ನವದೆಹಲಿ: ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವಿಗೀಡಾದ ಘಟನೆಗೆ ಪ್ರತಿಯಾಗಿ ಆರಂಭಿಸಲಾದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಯಲ್ಲಿ ಪಾಕಿಸ್ತಾನದ ಮಿರಾಜ್ ಯುದ್ಧ ವಿಮಾನವನ್ನು ಹೊಡೆದುರುಳಿಸಿರುವುದಾಗಿ ಭಾರತ ಸೋಮವಾರ ತಿಳಿಸಿದೆ. ಭಾರತೀಯ ಸೇನೆಯು X ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ ಪಾಕಿಸ್ತಾನದ ಮಿರಾಜ್ ಜೆಟ್ನ ತುಂಡಾಗಿ ಬಿದ್ದಿರುವ ಅವಶೇಷಗಳು ಕಂಡುಬಂದಿವೆ. ಪಾಕಿಸ್ತಾನದ ಮಿರಾಜ್ ಜೆಟ್ ಅನ್ನು ಹೊಡೆದುರುಳಿಸಲಾಗಿದೆ ಎಂದು ಭಾರತೀಯ ಸಶಸ್ತ್ರ ಪಡೆಗಳ ಹಿರಿಯ ಅಧಿಕಾರಿಗಳು ಸೋಮವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ. ಈ ಬ್ರೀಫಿಂಗ್ಗೆ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ (DGMO) ಲೆಫ್ಟಿನೆಂಟ್ ಜನರಲ್ ರಾಜೀವ ಘಾಯ್, ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕ ಏರ್ ವೈಸ್ ಮಾರ್ಷಲ್ ಎಕೆ ಭಾರ್ತಿ ಮತ್ತು ನೌಕಾ ಕಾರ್ಯಾಚರಣೆಗಳ ಮಹಾನಿರ್ದೇಶಕ ವೈಸ್ ಅಡ್ಮಿರಲ್ ಎ.ಎನ್. ಪ್ರಮೋದ್ ಜಂಟಿಯಾಗಿ ಪತ್ರಿಕಾಗೋಷ್ಠಿ ನಡೆಸಿದರು. ಕಾರವಾರದಲ್ಲಿ ವೈಮಾನಿಕ ದಾಳಿ, ಸಾವಿರಾರು ಮಂದಿಯ ರಕ್ಷಣೆ..! ಬಾಂಬ್ ದಾಳಿ, 37 ಜನ ಬಚಾವ್..!! ಎರಡೂ ದೇಶಗಳ ನಡುವಿನ ದಿನಗಟ್ಟಲೆ ನಡೆದ ಮಿಲಿಟರಿ...
Top Stories
ಕಾರವಾರದಲ್ಲಿ ವೈಮಾನಿಕ ದಾಳಿ, ಸಾವಿರಾರು ಮಂದಿಯ ರಕ್ಷಣೆ..! ಬಾಂಬ್ ದಾಳಿ, 37 ಜನ ಬಚಾವ್..!!
ತೀವ್ರ ಅಪೌಷ್ಠಿಕತೆಯಿಂದ ಕೂಡಿದ ಮಕ್ಕಳನ್ನು ಸೂಕ್ತ ಚಿಕಿತ್ಸೆಗೆ ಒಳಪಡಿಸಿ : ಜಿಲ್ಲಾಧಿಕಾರಿ
ಪ್ರಸಕ್ತ ವರ್ಷದ “ಮಾನ್ಸೂನ್” ನಿಗದಿತ ಸಮಯಕ್ಕಿಂತಲೂ ಮುಂಚೇಯೇ ಆಗಮನ ಸಾಧ್ಯತೆ..!
ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಗಾಳಿ ಮಳೆ ; ಮುನ್ಸೂಚನೆ
ಕಾಮೆಡಿ ಕಿಲಾಡಿಯ ಹಾಸ್ಯ ಕಲಾವಿದ, ರಾಕೇಶ್ ಪೂಜಾರಿ ಇನ್ನಿಲ್ಲ..!
ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ದಾರುಣ ಸಾವು..!
ಪಾಕಿಸ್ತಾನದ 700 ಡ್ರೋನ್, ಕೆಲವು ಜೆಟ್ ಗಳು ಧ್ವಂಸ ; ಭಾರತದ ಎಲ್ಲ ಪೈಲಟ್ ಗಳು ಸುರಕ್ಷಿತ : ಡಿಜಿಎಂಒ
ಈ ಬಾರಿ “ಹಾವಿನ ತಲೆಗಳನ್ನು ಕೊಲ್ಲಲು ನಿರ್ಧರಿಸಿದೆ, ಕಾಲುಗಳನ್ನಲ್ಲ” ಭಾರತದ ಸ್ಪಷ್ಟ ಮಾತು..!
ಪಿಒಕೆ ಹಿಂತಿರುಗಿಸಿ, ಉಗ್ರರನ್ನು ಹಸ್ತಾಂತರಿಸಿ ; ಇದು ಬಿಟ್ಟು ಬೇರೆ ಮಾತುಕತೆ ಇಲ್ಲ; ಡಿಜಿಎಂಒ ಸಭೆಗೂ ಮುನ್ನ ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ
ಪಾಪಿಗಳ ರಕ್ತ ಹರಿಸದೇ ಕದನವಿರಾಮ ಆಗಿದ್ದನ್ನು ನಾವು ಒಪ್ಪುವುದಿಲ್ಲ: ಪ್ರಮೋದ್ ಮುತಾಲಿಕ್..!
ಮುಂಡಗೋಡ ಬಳಿ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಬೈಕ್ ಗೆ ಗುದ್ದಿದ ಅಪರಿಚಿತ ಟಾಟಾ ಎಸ್, ಬೈಕ್ ಸವಾರ ಗಂಭೀರ..!
ಮಳೆಗಾಲದಲ್ಲಿ ಅವಘಡಗಳಾಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!
ಸಿಂಗನಳ್ಳಿಯಲ್ಲಿ ಅಡಿಕೆ ತೋಟ ನಾಶ ಪಡಿಸಿದ ದುರುಳರು, 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ ದುಷ್ಟರು..!
ಯುದ್ಧದ ಸಂದರ್ಭದಲ್ಲಿ ನಾಗರೀಕರ ರಕ್ಷಣೆಗೆ ಸ್ವಯಂ ಸೇವಕರಾಗಲು ನೋಂದಣಿಗೆ ಅರ್ಜಿ ಆಹ್ವಾನ..!
ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಆರೋಪ, ಸಿಪಿಐ ಅಲ್ತಾಪ್ ಹುಸೇನ್ ಮುಲ್ಲಾ ಅಮಾನತ್ತು..!
ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ: ಮೂರು ಬಾಲಕರ ದುರ್ಮರಣ..!
ಹಾವೇರಿ ಮೊಟೇಬೆನ್ನೂರು ಬಳಿ ಭೀಕರ ಅಪಘಾತ, ಸ್ಥಳದಲ್ಲೇ 6 ಜನರ ಸಾವು, ಓರ್ವ ಗಂಭೀರ..!
“ಅಪರೇಶನ್ ಸಿಂಧೂರ” ಕಾರ್ಯಾಚರಣೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ..!
ಉತ್ತರ ಕನ್ನಡದಲ್ಲಿ “ಅಭ್ಯಾಸ್” ಮಾಕ್ ಡ್ರಿಲ್ ಸ್ಥಳ ಪರಿಶೀಲನೆ ನಡೆಸಿದ ಎಸ್ಪಿ..!
ಕಾರವಾರದಲ್ಲಿ ವೈಮಾನಿಕ ದಾಳಿ, ಸಾವಿರಾರು ಮಂದಿಯ ರಕ್ಷಣೆ..! ಬಾಂಬ್ ದಾಳಿ, 37 ಜನ ಬಚಾವ್..!!
ಕಾರವಾರ: ಕಾರವಾರದ ಗ್ರಾಸಿಂ ಅನಿಲ ಘಟಕದಲ್ಲಿ ಬಾಂಬ್ ದಾಳಿಯಿಂದ ಹಾನಿಗೀಡಾದ ಕಟ್ಟಡದಲ್ಲಿ ಸಿಲುಕಿದ್ದ 37 ಮಂದಿಯ ಸುರಕ್ಷಿತ ರಕ್ಷಣೆ, ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬೆಂಕಿ ಆಕಸ್ಮಿಕದಿಂದ 11 ಮಂದಿಯ ಸುರಕ್ಷಿತ ರಕ್ಷಣೆ, ನೌಕಾನೆಲೆ ಪ್ರದೇಶದ ಸಿವಿಲ್ ಕಾಲೋನಿಯಲ್ಲಿ ಬೆಂಕಿ ಆಕಸ್ಮಿಕದಿಂದ 11 ಮಂದಿಯನ್ನು ಸುರಕ್ಷಿತ ರಕ್ಷಣೆ, ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಬಾಂಬ್ ದಾಳಿಯಿಂದ ಗಾಯಗೊಂಡ 10 ಜನರ ರಕ್ಷಣೆ, ರವೀಂದ್ರ ನಾಥ್ ಕಡಲತೀರದಲ್ಲಿ ಸಂಭವಿಸಿದ ಬಾಂಬ್ ದಾಳಿಯಿಂದ ಗಾಯಗೊಂಡವರನ್ನು ರಕ್ಷಿಸಿ ಇಡೀ ಬೀಚ್ನಲ್ಲಿದ್ದ ಸಾವಿರಾರು ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ, ಕೈಗಾ ಅಣು ವಿದ್ಯುತ್ ಸ್ಥಾವರದ ಅಣು ವಿಕಿರಣ ಸೋರಿಕೆಯ ಮುನ್ನೆಚ್ಚರಿಕಾ ಕ್ರಮವಾಗಿ ಹರ್ಟುಗಾ ಗ್ರಾಮದ ಎಲ್ಲಾ ನಾಗರೀಕರ ಸ್ಥಳಾಂತರ. ಇದೆಲ್ಲಾ ನೈಜ ಘಟನೆಯಲ್ಲ.. ಯುದ್ದದಂತಹ ತುರ್ತು ಸಂದರ್ಭದಲ್ಲಿ ಉಂಟಾಗುವ ಸಂಭವನೀಯ ಅಪಘಾತಗಳಿಂದ ಸಾರ್ವಜನಿಕರನ್ನು ರಕ್ಷಿಸುವ ಕುರಿತಂತೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಕೇಂದ್ರ ಗೃಹಸಚಿವಾಲಯದ ನಿರ್ದೇಶನದಂತೆ ಸೋಮವಾರ ಕಾರವಾರದ ವಿವಿಧ ಭಾಗಗಳಲ್ಲಿ ಕೈಗೊಂಡ “ಆಪರೇಷನ್ ಅಭ್ಯಾಸ್” ನಾಗರೀಕ ರಕ್ಷಣಾ...
ತೀವ್ರ ಅಪೌಷ್ಠಿಕತೆಯಿಂದ ಕೂಡಿದ ಮಕ್ಕಳನ್ನು ಸೂಕ್ತ ಚಿಕಿತ್ಸೆಗೆ ಒಳಪಡಿಸಿ : ಜಿಲ್ಲಾಧಿಕಾರಿ
ಕಾರವಾರ: ಜಿಲ್ಲೆಯಲ್ಲಿ ತೀವ್ರ ಅಪೌಷ್ಠಿಕತೆ ಮತ್ತು ಮಧ್ಯಮ ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಸೂಕ್ತ ಚಿಕಿತ್ಸೆ ಒದಗಿಸುವ ಕುರಿತಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಶನ್ ಶಕ್ತಿ ಯೋಜನೆ ಮತ್ತು ಇತರೆ ಯೋಜನೆಗಳ ತ್ರೆöÊಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿನ ಎಲ್ಲಾ ಅಂಗನವಾಡಿಗಳ ವ್ಯಾಪ್ತಿಯಲ್ಲಿ ತೀವ್ರ ಅಪೌಷ್ಠಿಕತೆ ಮತ್ತು ಮಧ್ಯಮ ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಆರೋಗ್ಯ ಇಲಾಖೆಯ ಮೂಲಕ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಗೆ ಒಳಪಡಿಸುವ ಮೂಲಕ ಯಾವುದೇ ಮಗು ಅಪೌಷ್ಠಿಕತೆಯಿಂದ ಬಳಲದಂತೆ ಎಚ್ಚರಿಕೆ ವಹಿಸಿ, ಈ ಮಕ್ಕಳು ಸಂಪೂರ್ಣ ಆರೋಗ್ಯವಂತರಾಗುವವರೆಗೆ ನಿಗಾ ವಹಿಸುವುದರ ಜೊತೆಗೆ ಎಲ್ಲಾ ಮಕ್ಕಳ ಸಂಪೂರ್ಣ ವಿವರಗಳನ್ನು ಇಟ್ಟುಕೊಳ್ಳಬೇಕು ಎಂದರು. ಪ್ರಸಕ್ತ ವರ್ಷದ “ಮಾನ್ಸೂನ್” ನಿಗದಿತ ಸಮಯಕ್ಕಿಂತಲೂ ಮುಂಚೇಯೇ...
ಪ್ರಸಕ್ತ ವರ್ಷದ “ಮಾನ್ಸೂನ್” ನಿಗದಿತ ಸಮಯಕ್ಕಿಂತಲೂ ಮುಂಚೇಯೇ ಆಗಮನ ಸಾಧ್ಯತೆ..!
ನವದೆಹಲಿ: ಈ ವರ್ಷ ಭಾರತದ ನೈಋತ್ಯ ಮಾನ್ಸೂನ್ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಆಗಮಿಸುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ವರ್ಷ ನೈಋತ್ವ ಮಾನ್ಸೂನ್ ಮೇ 27ರ ಸುಮಾರಿಗೆ ಕೇರಳಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಶನಿವಾರ ಪ್ರಕಟಿಸಿದೆ. ಮೇ 27 ರಂದು ಭಾರತದ ದಕ್ಷಿಣ ಕರಾವಳಿಗೆ ಮಾನ್ಸೂನ್ ಮಳೆ ಬರುವ ನಿರೀಕ್ಷೆಯಿದೆ, ಇದು ಸಾಮಾನ್ಯಕ್ಕಿಂತ ಐದು ದಿನಗಳು ಮುಂಚಿತವಾಗಿ ಬರಲಿದೆ, ಇದು ಐದು ವರ್ಷಗಳಲ್ಲಿಯೇ ಅತ್ಯಂತ ಮುಂಚಿನ ಆಗಮನವಾಗಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ. ದೇಶದ $4 ಟ್ರಿಲಿಯನ್ ಆರ್ಥಿಕತೆಯ ಜೀವನಾಡಿಯಾದ ಮಾನ್ಸೂನ್, ಭಾರತಕ್ಕೆ ಕೃಷಿಭೂಮಿಗೆ ನೀರುಣಿಸಲು ಮತ್ತು ಜಲಚರಗಳು ಮತ್ತು ಜಲಾಶಯಗಳನ್ನು ಮರುಪೂರಣ ಮಾಡಲು ಅಗತ್ಯವಿರುವ ಮಳೆಯ ಸುಮಾರು 70%ರಷ್ಟನ್ನು ನೀಡುತ್ತದೆ. ಯಾವುದೇ ನೀರಾವರಿ ಸೌಲಭ್ಯವಿಲ್ಲದೆ, ಭಾರತದ ಕೃಷಿಭೂಮಿಯ ಸುಮಾರು ಅರ್ಧದಷ್ಟು, ಹಲವಾರು ಬೆಳೆಗಳನ್ನು ಬೆಳೆಯಲು ಜೂನ್-ಸೆಪ್ಟೆಂಬರ್ ಮಳೆ ನೈಋತ್ವ ಮಾನ್ಸೂನ್ ಅನ್ನು ಅವಲಂಬಿಸಿದೆ. ಕರ್ನಾಟಕದ 12ಕ್ಕೂ ಹೆಚ್ಚು...
ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಗಾಳಿ ಮಳೆ ; ಮುನ್ಸೂಚನೆ
ಕರ್ನಾಟಕದಾದ್ಯಂತ ಮೇ 13ರಿಂದ ಮಳೆ(Rain)ಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಗುಡುಗು ಸಹಿತ ಮಳೆಯಾಗಲಿದೆ ಹಾಗೂ ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ಇರಲಿದೆ ಎಂದು ತಿಳಿಸಿದೆ. ಇಂದು, ಸೋಮವಾರ ( ಮೇ 12) ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಮೇ 17 ರವರೆಗೂ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,...
ಕಾಮೆಡಿ ಕಿಲಾಡಿಯ ಹಾಸ್ಯ ಕಲಾವಿದ, ರಾಕೇಶ್ ಪೂಜಾರಿ ಇನ್ನಿಲ್ಲ..!
ಕನ್ನಡ ಕಿರುತೆರೆಯ ಪ್ರತಿಭಾವಂತ ಹಾಸ್ಯ ಕಲಾವಿದ, ಕಾಮೆಡಿ ಕಿಲಾಡಿಗಳು ಕಾರ್ಯಕ್ರಮದ ಮೂಲಕ ಇಡೀ ರಾಜ್ಯಕ್ಕೆ ಚಿರಪರಿಚಿತರಾಗಿದ್ದ ರಾಕೇಶ್ ಪೂಜಾರಿ ಉಡುಪಿಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಂದಿದ್ದ ರಾಕೇಶ್ ಪೂಜಾರಿಗೆ ಬಿಪಿ ಲೋ ಆಗಿತ್ತು. ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದ್ರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ. ಅಷ್ಟಕ್ಕೂ ರಾಕೇಶ್ ಪೂಜಾರಿ ಯಾರು..? ರಾಕೇಶ್ ಪೂಜಾರಿ ಮೂಲತಃ ಉಡುಪಿಯವರು. ತಮ್ಮದೇ ಆದ ವಿಶಿಷ್ಟ ಮ್ಯಾನರಿಸಂ ಹೊಂದಿದ್ದ ರಾಕೇಶ್ ಪೂಜಾರಿ ಪ್ರತಿಭಾವಂತ ಕಲಾವಿದ. ಕಳೆದ ಕೆಲವು ವರ್ಷಗಳಿಂದ ರಾಕೇಶ್ ಪೂಜಾರಿ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು. ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನಿಂದ ರಾಕೇಶ್ ಪೂಜಾರಿ ಕನ್ನಡಿಗರ ಮನೆ ಮಾತಾದರು. ‘ಕಾಮಿಡಿ ಕಿಲಾಡಿಗಳು ಸೀಸನ್ 3’ ಕಾರ್ಯಕ್ರಮದಲ್ಲಿ ಸ್ಪರ್ಧಿಸಿ, ವಿವಿಧ ಅವತಾರಗಳನ್ನ ತಾಳಿ ಕನ್ನಡ ವೀಕ್ಷಕರನ್ನ ನಗೆಗಡಲಲ್ಲಿ ತೇಲಿಸಿದವರು ರಾಕೇಶ್ ಪೂಜಾರಿ. ಕನ್ನಡಿಗರು ಹಾಗೂ ತೀರ್ಪುಗಾರರ ಮನಗೆದ್ದ ರಾಕೇಶ್ ಪೂಜಾರಿ 2020ರಲ್ಲಿ ‘ಕಾಮಿಡಿ ಕಿಲಾಡಿಗಳು ಸೀಸನ್ 3’ ಕಾರ್ಯಕ್ರಮದಲ್ಲಿ ವಿನ್ನರ್ ಆದರು. ಅಂದು ರಾಕೇಶ್...
ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ದಾರುಣ ಸಾವು..!
ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾಮದಲ್ಲಿ ಶನಿವಾರ (ಮೇ 11) ಸಿಡಿಲು ಬಡಿದು ಇಬ್ಬರು ಮಹಿಳೆಯರು ಸಾವಿಗೀಡಾಗಿದ್ದಾರೆ. ಜಮೀನಿನಲ್ಲಿ ಮೇವು ತೆಗೆದುಕೊಂಡು ವಾಪಸ್ ಬರುವಾಗ ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಗಂಗವ್ವ ಜೀರಗಿವಾಡ ಮತ್ತು ಕಲಾವತಿ ಜೀರಗಿವಾಡ ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಸವದತ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪಾಕಿಸ್ತಾನದ 700 ಡ್ರೋನ್, ಕೆಲವು ಜೆಟ್ ಗಳು ಧ್ವಂಸ ; ಭಾರತದ ಎಲ್ಲ ಪೈಲಟ್ ಗಳು ಸುರಕ್ಷಿತ : ಡಿಜಿಎಂಒ
ನವದೆಹಲಿ: ನಾಲ್ಕು ದಿನಗಳಿಂದ ನಡೆದ ಭಾರತ- ಪಾಕಿಸ್ತಾನ ನಡುವಿನ ಸೇನಾ ಸಂಘರ್ಷದಲ್ಲಿ ಪಾಕಿಸ್ತಾನದ ಶೆಲ್, ಡ್ರೋನ್ ದಾಳಿಗಳಿಂದ ಯಾವುದೇ ಹಾನಿಯಾಗಿಲ್ಲ ಎಂದು ಏರ್ ಮಾರ್ಷಲ್ ಅವಧೇಶಕುಮಾರ್ ಭಾರ್ತಿ ಭಾನುವಾರ ದೃಢಪಡಿಸಿದ್ದಾರೆ. ಸೇನೆಯ ಡಿಜಿಎಂಒ (DGMO) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 7 ರಂದು ಪಾಕಿಸ್ತಾನಿ ಸೇನೆ ನಡೆಸಿದ ಶೆಲ್ ದಾಳಿಯಿಂದ ನಮ್ಮ ನೆಲದಲ್ಲಿ ಯಾವುದೇ ಹಾನಿಯಾಗದಂತೆ ಭಾರತದ ವಾಯು ರಕ್ಷಣಾ ವ್ಯವಸ್ಥೆ ಸಜ್ಜಾಗಿತ್ತು. ಮೇ 8 ಮತ್ತು 9 ರಂದು ರಾತ್ರಿ 10:30 ಗಂಟೆಗೂ ಮುನ್ನಾ ಭಾರತದ ಹಲವಾರು ನಗರಗಳಲ್ಲಿ ಡ್ರೋನ್ಗಳು, ಮಾನವ ರಹಿತ ವೈಮಾನಿಕ ವಿಮಾನಗಳು (UAVS) ಮತ್ತು ಮಾನವರಹಿತ ಯುದ್ಧ ವೈಮಾನಿಕ ವಾಹನ (UCAVS) ಮೂಲಕ ಪಾಕಿಸ್ತಾನ ಸೇನೆಯು ದಾಳಿಗೆ ಯತ್ನಿಸಿತು. ಮೇ 7 ರಂದು ಮಾನವ ರಹಿತ ವೈಮಾನಿಕ ವಿಮಾನ (UAV) ಗಳನ್ನು ನಿಯೋಜಿಸಿದ್ದ ಪಾಕಿಸ್ತಾನ ನಂತರದ ದಿನಗಳಲ್ಲಿ ಅವುಗಳ ಸಂಖ್ಯೆಯನ್ನು ಕಡಿಮೆ ಮಾಡಿತ್ತು. ನಾಗರಿಕರಿಗೆ ಕಿರುಕುಳ ನೀಡಲು ಸೇನೆಯು ಹೆಲಿಕಾಪ್ಟರ್ ಮೂಲಕ ದಾಳಿ ನಡೆಸಿತ್ತು ಎಂದು...
ಈ ಬಾರಿ “ಹಾವಿನ ತಲೆಗಳನ್ನು ಕೊಲ್ಲಲು ನಿರ್ಧರಿಸಿದೆ, ಕಾಲುಗಳನ್ನಲ್ಲ” ಭಾರತದ ಸ್ಪಷ್ಟ ಮಾತು..!
ನವದೆಹಲಿ: ಭಾರತವು ಈ ಬಾರಿ “ಹಾವಿನ ತಲೆಯನ್ನು ಕೊಲ್ಲಲು ನಿರ್ಧರಿಸಿದೆ, ಕಾಲುಗಳನ್ನಲ್ಲ” ಎಂದು ಸರ್ಕಾರವು ಜಗತ್ತಿಗೆ ಮತ್ತು ಪಾಕಿಸ್ತಾನಕ್ಕೆ ಸ್ಪಷ್ಟಪಡಿಸಿದೆ, ಇದು ಪಾಕಿಸ್ತಾನದೊಳಗಿನ ಭಯೋತ್ಪಾದಕರನ್ನು ಕೊಲ್ಲುವ ತನ್ನ ಹೊಸ ವಿಧಾನವನ್ನು ಪ್ರದರ್ಶಿಸುತ್ತದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಮಾರಕ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವಿಗೀಡಾದ ಘಟನೆಗೆ ಪ್ರತಿಯಾಗಿ ಭಾರತವು ಮೇ 7 ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಪ್ರತಿದಾಳಿ ನಡೆಸಿತು. ಭಾರತೀಯ ಸಶಸ್ತ್ರ ಪಡೆಗಳು ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಸಂಘಟಿತ ನಿಖರ ಕ್ಷಿಪಣಿ ದಾಳಿಗಳನ್ನು ನಡೆಸಿದವು – ಪಾಕಿಸ್ತಾನದಲ್ಲಿ ನಾಲ್ಕು (ಬಹವಾಲ್ಪುರ್ ಮತ್ತು ಮುರಿಡ್ಕೆ ಸೇರಿದಂತೆ) ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಐದು (ಮುಜಫರಾಬಾದ್ ಮತ್ತು ಕೋಟ್ಲಿಯಂತಹವು) ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಲಾಯಿತು. “ನೀವು ಪಾಕಿಸ್ತಾನದಲ್ಲಿ ಎಲ್ಲೇ ಇದ್ದರೂ, ನಾವು ನಿಮ್ಮನ್ನು ಹೊಡೆಯುತ್ತೇವೆ ಎಂಬ ಸಂದೇಶವನ್ನು ಕಳುಹಿಸಲಾಗಿದೆ. ಈ ಸಂದರ್ಭದಲ್ಲಿ, ನಾವು ಕಾಲಾಳುಗಳ ಹಿಂದೆ...
ಪಿಒಕೆ ಹಿಂತಿರುಗಿಸಿ, ಉಗ್ರರನ್ನು ಹಸ್ತಾಂತರಿಸಿ ; ಇದು ಬಿಟ್ಟು ಬೇರೆ ಮಾತುಕತೆ ಇಲ್ಲ; ಡಿಜಿಎಂಒ ಸಭೆಗೂ ಮುನ್ನ ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಸೇನಾ ಸಂಘರ್ಷದ ನಡುವೆ, ಭಾರತವು ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶವೊಂದನ್ನು ರವಾನಿಸಿದೆ. ಪಾಕಿಸ್ತಾನದೊಂದಿಗೆ ಮಾತುಕತೆ ನಡೆದರೆ ಅದು ಪಾಕ್ ಆಕ್ರಮಿತ ಕಾಶ್ಮೀರ (PoK) ಬಿಟ್ಟು ತೊಲಗುವುದು ಹಾಗೂ ಉಗ್ರರ ಹಸ್ತಾಂತರಕಷ್ಟೇ ಸೀಮಿತ ಎಂದು ತಿಳಿಸಿದೆ. ಇದನ್ನು ಹೊರತುಪಡಿಸಿ ಎರಡು ದೇಶಗಳ ಮಧ್ಯೆ ಯಾವುದೇ ರೀತಿಯ ಮಾತುಕತೆ ಇಲ್ಲ ಎಂದು ಭಾರತ ತಿಳಿಸಿದೆ. “ಕಾಶ್ಮೀರದ ಬಗ್ಗೆ ನಮ್ಮ ನಿಲುವು ಸ್ಪಷ್ಟವಾಗಿದೆ. ಒಂದೇ ಒಂದು ವಿಷಯ ಉಳಿದಿದೆ. ಅದು ಪಾಕ್ ಆಕ್ರಮಿತ ಕಾಶ್ಮೀರ (PoK) ಹಿಂತಿರುಗಿಸುವಿಕೆ. ಇದನ್ನು ಹೊರತುಪಡಿಸಿ ಮಾತನಾಡಲು ನಮಗೆ ಏನೂ ಇಲ್ಲ. ಪಾಕಿಸ್ತಾನದವರು ಭಯೋತ್ಪಾದಕರನ್ನು ನಮಗೆ ಹಸ್ತಾಂತರಿಸುವ ಬಗ್ಗೆ ಮಾತನಾಡಿದರೆ ನಾವು ಮಾತನಾಡಬಹುದು. ನಮಗೆಯಾರ ಮಧ್ಯಸ್ಥಿಕೆಯೂ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ. ನಾವು ಹೊಸ ಸಾಮಾನ್ಯ ಸ್ಥಿತಿಯಲ್ಲಿದ್ದೇವೆ. ಅದಕ್ಕಾಗಿಯೇ ನಾವು ‘ಅರ್ಥಮಾಡಿಕೊಳ್ಳುವುದು’ ಮತ್ತು ಗುಂಡಿನ ದಾಳಿಯನ್ನು ನಿಲ್ಲಿಸುವಂತಹ ಪದಗಳನ್ನು ಬಳಸುತ್ತಿದ್ದೇವೆ. ಜಗತ್ತು ಇದನ್ನು ಒಪ್ಪಿಕೊಳ್ಳಬೇಕು. ಪಾಕಿಸ್ತಾನ...