Terrorist Arrest News:ಭಾರತೀಯ ಗುಪ್ತಚರ ಸಂಸ್ಥೆಗಳು ಪಾಕಿಸ್ತಾನದ ಐಎಸ್ಐ ಜೊತೆ ಸಂಪರ್ಕ ಹೊಂದಿರುವ ಬೇಹುಗಾರಿಕೆ ಜಾಲವನ್ನು ಭೇದಿಸಿವೆ, ಇದರಿಂದಾಗಿ ದೆಹಲಿಯನ್ನು ಗುರಿಯಾಗಿಸಿಕೊಂಡು ನಡೆಸಲು ಉದ್ದೇಶಿಸಲಾಗಿದ್ದ ಭಯೋತ್ಪಾದಕ ಸಂಚನ್ನು ವಿಫಲಗೊಳಿಸಲಾಗಿದೆ. ಮೂರು ತಿಂಗಳ ಕಾಲ ನಡೆದ ಈ ಕಾರ್ಯಾಚರಣೆಯಲ್ಲಿ ದೇಶದಲ್ಲಿ ಹುದುಗಿರುವ ಪಾಕಿಸ್ತಾನಿ ಗೂಢಚಾರ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಬಹಳ ಹಿಂದೆಯೇ, ಪಾಕಿಸ್ತಾನಿ ಗುಪ್ತಚರ ಸಂಸ್ಥೆ ಐಎಸ್ಐ ಮತ್ತೊಂದು ಪ್ರಮುಖ ಭಯೋತ್ಪಾದಕ ದಾಳಿಯನ್ನು ಯೋಜಿಸಿತ್ತು. ಕೇಂದ್ರೀಯ ಸಂಸ್ಥೆಗಳು ಪಾಕಿಸ್ತಾನದ ದೆಹಲಿ ಮೂಲದ ಗುಪ್ತಚರ ಸಂಸ್ಥೆ ಐಎಸ್ಐನ ಸ್ಲೀಪರ್ ಸೆಲ್ ಜಾಲವನ್ನು ಭೇದಿಸಿವೆ. 3 ತಿಂಗಳಿಗಿಂತ ಹೆಚ್ಚು ಕಾಲ ನಡೆದ ಈ ಕಾರ್ಯಾಚರಣೆಯ ನಂತರ, ಏಜೆನ್ಸಿಗಳು ನೇಪಾಳಿ ಮೂಲದ ಐಎಸ್ಐ ಏಜೆಂಟ್ನನ್ನು ದೆಹಲಿಯಿಂದ ಬಂಧಿಸಿವೆ. ಆರೋಪಿಯಿಂದ ಭಾರತೀಯ ಸೇನೆ ಮತ್ತು ಸಶಸ್ತ್ರ ಪಡೆಗಳಿಗೆ ಸಂಬಂಧಿಸಿದ ಹಲವು ದಾಖಲೆಗಳನ್ನು ಕೇಂದ್ರೀಯ ಸಂಸ್ಥೆ ವಶಪಡಿಸಿಕೊಂಡಿದೆ. ದೆಹಲಿ ವಿಮಾನ ನಿಲ್ದಾಣದಿಂದ ಪಾಕಿಸ್ತಾನಕ್ಕೆ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದಾಗ ಈತ ಸಿಕ್ಕಿಬಿದ್ದಿದ್ದಾನೆ. ನೇಪಾಳ ಮೂಲದ...
Top Stories
ಸತತ 2ನೇ ದಿನವೂ ಚಿನ್ನದ ಬೆಲೆ ಏರಿಕೆ, ಬೆಳ್ಳಿ ₹4000 ಹೆಚ್ಚಳ, ಅಷ್ಟಕ್ಕೂ ಇವತ್ತಿನ ಚಿನ್ನದ ಬೆಲೆ ಎಷ್ಟು..?
ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ ಬಂಧನ ; ಈತನ ಮೇಲಿದೆ 27 ಕೊಲೆ ಪ್ರಕರಣ..!
ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಭಟ, ಇದು, ತಹಶೀಲ್ದಾರ ಕಚೇರಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆಯ ಪ್ರಕಟಣೆ..!
ಉಕ್ಕಿ ಹರಿಯುತ್ತಿದೆ ಉಣಕಲ್ ಕೆರೆ: ವರುಣನ ಅಬ್ಬರಕ್ಕೆ ಮೈತುಂಬಿದ ಪ್ರತಿಷ್ಠಿತ ತಾಣ..!
ಬಿರುಗಾಳಿ-ಆಲಿಕಲ್ಲು ಮಳೆಯ ಹೊಡೆತಕ್ಕೆ ಇಂಡಿಗೋ ವಿಮಾನಕ್ಕೆ ಹಾನಿ ; ಕಿರುಚಿಕೊಂಡ ಪ್ರಯಾಣಿಕರು..!
ಪಾಕ್ ಹೈಕಮಿಷನ್ ನ ಮತ್ತೊಬ್ಬ ಅಧಿಕಾರಿಗೆ 24 ಗಂಟೆಯೊಳಗೆ ಭಾರತ ತೊರೆಯಲು ಆದೇಶ..!
CDPO ಆಫೀಸಲ್ಲಿ ಬ್ರಷ್ಟಾಚಾರ, ಲಂಚ ಪಡೆಯುವಾಗಲೇ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು, ಇಬ್ಬರು ಬಲೆಗೆ..!
ಕೊನೆಗೂ ಈಡೇರಲೇ ಇಲ್ಲ RCB ಫ್ಯಾನ್ಸ್ಗಳ ಆ ಕನಸು; ಎಲ್ಲೆಡೆ ಬೇಸರ..!
ಪಾಕಿಸ್ತಾನಿಯ ಜೊತೆ ನನ್ನ ಮದುವೆ ಮಾಡಿಸಿ, ಪಾಕ್ ಅಧಕಾರಿಯೊಂದಿಗೆ ಜ್ಯೋತಿ ಮಲ್ಹೊತ್ರಾ ವಾಟ್ಸಾಪ್ ಚಾಟಿಂಗ್..!
ಅಮೆರಿಕದ ಯಹೂದಿ ವಸ್ತುಸಂಗ್ರಹಾಲಯದ ಬಳಿ ಫೈರಿಂಗ್; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಹತ್ಯೆ
ಗುರುವಾರ ಕುಸಿತದಿಂದ ಪ್ರಾರಂಭವಾದ ಷೇರು ಮಾರುಕಟ್ಟೆ : ಸೆನ್ಸೆಕ್ಸ್ 850 ಪಾಯಿಂಟ್ಸ್ ನಷ್ಟ..!
ಉತ್ತರ ಕನ್ನಡ ಸೇರಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ ಎಚ್ಚರಿಕೆ..!
Death News :ಸೂಟ್ಕೇಸ್ ನಲ್ಲಿ ಹುಡುಗಿಯ ಶವ ಪತ್ತೆ, ಚಲಿಸುತ್ತಿರುವ ರೈಲಿನಿಂದ ಎಸೆದಿರುವ ಶಂಕೆ..!
Police News:ರಾಜ್ಯದ ಪ್ರಭಾರ ಡಿಜಿ-ಐಜಿಪಿಯಾಗಿ ಡಾ.ಎಂ.ಎ. ಸಲೀಂ ನೇಮಕ..!
Naxalar Encounter News:ನಕ್ಸಲ್ ಕಮಾಂಡರ್ ಸೇರಿದಂತೆ 26 ಮಂದಿ ನಕ್ಸಲರನ್ನು ಎನ್ಕೌಂಟರಿನಲ್ಲಿ ಹೊಡೆದುರುಳಿಸಿದ ಭದ್ರತಾ ಪಡೆಗಳು..!
ED Raid News:ಗೃಹ ಸಚಿವ ಜಿ.ಪರಮೇಶ್ವರ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ’ ಮೇಲೆ ಇಡಿ ದಾಳಿ..!
Business News :2024ರಲ್ಲಿ ಸತ್ಯ ನಾಡೆಲ್ಲಾ, ಪಿಚೈ ಹಿಂದಿಕ್ಕಿ ದಾಖಲೆಯ 1,157 ಕೋಟಿ ರೂ. ಪಡೆದ ಭಾರತೀಯ ಮೂಲದ ಟೆಸ್ಲಾ ಕಾರ್ಯನಿರ್ವಾಹಕ ಅಧಿಕಾರಿ..!
Achievement News: ಕನ್ನಡದ ಲೇಖಕಿ ಬಾನು ಮುಷ್ತಾಕ್ಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಘೋಷಣೆ..!
Police Death News:ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಚರಂಡಿಗೆ ಉರುಳಿ ಬಿದ್ದ ಬಸ್ ; ಪೊಲೀಸ್ ಅಧಿಕಾರಿ ಸಾವು..!
ಸತತ 2ನೇ ದಿನವೂ ಚಿನ್ನದ ಬೆಲೆ ಏರಿಕೆ, ಬೆಳ್ಳಿ ₹4000 ಹೆಚ್ಚಳ, ಅಷ್ಟಕ್ಕೂ ಇವತ್ತಿನ ಚಿನ್ನದ ಬೆಲೆ ಎಷ್ಟು..?
Gold Price Today; ಆಭರಣ ಪ್ರಿಯರಿಗೆ ಮತ್ತೊಮ್ಮೆ ಬಿಗ್ ಶಾಕ್ ತಟ್ಟಿದೆ. ಇತ್ತೀಚೆಗೆ ಸ್ವಲ್ಪ ಇಳಿಕೆಯಾಗಿದ್ದ ಚಿನ್ನದ ಬೆಲೆ ಮತ್ತೆ ಏರಿಕೆಯ ಹಾದಿ ಹಿಡಿದಿದೆ. ಸತತ 2ನೇ ದಿನವೂ ಚಿನ್ನದ ಬೆಲೆ ಏರಿಕೆ ಕಂಡಿದೆ. ಬೆಳ್ಳಿ ಬೆಲೆ ಕೂಡ ಎರಡೇ ದಿನದಲ್ಲಿ ₹4000 ಏರಿಕೆಯಾಗಿದೆ. ಪ್ರಸ್ತುತ ದೇಶೀಯ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಕಳೆದ ವಾರದಲ್ಲಿ ಚಿನ್ನದ ಬೆಲೆ ಸ್ವಲ್ಪ ಏರಿಳಿತದಿಂದ ಕೂಡಿತ್ತು. ಒಂದು ಹಂತದಲ್ಲಿ ಇದು ತನ್ನ ಗರಿಷ್ಠ ಮಟ್ಟದಿಂದ ₹7000 ಇಳಿಕೆ ಕಂಡಿತ್ತು. ಆದರೆ, ಕಳೆದ ಎರಡು ದಿನಗಳಿಂದ ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದ್ದು, ಮತ್ತೆ ಸಾರ್ವಕಾಲಿಕ ಗರಿಷ್ಠ ಮಟ್ಟ ಸಮೀಪಿಸಿದೆ. ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ ಬಂಧನ ; ಈತನ ಮೇಲಿದೆ 27 ಕೊಲೆ ಪ್ರಕರಣ..! ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಇನ್ನೂ ಮುಂದುವರಿದಿದೆ. ಡಾಲರ್ ಮೌಲ್ಯ ಕಡಿಮೆಯಾಗುತ್ತಿದೆ, ರಷ್ಯಾ-ಉಕ್ರೇನ್ ಉದ್ವಿಗ್ನತೆ ಹೆಚ್ಚುತ್ತಿದೆ.ಇದಷ್ಟೇ ಅಲ್ಲದೆ...
ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ ಬಂಧನ ; ಈತನ ಮೇಲಿದೆ 27 ಕೊಲೆ ಪ್ರಕರಣ..!
Doctor Death News: ಸರಣಿ ಕೊಲೆಗಳನ್ನು ಮಾಡಿ ಪೊಲೀಸರಿಗೆ ತನ್ನ ಸುಳಿವು ಸಿಗಬಾರದು ಎಂದು ಆ ಶವದ ತುಂಡುಗಳನ್ನು ಮೊಸಳೆಗೆ ಆಹಾರವಾಗಿ ಹಾಕುತ್ತಿದ್ದ ಸೀರಿಯಲ್ ಕಿಲ್ಲರ್ ಕುಖ್ಯಾತ ಆಯುರ್ವೇದ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. 67 ವರ್ಷದ ದೇವೇಂದರ ಶರ್ಮಾ ಬಹು ಕೊಲೆ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಪೆರೋಲ್ ನಿಂದ ತಪ್ಪಿಸಿಕೊಂಡಿದ್ದ ಹಾಗೂ “ಡಾಕ್ಟರ್ ಡೆತ್” ಎಂದು ಕುಖ್ಯಾತಿ ಪಡೆದಿದ್ದ ರಾಜಸ್ಥಾನದ ಈ ವೈದ್ಯ ದೆಹಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸತತ 2ನೇ ದಿನವೂ ಚಿನ್ನದ ಬೆಲೆ ಏರಿಕೆ, ಬೆಳ್ಳಿ ₹4000 ಹೆಚ್ಚಳ, ಅಷ್ಟಕ್ಕೂ ಇವತ್ತಿನ ಚಿನ್ನದ ಬೆಲೆ ಎಷ್ಟು..? ಈತ ಕಳೆದ ವರ್ಷ ಪೆರೋಲ್ ಪಡೆದ ನಂತರ ತಲೆಮರೆಸಿಕೊಂಡಿದ್ದ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪರಾಧಿ ರಾಜಸ್ಥಾನದ ದೌಸಾದಲ್ಲಿರುವ ಆಶ್ರಮದಲ್ಲಿ ನಕಲಿ ಹೆಸರಿನಲ್ಲಿ ಅರ್ಚಕನಂತೆ ನಟಿಸುತ್ತಿದ್ದ ಈತನನ್ನು ಸೋಮವಾರ ಬಂಧಿಸಲಾಯಿತು ಎಂದು ಅಧಿಕಾರಿ ಹೇಳಿದ್ದಾರೆ. ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ...
ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಭಟ, ಇದು, ತಹಶೀಲ್ದಾರ ಕಚೇರಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆಯ ಪ್ರಕಟಣೆ..!
Mundgod Rain Warning Issued: ಮುಂಡಗೋಡ ತಾಲೂಕಿನಲ್ಲಿ ಅಧಿಕ ಮಳೆ ಆಗುತ್ತಿದೆ. ಹಳ್ಳ-ಕೊಳ್ಳಗಳು, ಕೆರೆಗಳು, ಜಲಾಶಯಗಳಲ್ಲಿ ನೀರು ತುಂಬಿಕೊಳ್ಳುತ್ತಿದೆ, ಸಾರ್ವಜನಿಕರು ನೀರಿನ ಮೂಲಗಳ ಸಮೀಪ ಹೋಗಬಾರದು. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಅನಾಹುತ ಆಗುವ ಸಾಧ್ಯತೆಯಿದ್ದು, ಈ ಬಗ್ಗೆ ಎಚ್ಚರ ವಹಿಸಬೇಕು ಅಂತಾ ಮುಂಡಗೋಡ ತಹಶೀಲ್ದಾರ್ ಕಾರ್ಯಾಲಯದಿಂದ ಪ್ರಕಟಣೆ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಇನ್ನು, ಮಳೆಗೆ ಸಂಬಂಧಿತ ಯಾವುದೇ ಸಮಸ್ಯೆ, ಅವಘಡಗಳ ಪರಿಹಾರಕ್ಕೆ ಮುಂಡಗೋಡ ತಹಶೀಲ್ದಾರ್ ಕಾರ್ಯಾಲಯದಲ್ಲಿ 24×7 ಕಾರ್ಯನಿರ್ವಹಿಸುವ ಕಂಟ್ರೋಲ್ ರೂಮ್ ತೆರೆಯಲಾಗಿದ್ದು, ಅದರ ದೂರವಾಣಿ ಸಂಖ್ಯೆ: 08301-222122 ಆಗಿರುತ್ತದೆ. ಸದರಿ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಸಾರ್ವಜನಿಕರು ಪ್ರಕೃತಿ ವಿಕೋಪ ಸಂಬಂಧಿತ ಸಮಸ್ಯೆಗಳನ್ನು,ದೂರುಗಳನ್ನು ಗಮನಕ್ಕೆ ತರಬಹುದಾಗಿದೆ. ತಮ್ಮ ಸಮಸ್ಯೆ, ದೂರುಗಳಿಗೆ ತಕ್ಷಣ ಸ್ಪಂದಿಸಲಾಗುವುದು ಅಂತಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಉಕ್ಕಿ ಹರಿಯುತ್ತಿದೆ ಉಣಕಲ್ ಕೆರೆ: ವರುಣನ ಅಬ್ಬರಕ್ಕೆ ಮೈತುಂಬಿದ ಪ್ರತಿಷ್ಠಿತ ತಾಣ..!
Hubli Good News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಎಲ್ಲೆಡೆಯೂ ನಿರಂತರ ಮಳೆಯಾಗುತ್ತಿದ್ದು, ಬಹುತೇಕ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಹುಬ್ಬಳ್ಳಿಯ ಪ್ರತಿಷ್ಠಿತ ಉಣಕಲ್ ಕೆರೆಯು ಕೋಡಿ ಹರಿಯುತ್ತಿದೆ. ಹೌದು.. ನಗರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಉಣಕಲ್ ಕೆರೆ ಬುಧವಾರದಿಂದಲೇ ಕೋಡಿ ಹರಿಯುತ್ತಿದೆ. ಕೆರೆ ಬಳಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡಿಗೆ ಪಥ ನಿರ್ಮಿಸಲಾಗಿದ್ದು, ಕೋಡಿ ಹರಿಯುವುದನ್ನು ವೀಕ್ಷಿಸಲು ಜನರಿಗೆ ಅನುಕೂಲವಾಗಿದೆ. ಉತ್ತರ ಕನ್ನಡ ಸೇರಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ ಎಚ್ಚರಿಕೆ..! ಉಣಕಲ್ ಕೆರೆ ಮೈದುಂಬಿದೆ. ಪ್ರತಿವರ್ಷ ಕೋಡಿ ಹರಿದಾಗಲೂ ಜನರು ತಂಡಗಳಲ್ಲಿ ಬಂದು, ವೀಕ್ಷಿಸುತ್ತಾರೆ. ಆದರೆ, ಕೆರೆಯಲ್ಲಿ ಸಂಗ್ರಹವಾದ ತ್ಯಾಜ್ಯ ಕೋಡಿ ಹರಿವ ನೀರಿನ ಮೂಲಕ ರಾಜಕಾಲುವೆ ಸೇರುತ್ತಿದೆ. ರಾಜಕಾಲುವೆ ತುಂಬಿದರೆ, ಮನೆಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ. ಈಗಾಗಲೇ ಬಹುತೇಕ ಕಡೆಯಲ್ಲಿ ರಾಜಕಾಲುವೆ ಸಂಪೂರ್ಣ ಕಸದಿಂದ ತುಂಬಿದ್ದು, ಜನರಲ್ಲಿ ಆತಂಕ ಮನೆಮಾಡಿದೆ.
ಬಿರುಗಾಳಿ-ಆಲಿಕಲ್ಲು ಮಳೆಯ ಹೊಡೆತಕ್ಕೆ ಇಂಡಿಗೋ ವಿಮಾನಕ್ಕೆ ಹಾನಿ ; ಕಿರುಚಿಕೊಂಡ ಪ್ರಯಾಣಿಕರು..!
Indigo- Flight Damaged News: ದೆಹಲಿಯಿಂದ ಶ್ರೀನಗರಕ್ಕೆ 220 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಇಂಡಿಗೋ ವಿಮಾನವು ಬುಧವಾರ ಪ್ರತಿಕೂಲ ಹವಾಮಾನದಿಂದಾಗಿ ತೀವ್ರ ಪ್ರಕ್ಷುಬ್ಧತೆಯನ್ನು ಎದುರಿಸಿತು. ಹಾಗೂ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ವಿಮಾನದ ಮೂತಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ. ಪೈಲಟ್ ಶ್ರೀನಗರದ ವಾಯು ಸಂಚಾರ ನಿಯಂತ್ರಣ (ಎಟಿಸಿ) ಗೆ ತುರ್ತು ಸ್ಥಿತಿಯನ್ನು ವರದಿ ಮಾಡಿದರು. ತೀವ್ರವಾದ ಗಾಳಿಯಿಂದ ವಿಮಾನವು ತೀವ್ರವಾಗಿ ಅಲುಗಾಡುತ್ತಿದ್ದಂತೆ ಪ್ರಯಾಣಿಕರು ಕಿರುಚುವುದು, ಅಳುವುದು ಮತ್ತು ಪ್ರಾರ್ಥಿಸುವುದನ್ನು ತೋರಿಸುವ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಕ್ಯಾಬಿನ್ ಅಸ್ತವ್ಯಸ್ತವಾಗಿ ಕಾಣಿಸಿಕೊಂಡಿತು, ಓವರ್ಹೆಡ್ ಡಬ್ಬಿಗಳು ಸದ್ದು ಮಾಡುತ್ತಿದ್ದವು ಮತ್ತು ಜನರು ಭಯದಿಂದ ತಮ್ಮ ಆಸನಗಳನ್ನು ಹಿಡಿದುಕೊಂಡು ಕುಳಿತಿರುವುದು ಕಂಡುಬಂದಿದೆ. ಪಾಕ್ ಹೈಕಮಿಷನ್ ನ ಮತ್ತೊಬ್ಬ ಅಧಿಕಾರಿಗೆ 24 ಗಂಟೆಯೊಳಗೆ ಭಾರತ ತೊರೆಯಲು ಆದೇಶ..! ಭಯಾನಕ ಪರಿಸ್ಥಿತಿಯ ಹೊರತಾಗಿಯೂ, ವಿಮಾನವು ಸಂಜೆ 6:30 ಕ್ಕೆ ಶ್ರೀನಗರದಲ್ಲಿ ಸುರಕ್ಷಿತವಾಗಿ ಇಳಿಯಿತು ಮತ್ತು ಇಲ್ಲಿಯವರೆಗೆ ಯಾರಿಗೂ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಆದರೆ ಆರಂಭಿಕ ವರದಿಗಳು...
ಪಾಕ್ ಹೈಕಮಿಷನ್ ನ ಮತ್ತೊಬ್ಬ ಅಧಿಕಾರಿಗೆ 24 ಗಂಟೆಯೊಳಗೆ ಭಾರತ ತೊರೆಯಲು ಆದೇಶ..!
Operation Sindoor News: ಪಾಕಿಸ್ತಾನ ಹೈಕಮಿಷನ್ನಲ್ಲಿರುವ ಮತ್ತೊಬ್ಬ ಅಧಿಕಾರಿಗೆ “24 ಗಂಟೆಗಳ ಒಳಗೆ ದೇಶ ತೊರೆಯುವಂತೆ ಆದೇಶಿಸಲಾಗಿದೆ ಈ ಸಂಬಂಧ ಪಾಕಿಸ್ತಾನ ಹೈಕಮಿಷನ್ನ ಚಾರ್ಜ್ ಡಿ’ಅಫೇರ್ಸ್ಗೆ ಡಿಮಾರ್ಚ್ ನೀಡಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ಪತ್ರಿಕಾ ಪ್ರಕಟಣೆ ತಿಳಿಸಿದೆ. ಪಾಕಿಸ್ತಾನ ಹೈಕಮಿಷನ್ನಲ್ಲಿರುವ ಮತ್ತೊಬ್ಬ ಅಧಿಕಾರಿಗೆ ಅಧಿಕೃತ ಸ್ಥಾನಮಾನಕ್ಕೆ ಅನುಗುಣವಾಗಿಲ್ಲದ ಚಟುವಟಿಕೆಗಳಿಗಾಗಿ” ಭಾರತ ಸರ್ಕಾರ ಬುಧವಾರ “ಪರ್ಸಾನಾ ನಾನ್ ಗ್ರಾಟಾ” ಎಂದು ಘೋಷಿಸಿದೆ. “ಈ ಪರಿಣಾಮಕ್ಕಾಗಿ ಪಾಕಿಸ್ತಾನ ಹೈಕಮಿಷನ್ನ ಚಾರ್ಜ್ ಡಿ’ಅಫೇರ್ಸ್ಗೆ ಡಿಮಾರ್ಚ್ ನೀಡಲಾಗಿದೆ. ಭಾರತದಲ್ಲಿನ ಯಾವುದೇ ಪಾಕಿಸ್ತಾನಿ ರಾಜತಾಂತ್ರಿಕರು ಅಥವಾ ಅಧಿಕಾರಿಗಳು ತಮ್ಮ ಸವಲತ್ತುಗಳು ಮತ್ತು ಸ್ಥಾನಮಾನವನ್ನು ಯಾವುದೇ ರೀತಿಯಲ್ಲಿ ದುರುಪಯೋಗಪಡಿಸಿಕೊಳ್ಳದಂತೆ ಕಟ್ಟುನಿಟ್ಟಾಗಿ ಖಚಿತಪಡಿಸಿಕೊಳ್ಳುವಂತೆ ಅವರಿಗೆ ಸೂಚಿಸಲಾಗಿದೆ” ಎಂದು ವಿದೇಶಾಂಗ ಸಚಿವಾಲಯದ ಹೇಳಿಕೆ ತಿಳಿಸಿದೆ. CDPO ಆಫೀಸಲ್ಲಿ ಬ್ರಷ್ಟಾಚಾರ, ಲಂಚ ಪಡೆಯುವಾಗಲೇ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು, ಇಬ್ಬರು ಬಲೆಗೆ..! ಮೂಲಗಳ ಪ್ರಕಾರ, ಅಧಿಕಾರಿ ವೀಸಾ ಸೇವೆಗಳ ನೆಪದಲ್ಲಿ ಬೇಹುಗಾರಿಕೆ ಚಟುವಟಿಕೆಗಳಲ್ಲಿ ತೊಡಗಿದ್ದರು ಎಂದು ಆರೋಪಿಸಲಾಗಿದೆ.ವರದಿಗಳ ಪ್ರಕಾರ, ಆ ವ್ಯಕ್ತಿಯನ್ನು ಅಹ್ಸಾನ್-ಉರ್-ರಹೀಮ್ ಅಲಿಯಾಸ್...
CDPO ಆಫೀಸಲ್ಲಿ ಬ್ರಷ್ಟಾಚಾರ, ಲಂಚ ಪಡೆಯುವಾಗಲೇ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು, ಇಬ್ಬರು ಬಲೆಗೆ..!
Lokayukta Trap in Belgaum: ಬೆಳಗಾವಿಯಲ್ಲಿ ಭ್ರಷ್ಟರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಿ, ಕಚೇರಿ ಸೂಪರಡೆಂಟ್ ಅಬ್ದುಲ್ ವಲಿ, ಕಂಪ್ಯೂಟರ್ ಆಪರೇಟರ್ ಸೌಮ್ಯಾ ಬಡಗೇರನ್ನು ಬಂಧಿಸಲಾಗಿದೆ. ಅಂಗನವಾಡಿ ಸಹಾಯಕಿಯಿಂದ ವರ್ಗಾವಣೆಗಾಗಿ, 30 ಸಾವಿರ ಹಣದ ಡಿಮ್ಯಾಂಡ್ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ, ಹುಕ್ಕೇರಿ ತಾಲೂಕಿನ ಅಂಗನವಾಡಿ ಸಹಾಯಕಿ ಶಕುಂತಲಾ ಕಾಂಬಳೆಯಿಂದ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಕೊನೆಗೂ ಈಡೇರಲೇ ಇಲ್ಲ RCB ಫ್ಯಾನ್ಸ್ಗಳ ಆ ಕನಸು; ಎಲ್ಲೆಡೆ ಬೇಸರ..! ಹೀಗಾಗಿ, 15 ಸಾವಿರ ಲಂಚದ ಹಣ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಇನ್ಸ್ಪೆಕ್ಟರ್ ಧರ್ಮಟ್ಟಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಲೋಕಾಯುಕ್ತ ದಾಳಿ ಮಾಡ್ತಿದ್ದಂತೆ ಕಂಪ್ಯೂಟರ್ ಆಪರೇಟರ್ ಸೌಮ್ಯಾಗೆ ಅಸ್ವಸ್ಥತೆ ಕಂಡುಬಂದಿದೆ. ಈ ಕಾರಣಕ್ಕಾಗಿ ತಕ್ಷಣವೇ ಕಚೇರಿಗೆ ವೈದ್ಯರನ್ನ ಕರೆಸಿ ಅಧಿಕಾರಿಗಳು ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಲೋಕಾಯುಕ್ತ ಪೊಲೀಸರು ವಿಚಾರಣೆ ಮುಂದೊರೆಸಿದ್ದಾರೆ.
ಕೊನೆಗೂ ಈಡೇರಲೇ ಇಲ್ಲ RCB ಫ್ಯಾನ್ಸ್ಗಳ ಆ ಕನಸು; ಎಲ್ಲೆಡೆ ಬೇಸರ..!
RCB Fans Deram Shattered: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಋತುವಿನಲ್ಲಿ ಈ ವರೆಗೂ ಭರ್ಜರಿ ಪ್ರದರ್ಶನ ನೀಡಿದ್ದು ಪ್ಲೇಆಫ್ಗೆ ಎಂಟ್ರಿ ಪಡೆದುಕೊಂಡಿದೆ. ಒಂದೆಡೆ ಆರ್ಸಿಬಿ ಪ್ಲೇಆಫ್ ತಲುಪಿರುವ ಖುಷಿ ಅಭಿಮಾನಿಗಳಲ್ಲಿ ಮನೆ ಮಾಡಿದ್ದರೇ ಮತ್ತೊಂದೆಡೆ ದೊಡ್ಡ ಬೇಸರವು ಕಾಣಿಸಿಕೊಂಡಿದೆ. ಸದ್ಯ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಿರುವ ಕಾರಣ ಮೇ.23 ರಂದು ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ಬೆಂಗಳೂರಿನಿಂದ ಲಖನೌಗೆ ಸ್ಥಳಾಂತರ ಮಾಡಲಾಗಿದೆ. ಇದರ ಬೆನ್ನಲ್ಲೇ ಆರ್ಸಿಬಿ ಫ್ಯಾನ್ಸ್ ಕಂಡಿದ್ದ ಆ ಕನಸು ಕೂಡ ಭಗ್ನ ಗೊಂಡಿದೆ. ಹೌದು, ಇತ್ತೀಚೆಗೆ ಭಾರತ ಕ್ರಿಕೆಟ್ ತಂಡದ ವಿರಾಟ್ ಕೊಹ್ಲಿ ಟೆಸ್ಟ್ಗೆ ನಿವೃತ್ತಿ ಘೋಷಣೆ ಮಾಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು. ಇದರ ಬೆನ್ನಲ್ಲೇ ಆರ್ಸಿಬಿ ಫ್ಯಾನ್ಸ್ ಸಾಮಾಜಿಕ ಜಾಲತಾಣದಲ್ಲಿ ವಿರಾಟ್ ಕೊಹ್ಲಿಗೆ ಗೌರವ ಸಲ್ಲಿಸಲು ಆರ್ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯಕ್ಕೆ ಬಿಳಿ ಜೆರ್ಸಿ ಧರಿಸಿ ಮೈದಾನಕ್ಕೆ ಬರುವಂತೆ ಮನವಿ ಮಾಡಿಕೊಂಡಿದ್ದರು. ಪಾಕಿಸ್ತಾನಿಯ ಜೊತೆ...
ಪಾಕಿಸ್ತಾನಿಯ ಜೊತೆ ನನ್ನ ಮದುವೆ ಮಾಡಿಸಿ, ಪಾಕ್ ಅಧಕಾರಿಯೊಂದಿಗೆ ಜ್ಯೋತಿ ಮಲ್ಹೊತ್ರಾ ವಾಟ್ಸಾಪ್ ಚಾಟಿಂಗ್..!
Jyoti Malhotra News: ನವದೆಹಲಿ: ಭಾರತದ ವಿರುದ್ಧ ಗೂಢಚಾರಿಕೆ ನಡೆಸಿದ ಆರೋಪದಡಿ ಬಂಧಿಸಲ್ಪಟ್ಟು ತನಿಖೆಗೆ ಒಳಗಾಗಿರುವ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾಗೆ ಪಾಕಿಸ್ತಾನ ಹಾಗೂ ಅಲ್ಲಿನ ಅಧಿಕಾರಿಗಳೊಂದಿಗೆ ಇರುವ ನಂಟುಗಳು ಬಗೆದಷ್ಟೂ ಬಯಲಾಗುತ್ತಿವೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾದ ಐಎಸ್ಐ ಅಧಿಕಾರಿ ಅಲಿ ಹಸನ್ ಎಂಬಾತನೊಂದಿಗೆ ಜ್ಯೋತಿ ಸಂಪರ್ಕದಲ್ಲಿದ್ದು, ಇಬ್ಬರ ನಡುವಿನ ಸಂಭಾಷಣೆಗಳು ಈಗ ಬೆಳಕಿಗೆ ಬಂದಿದೆ. ಅಲಿ ಜತೆ ವಾಟ್ಸ್ಅಪ್ನಲ್ಲಿ ಚ್ಯಾಟ್ ಮಾಡುತ್ತಿದ್ದ ಜ್ಯೋತಿ, ‘ನನ್ನ ಮದುವೆಯನ್ನು ಪಾಕಿಸ್ತಾನದಲ್ಲಿ ಮಾಡಿಸು’ ಎಂದು ಕೇಳಿಕೊಂಡಿದ್ದಳು ಎಂದು ವರದಿಯಾಗಿದೆ. ಈ ಮೂಲಕ ಆಕೆಯ ಪಾಕ್ ಪ್ರೇಮ ಬಯಲಾಗಿದೆ. 2023ರಿಂದಲೂ ಜ್ಯೋತಿ ಆತನ ಸಂಪರ್ಕದಲ್ಲಿದ್ದಳು ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ. ಅಮೆರಿಕದ ಯಹೂದಿ ವಸ್ತುಸಂಗ್ರಹಾಲಯದ ಬಳಿ ಫೈರಿಂಗ್; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಹತ್ಯೆ ಅಂತೆಯೇ, ಅವರಿಬ್ಬರು ಭಾರತದ ರಹಸ್ಯ ಕಾರ್ಯಾಚರಣೆಗಳ ಬಗ್ಗೆಯೂ ರಹಸ್ಯ ಭಾಷೆಯಲ್ಲಿ (ಕೋಡ್ ಮೂಲಕ) ಚರ್ಚಿಸುತ್ತಿದ್ದರು ಎಂದು ತಿಳಿದುಬಂದಿದೆ. ಜತೆಗೆ, ಜ್ಯೋತಿಗೆ ಸೇರಿದ 4 ಬ್ಯಾಂಕ್ ಖಾತೆಗಳ ವಿವರ ಪೊಲೀಸರ ಕೈ ಸೇರಿದ್ದು,...