ಕಾರವಾರ: ಸಾರ್ವಜನಿಕರ ಕುಂದು ಕೊರತೆ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿ ಆಲಿಸಿ ಸೂಕ್ತ ಪರಿಹಾರವನ್ನು ಒದಗಿಸಲು, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮೇ 17 ರಂದು ಬೆಳಗ್ಗೆ 10 ಗಂಟೆಗೆ ಭಟ್ಕಳದ ನ್ಯೂ ಇಂಗ್ಲಿಷ್ ಸ್ಕೂಲ್ನ ಕಮಲಾವತಿ ಶ್ಯಾನುಭೋಗ ಸಭಾ ಭವನದಲ್ಲಿ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದು, ಜಿಲ್ಲೆಯ ಸಾರ್ವಜನಿಕರು ತಮ್ಮ ಕುಂದು ಕೊರತೆಗಳಿದ್ದಲ್ಲಿ ಈ ಕಾರ್ಯಕ್ರಮದಲ್ಲಿ ಪರಿಹಾರ ಪಡೆದುಕೊಳ್ಳಬಹುದಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Top Stories
ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಒದಗಿಸಿ- ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..!
ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆ..!
ಮುಂಗಾರಿನ ಮಳೆಗಾಲದಲ್ಲಿ ಮುನ್ನೆಚ್ಚರಿಕೆ ಸೂಚನೆ ಪಾಲಿಸಿ : ಸಿಡಿಲಿನಿಂದ ರಕ್ಷಿಸಿಕೊಳ್ಳಿ..!
ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿ..!
ವೈದ್ಯಕೀಯ ಸೇವೆಗೆ ಸದಾ ಸನ್ನದ್ದವಾಗಿರಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ..!
CBSE, SSLC ಫಲಿತಾಂಶ ಪ್ರಕಟ: ಮುಂಡಗೋಡ ಲೊಯೊಲಾ ಕೇಂದ್ರೀಯ ವಿದ್ಯಾಲಯ 100% ಫಲಿತಾಂಶದ ಸಾಧನೆ..! ಮಾನಸಿ ಸಿದ್ದಿ ಪ್ರಥಮ..!
ಕೊಲ್ಕೊತ್ತಾದ ಮೇಲೆ ದಾಳಿ ಮಾಡಿ ವಶ ಪಡಿಸಿಕೊಳ್ತಿವಿ, ಆತ್ಮಹತ್ಯಾ ಬಾಂಬ್, ತಾಲಿಬಾನಿ ಶೈಲಿಯ ದಾಳಿ ಮಾಡ್ತಿವಿ ಅಂತ ಅಂದವನು ಯಾರೀತ..?
ಭಾರತ-ಪಾಕಿಸ್ತಾನ ಪರಮಾಣು ಯುದ್ಧ ನಿಲ್ಲಿಸಲು ‘ಸಹಾಯ’ ಮಾಡಿದ್ದೇವೆ..! ಕದನ ವಿರಾಮಕ್ಕೆ ನಾವೇ ಕಾರಣ ಅಂದ “ದೊಡ್ಡಣ್ಣ”
ಪ್ರಧಾನಿ ಮೋದಿ ಭಾಷಣ ಮುಗಿಸಿದ ಕೆಲವೇ ಹೊತ್ತಲ್ಲಿ ಜಲಂಧರ್ ಬಳಿ ಕಣ್ಗಾವಲು ಡ್ರೋನ್ ಹೊಡೆದುರುಳಿಸಿದ ಸೇನೆ ; ವಿದ್ಯುತ್ ಸ್ಥಗಿತ
ಭಾರತದ ವಾಯುದಾಳಿಗೆ ನಡುಗಿದ ನೂರ್ ಖಾನ್, ವಾಯುನೆಲೆ ಮೇಲಿನ ದಾಳಿ ನಂತರ ಬಂಕರ್ ನಲ್ಲಿ ಅಡಗಿದ ಪಾಕ್ ಸೇನಾ ಮುಖ್ಯಸ್ಥ
ಬೆಳಗಾವಿಯ ಸಂತಿ ಬಸ್ತವಾಡದ ಮಸೀದಿಯಲ್ಲಿನ ಕುರಾನ್ ಸುಟ್ಟು ಹಾಕಿದ ಕಿಡಿಗೇಡಿಗಳು, ಪ್ರತಿಭಟನೆ..!
ಕ್ಷುಲಕ ಕಾರಣಕ್ಕೆ ಬಾಲಕರ ಜಗಳ, ಕೊಲೆಯಲ್ಲಿ ಅಂತ್ಯ.. 9ನೇ ತರಗತಿ ಬಾಲಕನಿಗೆ ಚಾಕು ಇರಿದ 6ನೇ ತರಗತಿ ಬಾಲಕ..!
ಆಪರೇಶನ್ ಸಿಂಧೂರ | ಪಾಕಿಸ್ತಾನದ ಮಿರಾಜ್ ಯುದ್ಧ ವಿಮಾನ, ಚೀನಾ ನಿರ್ಮಿತ ಏರ್ ಡಿಫೆನ್ಸ್ ಧ್ವಂಸ : ಸೇನೆಯಿಂದ ವೀಡಿಯೊ ಬಿಡುಗಡೆ..!
ಕಾರವಾರದಲ್ಲಿ ವೈಮಾನಿಕ ದಾಳಿ, ಸಾವಿರಾರು ಮಂದಿಯ ರಕ್ಷಣೆ..! ಬಾಂಬ್ ದಾಳಿ, 37 ಜನ ಬಚಾವ್..!!
ತೀವ್ರ ಅಪೌಷ್ಠಿಕತೆಯಿಂದ ಕೂಡಿದ ಮಕ್ಕಳನ್ನು ಸೂಕ್ತ ಚಿಕಿತ್ಸೆಗೆ ಒಳಪಡಿಸಿ : ಜಿಲ್ಲಾಧಿಕಾರಿ
ಪ್ರಸಕ್ತ ವರ್ಷದ “ಮಾನ್ಸೂನ್” ನಿಗದಿತ ಸಮಯಕ್ಕಿಂತಲೂ ಮುಂಚೇಯೇ ಆಗಮನ ಸಾಧ್ಯತೆ..!
ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಗಾಳಿ ಮಳೆ ; ಮುನ್ಸೂಚನೆ
ಕಾಮೆಡಿ ಕಿಲಾಡಿಯ ಹಾಸ್ಯ ಕಲಾವಿದ, ರಾಕೇಶ್ ಪೂಜಾರಿ ಇನ್ನಿಲ್ಲ..!
ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಒದಗಿಸಿ- ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಕಾರವಾರ- ಜಿಲ್ಲೆಯಲ್ಲಿರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..! ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರ ವಾಸಿಸುತ್ತಿರುವ ಕಾಲೋನಿಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತಂತೆ ಆ ಕಾಲೋನಿಗಳಿಗೆ ಭೇಟಿ ನೀಡಿ, ಪರಿಶೀಲಿಸಿ, ಅಗತ್ಯವಿರುವ ಮೂಲ ಸೌಕರ್ಯಗಳ ಕುರಿತು ವರದಿ ನೀಡುವಂತೆ ತಿಳಿಸಿದ ಅವರು, ಈ ಜನಾಂಗದವರಿಗೆ ವಸತಿ ಸೌಲಭ್ಯದಡಿಯಲ್ಲಿ ಮನೆಗಳನ್ನು ಒದಗಿಸುವ ಕುರಿತು ಆದ್ಯತೆಯಲ್ಲಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆ..!...
ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..!
ಮುಂಡಗೋಡ ತಾಲೂಕಿನ ಹನಮಾಪುರ ಗ್ರಾಮದಲ್ಲಿ ದೇವಸ್ಥಾನ ಶೆಡ್ಡ್ ತೆರವುಗೊಳಿಸುವ ಸಲುವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಗಣೇಶ ಬಸಲಿಂಗಪ್ಪ ಸುಣಗಾರ ಎಂಬುವ ವ್ಯಕ್ತಿಯ ಮೇಲೆ ಹಲ್ಲೆ ನಡೆದಿದೆ ಅನ್ನೊ ಆರೋಪ ಕೇಳಿ ಬಂದಿದೆ. ಸದ್ಯ ತಾಲೂಕಾಸ್ಪತ್ರೆಗೆ ದಾಖಲಾಗಿ ಹಲ್ಲೆಗೊಳಗಾದವ ಚಿಕಿತ್ಸೆ ಪಡೆಯುತ್ತಿದ್ದಾನೆ. ಬುಧವಾರ ಬೆಳಿಗ್ಗೆ ಹನುಮಾಪುರ ಗ್ರಾಮದ ಜನರೇಲ್ಲ ಸೇರಿ, ಗ್ರಾಮದ ಮಾಸ್ತಿ ಗುಡಿಯ ಹತ್ತಿರ ಇದ್ದ, ಬಸವಣ್ಣನ ಮೂರ್ತಿ ಯನ್ನು ಸ್ಥಳಾಂತರ ಮಾಡಿದ್ದರು. ಹೀಗಾಗಿ, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತಿಗೆ ಮಾತು ಬೆಳೆದು ಗ್ರಾಮಸ್ಥರು ಹಾಗೂ ಅದೊಂದು ಕುಟುಂಬದ ನಡುವೆ ಗಲಾಟೆ ನಡೆದಿದೆ. ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆ..! ಇದೆ ವೇಳೆ ನನ್ನ ಮೇಲೂ ಹಲ್ಲೆ ನಡೆದಿದೆ, ಅಲ್ದೆ ಜೀವ ಬೆದರಿಕೆ ಹಾಕಿದ್ದಾರೆ ಅಂತಾ ಆಸ್ಪತ್ರೆಯಲ್ಲಿ ಸದ್ಯ ಚಿಕಿತ್ಸೆಗೆ ದಾಖಲಾಗಿರೊ ಹಲ್ಲೆಗೊಳಗಾದವ ಆರೋಪಿಸಿದ್ದಾನೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು...
ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆ..!
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಉಪ ಚುನಾವಣೆ ಘೋಷಣೆ ಆಗ್ತಿದ್ದಂತೆ, ಚುನಾವಣಾ ಪ್ರಕ್ರಿಯೆಗಳು ಜಾರಿಯಾಗಿವೆ. ಅಗಡಿಯ ವಾರ್ಡ್ ನಂಬರ್ 2 ರ ಸದಸ್ಯೆ ಮಹಾಬುಬ್ಬಿ ಮಹ್ಮದ್ ಸಾಬ್ ವಾಲೀಕಾರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು, ಇವತ್ತು ಬುಧವಾರ ಕೇವಲ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿದೆ. ಹೀಗಾಗಿ, ಬಹುತೇಕ ಅವಿರೋಧ ಆಯ್ಕೆಯಾಗುವ ಎಲ್ಲಾ ಸಾಧ್ಯತೆ ನಿಚ್ಚಳವಾಗಿದೆ. ಅಂದಹಾಗೆ, ಸದ್ಯ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಲಕ್ಷ್ಮೀ ಹನಮಂತ ಲಮಾಣಿ ನಾಮಪತ್ರ ಸಲ್ಲಿಸಿದ್ದು, ಇವ್ರೇ ಬಹುತೇಕ ಅವಿರೋಧವಾಗಿ ಆಯ್ಕೆಯಾಗುವ ಎಲ್ಲಾ ಲಕ್ಷಣಗಳು ಇದ್ದು, ಅವಿರೋಧವಾಗಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಇಲ್ಲಿನ ಮುಖಂಡರ ಸತತ ಪ್ರಯತ್ನ ಫಲಕೊಟ್ಟಿದೆ ಎನ್ನಲಾಗಿದೆ. ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..! ಶಾಕಸ ಶಿವರಾಮ್ ಹೆಬ್ಬಾರರ ಮಾರ್ಗದರ್ಶನದಲ್ಲಿ ಸ್ಥಳೀಯ ಮುಖಂಡರಾದ ಎಚ್. ಎಂ.ನಾಯ್ಕ್, ಯುವ ಮುಖಂಡ ಬಸವರಾಜ್ ಆಸ್ತಕಟ್ಟಿ, ಗ್ರಾಮ ಪಂಚಾಯತಿ ಅಧ್ಯಕ್ಷ ಷರೀಪಸಿಂಗ್ ಸಿಗ್ಗಟ್ಟಿ, ಸದಸ್ಯರಾದ ಸಿದ್ದನಗೌಡ ಪಾಟೀಲ, ತುಕಾರಾಮ್ ಹೊನ್ನಳ್ಳಿ, ಈಶ್ವರಗೌಡ...
ಮುಂಗಾರಿನ ಮಳೆಗಾಲದಲ್ಲಿ ಮುನ್ನೆಚ್ಚರಿಕೆ ಸೂಚನೆ ಪಾಲಿಸಿ : ಸಿಡಿಲಿನಿಂದ ರಕ್ಷಿಸಿಕೊಳ್ಳಿ..!
ಸಾಮ್ಯಾನವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಗುಡುಗು-ಸಿಡಿಲು ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮ್ಯಾನವಾಗಿ ಮಧ್ಯಾಹ್ನ ಅಥವಾ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹಚ್ಚಾಗಿರುತ್ತದೆ. ಗುಡುಗು-ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಈ ಕೆಳಕಂಡ ಕ್ರಮಗಳನ್ನು ಕೈಕೊಳ್ಳುವ ಮೂಲಕ ಸಿಡಿಲಿನಿಂದ ರಕ್ಷಿಸಿಕೊಳ್ಳಬಹುದಾಗಿದೆ ಗುಡುಗು-ಸಿಡಿಲಿ ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ ಸೂಚನೆಗಳು: • ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ Common Alerting protocol (CAP) ಮುಖಾಂತರ ಬರುವ ಸಂದೇಶಗಳನ್ನು ಮೊಬೈಲ್ ನಲ್ಲಿ ಗಮನಿಸುವುದು. • ಪ್ರತಿಕೂಲ ಹವಾಮಾನ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮ್ಯಾನ ಪ್ರಯಾಣಕ್ಕಾಗಿ ಹೊರಗೆ ಹೋಗದಿರುವುದು. • ಗುಡುಗು-ಸಿಡಿಲಿ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ,ಸುರಕ್ಷಿತವಾದ ಕಟ್ಟಡಗಳಲ್ಲಿ ಆಶ್ರಯ ಪಡೆಯುವುದು. • ಬೆಟ್ಟಗಳು,ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿ ಆಶ್ರಯ ಪಡೆಯುವುದು. • ನೀರಿನ ಮೂಲಗಳಾದ ಕೆರೆ ಮತ್ತು...
ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿ..!
ಕಾರವಾರ: ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿಯಾಗಿದ್ದು, ಬೇಸಿಗೆ ಅವಧಿಯಲ್ಲಿನ ಶಿಬಿರದ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಆಕಾಶವಾಣಿಯ ಕಾರ್ಯಕ್ರಮ ಮುಖ್ಯಸ್ಥ ಶ್ಯಾಮ ಪ್ರಸಾದ ಹೇಳಿದರು. ಅವರು ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸ್ತ್ರೀ ಶಕ್ತಿ ಭವನದಲ್ಲಿ ಆಯೋಜಿಸಿದ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಕಾರವಾರ ಇವರ ಸಹಯೋಗದಲ್ಲಿ 2025-26ನೇ ಸಾಲಿನ ಉಚಿತ ಬೇಸಿಗೆ ಶಿಬರವನ್ನು ಉದ್ಘಾಟಿಸಿ ಮಾತನಾಡಿದರು. ವೈದ್ಯಕೀಯ ಸೇವೆಗೆ ಸದಾ ಸನ್ನದ್ದವಾಗಿರಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ..! ಬಾಲ್ಯದಲ್ಲಿಯೇ ಮಕ್ಕಳಲ್ಲಿರುವ ಸೃಜನಾತ್ಮಕ ಕಲೆಯನ್ನು ವೃದ್ಧಿಸಲು ಇಂತಹ ಶಿಬಿರಗಳು ಸಹಾಯವಾಗಲಿದೆ. ಮಕ್ಕಳಿಗೆ ಆಟ-ಪಾಠಗಳ ಜೊತೆಗೆ ನೃತ್ಯ, ಸಾಂಸ್ಕೃತಿಕ ಕಲೆ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಇಂತಹ ಶಿಬಿರಗಳು ಮೂಲ ಪ್ರೇರಣೆಯಾಗುತ್ತವೆ. ಮಕ್ಕಳ ಬೌದ್ಧಿಕ ವಿಕಾಸದೊಂದಿಗೆ ಭವಿಷ್ಯದ ಜೀವನಕ್ಕೆ ಮಾದರಿಯಾಗುತ್ತದೆ. ಮಕ್ಕಳು ಇಂತಹ ಶಿಬಿರಗಳ ಸದುಪಯೋಗ ಪಡೆದುಕೊಳ್ಳುವಂತಾಗಬೇಕು ಎಂದರು....
ವೈದ್ಯಕೀಯ ಸೇವೆಗೆ ಸದಾ ಸನ್ನದ್ದವಾಗಿರಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ..!
ಕಾರವಾರ ಜಿಲ್ಲೆಯಲ್ಲಿ ಸಂಭವಿಸುವ ಯಾವುದೇ ರೀತಿಯ ಪ್ರಾಕೃತಿಕ ವಿಕೋಪ ಸೇರಿದಂತೆ ಎಲ್ಲಾ ತುರ್ತು ಸಂದರ್ಭಗಳಲ್ಲಿ ಗಾಯಾಳು ಸಂತ್ರಸ್ಥರಿಗೆ ವೈದ್ಯಕೀಯ ಸೇವೆ ನೀಡುವಲ್ಲಿ ಯಾವುದೇ ವಿಳಂಬವಾಗದಂತೆ ಸದಾ ಸನ್ನದ್ದ ಸ್ಥಿತಿಯಲ್ಲಿರುವಂತೆ ವೈದ್ಯಕೀಯ ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚನೆ ನೀಡಿದರು. ಅವರು ಮಂಗಳವಾರ ಕ್ರಿಮ್ಸ್ ನಲ್ಲಿ, ಪೊಲೀಸ್ ಇಲಾಖೆ , ಕೊಂಕಣ ರೈಲ್ವೆ, ಜಿಲ್ಲಾ ವಿಪ್ತು ನಿರ್ವಹಣಾ ಪ್ರಾಧಿಕಾರ, ವಿಪತ್ತು ನಿರ್ವಹಣೆ ಮತ್ತು ತಗ್ಗಿಸುವ ಕೇಂದ್ರ, ತೇಜಸ್ ವಿಪತ್ತು ನಿರ್ವಹಣೆ ಮತ್ತು ತಗ್ಗಿಸುವ ಕೇಂದ್ರ, ವಿಪತ್ತು ನಿರ್ವಹಣಾ ವಿಭಾಗ ಕರ್ಸ್ತೂಬಾ ಮೆಡಿಕಲ್ ಕಾಲೇಜು ಮಣಿಪಾಲ , ಕೈಗಾ , ಗ್ರಾಸಿಂ ಹಾಗೂ ಕಾರವಾರ ಮೆಡಿಕಲ್ ಕಾಲೇಜು ಸಹಯೋಗದಲ್ಲಿ ನಡೆದ , ವಿಪತ್ತು ಸಂದರ್ಭದಲ್ಲಿ ತುರ್ತು ವೈದ್ಯಕೀಯ ನೆರವು ಒದಗಿಸುವ ಕುರಿತ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು. CBSE, SSLC ಫಲಿತಾಂಶ ಪ್ರಕಟ: ಮುಂಡಗೋಡ ಲೊಯೊಲಾ ಕೇಂದ್ರೀಯ ವಿದ್ಯಾಲಯ 100% ಫಲಿತಾಂಶದ ಸಾಧನೆ..! ಮಾನಸಿ ಸಿದ್ದಿ ಪ್ರಥಮ..! ಜಿಲ್ಲೆಯಲ್ಲಿ ಅನೇಕ ಸೂಕ್ಷ್ಮ ಸ್ಥಳಗಳಿದ್ದು ಮಳೆಗಾಲದ ಸಂದರ್ಭದಲ್ಲಿ...
CBSE, SSLC ಫಲಿತಾಂಶ ಪ್ರಕಟ: ಮುಂಡಗೋಡ ಲೊಯೊಲಾ ಕೇಂದ್ರೀಯ ವಿದ್ಯಾಲಯ 100% ಫಲಿತಾಂಶದ ಸಾಧನೆ..! ಮಾನಸಿ ಸಿದ್ದಿ ಪ್ರಥಮ..!
ಮುಂಡಗೋಡ: CBSE , SSLC, ಫಲಿತಾಂಶ ಪ್ರಕಟವಾಗಿದೆ. ಮುಂಡಗೋಡಿನ ಲೊಯೊಲಾ ಕೇಂದ್ರೀಯ ವಿದ್ಯಾಲಯದ CBSE SSLC ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಶೇಕಡಾ 100 ರಷ್ಟು ಫಲಿತಾಂಶವಾಗಿದೆ. ಹೀಗಾಗಿ, ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವರ್ಗ ಸಂತಸ ವ್ಯಕ್ತಪಡಿಸಿದೆ. ಇನ್ನು ಮಾನಸಿ ಸಿದ್ಧಿ (500/452) 90.4 ಶೇಕಡಾ ಅಂಕಗಳೊಂದಿಗೆ ಪ್ರೌಢಶಾಲೆಗೆ ಪ್ರಥಮ ಸ್ಥಾನ ಪಡೆದು ಕೀರ್ತಿ ತಂದಿದ್ದಾಳೆ. ಅನ್ವೆಶ್ ನಾಯ್ಕ್ (500/443) 88.6 ಶೇಕಡಾ ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡದಿದ್ದಾನೆ. ರಿತೇಶ್ ಬಾಡ್ಕರ್ (500/442) 88.4 ಶೇಕಡಾ ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾನೆ. ಐಶ್ವರ್ಯ ವೇರ್ಣೇಕರ್-88.2%, ಮುಹಮ್ಮದ್ ಫಾಝಿಲ್- 87.6%, ದಿಶಾ ಜಾಲಗಾರ್-85.4%, ರಾಘವೇಂದ್ರ ಕಲಾಲ್ -83%, ಆದಿತ್ಯ ಚವಾಣ್- 82.2% ಕ್ರಮವಾಗಿ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಒಟ್ಟು, SSLC CBSE ಪರೀಕ್ಷೆ ಬರೆದೆ 42 ವಿದ್ಯಾರ್ಥಿಗಳಲ್ಲಿ 42 ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು, ಶೇಕಡಾ 75 ರಷ್ಟು ಅಂಕದೊಂದಿಗೆ15 ವಿದ್ಯಾರ್ಥಿಗಳು, ಶೆಕಡಾ 60 ರಷ್ಟು ಅಂಕಗಳೊಂದಿಗೆ 14 ವಿದ್ಯಾರ್ಥಿಗಳು, ಶೇಕಡಾ 50...
ಕೊಲ್ಕೊತ್ತಾದ ಮೇಲೆ ದಾಳಿ ಮಾಡಿ ವಶ ಪಡಿಸಿಕೊಳ್ತಿವಿ, ಆತ್ಮಹತ್ಯಾ ಬಾಂಬ್, ತಾಲಿಬಾನಿ ಶೈಲಿಯ ದಾಳಿ ಮಾಡ್ತಿವಿ ಅಂತ ಅಂದವನು ಯಾರೀತ..?
ಬಾಂಗ್ಲಾದೇಶದ ಇಸ್ಲಾಮಿಸ್ಟ್ ಎಂದು ನಂಬಲಾದ ವ್ಯಕ್ತಿಯೊಬ್ಬ ಆತ್ಮಹತ್ಯಾ ಬಾಂಬ್ ದಾಳಿ ಸೇರಿದಂತೆ ತಾಲಿಬಾನ್ ಶೈಲಿಯ ತಂತ್ರಗಳನ್ನು ಬಳಸಿಕೊಂಡು ಕೋಲ್ಕತ್ತಾದ ಮೇಲೆ ದಾಳಿ ಮಾಡಿ ವಶಪಡಿಸಿಕೊಳ್ಳುವ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ‘ವಾಯ್ಸ್ ಆಫ್ ಬಾಂಗ್ಲಾದೇಶಿ ಹಿಂದೂಸ್’ ಎಕ್ಸ್ ಹ್ಯಾಂಡಲ್ನಲ್ಲಿ ಈ ವ್ಯಕ್ತಿಯ ವೀಡಿಯೊ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ಆತ ತನ್ನ ಮಾತೃಭಾಷೆಯಲ್ಲಿ ಮಾತನಾಡುವುದನ್ನು ಕೇಳಬಹುದು. “ಬಾಂಗ್ಲಾದೇಶದ ಸೈನ್ಯ ಈಗ ಹೋಗಿ ಕೋಲ್ಕತ್ತಾ ವಶಪಡಿಸಿಕೊಳ್ಳಿ ಎಂದು ಹೇಳಿದರೆ, ನಾನು ಒಂದು ಯೋಜನೆ ಹಾಕುತ್ತೇನೆ. 70 ಫೈಟರ್ ಜೆಟ್ಗಳನ್ನು ಬಳಸುವುದನ್ನು ಮರೆತುಬಿಡಿ, ಕೋಲ್ಕತ್ತಾವನ್ನು ವಶಪಡಿಸಿಕೊಳ್ಳಲು ನಾನು ಏಳು ವಿಮಾನಗಳನ್ನು ಸಹ ಬಳಸುವುದಿಲ್ಲ. ನನಗೆ 70 ವಿಮಾನಗಳು ಏಕೆ ಬೇಕು? ಅಲ್ಲಿ ಯಾರು ವಾಸಿಸುತ್ತಾರೆ, ಪ್ರತಿಮೆಗಳನ್ನು ಪೂಜಿಸುವ ಜನರು ಎಂದು ನನಗೆ ತಿಳಿದಿದೆ” ಎಂದು ಆತ ಹಿಂದೂಗಳನ್ನು ಉಲ್ಲೇಖಿಸಿ ಹೇಳಿದ್ದಾನೆ. “ಅವರ ನೆಚ್ಚಿನ ಆಹಾರಗಳು ಮೂತ್ರ, ಸಗಣಿ ಮತ್ತು ಆಮೆಗಳಂತಹ ಕೊಳಕು ವಸ್ತುಗಳು ಎಂದು ನನಗೆ ತಿಳಿದಿದೆ, ಅವರು ಎಷ್ಟು ಕಡಿಮೆ ಅರ್ಥಮಾಡಿಕೊಳ್ಳುತ್ತಾರೆಂದು ನನಗೆ...
ಭಾರತ-ಪಾಕಿಸ್ತಾನ ಪರಮಾಣು ಯುದ್ಧ ನಿಲ್ಲಿಸಲು ‘ಸಹಾಯ’ ಮಾಡಿದ್ದೇವೆ..! ಕದನ ವಿರಾಮಕ್ಕೆ ನಾವೇ ಕಾರಣ ಅಂದ “ದೊಡ್ಡಣ್ಣ”
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಉಂಟಾದ ಉದ್ವಿಗ್ನತೆಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಲು ಉಭಯ ರಾಷ್ಟ್ರಗಳು ಒಪ್ಪಿಕೊಂಡ ಕೆಲವು ದಿನಗಳ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಕದನ ವಿರಾಮಕ್ಕೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ ಕೀರ್ತಿಯನ್ನು ಪಡೆದುಕೊಂಡಿದ್ದಾರೆ. ಅಮೆರಿಕ-ಚೀನಾ ವ್ಯಾಪಾರ ಒಪ್ಪಂದವನ್ನು ಘೋಷಿಸುವ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಟ್ರಂಪ್, “ಶನಿವಾರ, ನನ್ನ ಆಡಳಿತವು ಭಾರತ ಮತ್ತು ಪಾಕಿಸ್ತಾನದ ನಡುವೆ ತಕ್ಷಣದ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಲು ಸಹಾಯ ಮಾಡಿತು. ಅದು ಶಾಶ್ವತವಾದದ್ದು ಎಂದು ನಾನು ಭಾವಿಸುತ್ತೇನೆ. ಈ ದೇಶಗಳು ಸಾಕಷ್ಟು ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿವೆ” ಎಂದು ಹೇಳಿದರು. ಕದನ ವಿರಾಮದ ಕೀರ್ತಿ ತಮ್ಮದು ಎಂದು ಹೇಳಿಕೊಂಡರು. “ನಾವು ಪರಮಾಣು ಸಂಘರ್ಷವನ್ನು ನಿಲ್ಲಿಸಿದ್ದೇವೆ. ಅದು ಕೆಟ್ಟ ಪರಮಾಣು ಯುದ್ಧವಾಗಬಹುದಾಗಿತ್ತು, ಲಕ್ಷಾಂತರ ಜನರು ಕೊಲ್ಲಲ್ಪಡಬಹುದಿತ್ತು ಎಂದು ನಾನು ಭಾವಿಸುತ್ತೇನೆ. ಆದ್ದರಿಂದ ನನಗೆ ಅದರ ಬಗ್ಗೆ ತುಂಬಾ ಹೆಮ್ಮೆ ಇದೆ” ಎಂದು ಟ್ರಂಪ್ ಶ್ವೇತಭವನದಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಯುದ್ಧ ಮುಂದುವರಿದರೆ ವ್ಯಾಪಾರ ನಿಲ್ಲಿಸುವುದಾಗಿ...