ಕಾರವಾರ: ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿಯಾಗಿದ್ದು, ಬೇಸಿಗೆ ಅವಧಿಯಲ್ಲಿನ ಶಿಬಿರದ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಆಕಾಶವಾಣಿಯ ಕಾರ್ಯಕ್ರಮ ಮುಖ್ಯಸ್ಥ ಶ್ಯಾಮ ಪ್ರಸಾದ ಹೇಳಿದರು. ಅವರು ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸ್ತ್ರೀ ಶಕ್ತಿ ಭವನದಲ್ಲಿ ಆಯೋಜಿಸಿದ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಕಾರವಾರ ಇವರ ಸಹಯೋಗದಲ್ಲಿ 2025-26ನೇ ಸಾಲಿನ ಉಚಿತ ಬೇಸಿಗೆ ಶಿಬರವನ್ನು ಉದ್ಘಾಟಿಸಿ ಮಾತನಾಡಿದರು. ವೈದ್ಯಕೀಯ ಸೇವೆಗೆ ಸದಾ ಸನ್ನದ್ದವಾಗಿರಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ..! ಬಾಲ್ಯದಲ್ಲಿಯೇ ಮಕ್ಕಳಲ್ಲಿರುವ ಸೃಜನಾತ್ಮಕ ಕಲೆಯನ್ನು ವೃದ್ಧಿಸಲು ಇಂತಹ ಶಿಬಿರಗಳು ಸಹಾಯವಾಗಲಿದೆ. ಮಕ್ಕಳಿಗೆ ಆಟ-ಪಾಠಗಳ ಜೊತೆಗೆ ನೃತ್ಯ, ಸಾಂಸ್ಕೃತಿಕ ಕಲೆ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಇಂತಹ ಶಿಬಿರಗಳು ಮೂಲ ಪ್ರೇರಣೆಯಾಗುತ್ತವೆ. ಮಕ್ಕಳ ಬೌದ್ಧಿಕ ವಿಕಾಸದೊಂದಿಗೆ ಭವಿಷ್ಯದ ಜೀವನಕ್ಕೆ ಮಾದರಿಯಾಗುತ್ತದೆ. ಮಕ್ಕಳು ಇಂತಹ ಶಿಬಿರಗಳ ಸದುಪಯೋಗ ಪಡೆದುಕೊಳ್ಳುವಂತಾಗಬೇಕು ಎಂದರು....
Top Stories
ವೈದ್ಯಕೀಯ ಸೇವೆಗೆ ಸದಾ ಸನ್ನದ್ದವಾಗಿರಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ..!
CBSE, SSLC ಫಲಿತಾಂಶ ಪ್ರಕಟ: ಮುಂಡಗೋಡ ಲೊಯೊಲಾ ಕೇಂದ್ರೀಯ ವಿದ್ಯಾಲಯ 100% ಫಲಿತಾಂಶದ ಸಾಧನೆ..! ಮಾನಸಿ ಸಿದ್ದಿ ಪ್ರಥಮ..!
ಕೊಲ್ಕೊತ್ತಾದ ಮೇಲೆ ದಾಳಿ ಮಾಡಿ ವಶ ಪಡಿಸಿಕೊಳ್ತಿವಿ, ಆತ್ಮಹತ್ಯಾ ಬಾಂಬ್, ತಾಲಿಬಾನಿ ಶೈಲಿಯ ದಾಳಿ ಮಾಡ್ತಿವಿ ಅಂತ ಅಂದವನು ಯಾರೀತ..?
ಭಾರತ-ಪಾಕಿಸ್ತಾನ ಪರಮಾಣು ಯುದ್ಧ ನಿಲ್ಲಿಸಲು ‘ಸಹಾಯ’ ಮಾಡಿದ್ದೇವೆ..! ಕದನ ವಿರಾಮಕ್ಕೆ ನಾವೇ ಕಾರಣ ಅಂದ “ದೊಡ್ಡಣ್ಣ”
ಪ್ರಧಾನಿ ಮೋದಿ ಭಾಷಣ ಮುಗಿಸಿದ ಕೆಲವೇ ಹೊತ್ತಲ್ಲಿ ಜಲಂಧರ್ ಬಳಿ ಕಣ್ಗಾವಲು ಡ್ರೋನ್ ಹೊಡೆದುರುಳಿಸಿದ ಸೇನೆ ; ವಿದ್ಯುತ್ ಸ್ಥಗಿತ
ಭಾರತದ ವಾಯುದಾಳಿಗೆ ನಡುಗಿದ ನೂರ್ ಖಾನ್, ವಾಯುನೆಲೆ ಮೇಲಿನ ದಾಳಿ ನಂತರ ಬಂಕರ್ ನಲ್ಲಿ ಅಡಗಿದ ಪಾಕ್ ಸೇನಾ ಮುಖ್ಯಸ್ಥ
ಬೆಳಗಾವಿಯ ಸಂತಿ ಬಸ್ತವಾಡದ ಮಸೀದಿಯಲ್ಲಿನ ಕುರಾನ್ ಸುಟ್ಟು ಹಾಕಿದ ಕಿಡಿಗೇಡಿಗಳು, ಪ್ರತಿಭಟನೆ..!
ಕ್ಷುಲಕ ಕಾರಣಕ್ಕೆ ಬಾಲಕರ ಜಗಳ, ಕೊಲೆಯಲ್ಲಿ ಅಂತ್ಯ.. 9ನೇ ತರಗತಿ ಬಾಲಕನಿಗೆ ಚಾಕು ಇರಿದ 6ನೇ ತರಗತಿ ಬಾಲಕ..!
ಆಪರೇಶನ್ ಸಿಂಧೂರ | ಪಾಕಿಸ್ತಾನದ ಮಿರಾಜ್ ಯುದ್ಧ ವಿಮಾನ, ಚೀನಾ ನಿರ್ಮಿತ ಏರ್ ಡಿಫೆನ್ಸ್ ಧ್ವಂಸ : ಸೇನೆಯಿಂದ ವೀಡಿಯೊ ಬಿಡುಗಡೆ..!
ಕಾರವಾರದಲ್ಲಿ ವೈಮಾನಿಕ ದಾಳಿ, ಸಾವಿರಾರು ಮಂದಿಯ ರಕ್ಷಣೆ..! ಬಾಂಬ್ ದಾಳಿ, 37 ಜನ ಬಚಾವ್..!!
ತೀವ್ರ ಅಪೌಷ್ಠಿಕತೆಯಿಂದ ಕೂಡಿದ ಮಕ್ಕಳನ್ನು ಸೂಕ್ತ ಚಿಕಿತ್ಸೆಗೆ ಒಳಪಡಿಸಿ : ಜಿಲ್ಲಾಧಿಕಾರಿ
ಪ್ರಸಕ್ತ ವರ್ಷದ “ಮಾನ್ಸೂನ್” ನಿಗದಿತ ಸಮಯಕ್ಕಿಂತಲೂ ಮುಂಚೇಯೇ ಆಗಮನ ಸಾಧ್ಯತೆ..!
ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಗಾಳಿ ಮಳೆ ; ಮುನ್ಸೂಚನೆ
ಕಾಮೆಡಿ ಕಿಲಾಡಿಯ ಹಾಸ್ಯ ಕಲಾವಿದ, ರಾಕೇಶ್ ಪೂಜಾರಿ ಇನ್ನಿಲ್ಲ..!
ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ದಾರುಣ ಸಾವು..!
ಪಾಕಿಸ್ತಾನದ 700 ಡ್ರೋನ್, ಕೆಲವು ಜೆಟ್ ಗಳು ಧ್ವಂಸ ; ಭಾರತದ ಎಲ್ಲ ಪೈಲಟ್ ಗಳು ಸುರಕ್ಷಿತ : ಡಿಜಿಎಂಒ
ಈ ಬಾರಿ “ಹಾವಿನ ತಲೆಗಳನ್ನು ಕೊಲ್ಲಲು ನಿರ್ಧರಿಸಿದೆ, ಕಾಲುಗಳನ್ನಲ್ಲ” ಭಾರತದ ಸ್ಪಷ್ಟ ಮಾತು..!
ಪಿಒಕೆ ಹಿಂತಿರುಗಿಸಿ, ಉಗ್ರರನ್ನು ಹಸ್ತಾಂತರಿಸಿ ; ಇದು ಬಿಟ್ಟು ಬೇರೆ ಮಾತುಕತೆ ಇಲ್ಲ; ಡಿಜಿಎಂಒ ಸಭೆಗೂ ಮುನ್ನ ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ
ಪಾಪಿಗಳ ರಕ್ತ ಹರಿಸದೇ ಕದನವಿರಾಮ ಆಗಿದ್ದನ್ನು ನಾವು ಒಪ್ಪುವುದಿಲ್ಲ: ಪ್ರಮೋದ್ ಮುತಾಲಿಕ್..!
ವೈದ್ಯಕೀಯ ಸೇವೆಗೆ ಸದಾ ಸನ್ನದ್ದವಾಗಿರಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ..!
ಕಾರವಾರ ಜಿಲ್ಲೆಯಲ್ಲಿ ಸಂಭವಿಸುವ ಯಾವುದೇ ರೀತಿಯ ಪ್ರಾಕೃತಿಕ ವಿಕೋಪ ಸೇರಿದಂತೆ ಎಲ್ಲಾ ತುರ್ತು ಸಂದರ್ಭಗಳಲ್ಲಿ ಗಾಯಾಳು ಸಂತ್ರಸ್ಥರಿಗೆ ವೈದ್ಯಕೀಯ ಸೇವೆ ನೀಡುವಲ್ಲಿ ಯಾವುದೇ ವಿಳಂಬವಾಗದಂತೆ ಸದಾ ಸನ್ನದ್ದ ಸ್ಥಿತಿಯಲ್ಲಿರುವಂತೆ ವೈದ್ಯಕೀಯ ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚನೆ ನೀಡಿದರು. ಅವರು ಮಂಗಳವಾರ ಕ್ರಿಮ್ಸ್ ನಲ್ಲಿ, ಪೊಲೀಸ್ ಇಲಾಖೆ , ಕೊಂಕಣ ರೈಲ್ವೆ, ಜಿಲ್ಲಾ ವಿಪ್ತು ನಿರ್ವಹಣಾ ಪ್ರಾಧಿಕಾರ, ವಿಪತ್ತು ನಿರ್ವಹಣೆ ಮತ್ತು ತಗ್ಗಿಸುವ ಕೇಂದ್ರ, ತೇಜಸ್ ವಿಪತ್ತು ನಿರ್ವಹಣೆ ಮತ್ತು ತಗ್ಗಿಸುವ ಕೇಂದ್ರ, ವಿಪತ್ತು ನಿರ್ವಹಣಾ ವಿಭಾಗ ಕರ್ಸ್ತೂಬಾ ಮೆಡಿಕಲ್ ಕಾಲೇಜು ಮಣಿಪಾಲ , ಕೈಗಾ , ಗ್ರಾಸಿಂ ಹಾಗೂ ಕಾರವಾರ ಮೆಡಿಕಲ್ ಕಾಲೇಜು ಸಹಯೋಗದಲ್ಲಿ ನಡೆದ , ವಿಪತ್ತು ಸಂದರ್ಭದಲ್ಲಿ ತುರ್ತು ವೈದ್ಯಕೀಯ ನೆರವು ಒದಗಿಸುವ ಕುರಿತ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು. CBSE, SSLC ಫಲಿತಾಂಶ ಪ್ರಕಟ: ಮುಂಡಗೋಡ ಲೊಯೊಲಾ ಕೇಂದ್ರೀಯ ವಿದ್ಯಾಲಯ 100% ಫಲಿತಾಂಶದ ಸಾಧನೆ..! ಮಾನಸಿ ಸಿದ್ದಿ ಪ್ರಥಮ..! ಜಿಲ್ಲೆಯಲ್ಲಿ ಅನೇಕ ಸೂಕ್ಷ್ಮ ಸ್ಥಳಗಳಿದ್ದು ಮಳೆಗಾಲದ ಸಂದರ್ಭದಲ್ಲಿ...
CBSE, SSLC ಫಲಿತಾಂಶ ಪ್ರಕಟ: ಮುಂಡಗೋಡ ಲೊಯೊಲಾ ಕೇಂದ್ರೀಯ ವಿದ್ಯಾಲಯ 100% ಫಲಿತಾಂಶದ ಸಾಧನೆ..! ಮಾನಸಿ ಸಿದ್ದಿ ಪ್ರಥಮ..!
ಮುಂಡಗೋಡ: CBSE , SSLC, ಫಲಿತಾಂಶ ಪ್ರಕಟವಾಗಿದೆ. ಮುಂಡಗೋಡಿನ ಲೊಯೊಲಾ ಕೇಂದ್ರೀಯ ವಿದ್ಯಾಲಯದ CBSE SSLC ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಶೇಕಡಾ 100 ರಷ್ಟು ಫಲಿತಾಂಶವಾಗಿದೆ. ಹೀಗಾಗಿ, ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವರ್ಗ ಸಂತಸ ವ್ಯಕ್ತಪಡಿಸಿದೆ. ಇನ್ನು ಮಾನಸಿ ಸಿದ್ಧಿ (500/452) 90.4 ಶೇಕಡಾ ಅಂಕಗಳೊಂದಿಗೆ ಪ್ರೌಢಶಾಲೆಗೆ ಪ್ರಥಮ ಸ್ಥಾನ ಪಡೆದು ಕೀರ್ತಿ ತಂದಿದ್ದಾಳೆ. ಅನ್ವೆಶ್ ನಾಯ್ಕ್ (500/443) 88.6 ಶೇಕಡಾ ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡದಿದ್ದಾನೆ. ರಿತೇಶ್ ಬಾಡ್ಕರ್ (500/442) 88.4 ಶೇಕಡಾ ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾನೆ. ಐಶ್ವರ್ಯ ವೇರ್ಣೇಕರ್-88.2%, ಮುಹಮ್ಮದ್ ಫಾಝಿಲ್- 87.6%, ದಿಶಾ ಜಾಲಗಾರ್-85.4%, ರಾಘವೇಂದ್ರ ಕಲಾಲ್ -83%, ಆದಿತ್ಯ ಚವಾಣ್- 82.2% ಕ್ರಮವಾಗಿ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಒಟ್ಟು, SSLC CBSE ಪರೀಕ್ಷೆ ಬರೆದೆ 42 ವಿದ್ಯಾರ್ಥಿಗಳಲ್ಲಿ 42 ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು, ಶೇಕಡಾ 75 ರಷ್ಟು ಅಂಕದೊಂದಿಗೆ15 ವಿದ್ಯಾರ್ಥಿಗಳು, ಶೆಕಡಾ 60 ರಷ್ಟು ಅಂಕಗಳೊಂದಿಗೆ 14 ವಿದ್ಯಾರ್ಥಿಗಳು, ಶೇಕಡಾ 50...
ಕೊಲ್ಕೊತ್ತಾದ ಮೇಲೆ ದಾಳಿ ಮಾಡಿ ವಶ ಪಡಿಸಿಕೊಳ್ತಿವಿ, ಆತ್ಮಹತ್ಯಾ ಬಾಂಬ್, ತಾಲಿಬಾನಿ ಶೈಲಿಯ ದಾಳಿ ಮಾಡ್ತಿವಿ ಅಂತ ಅಂದವನು ಯಾರೀತ..?
ಬಾಂಗ್ಲಾದೇಶದ ಇಸ್ಲಾಮಿಸ್ಟ್ ಎಂದು ನಂಬಲಾದ ವ್ಯಕ್ತಿಯೊಬ್ಬ ಆತ್ಮಹತ್ಯಾ ಬಾಂಬ್ ದಾಳಿ ಸೇರಿದಂತೆ ತಾಲಿಬಾನ್ ಶೈಲಿಯ ತಂತ್ರಗಳನ್ನು ಬಳಸಿಕೊಂಡು ಕೋಲ್ಕತ್ತಾದ ಮೇಲೆ ದಾಳಿ ಮಾಡಿ ವಶಪಡಿಸಿಕೊಳ್ಳುವ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ‘ವಾಯ್ಸ್ ಆಫ್ ಬಾಂಗ್ಲಾದೇಶಿ ಹಿಂದೂಸ್’ ಎಕ್ಸ್ ಹ್ಯಾಂಡಲ್ನಲ್ಲಿ ಈ ವ್ಯಕ್ತಿಯ ವೀಡಿಯೊ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ಆತ ತನ್ನ ಮಾತೃಭಾಷೆಯಲ್ಲಿ ಮಾತನಾಡುವುದನ್ನು ಕೇಳಬಹುದು. “ಬಾಂಗ್ಲಾದೇಶದ ಸೈನ್ಯ ಈಗ ಹೋಗಿ ಕೋಲ್ಕತ್ತಾ ವಶಪಡಿಸಿಕೊಳ್ಳಿ ಎಂದು ಹೇಳಿದರೆ, ನಾನು ಒಂದು ಯೋಜನೆ ಹಾಕುತ್ತೇನೆ. 70 ಫೈಟರ್ ಜೆಟ್ಗಳನ್ನು ಬಳಸುವುದನ್ನು ಮರೆತುಬಿಡಿ, ಕೋಲ್ಕತ್ತಾವನ್ನು ವಶಪಡಿಸಿಕೊಳ್ಳಲು ನಾನು ಏಳು ವಿಮಾನಗಳನ್ನು ಸಹ ಬಳಸುವುದಿಲ್ಲ. ನನಗೆ 70 ವಿಮಾನಗಳು ಏಕೆ ಬೇಕು? ಅಲ್ಲಿ ಯಾರು ವಾಸಿಸುತ್ತಾರೆ, ಪ್ರತಿಮೆಗಳನ್ನು ಪೂಜಿಸುವ ಜನರು ಎಂದು ನನಗೆ ತಿಳಿದಿದೆ” ಎಂದು ಆತ ಹಿಂದೂಗಳನ್ನು ಉಲ್ಲೇಖಿಸಿ ಹೇಳಿದ್ದಾನೆ. “ಅವರ ನೆಚ್ಚಿನ ಆಹಾರಗಳು ಮೂತ್ರ, ಸಗಣಿ ಮತ್ತು ಆಮೆಗಳಂತಹ ಕೊಳಕು ವಸ್ತುಗಳು ಎಂದು ನನಗೆ ತಿಳಿದಿದೆ, ಅವರು ಎಷ್ಟು ಕಡಿಮೆ ಅರ್ಥಮಾಡಿಕೊಳ್ಳುತ್ತಾರೆಂದು ನನಗೆ...
ಭಾರತ-ಪಾಕಿಸ್ತಾನ ಪರಮಾಣು ಯುದ್ಧ ನಿಲ್ಲಿಸಲು ‘ಸಹಾಯ’ ಮಾಡಿದ್ದೇವೆ..! ಕದನ ವಿರಾಮಕ್ಕೆ ನಾವೇ ಕಾರಣ ಅಂದ “ದೊಡ್ಡಣ್ಣ”
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಉಂಟಾದ ಉದ್ವಿಗ್ನತೆಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಲು ಉಭಯ ರಾಷ್ಟ್ರಗಳು ಒಪ್ಪಿಕೊಂಡ ಕೆಲವು ದಿನಗಳ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಕದನ ವಿರಾಮಕ್ಕೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ ಕೀರ್ತಿಯನ್ನು ಪಡೆದುಕೊಂಡಿದ್ದಾರೆ. ಅಮೆರಿಕ-ಚೀನಾ ವ್ಯಾಪಾರ ಒಪ್ಪಂದವನ್ನು ಘೋಷಿಸುವ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಟ್ರಂಪ್, “ಶನಿವಾರ, ನನ್ನ ಆಡಳಿತವು ಭಾರತ ಮತ್ತು ಪಾಕಿಸ್ತಾನದ ನಡುವೆ ತಕ್ಷಣದ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಲು ಸಹಾಯ ಮಾಡಿತು. ಅದು ಶಾಶ್ವತವಾದದ್ದು ಎಂದು ನಾನು ಭಾವಿಸುತ್ತೇನೆ. ಈ ದೇಶಗಳು ಸಾಕಷ್ಟು ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿವೆ” ಎಂದು ಹೇಳಿದರು. ಕದನ ವಿರಾಮದ ಕೀರ್ತಿ ತಮ್ಮದು ಎಂದು ಹೇಳಿಕೊಂಡರು. “ನಾವು ಪರಮಾಣು ಸಂಘರ್ಷವನ್ನು ನಿಲ್ಲಿಸಿದ್ದೇವೆ. ಅದು ಕೆಟ್ಟ ಪರಮಾಣು ಯುದ್ಧವಾಗಬಹುದಾಗಿತ್ತು, ಲಕ್ಷಾಂತರ ಜನರು ಕೊಲ್ಲಲ್ಪಡಬಹುದಿತ್ತು ಎಂದು ನಾನು ಭಾವಿಸುತ್ತೇನೆ. ಆದ್ದರಿಂದ ನನಗೆ ಅದರ ಬಗ್ಗೆ ತುಂಬಾ ಹೆಮ್ಮೆ ಇದೆ” ಎಂದು ಟ್ರಂಪ್ ಶ್ವೇತಭವನದಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಯುದ್ಧ ಮುಂದುವರಿದರೆ ವ್ಯಾಪಾರ ನಿಲ್ಲಿಸುವುದಾಗಿ...
ಪ್ರಧಾನಿ ಮೋದಿ ಭಾಷಣ ಮುಗಿಸಿದ ಕೆಲವೇ ಹೊತ್ತಲ್ಲಿ ಜಲಂಧರ್ ಬಳಿ ಕಣ್ಗಾವಲು ಡ್ರೋನ್ ಹೊಡೆದುರುಳಿಸಿದ ಸೇನೆ ; ವಿದ್ಯುತ್ ಸ್ಥಗಿತ
ನವದೆಹಲಿ: ಪಂಜಾಬ್ನ ಜಲಂಧರ್ನಲ್ಲಿ ಕಣ್ಗಾವಲು ಡ್ರೋನ್ ಪತ್ತೆಯಾಗಿದ್ದು, ಅದನ್ನು ಸಶಸ್ತ್ರ ಪಡೆಗಳು ಯಶಸ್ವಿಯಾಗಿ ತಡೆದಿವೆ ಎಂದು ಜಲಂಧರ ಉಪ ಆಯುಕ್ತರು ತಿಳಿಸಿದ್ದಾರೆ. ಸಶಸ್ತ್ರ ಪಡೆಗಳು ರಾತ್ರಿ 9:20 ರ ಸುಮಾರಿಗೆ ಮಾಂಡ್ ಗ್ರಾಮದ ಬಳಿ ಕಣ್ಗಾವಲು ಡ್ರೋನ್ ಅನ್ನು ಹೊಡೆದುರುಳಿಸಿದ್ದಾರೆ ಎಂದು ನನಗೆ ಮಾಹಿತಿ ಬಂದಿದೆ. ತಜ್ಞರ ತಂಡವು ಅವಶೇಷಗಳನ್ನು ಹುಡುಕುತ್ತಿದೆ” ಎಂದು ಜಲಂಧರ ಜಿಲ್ಲಾಧಿಕಾರಿ ಹಿಮಾಂಶು ಅಗರ್ವಾಲ್ ಸಂದೇಶದಲ್ಲಿ ತಿಳಿಸಿದ್ದಾರೆ. ಭಾರತದ ವಾಯುದಾಳಿಗೆ ನಡುಗಿದ ನೂರ್ ಖಾನ್, ವಾಯುನೆಲೆ ಮೇಲಿನ ದಾಳಿ ನಂತರ ಬಂಕರ್ ನಲ್ಲಿ ಅಡಗಿದ ಪಾಕ್ ಸೇನಾ ಮುಖ್ಯಸ್ಥ ಜನರು ಅವಶೇಷಗಳ ಬಳಿ ಹೋಗಬೇಡಿ ಮತ್ತು ಏನಾದರೂ ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಅವರು ವಿನಂತಿಸಿದ್ದಾರೆ. ಇತ್ತೀಚಿನ ಮಾಹಿತಿಯ ಪ್ರಕಾರ, “ಜಲಂಧರದಲ್ಲಿ ರಾತ್ರಿ 10 ಗಂಟೆಯಿಂದ ಯಾವುದೇ ಡ್ರೋನ್ ಚಟುವಟಿಕೆ ಕಂಡುಬಂದಿಲ್ಲ” ಎಂದು ಅವರು ದೃಢಪಡಿಸಿದ್ದಾರೆ. ಅಧಿಕಾರಿಗಳು ಯಾವಾಗಲೂ ಜಾಗರೂಕರಾಗಿರುತ್ತಾರೆ ಮತ್ತು ಚಿಂತಿಸಬೇಕಾಗಿಲ್ಲ ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು. ಕೆಲವು ಪ್ರದೇಶಗಳಲ್ಲಿ ವರದಿಯಾಗಿರುವಂತೆ ಜನರು ಶಾಂತವಾಗಬೇಕು...
ಭಾರತದ ವಾಯುದಾಳಿಗೆ ನಡುಗಿದ ನೂರ್ ಖಾನ್, ವಾಯುನೆಲೆ ಮೇಲಿನ ದಾಳಿ ನಂತರ ಬಂಕರ್ ನಲ್ಲಿ ಅಡಗಿದ ಪಾಕ್ ಸೇನಾ ಮುಖ್ಯಸ್ಥ
ಆಪರೇಷನ್ ಸಿಂಧೂರ ಹೆಸರಿನ ಭಾರತದ ಸೇನಾ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಸೇನೆಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ ನಡೆಸಿದ ನಿಖರ ದಾಳಿಯ ನಂತರ, ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರನ್ನು ರಾವಲ್ಪಿಂಡಿಯಲ್ಲಿರುವ ಜನರಲ್ ಹೆಡ್ಕ್ವಾರ್ಟರ್ಸ್ (GHQ) ನಲ್ಲಿರುವ ಸುರಕ್ಷಿತ ಬಂಕರ್ಗೆ ಸ್ಥಳಾಂತರಿಸಲಾಗಿದೆ ಎಂದು ಕೆಲ ವರದಿಗಳು ತಿಳಿಸಿವೆ. ಮೂಲಗಳು ಹೇಳುವಂತೆ ಪಾಕಿಸ್ತಾನಿ ಸೇನಾ ಮುಖ್ಯಸ್ಥರನ್ನು ಸುರಕ್ಷಿತ ಬಂಕರ್ಗೆ ಸ್ಥಳಾಂತರಿಸಿರುವುದು ಯುದ್ಧತಂತ್ರದ ಪ್ರತಿಕ್ರಿಯೆಯನ್ನು ಮಾತ್ರವಲ್ಲದೆ, ಭಾರತದ ಪ್ರಬಲ ಭೇದಿಸುವ ಸಾಮರ್ಥ್ಯವು ಪಾಕಿಸ್ತಾನದ ಮಿಲಿಟರಿ ನಾಯಕತ್ವದ ಮೇಲೆ ಬೀರಿರುವ ಮಾನಸಿಕ ಪ್ರಭಾವವನ್ನೂ ಪ್ರತಿಬಿಂಬಿಸುತ್ತದೆ. ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಮುನೀರ್ ತಾತ್ಕಾಲಿಕವಾಗಿ ಬಂಕರ್ ನಲ್ಲಿ ಆಶ್ರಯ ಪಡೆದಿರುವುದು ಪಾಕಿಸ್ತಾನದ ಉನ್ನತ ಅಧಿಕಾರಿಗಳಲ್ಲಿ ಹೆಚ್ಚಿದ ಅಭದ್ರತೆಯ ಭಾವನೆಯನ್ನು ಒತ್ತಿಹೇಳುತ್ತದೆ. ಭವಿಷ್ಯದ ದೃಷ್ಟಿಯಿಂದ ಅವರ ಕಾರ್ಯಾಚರಣೆಯ ನೆಲೆಯನ್ನು ಸ್ಥಳಾಂತರಿಸಲಾಗುವುದು ಎಂದು ವರದಿಗಳು ಈಗ ಸೂಚಿಸುತ್ತಿವೆ. ಪಾಕಿಸ್ತಾನವು ಭಾರತದ ಮಿಲಿಟರಿ ನೆಲೆಗಳು ಮತ್ತು ನಾಗರಿಕ ಮೂಲಸೌಕರ್ಯಗಳ ಮೇಲೆ ನಡೆಸಿದ ಸರಣಿ ಸಂಘಟಿತ ದಾಳಿಗಳಿಗೆ ಉತ್ತರವಾಗಿ ಭಾರತದ...
ಬೆಳಗಾವಿಯ ಸಂತಿ ಬಸ್ತವಾಡದ ಮಸೀದಿಯಲ್ಲಿನ ಕುರಾನ್ ಸುಟ್ಟು ಹಾಕಿದ ಕಿಡಿಗೇಡಿಗಳು, ಪ್ರತಿಭಟನೆ..!
ಬೆಳಗಾವಿ : ತಾಲೂಕಿನ ಸಂತಿಬಸ್ತವಾಡ ಮಸೀದಿಯೊಂದರಲ್ಲಿ ಇಸ್ಲಾಂ ಧರ್ಮದ ಗ್ರಂಥ ಕುರಾನ್ (Quran) ಪುಸ್ತಕ ಸುಟ್ಟು ಹಾಕಿರುವ ಘಟನೆ ಬೆಳಕಿಗೆ ಬಂದಿದ್ದು, ಆಕ್ರೋಶ ಭುಗಿಲೆದ್ದಿದೆ. ಸಂತಿಬಸ್ತವಾಡ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮಸೀದಿಯ ಕೆಳಮಹಡಿಯಲ್ಲಿದ್ದ ಕುರಾನ್ ಪುಸ್ತಕವನ್ನು ಕದ್ದೊಯ್ದು ಸುಟ್ಟು ಹಾಕಲಾಗಿದೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಆರೋಪಿಗಳ ಬಂಧನಕ್ಕಾಗಿ ತಂಡ ರಚನೆ ಮಾಡಲಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದರು. ಸೋಮವಾರ ಪ್ರಾರ್ಥನೆ ಮಾಡಲು ಮಸೀದಿಗೆ ಆಗಮಿಸಿದ ವೇಳೆ ಕುರಾನ್, ಹದೀಸ್ ನಾಪತ್ತೆಯಾಗಿರುವುದು ಕಂಡುಬಂದಿದೆ. ಪ್ರಾರ್ಥನೆ ಮುಗಿದ ಬಳಿಕ ಸುತ್ತಮುತ್ತ ಹುಡುಕಾಟ ನಡೆಸಿದಾಗ ಸುಟ್ಟು ಹಾಕಿರುವುದು ಬೆಳಕಿಗೆ ಬಂದಿದೆ. ಘಟನೆ ಖಂಡಿಸಿ ಬೆಳಗಾವಿ ನಗರದಲ್ಲಿ ಸಾವಿರಾರು ಮುಸ್ಲಿಂ ಸಮುದಾಯದಿಂದ ಬೃಹತ್ ಪ್ರತಿಭಟನೆ ನಡೆಯಿತು. ಕ್ಷುಲಕ ಕಾರಣಕ್ಕೆ ಬಾಲಕರ ಜಗಳ, ಕೊಲೆಯಲ್ಲಿ ಅಂತ್ಯ.. 9ನೇ ತರಗತಿ ಬಾಲಕನಿಗೆ ಚಾಕು ಇರಿದ 6ನೇ ತರಗತಿ ಬಾಲಕ..! ಬೆಳಗಾವಿ ಪೊಲೀಸ್ ಆಯುಕ್ತ ಇಯಾಡಾ ಮಾರ್ಟಿನ್...
ಕ್ಷುಲಕ ಕಾರಣಕ್ಕೆ ಬಾಲಕರ ಜಗಳ, ಕೊಲೆಯಲ್ಲಿ ಅಂತ್ಯ.. 9ನೇ ತರಗತಿ ಬಾಲಕನಿಗೆ ಚಾಕು ಇರಿದ 6ನೇ ತರಗತಿ ಬಾಲಕ..!
ಕ್ಷುಲ್ಲಕ ಕಾರಣಕ್ಕೆ 9ನೇ ತರಗತಿ ಓದುತ್ತಿದ್ದ ಬಾಲಕನೊರ್ವನಿಗೆ, 6ನೇ ತರಗತಿ ಓದುತ್ತಿದ್ದ ಮತ್ತೋರ್ವ ಬಾಲಕ ಚಾಕುವಿನಿಂದ ಇರಿದ ಪರಿಣಾಮ ಬಾಲಕ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಕಮರಿಪೇಟೆಯ ಜೀ ಅಡ್ಡಾದಲ್ಲಿ ನಡೆದಿದೆ. ಚೇತನ ರಕ್ಕಸಗಿ (12:)ಎಂಬಾತ ಚಾಕು ಇರಿತಕ್ಕೆ ಸಾವನ್ನಪ್ಪಿದ್ದಾನೆ. ಇನ್ನು ಸಾಯಿ ಹಬೀಬ್ ಎಂಬಾತ ಚಾಕು ಇರಿದಿದ್ದಾನೆ ಎಂದು ತಿಳಿದುಬಂದಿದೆ. ಎಂದಿನಂತೆ ಚೇತನ ಮನೆಯಲ್ಲಿ ಚಹ ಕುಡಿದು, ಮೊದಲೇ ಮನೆಯಲ್ಲಿ ಸಂಬಂಧಿಕರ ಮದುವೆ ಹಿನ್ನೆಲೆಯಲ್ಲಿ ತನಗೆ ಹೊಸ ಬಟ್ಟೆ ತರುವಂತೆ ತನ್ನ ತಾಯಿಗೆ ತಿಳಿಸಿ ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಸಾಯಿ ಹಬೀಬ್ ಜೊತೆಗೆ ಜಗಳ ಏರ್ಪಟಿದೆ, ಈ ವೇಳೆ ಸಾಯಿ ಹಬೀಬ್ ರೇಡಿಯಂ ಕಟರ್ ದಿಂದ ಇರಿದಿದ್ದಾನೆ. ಪರಿಣಾಮ ಚೇತನ್ ಗಂಭೀರವಾಗಿ ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ಆಪರೇಶನ್ ಸಿಂಧೂರ | ಪಾಕಿಸ್ತಾನದ ಮಿರಾಜ್ ಯುದ್ಧ ವಿಮಾನ, ಚೀನಾ ನಿರ್ಮಿತ ಏರ್ ಡಿಫೆನ್ಸ್ ಧ್ವಂಸ : ಸೇನೆಯಿಂದ ವೀಡಿಯೊ ಬಿಡುಗಡೆ..! ಈ ಕುರಿತಂತೆ ಹುಬ್ಬಳ್ಳಿಯ...
ಆಪರೇಶನ್ ಸಿಂಧೂರ | ಪಾಕಿಸ್ತಾನದ ಮಿರಾಜ್ ಯುದ್ಧ ವಿಮಾನ, ಚೀನಾ ನಿರ್ಮಿತ ಏರ್ ಡಿಫೆನ್ಸ್ ಧ್ವಂಸ : ಸೇನೆಯಿಂದ ವೀಡಿಯೊ ಬಿಡುಗಡೆ..!
ನವದೆಹಲಿ: ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವಿಗೀಡಾದ ಘಟನೆಗೆ ಪ್ರತಿಯಾಗಿ ಆರಂಭಿಸಲಾದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಯಲ್ಲಿ ಪಾಕಿಸ್ತಾನದ ಮಿರಾಜ್ ಯುದ್ಧ ವಿಮಾನವನ್ನು ಹೊಡೆದುರುಳಿಸಿರುವುದಾಗಿ ಭಾರತ ಸೋಮವಾರ ತಿಳಿಸಿದೆ. ಭಾರತೀಯ ಸೇನೆಯು X ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ ಪಾಕಿಸ್ತಾನದ ಮಿರಾಜ್ ಜೆಟ್ನ ತುಂಡಾಗಿ ಬಿದ್ದಿರುವ ಅವಶೇಷಗಳು ಕಂಡುಬಂದಿವೆ. ಪಾಕಿಸ್ತಾನದ ಮಿರಾಜ್ ಜೆಟ್ ಅನ್ನು ಹೊಡೆದುರುಳಿಸಲಾಗಿದೆ ಎಂದು ಭಾರತೀಯ ಸಶಸ್ತ್ರ ಪಡೆಗಳ ಹಿರಿಯ ಅಧಿಕಾರಿಗಳು ಸೋಮವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ. ಈ ಬ್ರೀಫಿಂಗ್ಗೆ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ (DGMO) ಲೆಫ್ಟಿನೆಂಟ್ ಜನರಲ್ ರಾಜೀವ ಘಾಯ್, ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕ ಏರ್ ವೈಸ್ ಮಾರ್ಷಲ್ ಎಕೆ ಭಾರ್ತಿ ಮತ್ತು ನೌಕಾ ಕಾರ್ಯಾಚರಣೆಗಳ ಮಹಾನಿರ್ದೇಶಕ ವೈಸ್ ಅಡ್ಮಿರಲ್ ಎ.ಎನ್. ಪ್ರಮೋದ್ ಜಂಟಿಯಾಗಿ ಪತ್ರಿಕಾಗೋಷ್ಠಿ ನಡೆಸಿದರು. ಕಾರವಾರದಲ್ಲಿ ವೈಮಾನಿಕ ದಾಳಿ, ಸಾವಿರಾರು ಮಂದಿಯ ರಕ್ಷಣೆ..! ಬಾಂಬ್ ದಾಳಿ, 37 ಜನ ಬಚಾವ್..!! ಎರಡೂ ದೇಶಗಳ ನಡುವಿನ ದಿನಗಟ್ಟಲೆ ನಡೆದ ಮಿಲಿಟರಿ...