ನವದೆಹಲಿ: ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕಲು ಗಡುವು ವಿಧಿಸಿ ಸುಪ್ರೀಂ ಕೋರ್ಟ್ ಇತ್ತೀಚಿಗೆ ನೀಡಿದ್ದ ತೀರ್ಪಿನ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನದ 143 (1)ನೇ ವಿಧಿಯಡಿ ಸುಪ್ರೀಂ ಕೋರ್ಟ್ಗೆ ಪತ್ರ ಬರೆದಿದ್ದು, ಅದರಲ್ಲಿ 14 ಪ್ರಶ್ನೆಗಳನ್ನು ಕೇಳಿದ್ದಾರೆ. ಪತ್ರಕ್ಕೆ ಉತ್ತರ ನೀಡಲು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ರಚಿಸಬೇಕಿದೆ. ಸಂವಿಧಾನದ 143(1) ನೇ ವಿಧಿಯು ಕಾನೂನು ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳಲ್ಲಿ ರಾಷ್ಟ್ರಪತಿಗಳು ಸುಪ್ರೀಂ ಕೋರ್ಟ್ನ ಅಭಿಪ್ರಾಯ ಪಡೆಯಲು ಅವಕಾಶ ನೀಡುತ್ತದೆ. ಮಸೂದೆಗಳಿಗೆ ಒಪ್ಪಿಗೆ ನೀಡಲು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಗಡುವು ಪಾಲಿಸದೆ ಹೋದರೆ ಆಗ ಅದನ್ನು ಅವರಿಂದ ಸಮ್ಮತಿ ದೊರೆತಿದೆ ಎಂದು ಭಾವಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನವನ್ನು ರಾಷ್ಟ್ರಪತಿ ಮುರ್ಮು ಅವರು ನಿರ್ದಿಷ್ಟವಾಗಿ ಪ್ರಶ್ನಿಸಿದ್ದಾರೆ. ಸಂವಿಧಾನದಲ್ಲಿ ಅಂತಹ ಯಾವುದೇ ಗಡುವು/ಷರತ್ತು ಇಲ್ಲದಿರುವಾಗ ಸುಪ್ರೀಂಕೋರ್ಟ್ ಅಂತಹ ತೀರ್ಪು ನೀಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು...
Top Stories
ರಾಜ್ಯದ 200 ಪೊಲೀಸ್ರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ಪುರಸ್ಕಾರ ಘೋಷಣೆ..!
ಸೇನೆ ಬರ್ಲಿ ನೋಡ್ಕೊಳ್ತೇನೆ; ಎನ್ಕೌಂಟರಿನಲ್ಲಿ ಸಾಯುವ ಸ್ವಲ್ಪ ಮೊದಲು ತಾಯಿ ಜೊತೆ ಭಯೋತ್ಪಾದಕ ವೀಡಿಯೊ ಕರೆಯಲ್ಲಿ ಮಾತನಾಡಿದ ದೃಶ್ಯ ವೈರಲ್..!
ಭಾರತೀಯ ಸಂಜಾತ ಲೇಖಕ ಸಲ್ಮಾನ್ ರಶ್ದಿ ಇರಿದ ವ್ಯಕ್ತಿಗೆ 25 ವರ್ಷ ಜೈಲು ಶಿಕ್ಷೆ..!
ಈಗ ಯೂ ಟರ್ನ್ ; ಪಾಕಿಸ್ತಾನ ಸೇನೆ ವಾಯುನೆಲೆಗಳ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪ್ರಧಾನಿ ಶೆಹಬಾಜ್ ಷರೀಫ್..!
ಪಾಕಿಸ್ತಾನ ಪರ ಬೇಹುಗಾರಿಕೆ, ಹರಿಯಾಣ ಮೂಲದ ಯೂಟ್ಯೂಬರ್ ಸೇರಿ 6 ಜನರ ಬಂಧನ..!
ಸಿಗರೇಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಸಾಫ್ಟ್ವೇರ್ ಉದ್ಯೋಗಿಯ ಮೇಲೆ ಕಾರು ಹರಿಸಿದ ಬೆಂಗಳೂರಿನ ವ್ಯಕ್ತಿ..!
ಭಾರತದ ವಿರುದ್ಧ ಪಾಕಿಸ್ತಾನದ ದಾಳಿಗಳಿಗೆ ಚೀನಾದ ಬೆಂಬಲ ; ಇಲ್ಲಿವೆ ಪ್ರಮುಖ ಪುರಾವೆಗಳು..!
ಜಿಲ್ಲಾ ಮಟ್ಟದ ಜನ ಸ್ಪಂದನ ಕಾರ್ಯಕ್ರಮದಲ್ಲಿ 104 ಅರ್ಜಿಗಳ ವಿಚಾರಣೆ, ಎಲ್ಲಾ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಿ: ಸಚಿವ ಮಂಕಾಳ ವೈದ್ಯ
ಜಿಲ್ಲೆಯ ಕಟ್ಟ ಕಡೆಯ ವ್ಯಕ್ತಿಯ ಪರವಾಗಿ ನಾನಿದ್ದೇನೆ; ಸಚಿವ ಮಂಕಾಳ ವೈದ್ಯ ಹೇಳಿಕೆ..!
ತಾಳಿ ಕಟ್ಟಿದ ಮರುಕ್ಷಣವೇ ಮದುಮಗನೇ ಹೆಣವಾದ, ಜಮಖಂಡಿಯಲ್ಲಿ ಹೃದಯ ವಿದ್ರಾವಕ ಘಟನೆ..!
ಅಂತಾರಾಷ್ಟ್ರೀಯ ಭಯೋತ್ಪಾದಕ ಮಸೂದ್ ಅಜರಗೆ ಪಾಕಿಸ್ತಾನದಿಂದ 14 ಕೋಟಿ ರೂ…’: ಪಾಕ್ ಭಯೋತ್ಪಾದನಾ ಯೋಜನೆಗಳ ಬಗ್ಗೆ ರಾಜನಾಥ ಸಿಂಗ್..!
ಟ್ರಾಕ್ಟರ್ ಗೆ ಹಿಂಬದಿಯಿಂದ ಗುದ್ದಿದ ಕಾರ್, ನಾಲ್ವರು ಸ್ಥಳದಲ್ಲೇ ಸಾವು, ಓರ್ವ ಗಂಭೀರ..!
ಉತ್ತರ ಕನ್ನಡದಲ್ಲಿ ಗ್ಯಾರಂಟಿಗೆ “ಶಕ್ತಿ” ತುಂಬಿದ ಮಹಿಳೆಯರು..! ಶಕ್ತಿ ಯೋಜನೆಯಡಿ 11.81 ಕೋಟಿ ಮಹಿಳೆಯರ ಪ್ರಯಾಣ..!
ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣ ; ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್..!
ಸಂಸತ್ತಿನಲ್ಲಿ ಪಾಕಿಸ್ತಾನ ವಾಯುಪಡೆ ಹೊಗಳಲು ʼನಕಲಿ ಸುದ್ದಿʼ ಉಲ್ಲೇಖಿಸಿ ತಮ್ಮ ದೇಶದ ಮಾಧ್ಯಮಗಳಿಂದಲೇ ನಗೆಪಾಟಲಿಗೀಡಾದ ಪಾಕ್ ಉಪಪ್ರಧಾನಿ..!
ವಿಕಲಚೇತನರಿಗೆ ಸಾಧನ ಸಲಕರಣೆ, ಪರಿಕರ ಮತ್ತು ತ್ರಿಚಕ್ರ ವಾಹನಗಳ ಜಿಲ್ಲಾ ಮಟ್ಟದ ವಿತರಣಾ ಕಾರ್ಯಕ್ರಮ
ಹಿಂದೂ ಸಂಘಟನೆ ಮುಖಂಡ ಪುನೀತ ಕೆರೆಹಳ್ಳಿಗೆ ಜೀವ ಬೆದರಿಕೆ ಕರೆ..!
ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ.
ಕರ್ನಾಟಕದ 23 ಜಿಲ್ಲೆಗಳಲ್ಲಿ 3 ದಿನ ಮಳೆ ಮುನ್ಸೂಚನೆ..!
ರಾಜ್ಯದ 200 ಪೊಲೀಸ್ರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ಪುರಸ್ಕಾರ ಘೋಷಣೆ..!
ಕರ್ನಾಟಕದಲ್ಲಿ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಪೊಲೀಸ್ ಇಲಾಖೆಯಲ್ಲಿ ಸಾಧಕರಿಗೆ ಬೆನ್ನು ತಟ್ಟುವ ಕಾರ್ಯ ನಡೀತಿದೆ. ಮೊದಲ ಬಾರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ರ ಅಡಿ ಪುರಸ್ಕಾರಕ್ಕೆ ರಾಜ್ಯದ 200 ಪೊಲೀಸ್ ಅಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅದ್ರಲ್ಲಿ ಉತ್ತರ ಕನ್ನಡದ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಈ ಪುರಸ್ಕಾರ ಘೋಷಣೆಯಾಗಿದೆ. ಉತ್ತರ ಕನ್ನಡ ಎಸ್ಪಿ ನಾರಾಯಣ ಎಂ. ರವರಿಗೆ ಹಾಗೂ ರಾಮನಗರ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸಿ, ಸದ್ಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸ್ತಿರೋ ಪಿಎಸ್ಐ ಬಸವರಾಜ್ ಮಬನೂರರನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಅಂದಹಾಗೆ, ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ಪರವಾದ ನಿಷ್ಟೆ, ಸಾಧನೆಗಳನ್ನು ಗುರುತಿಸಿ ಈ ಪುರಸ್ಕಾರ ನೀಡಲಾಗ್ತಿದೆ. ಹೀಗಾಗಿ, ಉತ್ತರ ಕನ್ನಡದ ಎಸ್ಪಿ ನಾರಾಯಣ್ ಎಂ. ಹಾಗೂ ಹಳಿಯಾಳ ಪಿಎಸ್ಐ ಬಸವರಾಜ್ ಮಬನೂರು ಪುರಸ್ಕಾರಕ್ಕೆ ಆಯ್ಕೆಯಾಗಿದ್ದು ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯ ಅಧಿಕಾರಿಗಳು ಅಭಿನಂದಿಸಿದ್ದಾರೆ.
ಸೇನೆ ಬರ್ಲಿ ನೋಡ್ಕೊಳ್ತೇನೆ; ಎನ್ಕೌಂಟರಿನಲ್ಲಿ ಸಾಯುವ ಸ್ವಲ್ಪ ಮೊದಲು ತಾಯಿ ಜೊತೆ ಭಯೋತ್ಪಾದಕ ವೀಡಿಯೊ ಕರೆಯಲ್ಲಿ ಮಾತನಾಡಿದ ದೃಶ್ಯ ವೈರಲ್..!
ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ಅಮೀರ್ ನಜೀರ್ ವಾನಿ ಮತ್ತು ಆತನ ತಾಯಿಯ ನಡುವಿನ ಮಾತುಕತೆಯನ್ನು ತೋರಿಸುವ ವೀಡಿಯೊ ಕ್ಲಿಪ್ ಹೊರಬಿದ್ದಿದೆ. ಮಾತುಕತೆಯ ಸಮಯದಲ್ಲಿ ತಾಯಿ ತನ್ನ ಮಗನಿಗೆ ಭದ್ರತಾ ಪಡೆಗಳಿಗೆ ಶರಣಾಗುವಂತೆ ಬೇಡಿಕೊಂಡಿದ್ದಾಳೆ. ಗುರುವಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ವಾನಿ ಹತನಾಗುವ ಸ್ವಲ್ಪ ಸಮಯದ ಮೊದಲು ವೀಡಿಯೊ ಕರೆ ಮೂಲಕ ತಾಯಿ ಜೊತೆ ಮಾತನಾಡಿದ್ದಾನೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಈ ಕ್ಲಿಪ್ನಲ್ಲಿ, ಭಯೋತ್ಪಾದಕ ವಾನಿ ತನ್ನ ತಾಯಿಯೊಂದಿಗೆ ಮಾತನಾಡುತ್ತಿರುವಾಗ ಎಕೆ -47 ಗನ್ ಹಿಡಿದುಕೊಂಡಿರುವುದು ಕಂಡುಬರುತ್ತದೆ. ಅದು ಆತನ ಕೊನೆಯ ಮಾತುಕತೆಯಾಗಿತ್ತು. “ದಯವಿಟ್ಟು ಶರಣಾಗು” ಎಂದು ಅವನ ತಾಯಿ ಬೇಡಿಕೊಳ್ಳುತ್ತಿರುವುದು ಕೇಳಿಸುತ್ತದೆ, ಆದರೆ ವಾನಿ ನಿರಾಕರಿಸಿ, “ಸೈನ್ಯ ಮುಂದೆ ಬರಲಿ, ನಂತರ ನಾನು ನೋಡಿಕೊಳ್ಳುತ್ತೇನೆ” ಎಂದು ಉತ್ತರಿಸಿದ್ದಾನೆ. ಭದ್ರತಾ ಪಡೆಗಳ ಜೊತೆ ಗುಂಡಿನ ಚಕಮಕಿ ಆರಂಭವಾಗುವ ಮುನ್ನ ವಾನಿ ಅಡಗಿಕೊಂಡಿದ್ದ ಮನೆಯಿಂದ ವೀಡಿಯೊ ಕರೆ ಮಾಡಲಾಗಿತ್ತು. ಆತನ ತಾಯಿಯಲ್ಲದೆ, ವಾನಿಯ ಸಹೋದರಿ ಕೂಡ ಆತನೊಂದಿಗೆ...
ಭಾರತೀಯ ಸಂಜಾತ ಲೇಖಕ ಸಲ್ಮಾನ್ ರಶ್ದಿ ಇರಿದ ವ್ಯಕ್ತಿಗೆ 25 ವರ್ಷ ಜೈಲು ಶಿಕ್ಷೆ..!
ನ್ಯೂಯಾರ್ಕ್: 2022 ರಲ್ಲಿ ನ್ಯೂಯಾರ್ಕ್ ಉಪನ್ಯಾಸ ವೇದಿಕೆಯಲ್ಲಿ ಖ್ಯಾತ ಲೇಖಕ ಹಾಗೂ ಭಾರತದ ಸಂಜಾತ ಸಲ್ಮಾನ್ ರಶ್ದಿ ಅವರನ್ನು ಇರಿದು, ಅವರ ಒಂದು ಕಣ್ಣನ್ನು ಕುರುಡನನ್ನಾಗಿ ಮಾಡಿದ ಆರೋಪದ ಮೇಲೆ ಶಿಕ್ಷೆಗೊಳಗಾದ ವ್ಯಕ್ತಿಗೆ ಶುಕ್ರವಾರ 25 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು.27 ವರ್ಷದ ಹಾದಿ ಮತರ್ ಎಂಬಾತನನ್ನು ಕೊಲೆ ಯತ್ನ ಮತ್ತು ಹಲ್ಲೆಯ ಆರೋಪದಲ್ಲಿ ತಪ್ಪಿತಸ್ಥರೆಂದು ನ್ಯಾಯಾಧೀಶರು ಫೆಬ್ರವರಿಯಲ್ಲಿ ತೀರ್ಪು ನೀಡಿದ್ದರು. ಪಶ್ಚಿಮ ನ್ಯೂಯಾರ್ಕ್ ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ, 77 ವರ್ಷದ ಸಲ್ಮಾನ್ ರಶ್ದಿ ಪ್ರಮುಖ ಸಾಕ್ಷಿಯಾಗಿದ್ದರು, ಚೌಟೌಕ್ವಾ ಸಂಸ್ಥೆಯಲ್ಲಿ ಬರಹಗಾರರ ಸುರಕ್ಷತೆಯ ಬಗ್ಗೆ ಮಾತನಾಡಲು ಅವರನ್ನು ಪರಿಚಯಿಸುತ್ತಿದ್ದಾಗ ಮುಸುಕುಧಾರಿ ದಾಳಿಕೋರನೊಬ್ಬ ಅವರ ತಲೆ ಮತ್ತು ದೇಹಕ್ಕೆ ಒಂದು ಡಜನ್ಗಿಂತಲೂ ಹೆಚ್ಚು ಬಾರಿ ಚಾಕುವಿನಿಂದ ಚುಚ್ಚಿದ್ದ ಎಂಬುದನ್ನು ವಿವರಿಸಿದರು.ಶಿಕ್ಷೆ ವಿಧಿಸುವ ಮೊದಲು, ಮಾತರ್ ನಿಂತುಕೊಂಡು ವಾಕ್ ಸ್ವಾತಂತ್ರ್ಯದ ಬಗ್ಗೆ ಹೇಳಿಕೆ ನೀಡಿದ ಹಾಗೂ ಅದರಲ್ಲಿ ಅವರು ರಶ್ದಿಯನ್ನು ಕಪಟಿ ಎಂದು ಕರೆದ. ರಶ್ದಿಯವರ ಕೊಲೆ ಯತ್ನಕ್ಕಾಗಿ ಮಟರ್ಗೆ ಗರಿಷ್ಠ 25 ವರ್ಷಗಳ...
ಈಗ ಯೂ ಟರ್ನ್ ; ಪಾಕಿಸ್ತಾನ ಸೇನೆ ವಾಯುನೆಲೆಗಳ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪ್ರಧಾನಿ ಶೆಹಬಾಜ್ ಷರೀಫ್..!
ನವದೆಹಲಿ : ಹಲವು ದಿನಗಳಿಂದಲೂ ನಿರಾಕರಿಸುತ್ತಲೇ ಬಂದಿದ್ದ ಕೊನೆಗೂ ಭಾರತದ ಸೇನೆಯು ತನ್ನ ವಾಯುನೆಲೆಗಳ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದೆ ಎಂಬುದನ್ನು ಪಾಕಿಸ್ತನವು ಬಹಿರಂಗವಾಗಿ ಒಪ್ಪಿಕೊಂಡಿದೆ. ಸ್ವತಃ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಮೇ 10 ರಂದು ಆಪರೇಶನ್ ಸಿಂದೂರ ಅಡಿಯಲಲಿ ಹಾರಿಸಲಾದ ಭಾರತದ ಕ್ಷಿಪಣಿಗಳು ಪಾಕಿಸ್ತಾನದ ಸೇನೆಯ ವಾಯುನೆಲೆಗಳ ದಾಳಿ ಮಾಡಿದೆ ಎಂದು ಒಪ್ಪಿಕೊಂಡಿದ್ದಾರೆ. ಶುಕ್ರವಾರ ‘ಯೂಮ್-ಎ-ತಶಕೂರ್’ ಆಚರಣೆಯ ಭಾಗವಾಗಿ ಪಾಕಿಸ್ತಾನಿ ಸೈನಿಕರನ್ನು ಉದ್ದೇಶಿಸಿ ಮಾತನಾಡುವಾಗ ಷರೀಫ್ ಭಾರತದ ದಾಳಿಯನ್ನು ಒಪ್ಪಿಕೊಂಡಿದ್ದಾರೆ. ಪಾಕಿಸ್ತಾನ ಶುಕ್ರವಾರ ಮಿಲಿಟರಿಗೆ ಗೌರವ ಸಲ್ಲಿಸಲು ‘ಯೂಮ್-ಎ-ತಶಕೂರ್’ (ಧನ್ಯವಾದ ದಿನ) ಆಚರಿಸಿತು. ಶನಿವಾರ ಇಸ್ಲಾಮಾಬಾದ್ನಲ್ಲಿರುವ ಪಾಕಿಸ್ತಾನ ಸ್ಮಾರಕದಲ್ಲಿ ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಷರೀಫ್, “ಮೇ 9-10 ರ ಮಧ್ಯರಾತ್ರಿ, ಬೆಳಗಿನ ಜಾವ 2:30 ರ ಸುಮಾರಿಗೆ, ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಸುರಕ್ಷಿತ ಮಾರ್ಗದ ಮೂಲಕ ನನಗೆ ಕರೆ ಮಾಡಿ, ಹಿಂದೂಸ್ತಾನಿ ಬ್ಯಾಲಿಸ್ಟಿಕ್ ಕ್ಷಿಪಣಿಗಳು ನೂರ್ ಖಾನ್ ವಾಯುನೆಲೆ ಮತ್ತು ಇತರ ಪ್ರದೇಶಗಳನ್ನು ಹೊಡೆದಿವೆ ಎಂದು ನನಗೆ...
ಪಾಕಿಸ್ತಾನ ಪರ ಬೇಹುಗಾರಿಕೆ, ಹರಿಯಾಣ ಮೂಲದ ಯೂಟ್ಯೂಬರ್ ಸೇರಿ 6 ಜನರ ಬಂಧನ..!
ನವದೆಹಲಿ: ಪಾಕಿಸ್ತಾನಿ ಆಪರೇಟಿವ್ಸ್ ಗಳಿಗೆ ಸೂಕ್ಷ್ಮ ಮಾಹಿತಿಯನ್ನು ರವಾನಿಸಿದ ಆರೋಪದ ಮೇಲೆ ಹರಿಯಾಣ ಮೂಲದ ಟ್ರಾವೆಲ್ ಬ್ಲಾಗರ್ ಸೇರಿದಂತೆ ಆರು ಭಾರತೀಯ ಪ್ರಜೆಗಳನ್ನು ಬಂಧಿಸಲಾಗಿದೆ. ಈ ಜಾಲವು ಹರಿಯಾಣ ಮತ್ತು ಪಂಜಾಬಿನಾದ್ಯಂತ ವ್ಯಾಪಿಸಿದ್ದು, ಪ್ರಮುಖ ಕಾರ್ಯಕರ್ತರು ಏಜೆಂಟ್ಗಳು, ಹಣಕಾಸು ಮಾರ್ಗದರ್ಶಕರು ಮತ್ತು ಮಾಹಿತಿದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಆರೋಪಿಗಳಲ್ಲಿ ಹರಿಯಾಣ ಮೂಲದ ಟ್ರಾವೆಲ್ ಬ್ಲಾಗರ್ ಜ್ಯೋತಿ ಮಲ್ಹೋತ್ರಾ ಕೂಡ ಒಬ್ಬರು, ಅವರು “ಟ್ರಾವೆಲ್ ವಿತ್ ಜೋ” ಎಂಬ ಯೂಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿದ್ದರು. ಕಮಿಷನ್ ಏಜೆಂಟ್ಗಳ ಮೂಲಕ ವೀಸಾ ಪಡೆದ ನಂತರ ಅವರು 2023 ರಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಅವರ ಪ್ರವಾಸದ ಸಮಯದಲ್ಲಿ, ಅವರು ನವದೆಹಲಿಯ ಪಾಕಿಸ್ತಾನ ಹೈಕಮಿಷನ್ನ ಸಿಬ್ಬಂದಿ ಸದಸ್ಯ ಎಹ್ಸಾನ್-ಉರ್-ರಹೀಮ್ ಅಲಿಯಾಸ್ ಡ್ಯಾನಿಶ್ ಅವರೊಂದಿಗೆ ನಿಕಟ ಸಂಬಂಧ ಹೊಂದಿದ್ದಳು. ತಾಳಿ ಕಟ್ಟಿದ ಮರುಕ್ಷಣವೇ ಮದುಮಗನೇ ಹೆಣವಾದ, ಜಮಖಂಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಸರ್ಕಾರದಿಂದ ಪರ್ಸನಾ ನಾನ್ ಗ್ರಾಟಾ ಎಂದು ಘೋಷಿಸಲ್ಪಟ್ಟ ಮತ್ತು ಮೇ...
ಸಿಗರೇಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಸಾಫ್ಟ್ವೇರ್ ಉದ್ಯೋಗಿಯ ಮೇಲೆ ಕಾರು ಹರಿಸಿದ ಬೆಂಗಳೂರಿನ ವ್ಯಕ್ತಿ..!
ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ಬೆಂಗಳೂರಿನಲ್ಲಿ ನಡೆದ ಆಘಾತಕಾರಿ ಹಿಟ್ ಅಂಡ್ ರನ್ ಘಟನೆಯಲ್ಲಿ 29 ವರ್ಷದ ಸಾಫ್ಟ್ವೇರ್ ಎಂಜಿನಿಯರ್ ಸಾವಿಗೀಡಾಗಿದ್ದು, ಅವರ ಸ್ನೇಹಿತ ಗಾಯಗೊಂಡಿದ್ದಾರೆ. ಸಿಗರೇಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳವೇ ಇದಕ್ಕೆ ಕಾರಣ ಎನ್ನಲಾಗಿದೆ. ಮೇ 10 ರ ಮುಂಜಾನೆ ಈ ಘಟನೆ ನಡೆದಿದೆ ಎನ್ನಲಾಗಿದ್ದು ಮೃತ ಸಂಜಯ ಮತ್ತು ಅವರ ಸ್ನೇಹಿತ ಚೇತನ್ ಇಬ್ಬರೂ ಸಾಫ್ಟ್ವೇರ್ ಎಂಜಿನಿಯರ್ಗಳು. ಅವರು ರಾತ್ರಿ ಪಾಳಿಯಲ್ಲಿ ಕೆಲಸ ಮುಗಿಸಿ ಬೆಳಿಗ್ಗೆ 4 ಗಂಟೆ ಸುಮಾರಿಗೆ ರಸ್ತೆಬದಿಯ ಅಂಗಡಿಯಲ್ಲಿ ಚಹಾ ಕುಡಿಯಲು ಆಗಮಿಸಿದ್ದರು. ಭಾರತದ ವಿರುದ್ಧ ಪಾಕಿಸ್ತಾನದ ದಾಳಿಗಳಿಗೆ ಚೀನಾದ ಬೆಂಬಲ ; ಇಲ್ಲಿವೆ ಪ್ರಮುಖ ಪುರಾವೆಗಳು..! ಅವರು ಅಲ್ಲಿ ನಿಂತಿದ್ದಾಗ, ಒಬ್ಬ ವ್ಯಕ್ತಿ ತನ್ನ ಹೆಂಡತಿಯೊಂದಿಗೆ ಹುಂಡೈ ಕ್ರೆಟಾದಲ್ಲಿ ಬಂದು ಸಂಜಯ ಮತ್ತು ಚೇತನ್ ಅವರ ಬಳಿ ಸಿಗರೇಟ್ ಕೊಡುವಂತೆ ಹೇಳಿದ್ದಾನೆ. ಅವರು ನಿರಾಕರಿಸಿ ನೀವೇ ಖರೀದಿಸಿ ಎಂದು ಹೇಳಿದ್ದಾರೆ, ಇದು ಅವರ ಮಧ್ಯೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು. ಸ್ಥಳೀಯರು ಮಧ್ಯಪ್ರವೇಶಿಸಿ...
ಭಾರತದ ವಿರುದ್ಧ ಪಾಕಿಸ್ತಾನದ ದಾಳಿಗಳಿಗೆ ಚೀನಾದ ಬೆಂಬಲ ; ಇಲ್ಲಿವೆ ಪ್ರಮುಖ ಪುರಾವೆಗಳು..!
ನವದೆಹಲಿ: ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ವಿರುದ್ಧ ಭಾರತೀಯ ವಾಯುದಾಳಿಗಳನ್ನು ಒಳಗೊಂಡ ಆಪರೇಷನ್ ಸಿಂಧೂರದ ನಂತರ ವಿವಿಧ ವರದಿಗಳು ಚೀನಾ ಸರಬರಾಜು ಮಾಡಿದ PL-15 ಕ್ಷಿಪಣಿಗಳು ಮತ್ತು ಟರ್ಕಿಶ್ UAV ಗಳ ಬಳಕೆ ಸೇರಿದಂತೆ ಪಾಕಿಸ್ತಾನಕ್ಕೆ ಚೀನಾದ ಮಿಲಿಟರಿ ಬೆಂಬಲದ ವ್ಯಾಪ್ತಿಯನ್ನು ಎತ್ತಿ ತೋರಿಸಿದೆ. ಭಾರತ ಹಾಗೂ ಪಾಕಿಸ್ತಾನದ ನಡುವೆ ನಡೆದ ನಾಲ್ಕು ದಿನಗಳ ಸಂಘರ್ಷದಲ್ಲಿ ಭಾರತದ ಮೇಲೆ ಪಾಕಿಸ್ತಾನದ ಮಿಲಿಟರಿ ದಾಳಿ ನಡೆಸಲು ಚೀನಾ ಬೆಂಬಲಿಸುವ ಮೂಲಕ ಪ್ರಾಕ್ಸಿ ಯುದ್ಧವನ್ನು ನಡೆಸುವ ಮಾರ್ಗವನ್ನು ತೆಗೆದುಕೊಂಡಿತು. ಜಿಲ್ಲಾ ಮಟ್ಟದ ಜನ ಸ್ಪಂದನ ಕಾರ್ಯಕ್ರಮದಲ್ಲಿ 104 ಅರ್ಜಿಗಳ ವಿಚಾರಣೆ, ಎಲ್ಲಾ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಿ: ಸಚಿವ ಮಂಕಾಳ ವೈದ್ಯ ಚೀನಾ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪಾಕಿಸ್ತಾನಕ್ಕೆ ಸಮಗ್ರ ರಾಜತಾಂತ್ರಿಕ ಬೆಂಬಲವನ್ನು ನೀಡುತ್ತಿದೆ, ಟರ್ಕಿ ಮತ್ತು ಬಾಂಗ್ಲಾದೇಶದೊಂದಿಗೆ ಸಮನ್ವಯ ಸಾಧಿಸುತ್ತಿದೆ ಮತ್ತು ಹೆಚ್ಚು ಮುಖ್ಯವಾಗಿ, ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿದೆ ಮತ್ತು ಹಿಂದೂ ಮಹಾಸಾಗರದಲ್ಲಿ ಮತ್ತೊಂದು ಒಕ್ಕೂಟವನ್ನು ಮುನ್ನಡೆಸಲು ಪ್ರಯತ್ನಿಸುತ್ತಿದೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕಿಸ್ತಾನಕ್ಕೆ ಚೀನಾದ...
ಜಿಲ್ಲಾ ಮಟ್ಟದ ಜನ ಸ್ಪಂದನ ಕಾರ್ಯಕ್ರಮದಲ್ಲಿ 104 ಅರ್ಜಿಗಳ ವಿಚಾರಣೆ, ಎಲ್ಲಾ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಿ: ಸಚಿವ ಮಂಕಾಳ ವೈದ್ಯ
ಕಾರವಾರ: ಭಟ್ಕಳದ ನ್ಯೂ ಇಂಗ್ಲಿಷ್ ಸ್ಕೂಲ್ನ ಕಮಲಾವತಿ ಶ್ಯಾನುಭೋಗ ಸಭಾ ಭವನದಲ್ಲಿ ಶನಿವಾರ, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಜನ ಸ್ಪಂದನ ಕಾರ್ಯಕ್ರಮದಲ್ಲಿ 104 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಎಲ್ಲಾ ಅರ್ಜಿಗಳನ್ನು ಕಾಲಮಿತಿಯಲ್ಲಿ ಬಗೆಹರಿಸುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಎಂಡೋಸಲ್ಫಾನ್ ಪೀಡಿತರಿಗೆ ಖಾಸಗಿ ಸಂಸ್ಥೆಯ ವತಿಯಿಂದ ನಿಯಮಿತವಾಗಿ ಔಷಧಗಳು ದೊರೆಯುತ್ತಿಲ್ಲ ಎಂದ ಸಮಸ್ಯೆಯ ಕುರಿತಂತೆ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಪೀಡಿತರನ್ನು ಗುರುತಿಸಿ, ಅವರಿಗೆ ವಿಶೇಷ ಶಿಬಿರಗಳನ್ನು ಮಾಡಿ ಚಿಕಿತ್ಸೆ ಮಾಡಲಾಗಿದೆ. ಸರ್ಕಾರದಿಂದ ಒಂದು ಸಂಸ್ಥೆಗೆ ಔಷಧ, ಆಹಾರ ಕಿಟ್ ಗಳನ್ನು ವಿತರಿಸಲು ಸೂಚಿಸಲಾಗಿದ್ದು, ಒಂದು ವೇಳೆ ಆ ಸಂಸ್ಥೆ ಎಂಡೋಸಲ್ಫಾನ್ ಸಂತ್ರಸ್ತರಿಗೆ ಸರಿಯಾಗಿ ಔಷಧ ಮತ್ತು ಆಹಾರ ಕಿಟ್ ವಿತರಿಸದೇ ಇದ್ದರೆ ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಹಾಗೂ ಸಂತ್ರಸ್ತರಿಗೆ ಸರ್ಕಾರದಿಂದ ದೊರೆಯುವ 4 ಸಾವಿರ ಮಾಶಾಸನ ಸರಿಯಾದ ಸಮಯಕ್ಕೆ...
ಜಿಲ್ಲೆಯ ಕಟ್ಟ ಕಡೆಯ ವ್ಯಕ್ತಿಯ ಪರವಾಗಿ ನಾನಿದ್ದೇನೆ; ಸಚಿವ ಮಂಕಾಳ ವೈದ್ಯ ಹೇಳಿಕೆ..!
ಜನ ಸಾಮಾನ್ಯರು ತಮ್ಮ ಸಮಸ್ಯೆಗಳ ಬಗ್ಗೆ ಪದೇ ಪದೇ ಸರ್ಕಾರಿ ಕಚೇರಿಗಳಿಗೆ ಅಲೆದಾಡುವಂತೆ ಮಾಡಬೇಡಿ, ಅವರ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ಒದಗಿಸಿ, ಸರಕಾರದಿಂದ ದೊರೆಯುವು ಸೌಲಭ್ಯಗಳನ್ನು ಮಂಜೂರು ಮಾಡಬೇಕು. ಜಿಲ್ಲೆಯ ಕಟ್ಟ ಕಡೆಯ ವ್ಯಕ್ತಿಯ ಸಮಸ್ಯೆಗಳನ್ನು ಅಧಿಕಾರಿಗಳು ಬಗೆಹರಿಸಬೇಕು, ಅವರ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ನಾನು ಕೂಡಾ ಕಾರ್ಯನಿರ್ವಹಿಸುತ್ತೇನೆ ಎಂದು ಮೀನುಗಾರಿಕೆ, ಬಂದುರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಹೇಳಿದರು. ಅವರು ಶನಿವಾರ ಭಟ್ಕಳದ ನ್ಯೂ ಇಂಗ್ಲಿಷ್ ಸ್ಕೂಲ್ನ ಕಮಲಾವತಿ ಶ್ಯಾನಭೋಗ ಸಭಾ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಜನ ಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೊತ್ತು ಪರಿಹಾರಕ್ಕಾಗಿ ಕಛೇರಿಗಳಿಗೆ ಬಂದರೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಕ್ಷಣ ಸ್ಪಂದಿಸಬೇಕು ಇಲ್ಲವಾದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಜನ ಸ್ಪಂದನ ಕಾರ್ಯಕ್ರಮ ಕೇವಲ ಕಾಟಾಚಾರದ ಕಾರ್ಯಕ್ರಮವಲ್ಲ, ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ಸಾರ್ವಜನಿಕರ ಮನೆ ಬಾಗಿಲಿಗೆ ಸರ್ಕಾರದ ಸೇವೆಗಳನ್ನು ಒದಗಿಸುವ...