Anil Ambani Stocks: ಭಾರತೀಯ ಷೇರುಮಾರುಕಟ್ಟೆ ಸೋಮವಾರ (ಜೂನ್ 2) ವಹಿವಾಟಿನಲ್ಲಿ ತೀವ್ರ ಏರಿಳಿತದ ನಂತರ ರೆಡ್ಮಾರ್ಕ್ನಲ್ಲಿ ವಹಿವಾಟು ಮುಗಿಸಿದೆ. ಸೆನ್ಸೆಕ್ಸ್ 77 ಪಾಯಿಂಟ್ಸ್ ಇಳಿಕೆಯೊಂದಿಗೆ 81,373ರಲ್ಲಿ ಮುಚ್ಚಿದೆ. ನಿಫ್ಟಿ ಕೂಡ 34 ಪಾಯಿಂಟ್ಸ್ ಏರಿಕೆಯೊಂದಿಗೆ 24716ರಲ್ಲಿ ಮುಚ್ಚಿದೆ. ಆದರೆ, ಮಾರುಕಟ್ಟೆ ಕುಸಿತದ ನಡುವೆಯೂ ಪ್ರಮುಖ ಕೈಗಾರಿಕೋದ್ಯಮಿ ಮತ್ತು ಮುಖೇಶ್ ಅಂಬಾನಿ ಅವರ ಸಹೋದರ ಅನಿಲ್ ಅಂಬಾನಿ ಒಡೆತನದ ‘ರಿಲಯನ್ಸ್ ಪವರ್’ ಷೇರುಗಳು ಭರ್ಜರಿ ಜಿಗಿತ ದಾಖಲಿಸಿವೆ. ಸತತ ಮೂರನೇ ಸೆಷನ್ನಲ್ಲೂ ಏರಿಕೆಯ ಟ್ರೆಂಡ್ ಮುಂದುವರಿಸಿದೆ. ಇಂದು ಸೋಮವಾರ ಒಂದು ಹಂತದಲ್ಲಿ ಷೇರುಪೇಟೆಯು ಶೇ.8 ರಷ್ಟು ಏರಿಕೆಯೊಂದಿಗೆ ₹62.80ಕ್ಕೆ ತಲುಪಿತ್ತು. ಇದು ಈ ಷೇರಿನ 52 ವಾರಗಳ ಗರಿಷ್ಠ ಮಟ್ಟವೂ ಆಗಿದೆ. ದಿನದ ಅಂತ್ಯಕ್ಕೆ ಶೇ.5.96ರಷ್ಟು ಏರಿಕೆಯೊಂದಿಗೆ ₹61.56ರಲ್ಲಿ ವಹಿವಾಟು ಮುಗಿಸಿದೆ. ರಿಲಯನ್ಸ್ ಪವರ್ ಷೇರುಗಳು ಕಳೆದ ಒಂದು ವಾರದಲ್ಲಿ ಶೇ.21 ಕ್ಕಿಂತ ಹೆಚ್ಚು ಏರಿಕೆ ದಾಖಲಿಸಿವೆ. ಕಳೆದ ಒಂದು ತಿಂಗಳಲ್ಲಿ ಶೇ.53ರಷ್ಟು ಏರಿಕೆ ದಾಖಲಿಸಿವೆ. ಕಳೆದ ಮೂರು ತಿಂಗಳಲ್ಲಿ ಶೇ.85...
Top Stories
ಬಿಜೆಪಿ ಮುಖಂಡ ಅರುಣಕುಮಾರ ಪುತ್ತಿಲಗೆ ಗಡಿಪಾರು ನೋಟಿಸ್..!
ಪ್ರಚೋದನಕಾರಿ ಭಾಷಣ ಆರೋಪ : ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು..!
ಸ್ಥಿರಗೊಂಡಿದ್ದ ಚಿನ್ನದ ಬೆಲೆ ದಿಢೀರ್ ಜಿಗಿತ : ಸೋಮವಾರ 10 ಗ್ರಾಂ ಬಂಗಾರದ ಬೆಲೆ ₹330 ಏರಿಕೆ..!
ಪ್ರಥಮ ಬಿ.ವಿ.ಎ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ..!
ಎಐ ಕಲಿಯದಿದ್ದರೆ ಇನ್ನು ಮುಂದೆ ಕೆಲಸ ಸಿಗಲ್ಲ, ಎಚ್ಚರ..!
ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ..!
ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ಪಾಸ್ ವಿತರಣೆ ಅರ್ಜಿ ಆಹ್ವಾನ..!
ಕಾವೇರಿ ನೀರು ಕಳ್ಳತನ ಪತ್ತೆಗೆ ಬ್ಲೂ ಪೋರ್ಸ್ ಎಂಬ ಪಡೆ ನೇಮಕ..!
2025ರ ವಿಶ್ವ ಸುಂದರಿ ಪ್ರಶಸ್ತಿ ಗೆದ್ದ ಥೈಲ್ಯಾಂಡ್ ನ ಓಪಲ್ ಸುಚಾಟಾ..!
ಭಾರತದಲ್ಲಿ 3,000 ದಾಟಿದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ; ಒಂದೇ ದಿನದಲ್ಲಿ 685 ಹೊಸ ಸೋಂಕುಗಳು ದಾಖಲು..!
ಮುಂಡಗೋಡ ಸೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ, ಪ್ರಥಮ PUC ದಾಖಲಾತಿ: ಮತ್ತೆ ಅರ್ಜಿ ಆಹ್ವಾನ..!
ದೇಶದಲ್ಲಿ 2,700 ದಾಟಿದ ಕೋವಿಡ್ ಸಕ್ರಿಯ ಪ್ರಕರಣಗಳು; ಪರೀಕ್ಷೆ ಹೆಚ್ಚಳಕ್ಕೆ ಸೂಚನೆ..!
ಉತ್ತರ ಕನ್ನಡ:ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..!
ಉತ್ತರ ಕನ್ನಡ :ತಜ್ಞ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ..!
ಲ್ಯಾಟರಲ್ ಎಂಟ್ರಿ ಮುಖಾಂತರ ನೇರವಾಗಿ 2 ನೇ ವರ್ಷ ಮತ್ತು 3 ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸಗೆ ನೇರ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ..!
ಪರಿಸರ ಜಾಗೃತಿ ಕುರಿತು ಕಾರ್ಯಾಗಾರ..!
ಶಿಗ್ಗಾವಿ: ಬಾಡ ಗ್ರಾಪಂ PDO ಕಚೇರಿ ಮತ್ತು ಮನೆಯ ಮೇಲೆ ಲೋಕಾ ದಾಳಿ..!
ಇದು ಸನ್ಮಾನ್ಯ “PP ರಮೇಶಣ್ಣ”ನ ರಂಬಾ(ಪಾ) ರಾಡಿ..! ಆ ಪಪಂ ದಿನಗೂಲಿ ನೌಕರ ಇಷ್ಟೆಲ್ಲಾ ಮಾಡಿದ್ನಾ..?
ಕರ್ನಾಟಕದ ವಿವಿಧೆಡೆ 7 ಅಧಿಕಾರಿಗಳ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ..!
ಬಿಜೆಪಿ ಮುಖಂಡ ಅರುಣಕುಮಾರ ಪುತ್ತಿಲಗೆ ಗಡಿಪಾರು ನೋಟಿಸ್..!
BJP News: ಮಂಗಳೂರು: ಬಿಜೆಪಿ (BJP) ಮುಖಂಡ ಹಾಗೂ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣಕುಮಾರ ಪುತ್ತಿಲ (Arun Kumar Puthila) ವಿರುದ್ಧ ಗಡೀಪಾರು ನೋಟಿಸ್ (Deportation Notice) ನೀಡಲಾಗಿದೆ. ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ನೀಡಿದ್ದು, ಜೂನ್ ೬ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಪೊಲೀಸರು ಮತ್ತು ಗೃಹ ಇಲಾಖೆಯ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿ, ಗೃಹ ಸಚಿವ ಡಾ. ಜಿ ಪರಮೇಶ್ವರ ಹಾಗೂ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಬದಲಾವಣೆಗೆ ಆಗ್ರಹಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಕರ್ನಾಟಕ ಪೊಲೀಸು ಅಧಿನಿಯಮ, 1963 ಕಲಂ: 58 ರಡಿ ಗಡೀಪಾರು ನೋಟೀಸ್ ಜಾರಿ ಮಾಡಲಾಗಿದೆ. ಇದನ್ನೂ ಓದಿ👉ಪ್ರಚೋದನಕಾರಿ ಭಾಷಣ ಆರೋಪ : ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು..! ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕೃಷ್ಣಯ್ಯ ಎಂಬವರ ಮಗ ಅರುಣಕುಮಾರ ಪುತ್ತಿಲ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 55 ರಂತೆ ದಕ್ಷಿಣ...
ಪ್ರಚೋದನಕಾರಿ ಭಾಷಣ ಆರೋಪ : ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು..!
Crime News: ಮಂಗಳೂರು : ಬಜ್ಜೆಯಲ್ಲಿ ಹತ್ಯೆಯಾದ ಸುಹಾಸ ಶೆಟ್ಟಿಯ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆರ್.ಎಸ್.ಎಸ್. ಪ್ರಮುಖ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ 12ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕಾವಳಪಡೂರು ಗ್ರಾಮದ ಮಧ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಹಾಸ ಶೆಟ್ಟಿ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದ್ದಾರೆನ್ನಲಾದ ವಿಚಾರಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ. ಡಾ.ಕಲ್ಲಡ್ಕ ಪ್ರಭಾಕರ ಭಟ್ ಜನರನ್ನುದ್ದೇಶಿಸಿ ಭಾಷಣ ಮಾಡುವ ವೇಳೆ, ಸಮಾಜದ ಸ್ವಾಸ್ಥ್ಯ ಕೆಡುವಂತೆ, ಮತಿಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ವಿರುದ್ಧ ಕಲಂ: 353(2) ಬಿಎನ್ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ....
ಸ್ಥಿರಗೊಂಡಿದ್ದ ಚಿನ್ನದ ಬೆಲೆ ದಿಢೀರ್ ಜಿಗಿತ : ಸೋಮವಾರ 10 ಗ್ರಾಂ ಬಂಗಾರದ ಬೆಲೆ ₹330 ಏರಿಕೆ..!
Gold & Silver Prices Today: ದೇಶೀಯ ಮಾರುಕಟ್ಟೆಯಲ್ಲಿ ಜೂನ್ 02ರಂದು ಚಿನ್ನದ ಬೆಲೆಯು ಏರಿಕೆಗೆ ಸಾಕ್ಷಿಯಾಗಿದ್ದು, ವೀಕೆಂಡ್ ಬ್ರೇಕ್ ಬಳಿಕ ಬಂಗಾರದ ಬೆಲೆಯು ದಿಢೀರ್ ಜಿಗಿದಿದೆ. ಶುಕ್ರವಾರ 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 270 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನ 250 ರೂಪಾಯಿ ಹೆಚ್ಚಾಗಿತ್ತು. ಆದ್ರೆ ನಂತರದಲ್ಲಿ ಎರಡು ವಹಿವಾಟುಗಳಲ್ಲಿ ಶನಿವಾರ ಹಾಗೂ ಭಾನುವಾರ ಬೆಲೆ ಸ್ಥಿರಗೊಂಡಿದ್ದು, ಇದೀಗ ಹಳದಿ ಲೋಹದ ಬೆಲೆ ದಿಢೀರ್ ಹೆಚ್ಚಾಗಿದೆ. ಬೆಳ್ಳಿ ಬೆಲೆ ಸಹ ಚಿನ್ನದ ಜೊತೆಗ ಏರಿಕೆಗೊಂಡಿದೆ. ಜಾಗತಿಕ ಮಟ್ಟದಲ್ಲಿ ದುರ್ಬಲ ಸೂಚನೆಗಳ ಜೊತೆಗೆ ಅನಿಶ್ಚಿತತೆ ತಲೆದೂರಿದ್ದು, ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸ ತೆರಿಗೆ ನೀತಿಗಳು, ಅಮೆರಿಕಾ ಹಾಗೂ ಚೀನಾ ನಡುವಿನ ಟ್ರೇಡ್ ವಾರ್ ಮತ್ತೆ ಮುಂದುವರೆದಿರುವುದು ಹೂಡಿಕೆದಾರರಲ್ಲಿ ಕಳವಳ ಮೂಡಿಸಿದ್ದು, ಸುರಕ್ಷಿತ ಹೂಡಿಕೆಯಾದ ಚಿನ್ನದ ಮೇಲೆ ಮತ್ತೆ ಹೂಡಿಕೆ ಮಾಡಲು ಯತ್ನಿಸಿದ್ದಾರೆ. ಮತ್ತೊಂದೆಡೆ ಭಾರತೀಯ ಷೇರುಪೇಟೆ ಸೋಮವಾರ ಕುಸಿತಕ್ಕೆ ಸಾಕ್ಷಿಯಾಗಿದೆ. ಬೆಲೆ ಮೇಲೆ ಪರಿಣಾಮ ಬೀರುವ ಅಂಶಗಳು!...
ಪ್ರಥಮ ಬಿ.ವಿ.ಎ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ..!
Education News: ಕಾರವಾರ: ಮೈಸೂರು ವಿಶ್ವ ವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು(ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್(ಬಿ.ವಿ.ಎ) (ನಾಲ್ಕು ವರ್ಷದ ಎಂಟು ಸೆಮಿಸ್ಟರ್ಗಳ ಎಸ್.ಇ.ಪಿ. ಪದ್ದತಿ) ದೃಶ್ಯಕಲೆಯಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿ.ವಿ.ಎ ಪದವಿ ಪ್ರವೇಶಾತಿಗಾಗಿ ದ್ವೀತಿಯ ಪಿ.ಯು.ಸಿ ಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್ಲೈನ್(UUCMS) ಅರ್ಜಿ ಸಲ್ಲಿಸಲು ಜೂ.10 ಕೊನೆಯ ದಿನವಾಗಿದೆ. ಸದರಿ ಪದವಿಯಲ್ಲಿ 3ನೇ ಸೆಮಿಸ್ಟರ್ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ( ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗ ಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ. ಇದನ್ನೂ ಓದಿ👉ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ..! ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ htts://uucms.Karnataka.gov.in ಅಥವಾ https://www.cavamysore.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು. ಇದನ್ನೂ ಓದಿ👉ವಿದ್ಯಾರ್ಥಿಗಳಿಗೆ ರಿಯಾಯಿತಿ...
ಎಐ ಕಲಿಯದಿದ್ದರೆ ಇನ್ನು ಮುಂದೆ ಕೆಲಸ ಸಿಗಲ್ಲ, ಎಚ್ಚರ..!
Job News: ನವದೆಹಲಿ: ಕೃತಕ ಬುದ್ಧಿಮತ್ತೆ (ಎಐ) ಭವಿಷ್ಯದಲ್ಲಿ ಜನರ ಉದ್ಯೋಗ ಅದರಲ್ಲೂ ಐಟಿ ಸೇರಿದಂತೆ ಟೆಕ್ ವಲಯದ ಉದ್ಯೋಗ ಕಸಿಯಲಿದೆ ಎಂಬ ಮಾತು ಬಹಳ ದಿನಗಳಿಂದ ಕೇಳಿಬರುತ್ತಿತ್ತು. ಆದರೆ ಎಐ ಎನ್ನುವುದು ಭವಿಷ್ಯವಲ್ಲ, ಅದು ವರ್ತಮಾನ. ನೀವು ಎಐ ಕಲಿಯದೇ ಇದ್ದಲ್ಲಿ ಇನ್ನು ಮುಂದೆ ನೀವು ಬಯಸಿದ ಕೆಲಸ ಸಿಗೋದು ಕಷ್ಟ ಎಂದು ಸ್ವತಃ ಗೂಗಲ್ನ ಕೃತಕ ಬುದ್ಧಿಮತ್ತೆ ಬೆಳವಣಿಗೆಗಳ ಹಿಂದಿನ ಸಂಶೋಧನಾ ಪ್ರಯೋಗಾಲಯ ‘ಡೀಪ್ಮೈಂಡ್’ನ ಸಿಇಒ ಡೆಮಿಸ್ ಹಸ್ಸಾಬಿಸ್ ಯುವ ಸಮೂಹವನ್ನು ಎಚ್ಚರಿಸಿದ್ದಾರೆ. ಇಂದು ಕೃತಕ ಬುದ್ಧಿಮತ್ತೆ(ಎಐ) ಹೊಸ ತಂತ್ರಜ್ಞಾನವಾಗಿ ಉಳಿದಿಲ್ಲ. ಬಹುತೇಕ ಎಲ್ಲಾ ಕ್ಷೇತ್ರಗಳನ್ನೂ ಆವರಿಸಿರುವ ಅದು, ಉದ್ಯೋಗಗಳನ್ನು ನುಂಗಲು ಕಚೇರಿಗಳೆದುರು ಬಾಯ್ತೆರೆದು ನಿಂತಾಗಿದೆ ಹಾಗೂ ಈಗಾಗಲೇ ಹಲವರ ಕೆಲಸವನ್ನು ಆಪೋಶನ ತೆಗೆದುಕೊಂಡು ಆತಂಕ ಸೃಷ್ಟಿಸಿದೆ. ಇದು ಆರಂಭವಷ್ಟೇ. ಕೆಲ ವರ್ಷಗಳಲ್ಲಿ ಎಐ ಯುಗವೇ ನಮ್ಮೆದುರು ತೆರೆದುಕೊಳ್ಳಲಿದೆ. ಇದಕ್ಕಾಗಿ ಡಬಲ್ ಡಿಗ್ರಿ ಪಡೆದು ಕುಳಿತರೂ ಸಾಲದು. ಉದ್ಯೋಗಿಗಳು, ಉದ್ಯೋಗಾಕಾಂಕ್ಷಿಗಳೆಲ್ಲರೂ ತಂತ್ರಜ್ಞಾನದೊಂದಿಗೆ ಹೆಜ್ಜೆ ಹಾಕುತ್ತ, ಹೊಸಹೊಸ ಆವಿಷ್ಕಾರಗಳಿಗೆ ಒಡ್ಡಿಕೊಂಡು...
ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ..!
Drawing competition ಕಾರವಾರ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಛೇರಿ ಕಾರವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾರವಾರ ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಉತ್ತರ ಕನ್ನಡ ಜಿಲ್ಲೆಯ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ವರ್ಧೆಯನ್ನು ಆಯೋಜಿಸಲಾಗಿದೆ. ಜೂ.4 ರಂದು ಬೆಳಗ್ಗೆ 11 ಗಂಟೆಗೆ ಹಾಗೂ ಜೂ.5 ರಂದು ಬೆಳಗ್ಗೆ 10 ಗಂಟೆಗೆ ವನಮಹೋತ್ಸವ, ಉಪನ್ಯಾಸ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಕಾರವಾರದ ಹಿಂದೂ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರಾಮಾನಿ ಮಂಡಳಿಯ ಪರಿಸರ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ಪಾಸ್ ವಿತರಣೆ ಅರ್ಜಿ ಆಹ್ವಾನ..!
Student Bus Pass ಕಾರವಾರ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಉತ್ತರ ಕನ್ನಡ ವಿಭಾಗದಿಂದ 2025-26 ನೇ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್ ಪಾಸ್ ವಿತರಣೆ ಪ್ರಾರಂಭವಾಗಿದ್ದು, ವಿದ್ಯಾರ್ಥಿ ಬಸ್ ಪಾಸ್ ವಿತರಣೆಯನ್ನು ಸಂರ್ಪೂಣವಾಗಿ ಗಣಕೀತೃತಗೊಳಿಸಿರುವುದರಿಂದ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಆನ್ಲೆನ್ ಕೆ-1, ಜಿ-1 ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯ ಒದಗಿಸಿರುವ SATS/PUE/UUCMS ಸಂಖ್ಯೆಯನ್ನು ಹೊಂದಿರುವ ವಿದ್ಯಾರ್ಥಿಗಳು ಸದರಿ ಸಂಖ್ಯೆಯನ್ನು ನಮೂದಿಸಿ ಪ್ರಯಾಣ ಮಾರ್ಗ ಮತ್ತು ಕೆ-1 ಕೇಂದ್ರವನ್ನು ಭರ್ತಿಮಾಡಿ ಅರ್ಜಿ ಸಲ್ಲಿಸುವುದು. ಇದನ್ನೂ ಓದಿ👉ಕಾವೇರಿ ನೀರು ಕಳ್ಳತನ ಪತ್ತೆಗೆ ಬ್ಲೂ ಪೋರ್ಸ್ ಎಂಬ ಪಡೆ ನೇಮಕ..! SATS/PUE/UUCMS ಸಂಖ್ಯೆ ಹೊಂದಿರದ, ವಿದ್ಯಾರ್ಥಿಗಳು JPG/JPEG ಮಾದರಿಯಲ್ಲಿ ವಿದ್ಯಾ ಸಂಸ್ಥೆಯಲ್ಲಿ ಅಭ್ಯಸಿಸುತ್ತಿರುವ ಬಗ್ಗೆ ನಿಗದಿತ ನಮೂನೆಯಲ್ಲಿ ದೃಢೀಕರಣ, ಭಾವಚಿತ್ರ ಮತ್ತು ವಿದ್ಯಾಸಂಸ್ಥೆಯಲ್ಲಿ ಶುಲ್ಕ ಪಾವತಿಸದ ರಶೀದಿ ಪ್ರತಿಗಳನ್ನು ಅಪಲೋಡ್ ಮಾಡಿ ಪ್ರಯಾಣ ಮಾರ್ಗ ಮತ್ತು ಕೆ-1 ಕೇಂದ್ರವನ್ನು ಆಯ್ಕೆ ಮಾಡಿ ಅರ್ಜಿ ಸಲ್ಲಿಸುವುದು....
ಕಾವೇರಿ ನೀರು ಕಳ್ಳತನ ಪತ್ತೆಗೆ ಬ್ಲೂ ಪೋರ್ಸ್ ಎಂಬ ಪಡೆ ನೇಮಕ..!
Kaveri River News: ಬೆಂಗಳೂರು : ಕಾವೇರಿ ನೀರಿನ ಕಳ್ಳತನ, ಅನಧಿಕೃತವಾಗಿ ಕೊಳಚೆ ಹಾಗೂ ಮಳೆ ನೀರನ್ನು ಚರಂಡಿ (ಸ್ಯಾನಿಟರಿ) ಕೊಳವೆಗೆ ಹರಿಸುವವರನ್ನು ಪತ್ತೆಹಚ್ಚಲು ಬೆಂಗಳೂರು ಜಲಮಂಡಳಿಯು ‘ಬ್ಲೂ ಫೋರ್ಸ್’ ಎಂಬ ಪಡೆ ಕಟ್ಟುತ್ತಿದೆ. ಕಾವೇರಿ 5ನೇ ಹಂತ ಸೇರಿದಂತೆ ಪ್ರತಿದಿನ ನಗರಕ್ಕೆ 2,225 ಎಂಎಲ್ಡಿ ಕಾವೇರಿ ನೀರನ್ನು ಪೂರೈಕೆ ಮಾಡುತ್ತಿದ್ದು, ಸುಮಾರು 11 ಲಕ್ಷಕ್ಕೂ ಅಧಿಕ ನೀರು ಪೂರೈಕೆಯ ಅಧಿಕೃತ ಸಂಪರ್ಕ ಹೊಂದಿದೆ. ಆದರೆ, ಕಾವೇರಿ ನೀರಿನ ಕಳ್ಳತನ, ತ್ಯಾಜ್ಯ ನೀರನ್ನು ಅನಧಿಕೃತವಾಗಿ ಸ್ಯಾನಿಟರಿ ಕೊಳವೆಗೆ ಹರಿಸುತ್ತಿರುವುದರಿಂದ ಬೆಂಗಳೂರು ಜಲಮಂಡಳಿಯು ಮಾಸಿಕ ಕೋಟ್ಯಾಂತರ ರು. ನಷ್ಟ ಅನುಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಜಲಮಂಡಳಿಯು ಬ್ಲೂ ಪೋರ್ಸ್ ಎಂಬ ಪಡೆ ಸ್ಥಾಪಿಸುವುದಕ್ಕೆ ತಯಾರಿ ಮಾಡಿಕೊಂಡಿದೆ. ಹೇಗೆ ಇರುತ್ತೆ ಈ ಬ್ಲೂಫೋರ್ಸ್?: ಬೆಂಗಳೂರು ಜಲಮಂಡಳಿಯಲ್ಲಿ 43 ಉಪ ವಿಭಾಗಗಳಿದ್ದು, ಉಪ ವಿಭಾಗದ ಮಟ್ಟದಲ್ಲಿ ತಲಾ ಒಂದು ಬ್ಲೂ ಪೋರ್ಸ್ ರಚನೆ ಮಾಡಲಾಗುತ್ತಿದೆ. ಪ್ರತಿ ತಂಡದಲ್ಲಿ ತಲಾ ಒಬ್ಬ ಮಾಜಿ ಸೈನಿಕ, ಅವರೊಂದಿಗೆ ಜಲಮಂಡಳಿಯ...
2025ರ ವಿಶ್ವ ಸುಂದರಿ ಪ್ರಶಸ್ತಿ ಗೆದ್ದ ಥೈಲ್ಯಾಂಡ್ ನ ಓಪಲ್ ಸುಚಾಟಾ..!
Miss World: ಹೈದರಾಬಾದ್ : ತೆಲಂಗಾಣದ ಹೈದರಾಬಾದ್ನಲ್ಲಿ ನಡೆದ ಸಮಾರಂಭದಲ್ಲಿ, ಥೈಲ್ಯಾಂಡ್ನ ಓಪಲ್ ಸುಚಾಟಾ 2025 ರ ಮಿಸ್ ವರ್ಲ್ಡ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. 72 ನೇ ಆವೃತ್ತಿಯ ಮಿಸ್ ವರ್ಲ್ಡ್ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆಯಲ್ಲಿ ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಜ್ಕೋವಾ ತಮ್ಮ ಕಿರೀಟವನ್ನು ಹೊಸ ಪ್ರಶಸ್ತಿ ವಿಜೇತರಿಗೆ ಹಸ್ತಾಂತರಿಸಿದರು. ಇಥಿಯೋಪಿಯಾದ ಹ್ಯಾಸೆಟ್ ಡೆರೆಜೆ ಮೊದಲ ರನ್ನರ್ಅಪ್ ಆದರೆ, 2ನೇ ರನ್ನರ್ ಅಪ್ ಆಗಿ ಪೋಲೆಂಡ್ನ ಮಜಾ ಕ್ಲಾಜ್ಡಾ ಹೊರಹೊಮ್ಮಿದರು. ಓಪಲ್ ಅವರು ಮಿಸ್ ವರ್ಲ್ಡ್ ಕಿರೀಟವನ್ನು ಗೆದ್ದಿದ್ದಕ್ಕೆ ಥೈಲ್ಯಾಂಡ್ ಸಂತೋಷಪಡುತ್ತಿದ್ದರೆ, ಭಾರತದ ಪ್ರತಿನಿಧಿ ನಂದಿನಿ ಗುಪ್ತಾ ಟಾಪ್ 8 ಫೈನಲಿಸ್ಟ್ಗಳಲ್ಲಿ ಸ್ಥಾನ ಪಡೆಯಲು ವಿಫಲರಾದರು. ಈ ವರ್ಷ, ಪ್ರಪಂಚದಾದ್ಯಂತದ 108 ಸ್ಪರ್ಧಿಗಳು ಪ್ರತಿಷ್ಠಿತ ಸೌಂದರ್ಯ ಸ್ಪರ್ಧೆಯಲ್ಲಿ ಸ್ಪರ್ಧಿಸಿದ್ದರು, ಮತ್ತು ವಿಜೇತರಿಗೆ 2024 ರ ವಿಶ್ವ ಸುಂದರಿ ಕ್ರಿಸ್ಟಿನಾ ಪಿಸ್ಜ್ಕೋವಾ ಕಿರೀಟವನ್ನು ಧರಿಸಿದರು. ವಿಶ್ವ ಸುಂದರಿ ಕಿರೀಟ ಸುಮಾರು 8 ಕೋಟಿ ರೂ. ಬೆಳೆ ಬಾಳುತ್ತದೆ. ವಿಶೇಷ ಎಂದರೆ ಭಾರತ ಇದು 3ನೇ...