ ಫಿಕ್ಸ್: ಸಂಚಲನ ಪಕ್ಕಾನಾ..?
ಯಲ್ಲಾಪುರ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಮಾಜಿ NWKSRTC ಅಧ್ಯಕ್ಷ ವಿ.ಎಸ್. ಪಾಟೀಲ್ “ಕೈ” ಪಡೆ ಸೇರುವ ಮುಹೂರ್ತ ಫಿಕ್ಸ್ ಆಗಿದೆ. ನೆವೆಂಬರ್ 4 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲೇ ಕಮಲ ತೊರೆದು “ಕೈ” ಹಿಡಿಯಲಿದ್ದಾರೆ ಪಾಟೀಲರು. ಅಂದಹಾಗೆ, ಇವತ್ತು ಬೆಂಗಳೂರಿನಲ್ಲಿ ಇಂತಹದ್ದೊಂದು ತೀರ್ಮಾನ ಹೊರಬಿದ್ದಿದೆ. ಡಿಕೆಶಿ ಭೇಟಿ..! ಅಸಲು, ಹಲವು ತಿಂಗಳುಗಳಿಂದಲೇ ಬಿಜೆಪಿ ಜೊತೆಗಿನ ಸಂಬಂಧ ಕಳೆದುಕೊಂಡಿದ್ದ ವಿಎಸ್ಪಿ, ಬಹುತೇಕ ಕಾಂಗ್ರೆಸ್ಸಿನ ಪಡಸಾಲೆಯಲ್ಲಿ ಒಂದು ಹೆಜ್ಜೆ ಇಟ್ಟಾಗಿತ್ತು. ಆದ್ರೆ, ಕಾಂಗ್ರೆಸ್ ನ ಭಾರತ್ ಜೋಡೋ ಕಾರ್ಯಕ್ರಮದಲ್ಲಿ...
ಇಂದೂರಿನ ಜನಪದ ಕಲಾವಿದ ಸಹದೇವಪ್ಪ ನಡಗೇರಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ
ಮುಂಡಗೋಡ ತಾಲೂಕಿನ ಇಂದೂರಿನ ಜನಪದ ಕಲಾವಿದ ಸಹದೇವಪ್ಪ ನಡಗೇರಿಯವರಿಗೆ ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿ ರಾಜ್ಯ ಸರ್ಕಾರ ಇಂದು ಘೋಷಣೆ ಮಾಡಿದೆ. ಅಂದಹಾಗೆ, ಸಹದೇವಪ್ಪ ನಡಗೇರಿಯವರು ತಾಲೂಕಿನ ಹಿರಿಯ ಜನಪದ ಕಲಾವಿದರಾಗಿದ್ದು, ವಿಶೇಷ ಶೈಲಿಯ ಜನಪದ ಗೀತೆಗಳನ್ನು ಹಾಡುತ್ತ ಜನಮನ ಗೆದ್ದಿದ್ದಾರೆ. ಸದ್ಯ ಮುಂಡಗೋಡ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೂ ಆಗಿ ಸೇವೆ ಸಲ್ಲಿಸ್ತಿರೋ ನಡಗೇರಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ತಾಲೂಕಿನ ಜನರ ಹರ್ಷಕ್ಕೆ ಕಾರಣವಾಗಿದೆ. ಪಬ್ಲಿಕ್...
ಮುಂಡಗೋಡ ಪಿಎಸ್ಐ ಬಸಣ್ಣನ ಎತ್ತಂಗಡಿಗೆ ಪ್ಲ್ಯಾನ್ ರೆಡಿ, ಠಾಣೆಯ ಅಂಗಳದಲ್ಲಿ ಬ್ರೋಕರುಗಳ ಮಸಲತ್ತು ನಿಜಾನಾ..?
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರ ಎತ್ತಂಗಡಿಗೆ ಅದೊಂದು ಪಡೆ ಸನ್ನದ್ಧವಾಗಿದೆಯಂತೆ. ಅಂತಹದ್ದೊಂದು ರೂಮರ್ರು ತಾಲೂಕಿನ ತುಂಬ ಎದ್ದಿದೆ. ತಮ್ಮ ಮೂಗಿನ ನೇರಕ್ಕೆ ಕಾರ್ಯನಿರ್ವಹಿಸ್ತಿಲ್ಲ, ನಮಗೆ ಕಿಮ್ಮತ್ತು ಕೊಡ್ತಿಲ್ಲ ಅಂತಾ ಅದೊಂದು ಟೀಂ ಅದ್ಯಾರ್ಯಾರದ್ದೋ ಕಿವಿ ಕಚ್ಚಿ ಹೆಂಗಾದ್ರೂ ಸರಿ ಪಿಎಸ್ಐರನ್ನ ಇಲ್ಲಿಂದ ಎತ್ತಂಗಡಿ ಮಾಡಿಸಬೇಕು ಅನ್ನೋ ಪ್ಲ್ಯಾನ್ ಮಾಡಿಕೊಂಡಿದೆಯಂತೆ. ದಕ್ಷ ಯುವ ಪಡೆ..! ಅಂದಹಾಗೆ, ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಇವತ್ತಿಗೂ ದಕ್ಷ ಯುವ ಪಡೆ ಇದೆ. ಅದ್ಯಾವನೇ ನಾಗರಿಕ ತನ್ನ ಅಳಲು ತೋಡಿಕೊಳ್ಳಲು ಠಾಣೆಯ ಮೆಟ್ಟಿಲು ಹತ್ತಿದ್ರೆ...
ಕಾತೂರು ಅರಣ್ಯದ ಆ ಪ್ರದೇಶದಲ್ಲಿ ಸಿಕ್ಕಿದ್ದು 12 ಬುಡುಚಿಗಳಂತೆ..! ಎಲ್ಲದಕ್ಕೂ FIR ಆಗಿದೆಯಂತೆ, ಹಾಗಿದ್ರೆ ಈ ಪ್ರಶ್ನೆಗಳಿಗೆ ಉತ್ತರಿಸೋರ್ಯಾರು RFO ಸಾಹೇಬ್ರೆ..?
ಮುಂಡಗೋಡ: ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಮರಗಳ ಮಾರಣಹೋಮದ ಸುದ್ದಿ ಪಬ್ಲಿಕ್ ಫಸ್ಟ್ ನಲ್ಲಿ ಬಿತ್ತರಿಸಿದ್ದೇ ತಡ, ಕಾತೂರಿನ RFO ಸಾಹೇಬ್ರು ಉರಿದುಬಿದ್ದಿದ್ದಾರಂತೆ. ಅದೇಲ್ಲ ಬುಡುಚಿಗಳು ಹಳೆಯವು, ಅದರ ಮೇಲೆ ಈಗಾಗಲೇ ಕೇಸು ದಾಖಲಿಸಲಾಗಿದೆ ಅಂತೇಲ್ಲ ಬುಸುಗುಟ್ಟಿದ್ದಾರಂತೆ. ಆದ್ರೆ, ಒಂದು ಮಾತ್ರ ಅರ್ಥವಾಗ್ತಿಲ್ಲ. ಈ ಅರಣ್ಯ ಇಲಾಖೆಯ ಅಧಿಕಾರಿಗಳು ಕೇವಲ ಎಫ್ ಐ ಆರ್ ಗಷ್ಟೇ ಸೀಮಿತವಾಗಿಬಿಟ್ರಾ..? ಅಥವಾ ಅರಣ್ಯದಲ್ಲಿ ರಕ್ಷಣೆಯ ಜವಾಬ್ದಾರಿಯನ್ನೇ ಮರೆತ್ರಾ..? ಈ ಪ್ರಶ್ನೆ ಸದ್ಯ ಪರಿಸರ ಪ್ರಿಯರಿಗೆ ಕಾಡ್ತಿದೆ. 12 FIR ಆಗಿದೆಯಂತೆ..! ನಂಗೆ...
ಕಾತೂರು ಅರಣ್ಯದಲ್ಲಿ ಮರಗಳ ಮಾರಣಹೋಮ, ಕಾಡಲ್ಲಿ ಕಂಡದ್ದು ಸಾಲು ಮರಗಳ ಹೆಣ..! ಅಸಲು, ಅಧಿಕಾರಿಗಳೇ ಇಲ್ಲಿ ಅಕ್ರಮ ದಂಧೆಗೆ ಇಳಿದು ಬಿಟ್ರಾ..?
ಮುಂಡಗೋಡ ತಾಲೂಕಿನ ಅರಣ್ಯ ಇಲಾಖೆಯ ಅಧಿಕಾರಿಗಳು ಅದೇನು ಕಡೆದು ಗುಡ್ಡೆ ಹಾಕ್ತಿದಾರೋ ಗೊತ್ತಿಲ್ಲ. ಇಲ್ಲಿನ ಅರಣ್ಯ ಸಂಪತ್ತು ಹಾಡಹಗಲೇ ಲೂಟಿಯಾಗ್ತಿದೆ. ಅದ್ರಲ್ಲೂ ಕಾತೂರ ಭಾಗದಲ್ಲಿ ನಿತ್ಯವೂ ನೂರಾರು ಮರಗಳು ಉಸಿರು ಚೆಲ್ಲುತ್ತಿವೆ. ಅಸಲು, ಇದೇಲ್ಲ ಖುದ್ದು ಅರಣ್ಯ ಇಲಾಖೆಯ ಕೆಲ ಬ್ರಷ್ಟ ಕಾರಬಾರಿಗಳ ನೆರಳಲ್ಲೇ ನಡೀತಿದೆ ಅನ್ನೋದು ಬಹುದೊಡ್ಡ ದುರಂತ. ಸಾಲು ಸಾಲು ಮಾರಣಹೋಮ..! ನಿಜ ಅಂದ್ರೆ ಕಾತೂರು ಅರಣ್ಯ ವ್ಯಾಪ್ತಿಯ ಹಲವು ಕಡೆಗಳಲ್ಲಿ ಹಾಡಹಗಲೇ ಅಮೂಲ್ಯ ಅರಣ್ಯ ಸಂಪತ್ತು ಕೊಳ್ಳೆ ಹೊಡೆಯಲಾಗ್ತಿದೆ. ಕೋಡಂಬಿ...