Covid News: 3 ವರ್ಷಗಳಿಗೂ ಅಧಿಕ ಕಾಲ ವಿಶ್ವವನ್ನು ಕಾಡಿ ತೆರೆಮರೆಗೆ ಸರಿದಿದ್ದ ಕೊರೋನಾ ಮತ್ತೆ ಸದ್ದು..!

Covid News: 3 ವರ್ಷಗಳಿಗೂ ಅಧಿಕ ಕಾಲ ವಿಶ್ವವನ್ನು ಕಾಡಿ ತೆರೆಮರೆಗೆ ಸರಿದಿದ್ದ ಕೊರೋನಾ ಮತ್ತೆ ಸದ್ದು..!

ಸಿಂಗಾಪುರದಲ್ಲಿ ಮೇ 3ಕ್ಕೆ ಅಂತ್ಯವಾದ ವಾರದಲ್ಲಿ 14200 ಕೋವಿಡ್‌ ಪ್ರಕರಣ ದಾಖಲಾಗಿದೆ. ಇದು ಹಿಂದಿನ ವಾರಕ್ಕೆ ಹೋಲಿಸಿದರೆ ಶೇ.28ರಷ್ಟು ಹೆಚ್ಚಾಗಿದೆ. ಕಳೆದ ವಾರ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣದಲ್ಲೂ ಶೇ.30ರಷ್ಟು ಏರಿಕೆ ಕಂಡುಬಂದಿದೆ. ಜನರಲ್ಲಿ ಕೋವಿಡ್‌ ರೋಗನಿರೋಧಕ ಶಕ್ತಿ ಕಡಿಮೆಯಾಗಿರುವುದು ಸೋಂಕು ಹೆಚ್ಚಳಕ್ಕೆ ಕಾರಣವಾಗಿರಬಹುದು. ಆದರೆ ಪ್ರಸಕ್ತ ಕಾಣಿಸಿಕೊಂಡಿರುವ ಕೋವಿಡ್‌ ತಳಿ ಹೆಚ್ಚು ಪ್ರಸರಣಕಾರಿ ಎಂಬುದಕ್ಕೆ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಇನ್ನೊಂದೆಡೆ ಹಾಂಕಾಂಗ್‌ನಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಈ ವರ್ಷದ ಗರಿಷ್ಠಕ್ಕೆ ತಲುಪಿದೆ. ಅಂತೆಯೇ, ಸಾವಿನ ಪ್ರಕರಣಗಳೂ ಹೆಚ್ಚಾಗುತ್ತಿವೆ. ನೀರಿನಲ್ಲಿ ಕಂಡುಬರುತ್ತಿರುವ ವೈರಾಣು, ಹೆಚ್ಚುತ್ತಿರುವ ಕೋವಿಡ್‌ ಪರೀಕ್ಷೆ ಮತ್ತು ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯಿಂದ ಮತ್ತೆ ಕೊರೋನಾ ಸ್ಫೋಟವಾಗುವ ಭಯ ಉದ್ಭವವಾಗಿದೆ. IPL T20 News: ಮಳೆರಾಯನ ಅರ್ಭಟಕ್ಕೆ ಕೊಚ್ಚಿ ಹೋಯ್ತು ಐಪಿಎಲ್ ಪುನಾರಂಭದ ಪಂದ್ಯ! RCB ಪ್ಲೇ ಆಫ್‌ಗೆ ಎಂಟ್ರಿ, ಟೂರ್ನಿಯಿಂದ ಹೊರಬಿದ್ದ ಹಾಲಿ ಚಾಂಪಿಯನ್ಸ್ ಕೊರೋನಾ ಮೊದಲ ಬಾರಿ 2019ರ ನವೆಂಬರ್‌ನಲ್ಲಿ ಪತ್ತೆಯಾಗಿದ್ದು, 704,753,890 ಜನರಲ್ಲಿ...

Gold Price Today : ವೀಕೆಂಡ್ ಚಿನ್ನದ ಬೆಲೆ, ಸ್ಥಿರತೆ ಕಾಯ್ದುಕೊಂಡ ಬಂಗಾರ..!

Gold Price Today : ವೀಕೆಂಡ್ ಚಿನ್ನದ ಬೆಲೆ, ಸ್ಥಿರತೆ ಕಾಯ್ದುಕೊಂಡ ಬಂಗಾರ..!

Gold Price Today : ಭಾರತೀಯ ಮಾರುಕಟ್ಟೆಯಲ್ಲಿ ಶುಕ್ರವಾರ ಏರಿಕೆಗೆ ಸಾಕ್ಷಿಯಾಗಿದ್ದ ಚಿನ್ನದ ಬೆಲೆಯು ವೀಕೆಂಡ್‌ನಲ್ಲಿ ಸ್ಥಿರವಾಗಿದೆ. ಸತತ ಎರಡು ದಿನ ಇಳಿಕೆ ಬಳಿಕ ಮೇ 16ರಂದು ಹಳದಿ ಲೋಹದ ಬೆಲೆ ಏರಿಕೆಯಾಗಿತ್ತು. ಆದ್ರೆ ಇಂದು ಅಂದ್ರೆ ಮೇ 17ರಂದು ಚಿನ್ನ ಅಷ್ಟೇ ಅಲ್ಲದೆ ಬೆಳ್ಳಿ ಬೆಲೆಯು ಕೂಡ ಸ್ಥಿರವಾಗಿದೆ. ಹಾಗಿದ್ರೆ ಶನಿವಾರ 24 ಕ್ಯಾರೆಟ್ ಬಂಗಾರದ ಬೆಲೆ ಎಷ್ಟಿದೆ? ಬೆಳ್ಳಿ ಬೆಲೆ ಕೆಜಿಗೆ ಎಷ್ಟು? ಎಂಬುದನ್ನು ಇಲ್ಲಿ ತಿಳಿಯಿರಿ. ದೆಹಲಿಯಲ್ಲಿ ಚಿನ್ನದ ಬೆಲೆ ಕುಸಿತ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂ 87,350 ರೂಪಾಯಿಗಳಲ್ಲಿ ವಹಿವಾಟು ನಡೆಸಿದೆ. 24 ಕ್ಯಾರೆಟ್‌ ಚಿನ್ನದ ಬೆಲೆ 10 ಗ್ರಾಂ 95,280 ರೂಪಾಯಿ ದಾಖಲಾಗಿದೆ. ಇನ್ನು ಬೆಳ್ಳಿ ಬೆಲೆ ಕೆಜಿಗೆ 97,000 ರೂಪಾಯಿನಷ್ಟೇ ಉಳಿದಿದೆ. ದೇಶೀಯ ಮಾರುಕಟ್ಟೆಯಲ್ಲಿ ಶನಿವಾರ ಚಿನ್ನದ ಬೆಲೆ ಸ್ಥಿರವಾಗಿದೆ. ಸತತ ಎರಡು ದಿನಗಳ ಇಳಿಕೆ ಬಳಿಕ ಶುಕ್ರವಾರ ದಿಢೀರ್ ಚಿನ್ನದ ಬೆಲೆ ಹೆಚ್ಚಾಗಿತ್ತು. ಆದ್ರೆ...

IPL T20 News: ಮಳೆರಾಯನ ಅರ್ಭಟಕ್ಕೆ ಕೊಚ್ಚಿ ಹೋಯ್ತು ಐಪಿಎಲ್ ಪುನಾರಂಭದ ಪಂದ್ಯ! RCB ಪ್ಲೇ ಆಫ್‌ಗೆ ಎಂಟ್ರಿ, ಟೂರ್ನಿಯಿಂದ ಹೊರಬಿದ್ದ ಹಾಲಿ ಚಾಂಪಿಯನ್ಸ್

IPL T20 News: ಮಳೆರಾಯನ ಅರ್ಭಟಕ್ಕೆ ಕೊಚ್ಚಿ ಹೋಯ್ತು ಐಪಿಎಲ್ ಪುನಾರಂಭದ ಪಂದ್ಯ! RCB ಪ್ಲೇ ಆಫ್‌ಗೆ ಎಂಟ್ರಿ, ಟೂರ್ನಿಯಿಂದ ಹೊರಬಿದ್ದ ಹಾಲಿ ಚಾಂಪಿಯನ್ಸ್

RCB-KKR IPL T20 News: ಬೆಂಗಳೂರು: ಆರ್‌ಸಿಬಿ ಹಾಗೂ ಕೆಕೆಆರ್ ವಿರುದ್ಧ ಪಂದ್ಯ ಒಂದೇ ಒಂದು ಬಾಲ್ ಆಡದೆ ಮಳೆಯಿಂದಾಗಿ ರದ್ದಾಯಿತು. ಆ ಮೂಲಕ ಆರ್‌ಸಿಬಿ ಹಾಗೂ ಕೆಕೆಆರ್ ತಲಾ ಒಂದೊಂದು ಅಂಕಗಳನ್ನು ಹಂಚಿಕೊಂಡವು. ಆದ್ರೆ ಇಂದಿನ ಪಂದ್ಯ ರದ್ದಾಗಿದ್ದರಿಂದ ಕೆಕೆಆರ್ ಟೂರ್ನಿಯಿಂದ ಹೊರಬಿದ್ದಿತು. ಭಾರತ- ಪಾಕಿಸ್ತಾನ (India Pakistan) ಸಂಘರ್ಷದ ಹಿನ್ನೆಲೆ ಮೇ 8ರಂದು ದಿಢೀರನೆ ರದ್ದಾಗಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಗಳು ಬರೋಬ್ಬರಿ 10 ದಿನಗಳ ಬಳಿಕ ಪುನರ್ ಆರಂಭಗೊಂಡಿವೆ. ಆದ್ರೆ, ದುರಾದೃಷ್ಟ ಎಂಬಂತೆ ಚಿನ್ನಸ್ವಾಮಿಯಲ್ಲಿ ಆಯೋಜನೆಗೊಂಡಿದ್ದ ಇಂದಿನ ಪಂದ್ಯ ಒಂದೇ ಒಂದು ಬಾಲ್ ಆಡದೆ ಮಳೆಯಿಂದಾಗಿ ರದ್ದಾಯಿತು. ಆ ಮೂಲಕ ಆರ್‌ಸಿಬಿ ಹಾಗೂ ಕೆಕೆಆರ್ (RCB vs KKR) ತಲಾ ಒಂದೊಂದು ಅಂಕಗಳನ್ನು ಹಂಚಿಕೊಂಡವು. ಆದ್ರೆ, ಇಂದಿನ ಪಂದ್ಯ ರದ್ದಾಗಿದ್ದರಿಂದ ಕೆಕೆಆರ್ ಟೂರ್ನಿಯಿಂದ ಹೊರಬಿದ್ದರೆ, ಆರ್‌ಸಿಬಿ ಅಗ್ರಸ್ಥಾನಕ್ಕೇರುವ ಮೂಲಕ ಪ್ಲೇ ಆಫ್ ಖಚಿತಪಡಿಸಿಕೊಂಡಿತು. ಅಗ್ರಸ್ಥಾನಕ್ಕೇರಿದ ಆರ್‌ಸಿಬಿ ಇಂದು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯ ಮಳೆಯಿಂದಾಗಿ...

‘ಮಸೂದೆಗೆ ಅಂಕಿತ ಹಾಕಲು ರಾಷ್ಟ್ರಪತಿ, ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಗಡುವು ವಿಧಿಸಬಹುದೇ ? ಸುಪ್ರೀಂ ಕೋರ್ಟಿಗೆ ರಾಷ್ಟ್ರಪತಿ ಮುರ್ಮು 14 ಪ್ರಶ್ನೆ..!

‘ಮಸೂದೆಗೆ ಅಂಕಿತ ಹಾಕಲು ರಾಷ್ಟ್ರಪತಿ, ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಗಡುವು ವಿಧಿಸಬಹುದೇ ? ಸುಪ್ರೀಂ ಕೋರ್ಟಿಗೆ ರಾಷ್ಟ್ರಪತಿ ಮುರ್ಮು 14 ಪ್ರಶ್ನೆ..!

ನವದೆಹಲಿ: ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕಲು ಗಡುವು ವಿಧಿಸಿ ಸುಪ್ರೀಂ ಕೋರ್ಟ್‌ ಇತ್ತೀಚಿಗೆ ನೀಡಿದ್ದ ತೀರ್ಪಿನ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನದ 143 (1)ನೇ ವಿಧಿಯಡಿ ಸುಪ್ರೀಂ ಕೋರ್ಟ್‌ಗೆ ಪತ್ರ ಬರೆದಿದ್ದು, ಅದರಲ್ಲಿ 14 ಪ್ರಶ್ನೆಗಳನ್ನು ಕೇಳಿದ್ದಾರೆ. ಪತ್ರಕ್ಕೆ ಉತ್ತರ ನೀಡಲು ಸುಪ್ರೀಂ ಕೋರ್ಟ್‌ ಸಾಂವಿಧಾನಿಕ ಪೀಠ ರಚಿಸಬೇಕಿದೆ. ಸಂವಿಧಾನದ 143(1) ನೇ ವಿಧಿಯು ಕಾನೂನು ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳಲ್ಲಿ ರಾಷ್ಟ್ರಪತಿಗಳು ಸುಪ್ರೀಂ ಕೋರ್ಟ್‌ನ ಅಭಿಪ್ರಾಯ ಪಡೆಯಲು ಅವಕಾಶ ನೀಡುತ್ತದೆ. ಮಸೂದೆಗಳಿಗೆ ಒಪ್ಪಿಗೆ ನೀಡಲು ಸುಪ್ರೀಂ ಕೋರ್ಟ್‌ ನಿಗದಿಪಡಿಸಿದ ಗಡುವು ಪಾಲಿಸದೆ ಹೋದರೆ ಆಗ ಅದನ್ನು ಅವರಿಂದ ಸಮ್ಮತಿ ದೊರೆತಿದೆ ಎಂದು ಭಾವಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ ನೀಡಿರುವ ನಿರ್ದೇಶನವನ್ನು ರಾಷ್ಟ್ರಪತಿ ಮುರ್ಮು ಅವರು ನಿರ್ದಿಷ್ಟವಾಗಿ ಪ್ರಶ್ನಿಸಿದ್ದಾರೆ. ಸಂವಿಧಾನದಲ್ಲಿ ಅಂತಹ ಯಾವುದೇ ಗಡುವು/ಷರತ್ತು ಇಲ್ಲದಿರುವಾಗ ಸುಪ್ರೀಂಕೋರ್ಟ್‌ ಅಂತಹ ತೀರ್ಪು ನೀಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು...

ರಾಜ್ಯದ 200 ಪೊಲೀಸ್ರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ಪುರಸ್ಕಾರ ಘೋಷಣೆ..!

ರಾಜ್ಯದ 200 ಪೊಲೀಸ್ರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ಪುರಸ್ಕಾರ ಘೋಷಣೆ..!

ಕರ್ನಾಟಕದಲ್ಲಿ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಪೊಲೀಸ್ ಇಲಾಖೆಯಲ್ಲಿ ಸಾಧಕರಿಗೆ ಬೆನ್ನು ತಟ್ಟುವ ಕಾರ್ಯ ನಡೀತಿದೆ. ಮೊದಲ ಬಾರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ರ ಅಡಿ ಪುರಸ್ಕಾರಕ್ಕೆ ರಾಜ್ಯದ 200 ಪೊಲೀಸ್ ಅಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅದ್ರಲ್ಲಿ ಉತ್ತರ ಕನ್ನಡದ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಈ ಪುರಸ್ಕಾರ ಘೋಷಣೆಯಾಗಿದೆ. ಉತ್ತರ ಕನ್ನಡ ಎಸ್ಪಿ ನಾರಾಯಣ ಎಂ. ರವರಿಗೆ ಹಾಗೂ ರಾಮನಗರ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸಿ, ಸದ್ಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸ್ತಿರೋ ಪಿಎಸ್ಐ ಬಸವರಾಜ್ ಮಬನೂರರನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಅಂದಹಾಗೆ, ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ಪರವಾದ ನಿಷ್ಟೆ, ಸಾಧನೆಗಳನ್ನು ಗುರುತಿಸಿ ಈ ಪುರಸ್ಕಾರ ನೀಡಲಾಗ್ತಿದೆ. ಹೀಗಾಗಿ, ಉತ್ತರ ಕನ್ನಡದ ಎಸ್ಪಿ ನಾರಾಯಣ್ ಎಂ. ಹಾಗೂ ಹಳಿಯಾಳ ಪಿಎಸ್ಐ ಬಸವರಾಜ್ ಮಬನೂರು ಪುರಸ್ಕಾರಕ್ಕೆ ಆಯ್ಕೆಯಾಗಿದ್ದು ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯ ಅಧಿಕಾರಿಗಳು ಅಭಿನಂದಿಸಿದ್ದಾರೆ.

ಸೇನೆ ಬರ್ಲಿ ನೋಡ್ಕೊಳ್ತೇನೆ;  ಎನ್‌ಕೌಂಟರಿನಲ್ಲಿ ಸಾಯುವ ಸ್ವಲ್ಪ ಮೊದಲು ತಾಯಿ ಜೊತೆ ಭಯೋತ್ಪಾದಕ ವೀಡಿಯೊ ಕರೆಯಲ್ಲಿ ಮಾತನಾಡಿದ ದೃಶ್ಯ ವೈರಲ್‌..!

ಸೇನೆ ಬರ್ಲಿ ನೋಡ್ಕೊಳ್ತೇನೆ; ಎನ್‌ಕೌಂಟರಿನಲ್ಲಿ ಸಾಯುವ ಸ್ವಲ್ಪ ಮೊದಲು ತಾಯಿ ಜೊತೆ ಭಯೋತ್ಪಾದಕ ವೀಡಿಯೊ ಕರೆಯಲ್ಲಿ ಮಾತನಾಡಿದ ದೃಶ್ಯ ವೈರಲ್‌..!

ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ಅಮೀರ್ ನಜೀರ್ ವಾನಿ ಮತ್ತು ಆತನ ತಾಯಿಯ ನಡುವಿನ ಮಾತುಕತೆಯನ್ನು ತೋರಿಸುವ ವೀಡಿಯೊ ಕ್ಲಿಪ್ ಹೊರಬಿದ್ದಿದೆ. ಮಾತುಕತೆಯ ಸಮಯದಲ್ಲಿ ತಾಯಿ ತನ್ನ ಮಗನಿಗೆ ಭದ್ರತಾ ಪಡೆಗಳಿಗೆ ಶರಣಾಗುವಂತೆ ಬೇಡಿಕೊಂಡಿದ್ದಾಳೆ. ಗುರುವಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ವಾನಿ ಹತನಾಗುವ ಸ್ವಲ್ಪ ಸಮಯದ ಮೊದಲು ವೀಡಿಯೊ ಕರೆ ಮೂಲಕ ತಾಯಿ ಜೊತೆ ಮಾತನಾಡಿದ್ದಾನೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಈ ಕ್ಲಿಪ್‌ನಲ್ಲಿ, ಭಯೋತ್ಪಾದಕ ವಾನಿ ತನ್ನ ತಾಯಿಯೊಂದಿಗೆ ಮಾತನಾಡುತ್ತಿರುವಾಗ ಎಕೆ -47 ಗನ್‌ ಹಿಡಿದುಕೊಂಡಿರುವುದು ಕಂಡುಬರುತ್ತದೆ. ಅದು ಆತನ ಕೊನೆಯ ಮಾತುಕತೆಯಾಗಿತ್ತು. “ದಯವಿಟ್ಟು ಶರಣಾಗು” ಎಂದು ಅವನ ತಾಯಿ ಬೇಡಿಕೊಳ್ಳುತ್ತಿರುವುದು ಕೇಳಿಸುತ್ತದೆ, ಆದರೆ ವಾನಿ ನಿರಾಕರಿಸಿ, “ಸೈನ್ಯ ಮುಂದೆ ಬರಲಿ, ನಂತರ ನಾನು ನೋಡಿಕೊಳ್ಳುತ್ತೇನೆ” ಎಂದು ಉತ್ತರಿಸಿದ್ದಾನೆ. ಭದ್ರತಾ ಪಡೆಗಳ ಜೊತೆ ಗುಂಡಿನ ಚಕಮಕಿ ಆರಂಭವಾಗುವ ಮುನ್ನ ವಾನಿ ಅಡಗಿಕೊಂಡಿದ್ದ ಮನೆಯಿಂದ ವೀಡಿಯೊ ಕರೆ ಮಾಡಲಾಗಿತ್ತು. ಆತನ ತಾಯಿಯಲ್ಲದೆ, ವಾನಿಯ ಸಹೋದರಿ ಕೂಡ ಆತನೊಂದಿಗೆ...

ಭಾರತೀಯ ಸಂಜಾತ ಲೇಖಕ ಸಲ್ಮಾನ್ ರಶ್ದಿ ಇರಿದ ವ್ಯಕ್ತಿಗೆ 25 ವರ್ಷ ಜೈಲು ಶಿಕ್ಷೆ..!

ಭಾರತೀಯ ಸಂಜಾತ ಲೇಖಕ ಸಲ್ಮಾನ್ ರಶ್ದಿ ಇರಿದ ವ್ಯಕ್ತಿಗೆ 25 ವರ್ಷ ಜೈಲು ಶಿಕ್ಷೆ..!

ನ್ಯೂಯಾರ್ಕ್: 2022 ರಲ್ಲಿ ನ್ಯೂಯಾರ್ಕ್ ಉಪನ್ಯಾಸ ವೇದಿಕೆಯಲ್ಲಿ ಖ್ಯಾತ ಲೇಖಕ ಹಾಗೂ ಭಾರತದ ಸಂಜಾತ ಸಲ್ಮಾನ್ ರಶ್ದಿ ಅವರನ್ನು ಇರಿದು, ಅವರ ಒಂದು ಕಣ್ಣನ್ನು ಕುರುಡನನ್ನಾಗಿ ಮಾಡಿದ ಆರೋಪದ ಮೇಲೆ ಶಿಕ್ಷೆಗೊಳಗಾದ ವ್ಯಕ್ತಿಗೆ ಶುಕ್ರವಾರ 25 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು.27 ವರ್ಷದ ಹಾದಿ ಮತರ್ ಎಂಬಾತನನ್ನು ಕೊಲೆ ಯತ್ನ ಮತ್ತು ಹಲ್ಲೆಯ ಆರೋಪದಲ್ಲಿ ತಪ್ಪಿತಸ್ಥರೆಂದು ನ್ಯಾಯಾಧೀಶರು ಫೆಬ್ರವರಿಯಲ್ಲಿ ತೀರ್ಪು ನೀಡಿದ್ದರು. ಪಶ್ಚಿಮ ನ್ಯೂಯಾರ್ಕ್ ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ, 77 ವರ್ಷದ ಸಲ್ಮಾನ್‌ ರಶ್ದಿ ಪ್ರಮುಖ ಸಾಕ್ಷಿಯಾಗಿದ್ದರು, ಚೌಟೌಕ್ವಾ ಸಂಸ್ಥೆಯಲ್ಲಿ ಬರಹಗಾರರ ಸುರಕ್ಷತೆಯ ಬಗ್ಗೆ ಮಾತನಾಡಲು ಅವರನ್ನು ಪರಿಚಯಿಸುತ್ತಿದ್ದಾಗ ಮುಸುಕುಧಾರಿ ದಾಳಿಕೋರನೊಬ್ಬ ಅವರ ತಲೆ ಮತ್ತು ದೇಹಕ್ಕೆ ಒಂದು ಡಜನ್‌ಗಿಂತಲೂ ಹೆಚ್ಚು ಬಾರಿ ಚಾಕುವಿನಿಂದ ಚುಚ್ಚಿದ್ದ ಎಂಬುದನ್ನು ವಿವರಿಸಿದರು.ಶಿಕ್ಷೆ ವಿಧಿಸುವ ಮೊದಲು, ಮಾತರ್ ನಿಂತುಕೊಂಡು ವಾಕ್ ಸ್ವಾತಂತ್ರ್ಯದ ಬಗ್ಗೆ ಹೇಳಿಕೆ ನೀಡಿದ ಹಾಗೂ ಅದರಲ್ಲಿ ಅವರು ರಶ್ದಿಯನ್ನು ಕಪಟಿ ಎಂದು ಕರೆದ. ರಶ್ದಿಯವರ ಕೊಲೆ ಯತ್ನಕ್ಕಾಗಿ ಮಟರ್‌ಗೆ ಗರಿಷ್ಠ 25 ವರ್ಷಗಳ...

ಈಗ ಯೂ ಟರ್ನ್‌ ; ಪಾಕಿಸ್ತಾನ ಸೇನೆ ವಾಯುನೆಲೆಗಳ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪ್ರಧಾನಿ ಶೆಹಬಾಜ್ ಷರೀಫ್..!

ಈಗ ಯೂ ಟರ್ನ್‌ ; ಪಾಕಿಸ್ತಾನ ಸೇನೆ ವಾಯುನೆಲೆಗಳ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪ್ರಧಾನಿ ಶೆಹಬಾಜ್ ಷರೀಫ್..!

ನವದೆಹಲಿ : ಹಲವು ದಿನಗಳಿಂದಲೂ ನಿರಾಕರಿಸುತ್ತಲೇ ಬಂದಿದ್ದ ಕೊನೆಗೂ ಭಾರತದ ಸೇನೆಯು ತನ್ನ ವಾಯುನೆಲೆಗಳ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದೆ ಎಂಬುದನ್ನು ಪಾಕಿಸ್ತನವು ಬಹಿರಂಗವಾಗಿ ಒಪ್ಪಿಕೊಂಡಿದೆ. ಸ್ವತಃ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಮೇ 10 ರಂದು ಆಪರೇಶನ್‌ ಸಿಂದೂರ ಅಡಿಯಲಲಿ ಹಾರಿಸಲಾದ ಭಾರತದ ಕ್ಷಿಪಣಿಗಳು ಪಾಕಿಸ್ತಾನದ ಸೇನೆಯ ವಾಯುನೆಲೆಗಳ ದಾಳಿ ಮಾಡಿದೆ ಎಂದು ಒಪ್ಪಿಕೊಂಡಿದ್ದಾರೆ. ಶುಕ್ರವಾರ ‘ಯೂಮ್-ಎ-ತಶಕೂರ್’ ಆಚರಣೆಯ ಭಾಗವಾಗಿ ಪಾಕಿಸ್ತಾನಿ ಸೈನಿಕರನ್ನು ಉದ್ದೇಶಿಸಿ ಮಾತನಾಡುವಾಗ ಷರೀಫ್ ಭಾರತದ ದಾಳಿಯನ್ನು ಒಪ್ಪಿಕೊಂಡಿದ್ದಾರೆ. ಪಾಕಿಸ್ತಾನ ಶುಕ್ರವಾರ ಮಿಲಿಟರಿಗೆ ಗೌರವ ಸಲ್ಲಿಸಲು ‘ಯೂಮ್-ಎ-ತಶಕೂರ್’ (ಧನ್ಯವಾದ ದಿನ) ಆಚರಿಸಿತು. ಶನಿವಾರ ಇಸ್ಲಾಮಾಬಾದ್‌ನಲ್ಲಿರುವ ಪಾಕಿಸ್ತಾನ ಸ್ಮಾರಕದಲ್ಲಿ ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಷರೀಫ್, “ಮೇ 9-10 ರ ಮಧ್ಯರಾತ್ರಿ, ಬೆಳಗಿನ ಜಾವ 2:30 ರ ಸುಮಾರಿಗೆ, ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಸುರಕ್ಷಿತ ಮಾರ್ಗದ ಮೂಲಕ ನನಗೆ ಕರೆ ಮಾಡಿ, ಹಿಂದೂಸ್ತಾನಿ ಬ್ಯಾಲಿಸ್ಟಿಕ್ ಕ್ಷಿಪಣಿಗಳು ನೂರ್ ಖಾನ್ ವಾಯುನೆಲೆ ಮತ್ತು ಇತರ ಪ್ರದೇಶಗಳನ್ನು ಹೊಡೆದಿವೆ ಎಂದು ನನಗೆ...

ಪಾಕಿಸ್ತಾನ ಪರ ಬೇಹುಗಾರಿಕೆ, ಹರಿಯಾಣ ಮೂಲದ ಯೂಟ್ಯೂಬರ್ ಸೇರಿ 6 ಜನರ ಬಂಧನ..!

ಪಾಕಿಸ್ತಾನ ಪರ ಬೇಹುಗಾರಿಕೆ, ಹರಿಯಾಣ ಮೂಲದ ಯೂಟ್ಯೂಬರ್ ಸೇರಿ 6 ಜನರ ಬಂಧನ..!

ನವದೆಹಲಿ: ಪಾಕಿಸ್ತಾನಿ ಆಪರೇಟಿವ್ಸ್‌ ಗಳಿಗೆ ಸೂಕ್ಷ್ಮ ಮಾಹಿತಿಯನ್ನು ರವಾನಿಸಿದ ಆರೋಪದ ಮೇಲೆ ಹರಿಯಾಣ ಮೂಲದ ಟ್ರಾವೆಲ್ ಬ್ಲಾಗರ್ ಸೇರಿದಂತೆ ಆರು ಭಾರತೀಯ ಪ್ರಜೆಗಳನ್ನು ಬಂಧಿಸಲಾಗಿದೆ. ಈ ಜಾಲವು ಹರಿಯಾಣ ಮತ್ತು ಪಂಜಾಬಿನಾದ್ಯಂತ ವ್ಯಾಪಿಸಿದ್ದು, ಪ್ರಮುಖ ಕಾರ್ಯಕರ್ತರು ಏಜೆಂಟ್‌ಗಳು, ಹಣಕಾಸು ಮಾರ್ಗದರ್ಶಕರು ಮತ್ತು ಮಾಹಿತಿದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಆರೋಪಿಗಳಲ್ಲಿ ಹರಿಯಾಣ ಮೂಲದ ಟ್ರಾವೆಲ್ ಬ್ಲಾಗರ್ ಜ್ಯೋತಿ ಮಲ್ಹೋತ್ರಾ ಕೂಡ ಒಬ್ಬರು, ಅವರು “ಟ್ರಾವೆಲ್ ವಿತ್ ಜೋ” ಎಂಬ ಯೂಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿದ್ದರು. ಕಮಿಷನ್ ಏಜೆಂಟ್‌ಗಳ ಮೂಲಕ ವೀಸಾ ಪಡೆದ ನಂತರ ಅವರು 2023 ರಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಅವರ ಪ್ರವಾಸದ ಸಮಯದಲ್ಲಿ, ಅವರು ನವದೆಹಲಿಯ ಪಾಕಿಸ್ತಾನ ಹೈಕಮಿಷನ್‌ನ ಸಿಬ್ಬಂದಿ ಸದಸ್ಯ ಎಹ್ಸಾನ್-ಉರ್-ರಹೀಮ್ ಅಲಿಯಾಸ್ ಡ್ಯಾನಿಶ್ ಅವರೊಂದಿಗೆ ನಿಕಟ ಸಂಬಂಧ ಹೊಂದಿದ್ದಳು. ತಾಳಿ ಕಟ್ಟಿದ ಮರುಕ್ಷಣವೇ ಮದುಮಗನೇ ಹೆಣವಾದ, ಜಮಖಂಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಸರ್ಕಾರದಿಂದ ಪರ್ಸನಾ ನಾನ್ ಗ್ರಾಟಾ ಎಂದು ಘೋಷಿಸಲ್ಪಟ್ಟ ಮತ್ತು ಮೇ...

ಸಿಗರೇಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಸಾಫ್ಟ್‌ವೇರ್ ಉದ್ಯೋಗಿಯ ಮೇಲೆ ಕಾರು ಹರಿಸಿದ ಬೆಂಗಳೂರಿನ ವ್ಯಕ್ತಿ..!

ಸಿಗರೇಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಸಾಫ್ಟ್‌ವೇರ್ ಉದ್ಯೋಗಿಯ ಮೇಲೆ ಕಾರು ಹರಿಸಿದ ಬೆಂಗಳೂರಿನ ವ್ಯಕ್ತಿ..!

ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ಬೆಂಗಳೂರಿನಲ್ಲಿ ನಡೆದ ಆಘಾತಕಾರಿ ಹಿಟ್ ಅಂಡ್ ರನ್ ಘಟನೆಯಲ್ಲಿ 29 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಸಾವಿಗೀಡಾಗಿದ್ದು, ಅವರ ಸ್ನೇಹಿತ ಗಾಯಗೊಂಡಿದ್ದಾರೆ. ಸಿಗರೇಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳವೇ ಇದಕ್ಕೆ ಕಾರಣ ಎನ್ನಲಾಗಿದೆ. ಮೇ 10 ರ ಮುಂಜಾನೆ ಈ ಘಟನೆ ನಡೆದಿದೆ ಎನ್ನಲಾಗಿದ್ದು ಮೃತ ಸಂಜಯ ಮತ್ತು ಅವರ ಸ್ನೇಹಿತ ಚೇತನ್ ಇಬ್ಬರೂ ಸಾಫ್ಟ್‌ವೇರ್ ಎಂಜಿನಿಯರ್‌ಗಳು. ಅವರು ರಾತ್ರಿ ಪಾಳಿಯಲ್ಲಿ ಕೆಲಸ ಮುಗಿಸಿ ಬೆಳಿಗ್ಗೆ 4 ಗಂಟೆ ಸುಮಾರಿಗೆ ರಸ್ತೆಬದಿಯ ಅಂಗಡಿಯಲ್ಲಿ ಚಹಾ ಕುಡಿಯಲು ಆಗಮಿಸಿದ್ದರು. ಭಾರತದ ವಿರುದ್ಧ ಪಾಕಿಸ್ತಾನದ ದಾಳಿಗಳಿಗೆ ಚೀನಾದ ಬೆಂಬಲ ; ಇಲ್ಲಿವೆ ಪ್ರಮುಖ ಪುರಾವೆಗಳು..! ಅವರು ಅಲ್ಲಿ ನಿಂತಿದ್ದಾಗ, ಒಬ್ಬ ವ್ಯಕ್ತಿ ತನ್ನ ಹೆಂಡತಿಯೊಂದಿಗೆ ಹುಂಡೈ ಕ್ರೆಟಾದಲ್ಲಿ ಬಂದು ಸಂಜಯ ಮತ್ತು ಚೇತನ್ ಅವರ ಬಳಿ ಸಿಗರೇಟ್ ಕೊಡುವಂತೆ ಹೇಳಿದ್ದಾನೆ. ಅವರು ನಿರಾಕರಿಸಿ ನೀವೇ ಖರೀದಿಸಿ ಎಂದು ಹೇಳಿದ್ದಾರೆ, ಇದು ಅವರ ಮಧ್ಯೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು. ಸ್ಥಳೀಯರು ಮಧ್ಯಪ್ರವೇಶಿಸಿ...

error: Content is protected !!